Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:15 - ಪರಿಶುದ್ದ ಬೈಬಲ್‌

15 ನನ್ನ ಅಲ್ಪಕಾಲದ ಜೀವನದಲ್ಲಿ ನಾನು ಪ್ರತಿಯೊಂದನ್ನೂ ನೋಡಿದ್ದೇನೆ. ನೀತಿವಂತರು ಯೌವನ ಪ್ರಾಯದಲ್ಲಿ ಸಾಯುವುದನ್ನೂ ನೋಡಿದ್ದೇನೆ. ದುಷ್ಟರು ಬಹುಕಾಲ ಬದುಕುವುದನ್ನೂ ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀತಿವಂತನು ತನ್ನ ನೀತಿಯಲ್ಲಿಯೇ ನಶಿಸುವುದುಂಟು. ದುಷ್ಟನು ತನ್ನ ದುಷ್ಟತನದಲ್ಲಿಯೇ ಬಹಳ ದಿನ ಬದುಕುವುದುಂಟು. ಇದನ್ನೆಲ್ಲಾ ನನ್ನ ವ್ಯರ್ಥವಾದ ಜೀವಮಾನದಲ್ಲಿ ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸಜ್ಜನನು ಸದ್ಧರ್ಮಿಯಾಗಿ ಜೀವಿಸುತ್ತಾ ಗತಿಸಿಹೋಗುತ್ತಾನೆ; ದುರ್ಜನನಾದರೋ ಅಧರ್ಮದಲ್ಲಿ ಬಹುಕಾಲ ಬದುಕುತ್ತಾನೆ. ಇದನ್ನು ಎಲ್ಲಾ ನನ್ನ ನಿರರ್ಥಕ ಜೀವನದಲ್ಲಿ ಎಷ್ಟೋ ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಧರ್ಮಿಯು ತನ್ನ ಧರ್ಮದಲ್ಲಿಯೇ ನಶಿಸುವದುಂಟು; ಅಧರ್ಮಿಯು ತನ್ನ ಅಧರ್ಮದಲ್ಲಿಯೇ ಬಹು ದಿನ ಬದುಕುವದುಂಟು; ಇದನ್ನೆಲ್ಲಾ ನನ್ನ ವ್ಯರ್ಥವಾದ ಜೀವಮಾನದಲ್ಲಿ ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನನ್ನ ವ್ಯರ್ಥದ ದಿನಗಳಲ್ಲಿ ಇವೆರಡು ವಿಷಯಗಳನ್ನು ನೋಡಿದ್ದೇನೆ: ನೀತಿವಂತನು ತನ್ನ ನೀತಿಯಲ್ಲಿ ಗತಿಸಿಹೋಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ, ಇಡೀ ಜೀವಮಾನವನ್ನು ಕಳೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:15
21 ತಿಳಿವುಗಳ ಹೋಲಿಕೆ  

ಮನುಷ್ಯನ ಅಲ್ಪಕಾಲದ ಜೀವನದಲ್ಲಿ ಅವನಿಗೆ ಯಾವುದು ಉತ್ತಮವೆಂದು ಯಾರಿಗೆ ಗೊತ್ತು? ಅವನ ಜೀವನವು ನೆರಳಿನಂತೆ ಕಳೆದುಹೋಗುವುದು. ಮುಂದೆ ಏನಾಗುವುದೆಂದು ಯಾರೂ ಅವನಿಗೆ ಹೇಳಲಾರರು.


ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ.


ಆ ಪಟ್ಟಣದಲ್ಲಿ ಹುಟ್ಟಿದ ಶಿಶುಗಳೆಲ್ಲಾ ಜೀವಿಸುವವು. ಯಾವ ಮಗುವೇ ಆಗಲಿ ಹುಟ್ಟಿದ ಕೂಡಲೇ ಸಾಯುವದಿಲ್ಲ. ಆ ಪಟ್ಟಣದ ನಿವಾಸಿಗಳಲ್ಲಿ ಯಾರೂ ಕಡಿಮೆ ಆಯುಷ್ಯದಿಂದ ಸಾಯುವದಿಲ್ಲ. ಪ್ರತಿಯೊಂದು ಮಗುವೂ ದೀರ್ಘಾಯುಷ್ಯವನ್ನು ಹೊಂದುವದು. ಪ್ರತಿಯೊಬ್ಬ ಯುವಕನೂ ಬಹಳ ಕಾಲ ಜೀವಿಸುವನು. ಆಗ ನೂರು ವರ್ಷ ಪ್ರಾಯದವನು ಸಹ ಯೌವನಸ್ಥನೆಂದು ಕರೆಯಲ್ಪಡುವನು. ಒಬ್ಬನು ನೂರು ವರ್ಷವಾದರೂ ಬಾಳದಿದ್ದರೆ, ಜನರು ಅವನನ್ನು ಶಾಪ ಹೊಂದಿದವನೆಂದು ಹೇಳುವರು.


ನೀನು ಪ್ರಿಯ ಪತ್ನಿಯೊಡನೆ ಸುಖಪಡು. ನಿನ್ನ ಅಲ್ಪಕಾಲ ಜೀವಿತದ ದಿನಗಳಲ್ಲೆಲ್ಲಾ ಸುಖಪಡು. ಈ ಜೀವಿತವನ್ನು ನಿನಗೆ ಅನುಗ್ರಹಿಸಿರುವಾತನು ದೇವರೇ, ಇದೇ ನಿನ್ನ ಪಾಲು. ನಿನ್ನ ಈ ಜೀವಿತದ ಕೆಲಸಕಾರ್ಯಗಳನ್ನು ಸಂತೋಷದಿಂದ ಮಾಡು.


ನಾನು ಈ ಲೋಕವನ್ನು ದೃಷ್ಟಿಸಿ ನೋಡಿದಾಗ, ನ್ಯಾಯಾಲಯಗಳಲ್ಲಿ ನೀತಿನ್ಯಾಯಗಳ ಬದಲಾಗಿ ದುಷ್ಟತನ ತುಂಬಿರುವುದನ್ನು ಕಂಡುಕೊಂಡೆನು.


ಅವನ ಜೀವಮಾನವೆಲ್ಲಾ ಅವನಿಗೆ ವ್ಯಸನವಿರುವುದು; ಕೆಲಸದಲ್ಲೆಲ್ಲಾ ಕಷ್ಟವಿರುವುದು; ರಾತ್ರಿಯಲ್ಲಿಯೂ ಮನಸ್ಸಿಗೆ ವಿಶ್ರಾಂತಿಯಿರದು. ಇದೂ ವ್ಯರ್ಥವೇ.


ನಮ್ಮ ಜೀವಿತವು ಕೇವಲ ಕನ್ನಡಿಯ ಪ್ರತಿಬಿಂಬದಂತಿದೆ. ನಾವು ಗಡಿಬಿಡಿಯಿಂದ ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತೇವೆ. ನಾವು ಸತ್ತ ಮೇಲೆ ಅವು ಯಾರ ಪಾಲಾಗುವುದೋ ನಮಗೆ ತಿಳಿಯದು.


ನಾಬೋತನು ದೇವರ ವಿರುದ್ಧವಾಗಿಯೂ ರಾಜನ ವಿರುದ್ಧವಾಗಿಯೂ ಮಾತನಾಡಿದ್ದನ್ನು ತಾವು ಕೇಳಿರುವುದಾಗಿ ಇಬ್ಬರು ಅಲ್ಲಿನ ಜನರಿಗೆ ಹೇಳಿದರು. ಜನರು ನಾಬೋತನನ್ನು ನಗರದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದರು.


ಯಾಕೋಬನು ಫರೋಹನಿಗೆ, “ನಾನು ನನ್ನ ಅಲ್ಪಕಾಲದ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿದೆನು. ಈಗ ನನಗೆ ನೂರಮೂವತ್ತು ವರ್ಷ. ನನ್ನ ತಂದೆಯೂ ಅವನ ಪೂರ್ವಿಕರೂ ನನಗಿಂತ ಹೆಚ್ಚು ವರ್ಷ ಜೀವಿಸಿದರು” ಎಂದು ಹೇಳಿದನು.


ಜನರು ನಿಮ್ಮನ್ನು ತಮ್ಮ ಸಭಾಮಂದಿರಗಳಿಂದ ಬಹಿಷ್ಕರಿಸುವರು. ಹೌದು, ನಿಮ್ಮನ್ನು ಕೊಂದರೆ ದೇವರ ಸೇವೆ ಮಾಡಿದಂತಾಗುವುದು ಎಂದು ಜನರು ಯೋಚಿಸುವ ಕಾಲ ಬರಲಿದೆ.


ಕೆಡುಕರು ತಮ್ಮ ಇಷ್ಟವಾದ ವಸ್ತುಗಳ ಬಗ್ಗೆ ಕೊಚ್ಚಿಕೊಳ್ಳುವರು. ದುರಾಶೆಯುಳ್ಳ ಅವರು ದೇವರನ್ನು ಶಪಿಸುತ್ತಾ ಆತನ ಮೇಲೆ ತಮಗಿರುವ ದ್ವೇಷವನ್ನು ತೋರ್ಪಡಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು