Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:9 - ಪರಿಶುದ್ದ ಬೈಬಲ್‌

9 ಮುಂಗೋಪಿಯಾಗಿರಬೇಡ. ಯಾಕೆಂದರೆ ಕೋಪವು ಕೇವಲ ಮೂಢತನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ತವಕಬೇಡ ಕೋಪಮಾಡಲಿಕ್ಕೆ; ಕೋಪಕ್ಕೆ ನೆಲೆ ಮೂಢನ ಎದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ; ಕೋಪಕ್ಕೆ ಮೂಢರ ಎದೆಯೇ ನೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀನು ಕೋಪಿಸಿಕೊಳ್ಳುವುದಕ್ಕೆ ಆತುರಪಡದಿರು, ಏಕೆಂದರೆ ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:9
24 ತಿಳಿವುಗಳ ಹೋಲಿಕೆ  

ನನ್ನ ಸಹೋದರ ಸಹೋದರಿಯರೇ, ಯಾವಾಗಲೂ ಮಾತನಾಡುವುದಕ್ಕಿಂತ ಕೇಳುವುದರಲ್ಲಿ ಆಸಕ್ತರಾಗಿರಿ. ಸುಲಭವಾಗಿ ಕೋಪಗೊಳ್ಳದಿರಿ.


ಮುಂಗೋಪಿಯು ಮೂಢಕಾರ್ಯಗಳನ್ನು ಮಾಡುವನು. ಕುತಂತ್ರಿಗಳನ್ನು ಜನರು ದ್ವೇಷಿಸುವರು.


ಶೂರನಾಗಿರುವುದಕ್ಕಿಂತ ತಾಳ್ಮೆಯಿಂದಿರುವುದೇ ಶ್ರೇಷ್ಠ; ಪಟ್ಟಣವನ್ನು ವಶಪಡಿಸಿಕೊಳ್ಳುವುದಕ್ಕಿಂತ ನಿಮ್ಮ ಕೋಪವನ್ನು ಸ್ವಾಧೀನದಲ್ಲಿಟ್ಟುಕೊಳ್ಳವುದೇ ಉತ್ತಮ.


ಆದ್ದರಿಂದ ಹೆರೋದ್ಯಳು ಯೋಹಾನನನ್ನು ದ್ವೇಷಿಸಲಾರಂಭಿಸಿ ಅವನನ್ನು ಕೊಲ್ಲಿಸಬೇಕೆಂದಿದ್ದಳು.


ಆದರೆ ದೇವರು ಯೋನನಿಗೆ ಹೇಳಿದ್ದೇನೆಂದರೆ, “ಆ ಸೋರೆ ಗಿಡವು ಸತ್ತುಹೋದುದಕ್ಕೆ ನೀನು ಕೋಪಗೊಳ್ಳುವುದು ಸರಿಯೋ?” ಅದಕ್ಕುತ್ತರವಾಗಿ ಯೋನನು, “ಹೌದು! ನಾನು ಕೋಪಗೊಂಡದ್ದು ನಿಜ. ನಾನು ಸಾಯುವಷ್ಟು ಕೋಪಗೊಂಡಿದ್ದೇನೆ” ಅಂದನು.


ಇಸ್ರೇಲರು, “ದಾವೀದನಲ್ಲಿ ನಾವು ಹತ್ತುಪಾಲನ್ನು ಹೊಂದಿದ್ದೇವೆ. ಆದ್ದರಿಂದ ದಾವೀದನ ಮೇಲೆ ನಿಮಗಿಂತಲೂ ನಮಗೆ ಹೆಚ್ಚಿನ ಹಕ್ಕಿದೆ. ಆದರೆ ನೀವು ನಮ್ಮನ್ನು ಕಡೆಗಣಿಸಿದ್ದೇಕೆ? ರಾಜನನ್ನು ಹಿಂದಕ್ಕೆ ಕರೆತರಲು ಮಾತಾನಾಡಿದವರಲ್ಲಿ ನಾವೇ ಮೊದಲಿಗರು” ಎಂದು ಉತ್ತರಿಸಿದರು. ಆದರೆ ಯೆಹೂದದ ಜನರು ಇಸ್ರೇಲರಿಗೆ ಕಟುವಾಗಿ ಉತ್ತರಿಸಿದರು. ಯೆಹೂದ ಜನರ ಮಾತುಗಳು ಇಸ್ರೇಲರ ಮಾತುಗಳಿಗಿಂತ ಹೆಚ್ಚು ಕಟುವಾಗಿದ್ದವು.


ಅಬ್ಷಾಲೋಮನು ಅಮ್ನೋನನನ್ನು ದ್ವೇಷಿಸಿದನು. ಅಬ್ಷಾಲೋಮನು ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಏನನ್ನೂ ಅಮ್ನೋನನಿಗೆ ಹೇಳಲಿಲ್ಲ. ಅಮ್ನೋನನು ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅಬ್ಷಾಲೋಮನು ಅಮ್ನೋನನನ್ನು ದ್ವೇಷಿಸಿದನು.


ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.


ಆ ಹುಡುಗಿಯು ತನ್ನ ತಾಯಿಯ ಬಳಿಗೆ ಹೋಗಿ, “ನಾನು ಏನ್ನನ್ನು ಕೇಳಿಕೊಳ್ಳಲಿ?” ಎಂದು ಕೇಳಿದಳು. ಅವಳ ತಾಯಿ, “ಸ್ನಾನಿಕ ಯೋಹಾನನ ತಲೆಯನ್ನು ಕೇಳಿಕೊ” ಎಂದು ಹೇಳಿಕೊಟ್ಟಳು.


ಆದರೆ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, “ರಾಜನ ಗಂಡುಮಕ್ಕಳೆಲ್ಲರನ್ನೂ ಕೊಂದುಹಾಕಿದರೆಂದು ಯೋಚಿಸುವುದು ಸರಿಯಲ್ಲ. ಅಮ್ನೋನನು ಮಾತ್ರ ಸತ್ತಿರಬೇಕು. ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಅಮ್ನೋನನು ಕೆಡಿಸಿದ್ದಕ್ಕಾಗಿ ಅಬ್ಷಾಲೋಮನು ಆ ದಿನದಿಂದ ಅವನನ್ನು ಕೊಲ್ಲಲು ಸಂಚು ಮಾಡುತ್ತಿದ್ದನು.


ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಂತೆಯೇ ಕಾಯಿನನು ಮತ್ತು ಹೇಬೆಲನು ಹೊಲಕ್ಕೆ ಹೋದರು. ಅಲ್ಲಿ ಕಾಯಿನನು ತನ್ನ ತಮ್ಮನ ಮೇಲೆರಗಿ ಅವನನ್ನು ಕೊಂದುಹಾಕಿದನು.


ತಾಳ್ಮೆಯುಳ್ಳವನು ತುಂಬಾ ಜಾಣ. ಮುಂಗೋಪಿಯು ತಾನು ಮೂಢ ಎಂಬುದನ್ನು ತೋರಿಸಿಕೊಳ್ಳುತ್ತಾನೆ.


“ಈ ಕಾಲಕ್ಕಿಂತ ‘ಹಿಂದಿನ ಕಾಲವೇ’ ಚೆನ್ನಾಗಿತ್ತಲ್ಲವೇ?” ಎನ್ನಬೇಡ. ಅದು ಜ್ಞಾನವುಳ್ಳವರ ಪ್ರಶ್ನೆಯಲ್ಲ.


ನೀನು ಕಂಡ ಯಾವುದನ್ನಾದರೂ ನ್ಯಾಯಾಧೀಶನಿಗೆ ತಿಳಿಸಲು ಆತುರಪಡಬೇಡ. ನೀನು ತಪ್ಪಿತಸ್ಥನೆಂದು ಬೇರೊಬ್ಬನು ಹೇಳಿದರೆ, ನಿನಗೆ ಅವಮಾನವಾಗುವುದು.


ಆದ್ದರಿಂದ ನಾನು ಹೇಳುವುದೇನೆಂದರೆ ನನ್ನ ದೇವರೇ ನೀನು ನನ್ನನ್ನು ಕೊಂದುಬಿಡು. ನಾನು ಬದುಕುವದಕ್ಕಿಂತ ಸಾಯುವುದೇ ಮೇಲು.”


ಸೂರ್ಯನು ಆಕಾಶದಲ್ಲಿ ಏರಿ ಬಂದಾಗ ದೇವರು ಪೂರ್ವದ ಬಿಸಿಗಾಳಿ ಬೀಸುವಂತೆ ಮಾಡಿದನು. ಬಿಸಿಲಿನ ತಾಪವು ಯೋನನ ತಲೆಯ ಮೇಲೆ ಹೆಚ್ಚಾಯಿತು. ಯೋನನಿಗೆ ಶಾಖ ತಡೆಯಲಾಗಲಿಲ್ಲ. ಬಹಳ ಬಲಹೀನನಾದನು. ನನ್ನನ್ನು ಸಾಯಿಸು ಎಂದು ಯೋನನು ದೇವರನ್ನು ಬೇಡುತ್ತಾ, “ದೇವರೇ, ನಾನು ಬದುಕುವದಕ್ಕಿಂತ ಸಾಯುವುದೇ ಲೇಸು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು