Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:14 - ಪರಿಶುದ್ದ ಬೈಬಲ್‌

14 ಆ ಬಡಯುವಕನು ದೇಶದ ಒಂದು ಬಡಕುಟುಂಬದಲ್ಲಿ ಹುಟ್ಟಿದ್ದಿರಬಹುದು ಅಥವಾ ದೇಶವನ್ನು ಆಳುವುದಕ್ಕಾಗಿ ಸೆರೆಮನೆಯಿಂದ ಬಿಡುಗಡೆ ಮಾಡಲ್ಪಟ್ಟಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಂಥ ಯುವಕನೊಬ್ಬನು ರಾಜನಾಗಲು ಸೆರೆಮನೆಯಿಂದ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಂಥ ಯುವಕನೊಬ್ಬನನ್ನು ರಾಜನನ್ನಾಗಿಸಲು ಸೆರೆಮನೆಯಿಂದ ಕರೆ ತರಲಾಯಿತು. ರಾಜ್ಯದಲ್ಲಿ ಒಬ್ಬ ಬಡ ಪ್ರಜೆಯಾಗಿ ಹುಟ್ಟಿದವನು ಆತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಂಥ ಯುವಕನೊಬ್ಬನು ರಾಜನಾಗಲು ಸೆರೆಮನೆಯಿಂದ ತರಲ್ಪಟ್ಟನು; ಹೌದು, ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆ ಯುವಕನು ಸೆರೆಮನೆಯಿಂದ ರಾಜ್ಯವನ್ನಾಳುವುದಕ್ಕಾಗಿ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:14
15 ತಿಳಿವುಗಳ ಹೋಲಿಕೆ  

ಆಗ ಫರೋಹನು ಯೋಸೇಫನನ್ನು ಸೆರೆಮನೆಯಿಂದ ಕರೆಸಿದನು. ಯೋಸೇಫನು ಕ್ಷೌರಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಹಾಕಿಕೊಂಡು ಹೋಗಿ ಫರೋಹನ ಮುಂದೆ ನಿಂತುಕೊಂಡನು.


ದೇವರು ಹೀನಸ್ಥಿತಿಯಲ್ಲಿರುವವರನ್ನು ಉನ್ನತಸ್ಥಿತಿಗೆ ಏರಿಸುವನು. ವ್ಯಥೆಯಿಂದಿರುವವರನ್ನು ಸಂತೋಷಗೊಳಿಸುವನು.


ಆ ಶಬ್ದಗಳು ಇನ್ನೂ ಬಾಯಿಯಲ್ಲಿಯೇ ಇದ್ದಾಗ, ಆಕಾಶವಾಣಿಯಾಯಿತು. ಆ ಧ್ವನಿಯು, “ಅರಸನಾದ ನೆಬೂಕದ್ನೆಚ್ಚರನೇ, ನಿನ್ನಿಂದ ನಿನ್ನ ರಾಜಪದವಿಯನ್ನು ಕಿತ್ತುಕೊಳ್ಳಲಾಗಿದೆ.


ನಮಗೆ ರಾಜನು ಬಹಳ ಮುಖ್ಯವಾಗಿದ್ದನು. ಅವನು ನಮಗೆ ಉಸಿರಿನಷ್ಟೇ ಅಮೂಲ್ಯವಾಗಿದ್ದನು. ಆದರೆ ಅವರು ರಾಜನನ್ನೇ ಸೆರೆಹಿಡಿದರು. ಯೆಹೋವನೇ, ಆ ರಾಜನನ್ನು ಆರಿಸಿಕೊಂಡಿದ್ದನು. “ನಾವು ಅವನ ನೆರಳಿನಲ್ಲಿ ಬದುಕುತ್ತೇವೆ. ಅವನು ನಮ್ಮನ್ನು ಜನಾಂಗಗಳವರಿಂದ ಸಂರಕ್ಷಿಸುವನು” ಎಂದು ನಾವು ರಾಜನ ಬಗ್ಗೆ ಹೇಳಿಕೊಂಡಿದ್ದೆವು.


ಅವರು ಚಿದ್ಕೀಯನ ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರು. ನಂತರ ಅವರು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿದರು. ಅವರು ಅವನನ್ನು ಸರಪಣಿಗಳಿಂದ ಬಂಧಿಸಿ, ಬಾಬಿಲೋನಿಗೆ ಕೊಂಡೊಯ್ದರು.


ಯೆಹೂದದ ರಾಜನಾದ ಯೆಹೋಯಾಖೀನನು ಬಾಬಿಲೋನ್ ರಾಜನನ್ನು ಭೇಟಿಮಾಡಲು ಹೋದನು. ಯೆಹೋಯಾಖೀನನ ತಾಯಿ, ಅವನ ಅಧಿಕಾರಿಗಳು, ನಾಯಕರು ಮತ್ತು ಸಿಬ್ಬಂದಿಯೆಲ್ಲವೂ ಅವನೊಂದಿಗೆ ಹೋದರು. ಆಗ ಬಾಬಿಲೋನ್ ರಾಜ ಯೆಹೋಯಾಖೀನನನ್ನು ಸೆರೆಹಿಡಿದನು. ಇದು ಸಂಭವಿಸಿದ್ದು ನೆಬೂಕದ್ನೆಚ್ಚರನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ.


ಯೆಹೋಯಾಕೀಮನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರ ಜೊತೆಯಲ್ಲಿ ಸಮಾಧಿಮಾಡಿದರು. ಯೆಹೋಯಾಕೀಮನ ಮಗನಾದ ಯೆಹೋಯಾಖೀನನು ಅವನ ನಂತರ ಹೊಸ ರಾಜನಾದನು.


ಆದರೆ ನಾನು ಗಮನಿಸಿದ ಪ್ರಕಾರ ಜನರು ಆ ಯೌವನಸ್ಥನ ಪಕ್ಷವಹಿಸುವರು. ಅವನು ಹೊಸರಾಜನಾಗುವನು.


ಯೆಹೋವನು ಬಡವರನ್ನು ಧೂಳಿನಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ದೀನರನ್ನು ತಿಪ್ಪೆಯಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ಬಡವರನ್ನು ರಾಜಕುಮಾರರೊಂದಿಗೆ ಕುಳ್ಳಿರಿಸುತ್ತಾನೆ. ಆತನು ಬಡವರನ್ನು ಗೌರವಪೀಠದಲ್ಲಿ ಕುಳ್ಳಿರಿಸುತ್ತಾನೆ. ಲೋಕವೂ ಅದರ ಅಡಿಪಾಯಗಳೂ ಯೆಹೋವನವೇ. ಆತನು ಆ ಕಂಬಗಳ ಮೇಲೆ ಲೋಕವನ್ನು ನಿಲ್ಲಿಸಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು