Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:21 - ಪರಿಶುದ್ದ ಬೈಬಲ್‌

21 ಒಬ್ಬನು ತನ್ನ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ಕಾರ್ಯವನ್ನು ಸಫಲಗೊಳಿಸಿದ ಮೇಲೆ ಅದರ ಫಲವನ್ನು ಪ್ರಯಾಸಪಡದ ಬೇರೊಬ್ಬನಿಗೆ ಬಿಟ್ಟು ಹೋಗಬೇಕಾಗುವುದು. ಇದೂ ವ್ಯರ್ಥವೂ ಅನ್ಯಾಯವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಒಬ್ಬನು ಜ್ಞಾನದಿಂದಲೂ, ತಿಳಿವಳಿಕೆಯಿಂದಲೂ ತನ್ನ ಕೆಲಸವನ್ನು ನಡೆಸಿ ಸಿದ್ಧಿಗೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಭಾಧ್ಯತೆಯಾಗಿ ಬಿಡಬೇಕಾಯಿತು. ಇದು ಸಹ ವ್ಯರ್ಥವೂ, ಕೇವಲ ಅನ್ಯಾಯವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಒಬ್ಬನು ಜ್ಞಾನದಿಂದಲೂ ತಿಳುವಳಿಕೆ ಇಂದಲೂ ಕೆಲಸಮಾಡಿ ಕಾರ್ಯವನ್ನು ಸಿದ್ಧಿಗೆ ತಂದಮೇಲೆ, ಅದಕ್ಕಾಗಿ ಪ್ರಯಾಸಪಡದವನಿಗೆ ಅದನ್ನು ವಾರಸುದಾರನಾಗಿ ಬಿಡಬೇಕಾಗುತ್ತದೆ. ಇದು ಸಹ ವ್ಯರ್ಥವಲ್ಲವೆ? ಇದು ಅನ್ಯಾಯವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಒಬ್ಬನು ಜ್ಞಾನದಿಂದಲೂ ತಿಳುವಳಿಕೆಯಿಂದಲೂ ತನ್ನ ಕೆಲಸವನ್ನು ನಡಿಸಿ ಸಾಫಲ್ಯಕ್ಕೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಬಾಧ್ಯತೆಯಾಗಿ ಬಿಡಬೇಕಾಗುವದು. ಇದು ಸಹ ವ್ಯರ್ಥವೂ ಕೇವಲ ಅನ್ಯಾಯವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಒಬ್ಬ ಮನುಷ್ಯನು ಜ್ಞಾನದಲ್ಲಿಯೂ ತಿಳುವಳಿಕೆಯಲ್ಲಿಯೂ ಕೌಶಲಯುತವಾಗಿಯೂ ತನ್ನ ಕೆಲಸ ಮಾಡಬಹುದು. ಅನಂತರ ತನಗಿರುವುದೆಲ್ಲವನ್ನು ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡಬೇಕಾಗುತ್ತದೆ. ಇದೂ ವ್ಯರ್ಥವೂ ದೊಡ್ಡ ವ್ಯಸನವೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:21
15 ತಿಳಿವುಗಳ ಹೋಲಿಕೆ  

“ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ. ನೀನು ನಿರಪರಾಧಿಗಳನ್ನು ಕೊಲ್ಲಲು ಸಿದ್ಧನಾಗಿರುವೆ. ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.”


“ಯೆಹೋಯಾಕೀಮನೇ, ನಿನ್ನ ಮನೆಯಲ್ಲಿ ದೇವದಾರಿನ ಮರವನ್ನು ಬಹಳವಾಗಿ ಇಟ್ಟುಕೊಳ್ಳುವದರಿಂದ ನೀನು ದೊಡ್ಡ ರಾಜನಾಗುವದಿಲ್ಲ. ನಿನ್ನ ತಂದೆಯಾದ ಯೋಷೀಯನು ಅನ್ನಪಾನೀಯಗಳಿಂದ ತೃಪ್ತಿಪಟ್ಟುಕೊಳ್ಳುತ್ತಿದ್ದನು. ಅವನು ನೀತಿ ಮತ್ತು ನ್ಯಾಯ ಸಮ್ಮತವಾದದ್ದನ್ನು ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು.


ಜ್ಞಾನವು ಯುದ್ಧಾಯುಧಗಳಿಗಿಂತಲೂ ಉತ್ತಮ, ಆದರೆ ಮೂಢನು ಒಳ್ಳೆಯದನ್ನು ಹಾಳು ಮಾಡುವನು.


ಪ್ರವಾದಿಯಾದ ಸಮುವೇಲನ ಕಾಲದಿಂದ ಈ ರೀತಿಯಾಗಿ ಪಸ್ಕಹಬ್ಬವನ್ನು ಎಂದೂ ಆಚರಿಸಿರಲಿಲ್ಲ. ಇಸ್ರೇಲರ ಅರಸರಲ್ಲಿ ಯಾರೂ ಈ ರೀತಿಯಾಗಿ ಹಬ್ಬ ಆಚರಿಸಿರಲಿಲ್ಲ. ಅರಸನಾದ ಯೋಷೀಯ, ಯಾಜಕರು, ಲೇವಿಯರು, ಯೆಹೂದದ ಜನರು, ಇಸ್ರೇಲಿನಿಂದ ಬಂದ ಜನರು ಮತ್ತು ಜೆರುಸಲೇಮಿನ ಜನರು ವಿಶೇಷ ರೀತಿಯಲ್ಲಿ ಪಸ್ಕಹಬ್ಬವನ್ನು ಆಚರಿಸಿದರು.


ಯೋಷೀಯನು ಯೆಹೋವನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನೇ ಮಾಡಿದನು. ಅವನು ತನ್ನ ಪೂರ್ವಿಕನಾದ ದಾವೀದನಂತೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು. ಅವನು ಒಳ್ಳೆಯ ಕಾರ್ಯಗಳನ್ನು ಮಾಡುವುದನ್ನು ಬಿಟ್ಟುಬಿಡಲಿಲ್ಲ.


ಬುದ್ಧಿಹೀನರೂ ಮೂಢರೂ ಸಾಯುವಂತೆ ಜ್ಞಾನಿಗಳೂ ಸಾಯುವರು. ಅವರು ಸತ್ತಾಗ ಅವರ ಆಸ್ತಿಯು ಬೇರೆಯವರ ಪಾಲಾಗುವುದು.


ಆದ್ದರಿಂದ, ನಾನು ಈ ಲೋಕದಲ್ಲಿ ಪ್ರಯಾಸಪಟ್ಟ ಕೆಲಸಗಳ ಬಗ್ಗೆ ವ್ಯಸನಗೊಂಡೆನು.


ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ.


ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.


ಯೆಹೋವನೇ, ನನಗಿರುವ ನಿರೀಕ್ಷೆ ಯಾವುದು? ನನ್ನ ನಿರೀಕ್ಷೆಯು ನೀನೇ.


ಸಮಾಧಿಯೇ ಅವರ ಶಾಶ್ವತವಾದ ಹೊಸ ಮನೆ. ಅವರೆಷ್ಟೇ ಭೂ ಆಸ್ತಿಯನ್ನು ಹೊಂದಿದ್ದರೂ ಅದರಿಂದೇನೂ ಪ್ರಯೋಜನವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು