Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:10 - ಪರಿಶುದ್ದ ಬೈಬಲ್‌

10 “ಈ ಕಾಲಕ್ಕಿಂತ ‘ಹಿಂದಿನ ಕಾಲವೇ’ ಚೆನ್ನಾಗಿತ್ತಲ್ಲವೇ?” ಎನ್ನಬೇಡ. ಅದು ಜ್ಞಾನವುಳ್ಳವರ ಪ್ರಶ್ನೆಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹಿಂದಿನ ಕಾಲವು ಈ ಕಾಲಕ್ಕಿಂತ ಮೇಲಾದದ್ದಕ್ಕೆ ಕಾರಣವೇನು ಅನ್ನಬೇಡ. ನೀನು ಈ ವಿಷಯದಲ್ಲಿ ವಿಚಾರಿಸುವುದು ಜ್ಞಾನಕಾರ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹಿಂದಿನ ಕಾಲ ಈ ಕಾಲಕ್ಕಿಂತ ಮೇಲಾದುದಕ್ಕೆ ಕಾರಣ ಕೇಳಬೇಡ; ಇದು ಬುದ್ಧಿವಂತನು ಕೇಳುವ ಪ್ರಶ್ನೆಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹಿಂದಿನ ಕಾಲವು ಈ ಕಾಲಕ್ಕಿಂತ ಮೇಲಾದದ್ದಕ್ಕೆ ಕಾರಣವೇನು ಅನ್ನಬೇಡ; ನೀನು ಈ ವಿಷಯದಲ್ಲಿ ವಿಚಾರಿಸುವದು ಜ್ಞಾನಕಾರ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಹಿಂದಿನ ಕಾಲ ಈಗಿನ ಕಾಲಕ್ಕಿಂತ ಮೇಲಾಗಿರುವುದಕ್ಕೆ ಕಾರಣ ಏನು?” ಎಂದು ನೀನು ಕೇಳಬೇಡ. ಇದು ಬುದ್ಧಿವಂತರು ಕೇಳುವ ಪ್ರಶ್ನೆಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:10
9 ತಿಳಿವುಗಳ ಹೋಲಿಕೆ  

ಆಗ ಗಿದ್ಯೋನನು, “ಸ್ವಾಮೀ, ಯೆಹೋವನು ನಮ್ಮ ಸಂಗಡವಿದ್ದರೆ ನಮಗೆ ಇಷ್ಟೊಂದು ಕಷ್ಟಗಳೇಕೆ ಬರುತ್ತವೆ? ನಮ್ಮ ಪೂರ್ವಿಕರಿಗಾಗಿ ಆತನು ಬಹಳಷ್ಟು ಅದ್ಭುತಕಾರ್ಯಗಳನ್ನು ಮಾಡಿದ್ದನೆಂದು ನಾವು ಕೇಳಿದ್ದೇವೆ. ಆತನು ಅವರನ್ನು ಈಜಿಪ್ಟಿನಿಂದ ಹೊರಗೆ ಕರೆತಂದನೆಂದು ನಮ್ಮ ಪೂರ್ವಿಕರು ನಮಗೆ ಹೇಳಿದರು. ಆದರೆ ಈಗ ಯೆಹೋವನು ನಮ್ಮನ್ನು ಕೈಬಿಟ್ಟಿದ್ದಾನೆ; ಮಿದ್ಯಾನ್ಯರು ನಮ್ಮನ್ನು ಸೋಲಿಸುವಂತೆ ಮಾಡಿದ್ದಾನೆ” ಎಂದು ಹೇಳಿದನು.


ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.


ಮುಂಗೋಪಿಯಾಗಿರಬೇಡ. ಯಾಕೆಂದರೆ ಕೋಪವು ಕೇವಲ ಮೂಢತನ.


ನಿನಗೆ ಆಸ್ತಿಯಿದ್ದರೆ ಜ್ಞಾನವು ಮತ್ತಷ್ಟು ಉಪಯುಕ್ತವಾಗಿದೆ. ನಿಜವಾಗಿಯೂ ಜ್ಞಾನಿಗಳು ಐಶ್ವರ್ಯವನ್ನು ಹೇರಳವಾಗಿ ಪಡೆದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು