Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 6:10 - ಪರಿಶುದ್ದ ಬೈಬಲ್‌

10-11 ಮನುಷ್ಯನು ಕೇವಲ ಮನುಷ್ಯನಾಗಿ ಸೃಷ್ಟಿಸಲ್ಪಟ್ಟಿದ್ದಾನೆ. ಅದರ ಬಗ್ಗೆ ವಾದಮಾಡುವುದರಿಂದ ಉಪಯೋಗವಿಲ್ಲ. ಅಲ್ಲದೆ ಮನುಷ್ಯನು ದೇವರೊಂದಿಗೆ ವಾದಮಾಡಲಾರನು. ಯಾಕೆಂದರೆ ದೇವರು ಮನುಷ್ಯನಿಗಿಂತಲೂ ಬಲಿಷ್ಠನಾಗಿದ್ದಾನೆ. ಆದ್ದರಿಂದ ವಾದವು ಕೇವಲ ನಿರರ್ಥಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮನುಷ್ಯನು ಎಂಥವನಾದರೂ ಪೂರ್ವದಲ್ಲಿ ಅವನಿಗೆ ವಿಧಿಸಲ್ಪಟ್ಟ ಹೆಸರಿನಿಂದ ಅವನು ಮಣ್ಣಿನವನೇ ಎಂದು ಗೊತ್ತಾಗಿದೆ. ತನಗಿಂತ ಬಲಿಷ್ಠನ ಸಂಗಡ ಹೋರಾಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈಗ ಇರುವ ಪ್ರತಿಯೊಂದು ಹಿಂದಿನಿಂದಲೇ ಹೆಸರುವಾಸಿಯಾಗಿದೆ. ಮನುಷ್ಯನು ಯಾರೆಂದು ಗೊತ್ತಿದೆ. ತನಗಿಂತ ಬಲಿಷ್ಠನ ಸಂಗಡ ವಾದಿಸಲು ಅವನಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮನುಷ್ಯನು ಎಂಥವನಾದರೂ ಪೂರ್ವದಲ್ಲಿ ಅವನಿಗೆ ವಿಧಿಸಲ್ಪಟ್ಟ ಹೆಸರಿನಿಂದ ಅವನು ಮಣ್ಣಿನವನೇ ಎಂದು ಗೊತ್ತಾಗಿದೆ. ತನಗಿಂತ ಬಲಿಷ್ಠನ ಸಂಗಡ ಹೋರಾಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಜಗತ್ತಿನಲ್ಲಿ ಇರುವ ಎಲ್ಲದಕ್ಕೂ ಈಗಾಗಲೇ ಹೆಸರನ್ನು ಇಡಲಾಗಿದೆ. ಮನುಷ್ಯನು ಯಾರು ಎಂದೂ ಗೊತ್ತಾಗಿದೆ. ತನಗಿಂತ ಬಲಿಷ್ಟನೊಂದಿಗೆ ಯಾರೂ ಹೋರಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 6:10
18 ತಿಳಿವುಗಳ ಹೋಲಿಕೆ  

ದೇವರು ನನ್ನಂಥ ಮನುಷ್ಯನಲ್ಲ; ನಾನು ಆತನಿಗೆ ಉತ್ತರಿಸಲಾರೆ. ನಾವು ನ್ಯಾಯಾಲಯದಲ್ಲಿ ಒಬ್ಬರನ್ನೊಬ್ಬರು ಸಂಧಿಸಲಾರೆವು.


“ಸರ್ವಶಕ್ತನಾದ ದೇವರ ವಿರುದ್ಧ ವ್ಯಾಜ್ಯಹೂಡಿದವನು ಆತನನ್ನು ಸರಿಪಡಿಸಬಲ್ಲನೇ? ದೇವರ ಮೇಲೆ ಅಪವಾದ ಹೊರಿಸುವವನು ಆತನಿಗೆ ಉತ್ತರ ನೀಡಲಿ” ಎಂದನು.


“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”


ಈಗ ಸಂಭವಿಸುವಂಥವುಗಳೂ ಮುಂದೆ ಸಂಭವಿಸುವಂಥವುಗಳೂ ಹಿಂದಿನ ಕಾಲದಲ್ಲಿ ಸಂಭವಿಸಲ್ಪಟ್ಟಿವೆ. ದೇವರು ಅದೇ ಕಾರ್ಯಗಳನ್ನು ಮತ್ತೆಮತ್ತೆ ಬರಮಾಡುವನು.


ಯೋಬನೇ, ನೀನು ದೇವರೊಂದಿಗೆ ವಾದಿಸುವುದೇಕೆ? ದೇವರು ನಿನಗೆ ಪ್ರತಿಯೊಂದನ್ನೂ ವಿವರಿಸಬೇಕೆಂದು ಭಾವಿಸಿಕೊಂಡಿರುವೆಯೋ?


ನಮ್ಮ ಜೀವಿತವು ಕೇವಲ ಕನ್ನಡಿಯ ಪ್ರತಿಬಿಂಬದಂತಿದೆ. ನಾವು ಗಡಿಬಿಡಿಯಿಂದ ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತೇವೆ. ನಾವು ಸತ್ತ ಮೇಲೆ ಅವು ಯಾರ ಪಾಲಾಗುವುದೋ ನಮಗೆ ತಿಳಿಯದು.


ನಮ್ಮ ಜೀವಮಾನಗಳು ಕೊಂಚವೆಂಬುದು ಆತನಿಗೆ ಗೊತ್ತಿದೆ. ನಮ್ಮ ಜೀವಮಾನಗಳು ಹುಲ್ಲಿನಂತಿವೆ ಎಂಬುದೂ ಆತನಿಗೆ ತಿಳಿದಿದೆ.


ದೇವರಾದ ಯೆಹೋವನು ಪುರುಷನಿಗೆ, “ನೀನು ಎಲ್ಲಿರುವೆ?” ಎಂದು ಕೂಗಿ ಕೇಳಿದನು.


ಪ್ರಭುವಿಗೆ ಅಸೂಯೆಯನ್ನು ಉಂಟುಮಾಡಬೇಕೆಂದಿದ್ದೀರೋ? ಆತನಿಗಿಂತಲೂ ನಾವು ಬಲಿಷ್ಠರಾಗಿದ್ದೇವೋ? ಇಲ್ಲ!


ಯೆಹೋವನೇ ವಿರೋಧವಾಗಿದ್ದರೆ, ಜಯಪ್ರಧವಾಗಬಲ್ಲ ಯೋಜನೆಯನ್ನು ಮಾಡುವಂಥ ಜ್ಞಾನ ಯಾರಿಗೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು