Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:9 - ಪರಿಶುದ್ದ ಬೈಬಲ್‌

9 ರಾಜನು ಸಹ ಸೇವಕನಾಗಿದ್ದಾನೆ; ಅವನ ದೇಶವು ಅವನನ್ನು ಗಳಿಸಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಭೂಮಿಯಿಂದ ಎಲ್ಲರಿಗೂ ಲಾಭವಿದೆ ಮತ್ತು ಹೊಲಗದ್ದೆಗಳಿಂದ ರಾಜನಿಗೆ ಲಾಭವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 :ಸಾರ್ವಜನಿಕ ಒಳಿತು,” “ಅಧಿಪತಿಗಳ ಸೇವೆ” ಎಂದೆಲ್ಲ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಭೂವಿುಯಿಂದ ಸರ್ವಕ್ಕೂ ಲಾಭವಿದೆ. ಹೊಲಗದ್ದೆಗಳಿಂದ ರಾಜನಿಗೂ ಸೇವೆಯಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಭೂಮಿಯಿಂದ ಲಾಭವು ಎಲ್ಲರಿಗೂ ಇದೆ. ಹೊಲಗದ್ದೆಗಳಿಂದ ಅರಸನಿಗೂ ಲಾಭವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:9
15 ತಿಳಿವುಗಳ ಹೋಲಿಕೆ  

ಕಷ್ಟಪಟ್ಟು ದುಡಿಯುವವನಿಗೆ ಬೇಕಾದಷ್ಟು ಆಹಾರವಿರುವುದು. ನನಸಾಗದ ಕನಸುಗಳನ್ನೇ ಆಲೋಚಿಸಿಕೊಂಡಿರುವವನು ಬಡವನಾಗಿಯೇ ಇರುವನು.


ಬಡವನ ಭೂಮಿಯು ಯಥೇಚ್ಛವಾಗಿ ಫಲಿಸಬಹುದು. ಆದರೆ ಅನ್ಯಾಯವು ಅದನ್ನು ಕೊಚ್ಚಿಕೊಂಡು ಹೋಗುವುದು.


ಪರಲೋಕವು ಯೆಹೋವನದು. ಆತನು ಭೂಲೋಕವನ್ನು ಮನುಷ್ಯರಿಗೆ ಕೊಟ್ಟನು.


ದೇಶದಲ್ಲಿ ಬಡವರಿಂದ ಬಲವಂತ ಸೇವೆಮಾಡಿಸುವುದನ್ನು ಕಂಡು ಅವರಿಗೆ ಅನ್ಯಾಯವಾಗಿದೆಯೆಂದೂ ಹಕ್ಕಿಗೆ ಚ್ಯುತಿಯಾಗಿದೆಯೆಂದೂ ಆಶ್ಚರ್ಯಪಡಬೇಡಿ. ಅವರಿಂದ ಬಲವಂತವಾಗಿ ದುಡಿಸುವ ಅಧಿಪತಿಗೆ ಬಲವಂತದಿಂದ ದುಡಿಸುವ ಮತ್ತೊಬ್ಬ ಅಧಿಪತಿಯಿರುವನು. ಈ ಇಬ್ಬರು ಅಧಿಪತಿಗಳಿಗೂ ಮತ್ತೊಬ್ಬ ಅಧಿಪತಿಯಿರುವನು.


ಹಣದಾಸೆಯುಳ್ಳವನು ತನ್ನಲ್ಲಿ ಎಷ್ಟೇ ಹಣವಿದ್ದರೂ ತೃಪ್ತನಾಗಲಾರನು. ಐಶ್ವರ್ಯದಾಸೆಯುಳ್ಳವನು ಎಷ್ಟೇ ಸಂಪಾದಿಸಿದರೂ ತೃಪ್ತನಾಗುವುದಿಲ್ಲ. ಇದು ಸಹ ವ್ಯರ್ಥ.


ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.


ಮನುಷ್ಯನು ದುಡಿಯುವುದೆಲ್ಲಾ ಊಟಕ್ಕಾಗಿಯೇ. ಆದರೂ ಅವನಿಗೆ ತೃಪ್ತಿಯೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು