Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:6 - ಪರಿಶುದ್ದ ಬೈಬಲ್‌

6 ಆದ್ದರಿಂದ ನಿಮ್ಮ ಮಾತುಗಳು ನಿಮ್ಮನ್ನು ಪಾಪಕ್ಕೆ ನಡೆಸದಂತೆ ನೋಡಿಕೊಳ್ಳಿ. “ನಾನು ಅಜಾಗ್ರತೆಯಿಂದ ಹೇಳಿದೆ” ಎಂದು ಯಾಜಕನಿಗೆ ತಿಳಿಸಬೇಡಿ. ಇಲ್ಲವಾದರೆ, ದೇವರು ನಿಮ್ಮ ಮಾತುಗಳಿಗೆ ಕೋಪಗೊಂಡು ನೀವು ದುಡಿದಿರುವುದನ್ನೆಲ್ಲಾ ನಾಶಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ. “ಇದು ಅಜಾಗ್ರತೆಯಿಂದ ಆಯಿತು” ಎಂದು ದೂತನ ಮುಂದೆ ಹೇಳಬೇಡ. ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಕೆಲಸವನ್ನು ಏಕೆ ಹಾಳುಮಾಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ಬಾಯಿ ಪಾಪಕ್ಕೆ ಕಾರಣ ಆಗದಂತೆ ನೋಡಿಕೊ. ಅದು ಅಜಾಗ್ರತೆಯಿಂದ ಆಯಿತೆಂದು ದೇವದೂತನ ಮುಂದೆ ನೆಪ ಹೇಳಬೇಡ. ದೇವರು ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೆಲಸವನ್ನು ಹಾಳುಮಾಡಿಯಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ; ಇದು ಅಜಾಗ್ರತೆಯಿಂದಾಯಿತೆಂದು ದೂತನ ಮುಂದೆ ಹೇಳಬೇಡ; ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಗೆಲಸವನ್ನು ಏಕೆ ಹಾಳುಮಾಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ನಡೆಸದಂತೆ ನೋಡಿಕೋ. “ನಾನು ಹರಕೆ ಮಾಡಿದ್ದು ತಪ್ಪು,” ಎಂದು ದೂತನ ಮುಂದೆ ಹೇಳಬೇಡ. ಇದರಿಂದ ದೇವರು ನಿನ್ನ ಮಾತಿಗೆ ಮೆಚ್ಚದೆ, ನಿನ್ನನ್ನು ಏಕೆ ದಂಡಿಸಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:6
23 ತಿಳಿವುಗಳ ಹೋಲಿಕೆ  

ಸದ್ಭಕ್ತನೆಂದು ತನ್ನ ಬಗ್ಗೆ ಹೇಳಿಕೊಳ್ಳುವವನು ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆಹೋದರೆ ಅವನು ತನ್ನನ್ನು ತಾನೇ ಮೋಸಗೊಳಿಸಿಕೊಂಡಂತಾಗುವುದು. ಅವನ “ಭಕ್ತಿ”ಗೆ ಬೆಲೆಯಿಲ್ಲ.


ನೀವು ಎಚ್ಚರವಾಗಿರಿ! ನೀವು ದುಡಿದು ಸಂಪಾದಿಸಿದ್ದನ್ನು ಕಳೆದುಕೊಳ್ಳಬೇಡಿ. ನೀವು ಎಚ್ಚರಿಕೆಯಿಂದ ಇರುವುದಾದರೆ, ನಿಮಗೆ ಬರಬೇಕಾದ ಪೂರ್ಣಫಲವನ್ನು ಹೊಂದಿಕೊಳ್ಳುವಿರಿ.


ನಾವೆಲ್ಲರೂ ಅನೇಕ ವಿಷಯಗಳಲ್ಲಿ ತಪ್ಪುವುದುಂಟು. ಆದರೆ ಮಾತಿನಲ್ಲಿ ಎಂದೂ ತಪ್ಪುಮಾಡಿಲ್ಲದ ವ್ಯಕ್ತಿಯು ಪರಿಪೂರ್ಣನೂ ತನ್ನ ದೇಹವನ್ನು ಸ್ವಾಧೀನದಲ್ಲಿಟ್ಟುಕೊಳ್ಳಲು ಸಮರ್ಥನೂ ಆಗಿದ್ದಾನೆ.


ಒಬ್ಬ ಯಾಜಕನು ಯೆಹೋವನ ಬೋಧನೆಯನ್ನು ಚೆನ್ನಾಗಿ ಅರಿತಿರಬೇಕು. ಜನರು ಯಾಜಕನ ಬಳಿಗೆ ಹೋಗಿ ದೇವರ ಬೋಧನೆಯನ್ನು ಕೇಳಿ ತಿಳಿದುಕೊಳ್ಳಬೇಕು. ಯಾಜಕನು ದೇವರ ಸಂದೇಶವನ್ನು ಜನರಿಗೆ ತಲುಪಿಸುವವನಾಗಿರಬೇಕು.


ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”


“ಈ ರೀತಿಯಲ್ಲಿ ಇಸ್ರೇಲರ ಇಡೀ ಸಮುದಾಯದವರ ಕ್ಷಮೆಗಾಗಿ ಯಾಜಕನು ಪ್ರಾಯಶ್ಚಿತ್ತ ಮಾಡುವನು. ಯಾಕೆಂದರೆ ಅದು ತಿಳಿಯದೆ ಮಾಡಿದ ತಪ್ಪಾಗಿತ್ತು ಮತ್ತು ಆ ತಪ್ಪಿಗಾಗಿ ಅವರು ತಮ್ಮ ಅರ್ಪಣೆಯನ್ನು ಯೆಹೋವನಿಗೆ ಕಾಣಿಕೆಯಾಗಿ ತಂದರು ಮತ್ತು ಯೆಹೋವನ ಎದುರಿನಲ್ಲಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಿದರು.


ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.


ನೀನು ಈ ಕಾರ್ಯಗಳನ್ನು ಮಾಡಬೇಕೆಂದು ದೇವರ, ಯೇಸು ಕ್ರಿಸ್ತನ ಮತ್ತು ಆರಿಸಲ್ಪಟ್ಟ ದೇವದೂತರ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುತ್ತೇನೆ. ಆದರೆ ಸತ್ಯವನ್ನು ತಿಳಿಯುವುದಕ್ಕಿಂತ ಮೊದಲೇ ಜನರಿಗೆ ತೀರ್ಪು ನೀಡಬೇಡ. ಯಾರಿಗೂ ಪಕ್ಷಪಾತ ತೋರಬೇಡ.


ಆದಕಾರಣವೇ, ಸ್ತ್ರೀಯು ತಾನು ಅಧಿಕಾರದ ಅಧೀನದಲ್ಲಿರುವುದನ್ನು ಸೂಚಿಸಲು ತನ್ನ ತಲೆಗೆ ಮುಸುಕು ಹಾಕಿಕೊಳ್ಳಬೇಕು. ದೇವದೂತರ ನಿಮಿತ್ತವಾಗಿಯೂ ಸ್ತ್ರೀ ತನ್ನ ತಲೆಗೆ ಮುಸುಕು ಹಾಕಿಕೊಳ್ಳಬೇಕು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.


“ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ತಿಳಿಯದೆ ಪಾಪಮಾಡಿದರೆ ಮತ್ತು ಮಾಡಬಾರದೆಂದು ಹೇಳಿದವುಗಳನ್ನು ಮಾಡಿದರೆ, ಅವನು ಮಾಡಬೇಕಾದದ್ದೇನೆಂದರೆ:


“ಒಬ್ಬ ಅಧಿಪತಿಯು ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದವುಗಳಲ್ಲಿ ಯಾವುದಾದರೊಂದನ್ನು ತಿಳಿಯದೆ ಮಾಡಿದರೆ ಅವನು ದೋಷಿಯಾಗುತ್ತಾನೆ.


ಕೆಡುಕರ ಬಗ್ಗೆ ಹೊಟ್ಟೆಕಿಚ್ಚುಪಡಬೇಡ. ಆದರೆ ಯೆಹೋವನಲ್ಲಿ ಭಯಭಕ್ತಿಯಿಂದಿರಲು ನಿನ್ನಿಂದಾದಷ್ಟು ಪ್ರಯತ್ನಿಸು.


ದೇವರ ಕಾರ್ಯಗಳೆಲ್ಲಾ ಶಾಶ್ವತವಾದದ್ದು. ಆತನ ಕಾರ್ಯಗಳಿಗೆ ಮನುಷ್ಯರು ಏನನ್ನೂ ಸೇರಿಸಲಾರರು; ಅವುಗಳಿಂದ ಏನನ್ನೂ ತೆಗೆಯಲಾರರು. ಮನುಷ್ಯರು ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕೆಂಬುದೇ ಇದಕ್ಕೆ ಕಾರಣ.


ಜ್ಞಾನಿಯ ಮಾತುಗಳು ಅವನಿಗೆ ಘನತೆಯನ್ನು ತರುತ್ತವೆ; ಮೂಢನ ಮಾತುಗಳು ಅವನಿಗೆ ನಾಶನವನ್ನು ತರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು