Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:14 - ಪರಿಶುದ್ದ ಬೈಬಲ್‌

14 ಮೂಢನು ತಾನು ಮಾಡುವಂಥದ್ದರ ಬಗ್ಗೆ ಯಾವಾಗಲೂ ಮಾತಾಡುವನು. ಆದರೆ ಮುಂದೆ ಏನಾಗುವುದೋ ಯಾರಿಗೂ ತಿಳಿಯದು. ಮುಂದೆ ಸಂಭವಿಸುವುದನ್ನು ಯಾರೂ ಹೇಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮನುಷ್ಯನು ಮುಂದೆ ಆಗುವುದನ್ನು ತಿಳಿಯನು. ತಾನು ಕಾಲವಾದ ಮೇಲೆ ಹೀಗೆಯೇ ಆಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಜ್ಞಾನಿ ಮಾತಿನ ಮಲ್ಲ. ಭವಿಷ್ಯತ್ತನ್ನು ಮಾನವ ತಿಳಿಯನು; ತಾನು ಕಾಲವಾದ ಮೇಲೆ ಏನಾಗುವುದೆಂದು ಅವನು ಯಾರಿಂದ ತಿಳಿಯಬಲ್ಲನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮನುಷ್ಯನು ಮುಂದಿನದನ್ನು ತಿಳಿಯನು; ತಾನು ಕಾಲವಾದ ಮೇಲೆ ಹೀಗೆಯೇ ಆಗುವದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಮೂಢನು ಮಾತುಗಳನ್ನು ಹೆಚ್ಚಿಸುತ್ತಾನೆ. ಆದರೂ ಅವನು ಭವಿಷ್ಯ ಏನೆಂದು ತಿಳಿಯನು. ಅವನ ತರುವಾಯ ಆಗುವುದನ್ನೂ ಅವನಿಗೆ ತಿಳಿಸುವವರು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:14
13 ತಿಳಿವುಗಳ ಹೋಲಿಕೆ  

ಜ್ಞಾನಿಯ ಮಾತನ್ನು ಜನರು ಕೇಳಬಯಸುತ್ತಾರೆ. ಮೂಢನು ಕೇವಲ ಮೂರ್ಖತನವನ್ನೇ ಮಾತಾಡುವನು.


ಯಾಕೆಂದರೆ ಮುಂದೆ ಏನಾಗುವುದೋ ಅವನಿಗೆ ತಿಳಿಯದು. ಮುಂದೆ ಅದು ಹೇಗೆ ಆಗುವುದೋ ಎಂದು ಅವನಿಗೆ ತಿಳಿಸುವವರು ಯಾರು ಇಲ್ಲ.


ಮನುಷ್ಯನ ಅಲ್ಪಕಾಲದ ಜೀವನದಲ್ಲಿ ಅವನಿಗೆ ಯಾವುದು ಉತ್ತಮವೆಂದು ಯಾರಿಗೆ ಗೊತ್ತು? ಅವನ ಜೀವನವು ನೆರಳಿನಂತೆ ಕಳೆದುಹೋಗುವುದು. ಮುಂದೆ ಏನಾಗುವುದೆಂದು ಯಾರೂ ಅವನಿಗೆ ಹೇಳಲಾರರು.


“ಅನೇಕ ಚಿಂತೆಗಳಿಂದ ದುಸ್ವಪ್ನಗಳಾಗುವಂತೆ ಮೂಢನು ಅನೇಕ ಮಾತುಗಳನ್ನಾಡುವನು.”


ಆದ್ದರಿಂದ ಮನುಷ್ಯನಿಗೆ ತನ್ನ ಕಾರ್ಯದಲ್ಲಿ ಸಂತೋಷಪಡುವುದಕ್ಕಿಂತ ಬೇರೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಅಲ್ಲದೆ ಮುಂದಿನ ಕಾಲವನ್ನು ಕುರಿತು ಮನುಷ್ಯನು ಚಿಂತಿಸಬಾರದು. ಯಾಕೆಂದರೆ ಅವನ ಜೀವಮಾನದ ನಂತರ ಸಂಭವಿಸುವಂಥವುಗಳನ್ನು ನೋಡಲು ಈ ಲೋಕಕ್ಕೆ ಅವನನ್ನು ಯಾರು ಬರಮಾಡುವರು?


ಅತಿಯಾಗಿ ಮಾತಾಡುವವನು ತನ್ನನ್ನೇ ತೊಂದರೆಗೆ ಸಿಕ್ಕಿಸಿಕೊಳ್ಳುತ್ತಾನೆ. ವಿವೇಕಿಯು ಮೌನವಾಗಿರಲು ಕಲಿತುಕೊಳ್ಳುತ್ತಾನೆ.


ಆದ್ದರಿಂದ ಯೋಬನು ತನ್ನ ನಿಷ್ಪ್ರಯೋಜಕ ಮಾತನ್ನು ಮುಂದುವರಿಸುತ್ತಿದ್ದಾನೆ; ದುರಾಭಿಮಾನದಿಂದ ವರ್ತಿಸುತ್ತಿದ್ದಾನೆ; ತಿಳುವಳಿಕೆಯಿಲ್ಲದೆ ಮಾತಾಡುತ್ತಿದ್ದಾನೆ.”


ಅವನು ತನ್ನ ಪಾಪಕ್ಕೆ ಇನ್ನೂ ಕೂಡಿಸಿಕೊಳ್ಳುತ್ತಿದ್ದಾನೆ; ನಮ್ಮ ಮಧ್ಯದಲ್ಲಿ ತನ್ನ ದುಷ್ಟತನವನ್ನು ಅಧಿಕಮಾಡಿಕೊಳ್ಳುತ್ತಿದ್ದಾನೆ; ದೇವದ್ರೋಹವನ್ನು ಹೆಚ್ಚಿಸಿಕೊಳ್ಳುತ್ತಿದ್ದಾನೆ” ಎಂದು ನನಗೆ ಹೇಳುವರು.


ಸುಖದ ದಿನಗಳಲ್ಲಿ ಸಂತೋಷಿಸು. ದುಃಖದ ದಿನಗಳಲ್ಲಿ, ಸುಖದುಃಖಗಳನ್ನು ಕೊಡುವವನು ದೇವರೇ ಎಂಬುದನ್ನು ಜ್ಞಾಪಿಸಿಕೊ. ಮುಂದೆ ಏನಾಗುವುದೋ ಯಾರಿಗೂ ಗೊತ್ತಿಲ್ಲ.


ನಾನು ಇವೆಲ್ಲವುಗಳ ಬಗ್ಗೆ ಬಹಳ ಎಚ್ಚರಿಕೆಯಿಂದ ಆಲೋಚಿಸಿದೆ. ಒಳ್ಳೆಯವರಿಗೂ ಜ್ಞಾನಿಗಳಿಗೂ ಅವರ ಕಾರ್ಯಗಳಿಗೂ ಸಂಭವಿಸುವುದೆಲ್ಲಾ ದೇವರ ಹತೋಟಿಯಲ್ಲಿದೆ. ತಾವು ಪ್ರೀತಿಗೆ ಗುರಿಯಾಗುವರೋ ದ್ವೇಷಕ್ಕೆ ಗುರಿಯಾಗುವರೋ ಅವರಿಗೆ ಗೊತ್ತಿಲ್ಲ. ಮುಂದೆ ಸಂಭವಿಸುವುದೂ ಅವರಿಗೆ ಗೊತ್ತಿಲ್ಲ.


ಮೂಢನು ತನ್ನ ಮನೆದಾರಿಯನ್ನು ತಿಳಿದುಕೊಳ್ಳುವಷ್ಟು ಜಾಣನಲ್ಲ, ಆದ್ದರಿಂದ ಅವನು ತನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಕೆಲಸ ಮಾಡಬೇಕು.


ನಿನ್ನ ಹೆಮ್ಮೆಯಿಂದ ನನ್ನ ವಿರುದ್ಧವಾಗಿ ಮಾತನಾಡಿದ್ದೀ, ನೀನು ಅನೇಕ ಬಾರಿ ಹೇಳಿರುತ್ತೀ. ನಾನೆಲ್ಲವನ್ನು ಕೇಳಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು