Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:23 - ಪರಿಶುದ್ದ ಬೈಬಲ್‌

23 ಅವನ ಜೀವಮಾನವೆಲ್ಲಾ ಅವನಿಗೆ ವ್ಯಸನವಿರುವುದು; ಕೆಲಸದಲ್ಲೆಲ್ಲಾ ಕಷ್ಟವಿರುವುದು; ರಾತ್ರಿಯಲ್ಲಿಯೂ ಮನಸ್ಸಿಗೆ ವಿಶ್ರಾಂತಿಯಿರದು. ಇದೂ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನ ದಿನಗಳೆಲ್ಲಾ ವ್ಯಸನವೇ. ಅವನ ಕೆಲಸವು ತೊಂದರೆಯೇ. ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ವಿಶ್ರಾಂತಿಯಿಲ್ಲ. ಇದೂ ಸಹ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವನ ಮನಸ್ಸಿಗೆ ನೆಮ್ಮದಿ ಇಲ್ಲ, ಇದು ಸಹ ವ್ಯರ್ಥವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನ ದಿನಗಳೆಲ್ಲಾ ವ್ಯಸನಮಯವೇ, ಅವನ ಕೆಲಸವು ತೊಂದರೆಯೇ; ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ನಿಲುಗಡೆಯಿಲ್ಲ. ಇದೂ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನ ದಿನಗಳೆಲ್ಲಾ ವ್ಯಸನವೇ. ಅವನ ಪ್ರಯಾಸವು ದುಃಖವೇ. ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ವಿಶ್ರಾಂತಿಯಿಲ್ಲ. ಇದೂ ಕೂಡ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:23
20 ತಿಳಿವುಗಳ ಹೋಲಿಕೆ  

ಯೋಬನು ಹೇಳಿದನು: “ನಾವು ಮನುಷ್ಯರಷ್ಟೇ. ನಮ್ಮ ಅಲ್ಪಜೀವಿತವು ಕಷ್ಟಗಳಿಂದ ತುಂಬಿಕೊಂಡಿದೆ.


ಆದರೆ ಮನುಷ್ಯರಿಂದ ಕೇಡುಗಳು ಉದ್ಭವಿಸುವುದೂ ಬೆಂಕಿಯಿಂದ ಕಿಡಿಗಳು ಮೇಲಕ್ಕೆ ಹಾರುವುದೂ ಸಹಜ.


ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ. ಯಾಕೆಂದರೆ ದೇವರು ತನ್ನ ಪ್ರಿಯರಿಗೆ ಆಹಾರವನ್ನು ನಿದ್ರೆಯಲ್ಲೂ ದಯಪಾಲಿಸುವನು.


ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.


ರಾಜನಾದ ದಾರ್ಯಾವೆಷನು ಅರಮನೆಗೆ ಹಿಂತಿರುಗಿದನು. ಆ ರಾತ್ರಿ ಅರಸನು ಊಟಮಾಡಲಿಲ್ಲ. ಮನೋರಂಜನೆಗಾಗಿ ಯಾರನ್ನೂ ತನ್ನ ಹತ್ತಿರ ಬರಗೊಡಿಸಲಿಲ್ಲ. ಇಡೀ ರಾತ್ರಿ ಅವನಿಗೆ ನಿದ್ರೆಯೇ ಬರಲಿಲ್ಲ.


ದಿನವೆಲ್ಲಾ ಪ್ರಯಾಸಪಟ್ಟು ದುಡಿಯುವವನು ಸಮಾಧಾನದಿಂದ ಮಲಗಿಕೊಳ್ಳುವನು. ಅವನಿಗೆ ತಿನ್ನಲು ಸ್ವಲ್ಪವೇ ಇರಲಿ ಅಥವಾ ಹೆಚ್ಚೇ ಇರಲಿ, ಅದು ಮುಖ್ಯವಲ್ಲ. ಐಶ್ವರ್ಯವಂತನಿಗಾದರೋ ತನ್ನ ಸಂಪತ್ತಿನ ಕುರಿತು ಚಿಂತಿಸುತ್ತಾ ನಿದ್ರಿಸಲಾರನು.


ಬಹು ಜ್ಞಾನದಿಂದ ಬಹು ಸಂಕಟ; ಹೆಚ್ಚು ತಿಳುವಳಿಕೆಯಿಂದ ಹೆಚ್ಚು ದುಃಖ.


ನೀನು ನಮಗೆ ಬಹು ದುಃಖವನ್ನೂ ಕಷ್ಟಗಳನ್ನೂ ಬರಮಾಡಿದೆ. ಈಗ ನಮ್ಮನ್ನು ಸಂತೋಷಗೊಳಿಸು.


ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು. ನಾನು ಬೇಸಿಗೆಯಲ್ಲಿ ಒಣಗಿಹೋದ ಭೂಮಿಯಂತಾದೆನು.


ಆ ರಾತ್ರಿ ಅರಸನಿಗೆ ನಿದ್ರಿಸಲಾಗಲಿಲ್ಲ. ಒಬ್ಬ ಸೇವಕನನ್ನು ಕರೆದು ರಾಜಕಾಲವೃತ್ತಾಂತ ಪುಸ್ತಕವನ್ನು ತರಹೇಳಿ ಅವನಿಂದ ಅದನ್ನು ಓದಿಸಿದನು. (ಈ ಪುಸ್ತಕದಲ್ಲಿ ಅರಸರ ರಾಜ್ಯ ಆಳ್ವಿಕೆಯಲ್ಲಿ ನಡೆದ ಘಟನೆಗಳು ಲಿಖಿತವಾಗಿರುತ್ತದೆ.)


ಯಾಕೋಬನು ಫರೋಹನಿಗೆ, “ನಾನು ನನ್ನ ಅಲ್ಪಕಾಲದ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿದೆನು. ಈಗ ನನಗೆ ನೂರಮೂವತ್ತು ವರ್ಷ. ನನ್ನ ತಂದೆಯೂ ಅವನ ಪೂರ್ವಿಕರೂ ನನಗಿಂತ ಹೆಚ್ಚು ವರ್ಷ ಜೀವಿಸಿದರು” ಎಂದು ಹೇಳಿದನು.


ಆಮೇಲೆ ದೇವರಾದ ಯೆಹೋವನು ಪುರುಷನಿಗೆ, “ವಿಶೇಷವಾದ ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆ. ಆದರೆ ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ಆ ಮರದ ಹಣ್ಣನ್ನು ತಿಂದೆ. ನಿನ್ನ ದೆಸೆಯಿಂದ ನಾನು ಭೂಮಿಯನ್ನು ಶಪಿಸುವೆನು. ಭೂಮಿಯು ಫಲಿಸುವ ಆಹಾರಕ್ಕಾಗಿ ನೀನು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಕಷ್ಟಪಟ್ಟು ದುಡಿಯಲೇಬೇಕು.


ಈ ಜೀವಿತದ ಎಲ್ಲಾ ವಿಷಯಗಳನ್ನು ಜ್ಞಾನದಿಂದ ವಿಮರ್ಶಿಸಿ ಕಲಿತುಕೊಳ್ಳಲು ನಿರ್ಧರಿಸಿದೆನು. ದೇವರು ಮನುಷ್ಯರಿಗೆ ಕೊಟ್ಟಿರುವ ಕೆಲಸವೆಲ್ಲ ಬಹು ಪ್ರಯಾಸವೇ.


ನನ್ನ ಕಾರ್ಯಗಳನ್ನೂ ನನ್ನ ಪ್ರಯಾಸವನ್ನೂ ಆಲೋಚಿಸಿದೆ. ಗಾಳಿಯನ್ನು ಹಿಂದಟ್ಟಿದ ಹಾಗೆ ಅದೆಲ್ಲಾ ವ್ಯರ್ಥವೆಂದು ಕಂಡುಕೊಂಡೆ. ನಮ್ಮ ಈ ಜೀವಮಾನದ ಯಾವ ಕೆಲಸಗಳಿಂದಲೂ ಲಾಭವಿಲ್ಲ.


ಅವನ ಜೀವಮಾನವೆಲ್ಲಾ ವ್ಯಸನದಿಂದಲೂ ದುಃಖದಿಂದಲೂ ಕೂಡಿದೆ. ನಿರಾಶೆಯೂ ಕಾಯಿಲೆಯೂ ಕೋಪವೂ ಅವನನ್ನು ಕಾಡುತ್ತಲೇ ಇರುತ್ತವೆ.


ಈ ಲೋಕದಲ್ಲಿ ಜನರ ಕಾರ್ಯಗಳನ್ನು ಎಚ್ಚರಿಕೆಯಿಂದ ಅಧ್ಯಯನ ಮಾಡಿದೆ. ಅವರು ಹಗಲುರಾತ್ರಿ ಕೆಲಸ ಮಾಡುವರು; ಕೆಲವೊಮ್ಮೆ ನಿದ್ರೆಯನ್ನೂ ಮಾಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು