Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:7 - ಪರಿಶುದ್ದ ಬೈಬಲ್‌

7 ಹಣವು ಜ್ಞಾನಿಯನ್ನೂ ಮೂರ್ಖನನ್ನಾಗಿ ಮಾಡುವುದು. ಲಂಚವು ಅವನ ವಿವೇಕವನ್ನು ಕೆಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದಬ್ಬಾಳಿಕೆಯು ಜ್ಞಾನಿಯನ್ನು ಮೂರ್ಖನನ್ನಾಗಿಸುತ್ತದೆ, ಲಂಚವು ಹೃದಯವನ್ನು ಕೆಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದಬ್ಬಾಳಿಕೆ ಬುದ್ಧಿವಂತನನ್ನೂ ಹುಚ್ಚನನ್ನಾಗಿಸುತ್ತದೆ; ಲಂಚಕೋರತನ ಅಂತರಂಗವನ್ನೂ ಕೆಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕಸುಕೊಳ್ಳುವದು ಜ್ಞಾನಿಗೆ ಬುದ್ಧಿಗೇಡು; ಲಂಚವು ವಿವೇಕನಾಶಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದಬ್ಬಾಳಿಕೆ ಜ್ಞಾನಿಯನ್ನು ಮೂರ್ಖನನ್ನಾಗಿ ಮಾಡುತ್ತದೆ. ಲಂಚವು ಹೃದಯವನ್ನು ಕೆಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:7
14 ತಿಳಿವುಗಳ ಹೋಲಿಕೆ  

ನೀವು ಯಾವಾಗಲೂ ಪಕ್ಷಪಾತವಿಲ್ಲದವರಾಗಿರಬೇಕು. ಜನರಿಂದ ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಮಾನ ಕೊಡಬಾರದು. ಹಣವು ಜ್ಞಾನಿಗಳನ್ನು ಕುರುಡುಮಾಡಿ ಅವರ ಬುದ್ಧಿಯನ್ನು ಮಂದ ಮಾಡುವುದು.


“ಲಂಚವನ್ನು ತೆಗೆದುಕೊಳ್ಳಕೂಡದು; ಲಂಚವು ಕಣ್ಣುಳ್ಳವರನ್ನು ಕುರುಡರನ್ನಾಗಿ ಮಾಡುತ್ತದೆ; ನಿರಪರಾಧಿಗೆ ಅನ್ಯಾಯ ಮಾಡುತ್ತದೆ.


ದುಷ್ಟನು ನ್ಯಾಯ ದೊರೆಯದಂತೆ ಮಾಡಲು ಗುಟ್ಟಾಗಿ ಲಂಚ ತೆಗೆದುಕೊಳ್ಳುವನು.


ನಿಮ್ಮನ್ನಾಳುವವರು ದಂಗೆಕೋರರಾಗಿದ್ದಾರೆ; ಕಳ್ಳರ ಮಿತ್ರರಾಗಿದ್ದಾರೆ; ಲಂಚಕೋರರಾಗಿದ್ದಾರೆ; ಹಣಕ್ಕಾಗಿ ಕೆಟ್ಟದ್ದನ್ನು ಮಾಡುತ್ತಾರೆ; ಹಣಕ್ಕಾಗಿ ಮೋಸ ಮಾಡುತ್ತಾರೆ. ಅನಾಥರಿಗೆ ಸಹಾಯ ಮಾಡದವರಾಗಿದ್ದಾರೆ; ವಿಧವೆಯರ ಅಗತ್ಯತೆಗಳಿಗೆ ಲಕ್ಷ್ಯ ಕೊಡದವರಾಗಿದ್ದಾರೆ.”


ನಾನು ದೃಷ್ಟಿಸಿ ನೋಡಿದಾಗ, ಅನೇಕ ಜನರು ಹಿಂಸೆಗೆ ಒಳಗಾಗಿರುವುದನ್ನು ಕಂಡೆನು. ಅವರ ಕಣ್ಣೀರನ್ನೂ ನೋಡಿದೆನು. ದುಃಖದಲ್ಲಿದ್ದ ಅವರನ್ನು ಸಂತೈಸಲು ಒಬ್ಬರೂ ಇರಲಿಲ್ಲ. ಹಿಂಸಕರು ಎಲ್ಲಾ ಅಧಿಕಾರವನ್ನು ಹೊಂದಿದ್ದರು; ಅವರಿಂದ ಹಿಂಸೆಗೆ ಒಳಗಾದವರನ್ನು ಸಂತೈಸಲು ಯಾರೂ ಇರಲಿಲ್ಲ.


ಲಂಚವು ಅದೃಷ್ಟ ಎಂದು ಭಾವಿಸಿಕೊಳ್ಳುವವರಿಗೆ, ಅವರು ಹೋದಲ್ಲೆಲ್ಲಾ ಅದೇ ಕಾರ್ಯಸಾಧಕದಂತೆ ಕಾಣುತ್ತದೆ.


ಆದರೆ ಸಮುವೇಲನ ಮಕ್ಕಳು ಅವನಂತೆ ನಡೆದುಕೊಳ್ಳಲಿಲ್ಲ. ಅವರು ಲಂಚವನ್ನು ಪಡೆದು ನ್ಯಾಯಾಲಯದಲ್ಲಿ ಅನ್ಯಾಯದ ತೀರ್ಪುಗಳು ಮಾಡುತ್ತಿದ್ದರು ಮತ್ತು ಜನರನ್ನು ವಂಚಿಸುತ್ತಿದ್ದರು.


“ಆ ಜನಾಂಗದವರೊಂದಿಗೆ ಜೀವಿಸುವಾಗ ನಿಮಗೆ ಸಮಾಧಾನವಿರುವುದಿಲ್ಲ; ನಿಮಗೆ ವಿಶ್ರಾಂತಿ ಇರುವುದಿಲ್ಲ. ನಿಮ್ಮ ಯೆಹೋವನು ನಿಮಗೆ ಚಿಂತೆಬೇಸರಗಳನ್ನು ತಂದು ತುಂಬಿಸುವನು. ನಿಮ್ಮ ಕಣ್ಣುಗಳು ಆಯಾಸದಿಂದ ತುಂಬಿರುವವು; ನೀವು ಕಳವಳದಿಂದಿರುವಿರಿ.


ಪ್ರಾಮಾಣಿಕರಾಗಿರುವ ನೀತಿವಂತರು ಹಣಕ್ಕಾಗಿ ಇತರರಿಗೆ ಹಾನಿಮಾಡದವರಾಗಿದ್ದಾರೆ. ಅವರು ಆ ಬೆಂಕಿಯಲ್ಲಿ ವಾಸಿಸುವರು. ಅವರು ಲಂಚ ತೆಗೆದುಕೊಳ್ಳಲು ನಿರಾಕರಿಸುವರು. ಇತರರನ್ನು ಕೊಲೆಮಾಡುವ ಯೋಜನೆಯನ್ನು ಕೇಳಲು ಅವರು ಇಷ್ಟಪಡುವುದಿಲ್ಲ. ಅವರು ಕೆಟ್ಟಕಾರ್ಯಗಳ ಯೋಜನೆಗಳನ್ನು ನೋಡುವುದಿಲ್ಲ.


ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.


ದೇಶದಲ್ಲಿ ಬಡವರಿಂದ ಬಲವಂತ ಸೇವೆಮಾಡಿಸುವುದನ್ನು ಕಂಡು ಅವರಿಗೆ ಅನ್ಯಾಯವಾಗಿದೆಯೆಂದೂ ಹಕ್ಕಿಗೆ ಚ್ಯುತಿಯಾಗಿದೆಯೆಂದೂ ಆಶ್ಚರ್ಯಪಡಬೇಡಿ. ಅವರಿಂದ ಬಲವಂತವಾಗಿ ದುಡಿಸುವ ಅಧಿಪತಿಗೆ ಬಲವಂತದಿಂದ ದುಡಿಸುವ ಮತ್ತೊಬ್ಬ ಅಧಿಪತಿಯಿರುವನು. ಈ ಇಬ್ಬರು ಅಧಿಪತಿಗಳಿಗೂ ಮತ್ತೊಬ್ಬ ಅಧಿಪತಿಯಿರುವನು.


ನಾನು ಇವುಗಳನ್ನೆಲ್ಲಾ ನೋಡಿ ಈ ಲೋಕದ ಕಾರ್ಯಗಳನ್ನು ಪರಿಶೀಲಿಸಿದೆನು. ಮನುಷ್ಯರು ಇನ್ನೊಬ್ಬರ ಮೇಲೆ ಅಧಿಪತಿಗಳಾಗಿರಲು ಪ್ರಯಾಸಪಡುತ್ತಾರೆ. ಇದು ಅವರಿಗೆ ಹಾನಿಕರ.


ಆಕೀಷನು ತನ್ನ ಅಧಿಕಾರಿಗಳಿಗೆ, “ಅವನೊಬ್ಬ ಹುಚ್ಚ! ಅವನನ್ನು ನನ್ನ ಬಳಿಗೆ ಏಕೆ ಕರೆತಂದಿರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು