Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:2 - ಪರಿಶುದ್ದ ಬೈಬಲ್‌

2 ದೇವರಿಗೆ ಹರಕೆ ಮಾಡುವಾಗ ಎಚ್ಚರಿಕೆಯಿಂದಿರಿ. ನೀವು ದೇವರೊಂದಿಗೆ ಮಾತಾಡುವಾಗ ಎಚ್ಚರಿಕೆಯಿಂದಿರಿ. ನಿಮ್ಮ ಮನೋದ್ವೇಗಗಳು ನಿಮ್ಮನ್ನು ಮಾತಿನಲ್ಲಿ ದುಡುಕಿಸದಂತೆ ನೋಡಿಕೊಳ್ಳಿ. ದೇವರು ಪರಲೋಕದಲ್ಲಿರುವುದರಿಂದ ಮತ್ತು ನೀವು ಈ ಲೋಕದಲ್ಲಿರುವುದರಿಂದ ನಿಮ್ಮ ಮಾತುಗಳು ಮಿತವಾಗಿರಲಿ. ಈ ನುಡಿ ಸತ್ಯವಾದದ್ದೇ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಬಾಯಿಂದ ದುಡುಕಬೇಡ ಮತ್ತು ದೇವರ ಮುಂದೆ ಮಾತನಾಡಲು ನಿನ್ನ ಹೃದಯದಲ್ಲಿ ಆತುರಪಡಬೇಡ. ದೇವರು ಪರಲೋಕದಲ್ಲಿದ್ದಾನೆ. ನೀನು ಭೂಮಿಯಲ್ಲಿದ್ದಿ, ಆದಕಾರಣ ನಿನ್ನ ಮಾತುಗಳು ಕಡಿಮೆಯಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದುಡುಕಿ ಮಾತನಾಡಬೇಡ. ದೇವರ ಸನ್ನಿಧಿಯಲ್ಲಿ ಮಾತುಕೊಡಲು ಆತುರಪಡಬೇಡ. ದೇವರು ಇರುವುದು ಪರಲೋಕದಲ್ಲಿ, ನೀನಿರುವುದಾದರೋ ಭೂಲೋಕದಲ್ಲಿ. ಆದುದರಿಂದ ನಿನ್ನ ಮಾತುಗಳಿಗೆ ಮಿತಿಯಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬಾಯಿದುಡುಕಬೇಡ, ದೇವರ ಮುಂದೆ ಮಾತಾಡಲು ನಿನ್ನ ಹೃದಯದಲ್ಲಿ ಆತುರಪಡದಿರು; ದೇವರು ಆಕಾಶದಲ್ಲಿದ್ದಾನಲ್ಲವೆ, ನೀನು ಭೂವಿುಯಲ್ಲಿದ್ದೀ; ಆದಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀನು ದುಡುಕಿ ಮಾತನಾಡಬೇಡ, ದೇವರ ಮುಂದೆ ಮಾತನಾಡಲು ನಿನ್ನ ಹೃದಯವು ಆತುರಪಡದೇ ಇರಲಿ. ದೇವರು ಪರಲೋಕದಲ್ಲಿದ್ದಾರೆ. ನೀನಾದರೋ ಭೂಮಿಯ ಮೇಲೆ ಇರುವೆ, ಆದಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:2
21 ತಿಳಿವುಗಳ ಹೋಲಿಕೆ  

“ನೀವು ಪ್ರಾರ್ಥಿಸುವಾಗ ದೇವರನ್ನು ತಿಳಿದಿಲ್ಲದ ಜನರಂತೆ ಪ್ರಾರ್ಥಿಸಬೇಡಿ. ಅವರು ಅರ್ಥವಿಲ್ಲದ ಸಂಗತಿಗಳನ್ನು ಹೇಳುತ್ತಲೇ ಇರುತ್ತಾರೆ. ಆ ರೀತಿ ಪ್ರಾರ್ಥಿಸಬೇಡಿ. ತಾವು ಅನೇಕ ವಿಷಯಗಳನ್ನು ಹೇಳುವುದರಿಂದ ದೇವರು ತಮ್ಮ ಪ್ರಾರ್ಥನೆಯನ್ನು ಕೇಳುತ್ತಾನೆಂಬುದು ಅವರ ಆಲೋಚನೆ.


ಅತಿಯಾಗಿ ಮಾತಾಡುವವನು ತನ್ನನ್ನೇ ತೊಂದರೆಗೆ ಸಿಕ್ಕಿಸಿಕೊಳ್ಳುತ್ತಾನೆ. ವಿವೇಕಿಯು ಮೌನವಾಗಿರಲು ಕಲಿತುಕೊಳ್ಳುತ್ತಾನೆ.


ಆಕಾಶವು ಭೂಮಿಗಿಂತ ಎಷ್ಟು ಎತ್ತರವಾಗಿದೆಯೋ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತ ಅಷ್ಟೇ ಉನ್ನತವಾಗಿವೆ; ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತ ಅಷ್ಟೇ ಉನ್ನತವಾಗಿವೆ.” ಇದು ಯೆಹೋವನ ನುಡಿ.


ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ: ‘ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ಹೆಸರು ಪರಿಶುದ್ಧವಾಗಿರಲಿ.


ಉಪಯೋಗವಿಲ್ಲದ ನಿಮ್ಮ ಕನಸುಗಳಾಗಲಿ ಜಂಬದ ಮಾತುಗಳಾಗಲಿ ನಿಮ್ಮನ್ನು ಕೇಡಿಗೆ ನಡೆಸದಂತೆ ನೋಡಿಕೊಳ್ಳಿರಿ; ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ.


ಆಗ ಅಬ್ರಹಾಮನು ಯೆಹೋವನಿಗೆ, “ನಿನಗೆ ನನ್ನನ್ನು ಹೋಲಿಸಿಕೊಂಡರೆ, ನಾನು ಕೇವಲ ಧೂಳು ಮತ್ತು ಬೂದಿ. ಆದರೆ ಈ ಪ್ರಶ್ನೆಯನ್ನೂ ಕೇಳಲು ನನಗೆ ಅವಕಾಶಕೊಡು.


ನಾವೆಲ್ಲರೂ ಅನೇಕ ವಿಷಯಗಳಲ್ಲಿ ತಪ್ಪುವುದುಂಟು. ಆದರೆ ಮಾತಿನಲ್ಲಿ ಎಂದೂ ತಪ್ಪುಮಾಡಿಲ್ಲದ ವ್ಯಕ್ತಿಯು ಪರಿಪೂರ್ಣನೂ ತನ್ನ ದೇಹವನ್ನು ಸ್ವಾಧೀನದಲ್ಲಿಟ್ಟುಕೊಳ್ಳಲು ಸಮರ್ಥನೂ ಆಗಿದ್ದಾನೆ.


“ಅನೇಕ ಚಿಂತೆಗಳಿಂದ ದುಸ್ವಪ್ನಗಳಾಗುವಂತೆ ಮೂಢನು ಅನೇಕ ಮಾತುಗಳನ್ನಾಡುವನು.”


ನೀನು ದೇವರಿಗೆ ಹರಕೆ ಮಾಡುವ ಮೊದಲೇ ಎಚ್ಚರಿಕೆಯಿಂದ ಯೋಚಿಸು. ಹರಕೆ ಮಾಡಿದ ಮೇಲೆ ಹರಕೆ ಮಾಡಬಾರದಾಗಿತ್ತು ಎಂದು ಹೇಳಬೇಡ.


ನಂತರ ಯಾಕೋಬನು ಈ ಪ್ರಮಾಣವನ್ನು ಮಾಡಿದನು: “ದೇವರು ನನ್ನ ಸಂಗಡವಿದ್ದು ನಾನು ಹೋದಲ್ಲೆಲ್ಲ ನನ್ನನ್ನು ಕಾಪಾಡಿ ಊಟಕ್ಕೆ ಆಹಾರವನ್ನೂ, ಉಡಲು ಬಟ್ಟೆಗಳನ್ನೂ ಕೊಟ್ಟು,


ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಬಯಸಿದ್ದನ್ನೆಲ್ಲಾ ಮಾಡುತ್ತಾನೆ.


ಆಮೇಲೆ ಅಬ್ರಹಾಮನು, “ಯೆಹೋವನೇ, ದಯಮಾಡಿ ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಇದೊಂದು ಸಲ ಮಾತ್ರ ಪ್ರಶ್ನೆ ಕೇಳುವೆ. ಹತ್ತು ಮಂದಿ ನೀತಿವಂತರನ್ನು ಕಂಡರೆ ಏನು ಮಾಡುವೆ?” ಎಂದು ಕೇಳಿದನು. ಯೆಹೋವನು ಅವನಿಗೆ, “ನಾನು ಆ ಪಟ್ಟಣದಲ್ಲಿ ಹತ್ತು ಮಂದಿ ನೀತಿವಂತರನ್ನು ಕಂಡರೂ, ಅದನ್ನು ನಾಶಮಾಡುವುದಿಲ್ಲ” ಅಂದನು.


ಆಮೇಲೆ ಅಬ್ರಹಾಮನು, “ಯೆಹೋವನೇ, ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಈ ಪ್ರಶ್ನೆಯನ್ನೂ ಕೇಳುವೆ: ಆ ಪಟ್ಟಣದಲ್ಲಿ ಕೇವಲ ಮೂವತ್ತು ಮಂದಿ ನೀತಿವಂತರಿದ್ದರೆ ನೀನು ಆ ಪಟ್ಟಣವನ್ನು ನಾಶಮಾಡುವೆಯಾ?” ಎಂದು ಕೇಳಿದನು. ಯೆಹೋವನು ಅವನಿಗೆ, “ಅಲ್ಲಿ ಮೂವತ್ತು ಮಂದಿ ನೀತಿವಂತರಿದ್ದರೂ ನಾನು ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಅಂದನು.


ಯೆಫ್ತಾಹನು ಯೆಹೋವನಿಗೆ, “ನಾನು ಅಮ್ಮೋನಿಯರನ್ನು ಸೋಲಿಸುವಂತೆ ನೀನು ಮಾಡಿದರೆ


ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಕೊಡುತ್ತೇನೆ” ಎಂದು ಪ್ರಮಾಣಮಾಡಿದನು.


ನಾನು ಕಲ್ಲನ್ನು ನೆಟ್ಟಿರುವ ಈ ಸ್ಥಳವು ದೇವರ ಪವಿತ್ರಸ್ಥಳವಾಗುವುದು. ಇದಲ್ಲದೆ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತನೆಯ ಒಂದು ಭಾಗವನ್ನು ನಾನು ಆತನಿಗೆ ಕೊಡುತ್ತೇನೆ.”


“ಒಬ್ಬನು ಆಲೋಚಿಸದೆ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಮಾತುಕೊಟ್ಟು ಮರೆತುಬಿಟ್ಟರೆ, ಅದು ಅವನ ನೆನಪಿಗೆ ಬಂದಾಗ ಅವನು ದೋಷಿಯಾಗುವನು.


ಜ್ಞಾನಿಯ ಮಾತುಗಳು ಅವನಿಗೆ ಘನತೆಯನ್ನು ತರುತ್ತವೆ; ಮೂಢನ ಮಾತುಗಳು ಅವನಿಗೆ ನಾಶನವನ್ನು ತರುತ್ತವೆ.


ಮೂಢನ ಮಾತು ಮೂರ್ಖತನದೊಡನೆ ಆರಂಭಗೊಂಡು ದುಷ್ಟಕರವಾದ ಹುಚ್ಚುತನದೊಡನೆ ಕೊನೆಗೊಳ್ಳುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು