Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:16 - ಪರಿಶುದ್ದ ಬೈಬಲ್‌

16 ರಾಜನು ಮಗುವಿನಂತೆ ಇದ್ದರೆ ದೇಶವು ಹಾಳಾಗುವುದು. ಅಧಿಪತಿಗಳು ಮುಂಜಾನೆಯಲ್ಲಿಯೇ ಔತಣ ಮಾಡಿದರೆ ದೇಶವು ಹಾಳಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದೇಶದ ಅರಸನು ಯುವಕನಾಗಿದ್ದರೆ, ಪ್ರಭುಗಳು ಹೊತ್ತಾರೆ ಔತಣಕ್ಕೆ ಕುಳಿತುಕೊಂಡರೆ ನಿನಗೆ ದೌರ್ಭಾಗ್ಯವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಓ ನಾಡೇ, ನಿನ್ನ ಒಡೆಯ ಬಾಲಕನಾಗಿದ್ದು ನಿನ್ನ ನಾಯಕರೆಲ್ಲರು ಹೊತ್ತಾರೆಯೇ ಔತಣಕ್ಕೆ ಕುಳಿತುಕೊಳ್ಳುವಂಥವರಾಗಿದ್ದಾರೆ, ಅದು ನಿನ್ನ ದೌರ್ಭಾಗ್ಯವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಎಲೆ ದೇಶವೇ ನಿನ್ನ ರಾಜನು ಬಾಲನಾಗಿದ್ದು ಪ್ರಭುಗಳು ಹೊತ್ತಾರೆ ಔತಣಕ್ಕೆ ಕೂತುಕೊಂಡರೆ ನಿನಗೆ ದೌರ್ಭಾಗ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಬಾಲಕನಾಗಿದ್ದವನು ದೇಶಕ್ಕೆ ಅರಸನಾಗಿದ್ದರೆ, ನಾಯಕರೆಲ್ಲರು ಬೆಳಿಗ್ಗೆಯೇ ಔತಣಕ್ಕೆ ಕೂತುಕೊಂಡರೆ ಅಯ್ಯೋ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:16
16 ತಿಳಿವುಗಳ ಹೋಲಿಕೆ  

ಮಕ್ಕಳು ನನ್ನ ಜನರನ್ನು ಸೋಲಿಸಿಬಿಡುವರು. ಸ್ತ್ರೀಯರು ನನ್ನ ಜನರನ್ನು ಆಳುವರು. ನನ್ನ ಜನರೇ, ನಿಮ್ಮ ಮಾರ್ಗದರ್ಶಕರು ನಿಮ್ಮನ್ನು ತಪ್ಪುದಾರಿಯಲ್ಲಿ ನಡಿಸುವರು; ಸರಿಯಾದ ದಾರಿಯಿಂದ ನಿಮ್ಮನ್ನು ಅಡ್ಡದಾರಿಗೆ ನಡಿಸುವರು.


ದಾವೀದನ ಮನೆತನದವರೇ, ಯೆಹೋವನು ಹೀಗೆ ಹೇಳುತ್ತಾನೆ: ನೀವು ಪ್ರತಿದಿನ ನಿಷ್ಪಕ್ಷಪಾತವಾಗಿ ನ್ಯಾಯನಿರ್ಣಯ ಮಾಡಬೇಕು. ಅಪರಾಧಿಗಳಿಂದ ಕಷ್ಟಕ್ಕೊಳಗಾದವರನ್ನು ರಕ್ಷಿಸಬೇಕು. ನೀವು ಹಾಗೆ ಮಾಡದಿದ್ದರೆ ನನಗೆ ಬಹಳ ಕೋಪ ಬರುತ್ತದೆ. ನನ್ನ ಕೋಪವು ಯಾರಿಂದಲೂ ನಂದಿಸಲಾಗದ ಬೆಂಕಿಯಂತಿದೆ. ನೀವು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಹೀಗಾಗುತ್ತದೆ.’


ಆಗ ಕೆಲಸಕ್ಕೆ ಬಾರದ ದುಷ್ಟಜನರು ಯಾರೊಬ್ಬಾಮನ ಸ್ನೇಹಿತರಾಗಿ ಅವನನ್ನು ಹಿಂಬಾಲಿಸಿ ರೆಹಬ್ಬಾಮನಿಗೆ ವಿರುದ್ಧವಾಗಿ ದಂಗೆ ಎದ್ದರು. ಸೊಲೊಮೋನನ ಮಗನಾದ ರೆಹಬ್ಬಾಮನು ಆಗ ಸಣ್ಣ ಪ್ರಾಯದವನಾಗಿ ಅನುಭವವಿಲ್ಲದವನಾಗಿದ್ದನು. ಆದ್ದರಿಂದ ಯಾರೊಬ್ಬಾಮನನ್ನೂ ಅವನ ದುಷ್ಟ ಹಿಂಬಾಲಕರನ್ನೂ ತಡೆಯಲು ಅವನಿಗೆ ಆಗಲಿಲ್ಲ.


ಯೆಹೋಯಾಕೀನನು ಯೆಹೂದ ದೇಶದ ಪಟ್ಟಕ್ಕೆ ಬಂದಾಗ ಹದಿನೆಂಟು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸಗಳ ಕಾಲ ರಾಜ್ಯವನ್ನಾಳಿದನು. ಅವನು ಯೆಹೋವನ ಚಿತ್ತಕ್ಕನುಸಾರವಾಗಿ ನಡೆಯಲಿಲ್ಲ. ಯೆಹೋಯಾಕೀನನು ದೇವರಿಗೆ ವಿರುದ್ಧವಾಗಿ ಪಾಪ ಮಾಡಿದನು.


ಯೆಹೋಯಾಕೀಮನು ಯೆಹೂದ ದೇಶದ ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷ ಪ್ರಾಯದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಯೆಹೋಯಾಕೀಮನು ಯೆಹೋವನ ಚಿತ್ತಕ್ಕೆ ಒಳಗಾಗಲಿಲ್ಲ. ಅವನು ತನ್ನ ದೇವರಾದ ಯೆಹೋವನ ವಿರುದ್ಧವಾಗಿ ಪಾಪಮಾಡಿದನು.


ಅವನು ತನ್ನ ಇಪ್ಪತ್ತಮೂರನೆ ವಯಸ್ಸಿನಲ್ಲಿ ಪಟ್ಟಕ್ಕೆ ಬಂದನು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳ ಕಾಲ ಆಳಿದನು.


ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷ ಪ್ರಾಯದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಕಾಲ ರಾಜ್ಯಭಾರ ಮಾಡಿದನು.


ವಿವೇಕವಿಲ್ಲದ ಅಧಿಪತಿ ತನ್ನ ಅಧೀನದಲ್ಲಿರುವವರಿಗೆ ಕೇಡುಮಾಡುವನು. ಅನ್ಯಾಯದ ಹಣವನ್ನು ತೆಗೆದುಕೊಳ್ಳದ ಅಧಿಪತಿ ಬಹುಕಾಲ ಆಳುವನು.


ಮೂಢನು ತನ್ನ ಮನೆದಾರಿಯನ್ನು ತಿಳಿದುಕೊಳ್ಳುವಷ್ಟು ಜಾಣನಲ್ಲ, ಆದ್ದರಿಂದ ಅವನು ತನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಕೆಲಸ ಮಾಡಬೇಕು.


ನನ್ನ ತಂದೆಯು ಹೆಚ್ಚು ಕಷ್ಟದ ಕೆಲಸಗಳನ್ನು ಮಾಡಲು ನಿಮ್ಮನ್ನು ಬಲಾತ್ಕರಿಸಿದನು. ಆದರೆ ನಾನು ಮತ್ತಷ್ಟು ಕಷ್ಟದ ಕೆಲಸಗಳನ್ನು ನಿಮ್ಮಿಂದ ಮಾಡಿಸುತ್ತೇನೆ. ನಿಮ್ಮಿಂದ ಕೆಲಸ ಮಾಡಿಸಲು ನಮ್ಮ ತಂದೆಯು ಚಾವಟಿಗಳಿಂದ ನಿಮ್ಮನ್ನು ಹೊಡೆಸಿದನು. ನಾನಾದರೋ ನಿಮ್ಮನ್ನು ಮುಳ್ಳುಕೋಲುಗಳಿಂದ ಮತ್ತಷ್ಟು ಕಠಿಣವಾಗಿ ಹೊಡೆಸುತ್ತೇನೆ’ ಎಂದು ತಿಳಿಸು” ಎಂಬುದಾಗಿ ಹೇಳಿಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು