Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:18 - ಪರಿಶುದ್ದ ಬೈಬಲ್‌

18 ನನ್ನ ಪ್ರಯಾಸದ ಫಲವನ್ನು ನನ್ನ ತರುವಾಯ ಬೇರೆಯವರು ಪಡೆದುಕೊಳ್ಳುವುದರಿಂದ ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆ ಬೇಸರಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ಪ್ರಯಾಸದ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕೆಂದು ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆ ಬೇಸರಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನನ್ನ ದುಡಿಮೆಯ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕಲ್ಲಾ ಎಂದು ಲೋಕದಲ್ಲಿ ನಾನು ಪಟ್ಟ ಪ್ರಯಾಸದ ಬಗ್ಗೆ ಬೇಸರಗೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನ ಪ್ರಯಾಸದ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕೆಂದು ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆಲ್ಲಾ ಬೇಸರಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನನ್ನ ತರುವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕಾದ್ದರಿಂದ ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:18
19 ತಿಳಿವುಗಳ ಹೋಲಿಕೆ  

ಬುದ್ಧಿಹೀನರೂ ಮೂಢರೂ ಸಾಯುವಂತೆ ಜ್ಞಾನಿಗಳೂ ಸಾಯುವರು. ಅವರು ಸತ್ತಾಗ ಅವರ ಆಸ್ತಿಯು ಬೇರೆಯವರ ಪಾಲಾಗುವುದು.


ನಮ್ಮ ಜೀವಿತವು ಕೇವಲ ಕನ್ನಡಿಯ ಪ್ರತಿಬಿಂಬದಂತಿದೆ. ನಾವು ಗಡಿಬಿಡಿಯಿಂದ ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತೇವೆ. ನಾವು ಸತ್ತ ಮೇಲೆ ಅವು ಯಾರ ಪಾಲಾಗುವುದೋ ನಮಗೆ ತಿಳಿಯದು.


ದೇವರು ನನಗೆ ಕೊಟ್ಟ ವರದಾನಗಳನ್ನು ಉಪಯೋಗಿಸಿ ಚತುರ ಶಿಲ್ಪಿಯಂತೆ ನಾನು ಆ ಮನೆಗೆ ಅಸ್ತಿವಾರವನ್ನು ಹಾಕಿದೆನು. ಇತರ ಜನರು ಆ ಅಸ್ತಿವಾರದ ಮೇಲೆ ಕಟ್ಟುತ್ತಿದ್ದಾರೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಬೇಕು.


“ಆದರೆ ದೇವರು ಅವನಿಗೆ, ‘ನೀನು ಬುದ್ಧಿಹೀನ! ಈ ರಾತ್ರಿ ನೀನು ಸಾಯುವೆ! ಈಗ ಹೇಳು, ನೀನು ಕೂಡಿಟ್ಟ ಪದಾರ್ಥಗಳ ಗತಿ ಏನಾಗುವುದು? ಅವು ಯಾರ ಪಾಲಾಗುತ್ತವೆ?’ ಎಂದು ಕೇಳಿದನು.


ನೀನು ಪ್ರಿಯ ಪತ್ನಿಯೊಡನೆ ಸುಖಪಡು. ನಿನ್ನ ಅಲ್ಪಕಾಲ ಜೀವಿತದ ದಿನಗಳಲ್ಲೆಲ್ಲಾ ಸುಖಪಡು. ಈ ಜೀವಿತವನ್ನು ನಿನಗೆ ಅನುಗ್ರಹಿಸಿರುವಾತನು ದೇವರೇ, ಇದೇ ನಿನ್ನ ಪಾಲು. ನಿನ್ನ ಈ ಜೀವಿತದ ಕೆಲಸಕಾರ್ಯಗಳನ್ನು ಸಂತೋಷದಿಂದ ಮಾಡು.


ನಾನು ಕಂಡುಕೊಂಡದ್ದೇನೆಂದರೆ, ಒಬ್ಬನು ತನ್ನ ಅಲ್ಪಕಾಲದ ಜೀವಮಾನದಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವುದೇ ಅವನಿಗೆ ಮೇಲು. ಇದೇ ಅವನ ಪಾಲು.


ಹುಟ್ಟುವಾಗಲೇ ಸತ್ತು ಹೋದವರಿಗೆ ಒಳ್ಳೆಯದೇ ಆಯಿತು! ಯಾಕೆಂದರೆ ಈ ಲೋಕದಲ್ಲಿ ನಡೆಯುವ ಕೆಟ್ಟದ್ದನ್ನು ಅವರು ನೋಡಲೇ ಇಲ್ಲ.


ದೇವರು ತಾನು ಮೆಚ್ಚಿಕೊಂಡವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ಕೊಡುವನು. ಪಾಪಿಗಾದರೋ ಪ್ರಯಾಸದಿಂದ ಸಂಪಾದಿಸುವ ಮತ್ತು ಕೂಡಿಸಿಡುವ ಕೆಲಸವನ್ನು ಕೊಡುವನು. ಅವನು ಕೂಡಿಸಿಟ್ಟವುಗಳನ್ನು ದೇವರು ತನ್ನ ಮೆಚ್ಚಿಕೆಗೆ ಪಾತ್ರನಾದವನಿಗೆ ಕೊಡುವನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಈ ಜೀವಿತದ ಎಲ್ಲಾ ವಿಷಯಗಳನ್ನು ಜ್ಞಾನದಿಂದ ವಿಮರ್ಶಿಸಿ ಕಲಿತುಕೊಳ್ಳಲು ನಿರ್ಧರಿಸಿದೆನು. ದೇವರು ಮನುಷ್ಯರಿಗೆ ಕೊಟ್ಟಿರುವ ಕೆಲಸವೆಲ್ಲ ಬಹು ಪ್ರಯಾಸವೇ.


ಈ ಲೋಕದಲ್ಲಿ ಮನುಷ್ಯರು ಪಡುವ ಪ್ರಯಾಸದಿಂದ ಅವರಿಗೇನು ಲಾಭ?


ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ ನನ್ನನ್ನು ತಪ್ಪಿಸಿ ಕಾಪಾಡು. ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ. ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು. ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿಕೊಡು.


ನನ್ನ ಕಾರ್ಯಗಳನ್ನೂ ನನ್ನ ಪ್ರಯಾಸವನ್ನೂ ಆಲೋಚಿಸಿದೆ. ಗಾಳಿಯನ್ನು ಹಿಂದಟ್ಟಿದ ಹಾಗೆ ಅದೆಲ್ಲಾ ವ್ಯರ್ಥವೆಂದು ಕಂಡುಕೊಂಡೆ. ನಮ್ಮ ಈ ಜೀವಮಾನದ ಯಾವ ಕೆಲಸಗಳಿಂದಲೂ ಲಾಭವಿಲ್ಲ.


ಒಬ್ಬನು ತನ್ನ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ಕಾರ್ಯವನ್ನು ಸಫಲಗೊಳಿಸಿದ ಮೇಲೆ ಅದರ ಫಲವನ್ನು ಪ್ರಯಾಸಪಡದ ಬೇರೊಬ್ಬನಿಗೆ ಬಿಟ್ಟು ಹೋಗಬೇಕಾಗುವುದು. ಇದೂ ವ್ಯರ್ಥವೂ ಅನ್ಯಾಯವೂ ಆಗಿದೆ.


ಆದ್ದರಿಂದ ಮನುಷ್ಯನಿಗೆ ತನ್ನ ಕಾರ್ಯದಲ್ಲಿ ಸಂತೋಷಪಡುವುದಕ್ಕಿಂತ ಬೇರೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಅಲ್ಲದೆ ಮುಂದಿನ ಕಾಲವನ್ನು ಕುರಿತು ಮನುಷ್ಯನು ಚಿಂತಿಸಬಾರದು. ಯಾಕೆಂದರೆ ಅವನ ಜೀವಮಾನದ ನಂತರ ಸಂಭವಿಸುವಂಥವುಗಳನ್ನು ನೋಡಲು ಈ ಲೋಕಕ್ಕೆ ಅವನನ್ನು ಯಾರು ಬರಮಾಡುವರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು