Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 8:1 - ಪರಿಶುದ್ದ ಬೈಬಲ್‌

1 ಜ್ಞಾನಿಯು ವಿಷಯಗಳನ್ನು ಅರ್ಥಮಾಡಿಕೊಳ್ಳುವಂತೆ ಮತ್ತು ವಿವರಿಸುವಂತೆ ಬೇರೆ ಯಾರೂ ಅರ್ಥಮಾಡಿಕೊಳ್ಳಲಾರರು ಮತ್ತು ವಿವರಿಸಲಾರರು. ಜ್ಞಾನಿಯ ಮುಖವು ಜ್ಞಾನದಿಂದ ಪ್ರಕಾಶಮಾನವಾಗಿರುವುದು; ಅದು ವ್ಯಸನದ ಮುಖವನ್ನು ಸಂತೋಷದ ಮುಖವನ್ನಾಗಿ ಮಾರ್ಪಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಜ್ಞಾನಿಯ ಹಾಗೆ ಇರುವವನು ಯಾರು? ವಿಷಯವನ್ನು ವಿವರಿಸಬಲ್ಲವರು ಯಾರು? ಜ್ಞಾನದಿಂದ ಒಬ್ಬನ ಮುಖವು ಪ್ರಕಾಶಗೊಳ್ಳುವುದು, ಒರಟು ಮುಖವು ಬದಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜ್ಞಾನಿಗೆ ಸಮಾನರು ಯಾರು? ಅವನಲ್ಲದೆ ಬಗೆಹರಿಸಬಲ್ಲವರು ಯಾರು? ಜ್ಞಾನವು ಮನುಷ್ಯನ ಮುಖವನ್ನು ವಿಕಾಸಗೊಳಿಸುತ್ತದೆ; ಗಂಟುಮೋರೆಯನ್ನು ಮಾರ್ಪಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಜ್ಞಾನಿಯ ಹಾಗಿರುವವನು ಯಾರು? ವಿಷಯವನ್ನು ವಿವರಿಸಬಲ್ಲವರು ಯಾರು? ಜ್ಞಾನದಿಂದ ಒಬ್ಬನ ಮುಖವು ಪ್ರಕಾಶಗೊಳ್ಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಜ್ಞಾನಿಯ ಹಾಗೆ ಇರುವವರು ಯಾರು? ಈ ಸಂಗತಿಗಳ ಅರ್ಥವನ್ನು ವಿವರಿಸಬಲ್ಲವರು ಯಾರು? ಒಬ್ಬ ಮನುಷ್ಯನ ಜ್ಞಾನವು ಅವನ ಮುಖವನ್ನು ಬೆಳಗಿಸುತ್ತದೆ ಜ್ಞಾನವು ಕಠಿಣ ಮುಖಭಾವವನ್ನು ಸಹ ಬದಲಾಯಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 8:1
27 ತಿಳಿವುಗಳ ಹೋಲಿಕೆ  

ಸಭೆಯಲ್ಲಿ ಕುಳಿತಿದ್ದವರೆಲ್ಲರೂ ಸ್ತೆಫನನ ಮುಖವನ್ನು ದಿಟ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಕಂಗೊಳಿಸಿತು.


ಅವರು ಮಹಾಕ್ರೂರಿಗಳು. ಅವರು ನಿಮ್ಮಲ್ಲಿರುವ ಮುದುಕರಿಗೆ ಅಥವಾ ಎಳೆಗೂಸುಗಳಿಗೆ ಕರುಣೆ ತೋರಿಸರು.


ನೀವು ಅರ್ಥಮಾಡಿಕೊಳ್ಳಬೇಕಾದ ಮುಖ್ಯವಾದ ಸಂಗತಿಯೇನೆಂದರೆ, ಪವಿತ್ರ ಗ್ರಂಥದಲ್ಲಿರುವ ಯಾವ ಪ್ರವಾದನವಾಕ್ಯವೂ ಒಬ್ಬ ವ್ಯಕ್ತಿಯ ವೈಯಕ್ತಿಕ ವಿವರಣೆಯಿಂದ ಬಂದಿಲ್ಲ.


ಆದರೆ ಪ್ರಭುವು ನನ್ನ ಬಳಿಯೇ ಇದ್ದನು. ನಾನು ಸುವಾರ್ತೆಯನ್ನು ಯೆಹೂದ್ಯರಲ್ಲದವರಿಗೆ ಸಂಪೂರ್ಣವಾಗಿ ಬೋಧಿಸಲು ಪ್ರಭುವು ನನಗೆ ಶಕ್ತಿಯನ್ನು ದಯಪಾಲಿಸಿದನು. ಆ ಸುವಾರ್ತೆಯನ್ನು ಯೆಹೂದ್ಯರಲ್ಲದ ಜನರೆಲ್ಲರೂ ಕೇಳುವುದು ಪ್ರಭುವಿನ ಇಷ್ಟವಾಗಿತ್ತು. ಆತನು ನನ್ನನ್ನು ಸಿಂಹದ (ಶತ್ರು) ಬಾಯಿಂದ ರಕ್ಷಿಸಿದನು.


ಪ್ರಭುವೇ, ಈಗ ಅವರು ಹೇಳುತ್ತಿರುವುದನ್ನು ಕೇಳು. ಅವರು ನಮ್ಮನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ! ಪ್ರಭುವೇ ನಾವು ನಿನ್ನ ಸೇವಕರು. ನಿನ್ನ ವಾಕ್ಯವನ್ನು ಭಯವಿಲ್ಲದೆ ಹೇಳಲು ನೀನೇ ಸಹಾಯ ಮಾಡು.


ಪೇತ್ರ ಮತ್ತು ಯೋಹಾನರಿಗೆ ವಿಶೇಷವಾದ ಯಾವ ತರಬೇತಿಯಾಗಲಿ ವಿದ್ಯೆಯಾಗಲಿ ಇಲ್ಲವೆಂಬುದು ಯೆಹೂದ್ಯನಾಯಕರಿಗೆ ಗೊತ್ತಿತ್ತು. ಅಲ್ಲದೆ ಅವರು ಹೆದರದೆ ಮಾತಾಡುವುದನ್ನು ಸಹ ನಾಯಕರು ಗಮನಿಸಿದರು. ಆದ್ದರಿಂದ ಆ ನಾಯಕರಿಗೆ ಬಹಳ ಆಶ್ಚರ್ಯವಾಯಿತು. ಪೇತ್ರ ಮತ್ತು ಯೋಹಾನರು ಯೋಸುವಿನೊಂದಿಗೆ ಇದ್ದರೆಂಬುದನ್ನು ಅವರು ಆ ಬಳಿಕ ಗ್ರಹಿಸಿಕೊಂಡರು.


ವಿವೇಕಿಯು ಜ್ಞಾನದ ಮೇಲೆ ಮನಸ್ಸಿಡುತ್ತಾನೆ. ಆದರೆ ಮೂಢನು ಬಹುದೂರದ ಸ್ಥಳಗಳ ಬಗ್ಗೆ ಕನಸು ಕಾಣುತ್ತಲೇ ಇರುವನು.


ಒಂದುವೇಳೆ ದೇವರ ದೂತರಲ್ಲೊಬ್ಬನು ಮಧ್ಯಸ್ಥಗಾರನಾಗಿ ಬಂದು ಅವನ ನೀತಿಕಾರ್ಯಗಳನ್ನು ದೃಢಪಡಿಸಿ ಅವನ ಮೇಲೆ ಪ್ರೀತಿಯುಳ್ಳವನಾಗಿ,


ಅಲ್ಲದೆ ನನಗಾಗಿಯೂ ಪ್ರಾರ್ಥಿಸಿರಿ. ನಾನು ಮಾತಾಡುವಾಗ ಸುವಾರ್ತೆಯ ರಹಸ್ಯಸತ್ಯವನ್ನು ನಿರ್ಭಯದಿಂದ ತಿಳಿಸಲು ಬೇಕಾದ ಮಾತನ್ನು ದೇವರು ನನಗೆ ಅನುಗ್ರಹಿಸುವಂತೆ ಪ್ರಾರ್ಥಿಸಿರಿ.


ಈ ಶಿಷ್ಯರ ಕಣ್ಣೆದುರಿನಲ್ಲಿಯೇ ಆತನು ರೂಪಾಂತರ ಹೊಂದಿದನು. ಆತನ ಮುಖವು ಸೂರ್ಯನಂತೆ ಪ್ರಕಾಶಮಾನವಾಯಿತು. ಆತನ ಉಡುಪುಗಳು ಬೆಳಕಿನಂತೆ ಬೆಳ್ಳಗಾದವು.


“ನಿನ್ನ ದೇವರು ಸರ್ವಶ್ರೇಷ್ಠನು ಮತ್ತು ಪ್ರಬಲನು ಎನ್ನುವದು ನನಗೆ ಖಚಿತವಾಯಿತು. ಆತನು ಎಲ್ಲ ಅರಸರ ಒಡೆಯನಾಗಿದ್ದಾನೆ. ಆತನು ಜನರಿಗೆ ನಿಗೂಢವಾಗಿದ್ದ ರಹಸ್ಯವನ್ನು ತಿಳಿಸುತ್ತಾನೆ. ನೀನು ನನಗೆ ಈ ರಹಸ್ಯವನ್ನು ತಿಳಿಸಲು ಸಮರ್ಥನಾದುದರಿಂದ ಇದೆಲ್ಲ ನಿಜವೆಂದು ನಾನು ನಂಬುತ್ತೇನೆ” ಎಂದು ಹೇಳಿದನು.


ಜ್ಞಾನವು ಮನುಷ್ಯನನ್ನು ಬಲಿಷ್ಠನನ್ನಾಗಿ ಮಾಡುವುದು. ವಿವೇಕವು ಮನುಷ್ಯನಿಗೆ ಬಲವನ್ನು ಕೊಡುತ್ತದೆ.


ಆಗ ಅವರು ಗಾದೆಗಳನ್ನು, ಸಾಮತಿಗಳನ್ನು, ಜ್ಞಾನದ ನುಡಿಗಳನ್ನು ಮತ್ತು ಒಗಟುಗಳನ್ನು ಅರ್ಥಮಾಡಿಕೊಳ್ಳುವರು.


ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು.


ಆದ್ದರಿಂದ ನೀವು ಸರ್ಕಾರಕ್ಕೆ ವಿಧೇಯರಾಗಬೇಕು. ನೀವು ದಂಡನೆಗೆ ಗುರಿಯಾಗಬಹುದೆಂಬ ಕಾರಣದಿಂದ ಮಾತ್ರವಲ್ಲದೆ, ನಿಮ್ಮ ಮನಸ್ಸಾಕ್ಷಿಯ ದೆಸೆಯಿಂದಲೂ ನೀವು ಅವರಿಗೆ ವಿಧೇಯರಾಗಬೇಕು.


ದುಷ್ಟರು ನಾಚಿಕೆಯಿಲ್ಲದೆ ವರ್ತಿಸುವರು; ಆದರೆ ಒಳ್ಳೆಯವನು ತನ್ನ ಮಾರ್ಗಗಳ ಬಗ್ಗೆ ಎಚ್ಚರಿಕೆಯಿಂದ ಯೋಚಿಸುವನು.


ಮೋಶೆಯ ಮುಖವು ಶುಭ್ರವಾಗಿ ಹೊಳೆಯುತ್ತಿದ್ದುದನ್ನು ಜನರು ನೋಡಿದರು. ಆದ್ದರಿಂದ ಮೋಶೆಯು ಮುಂದಿನ ಸಾರಿ ಯೆಹೋವನೊಡನೆ ಮಾತಾಡಲು ಹೋಗುವವರೆಗೆ ತನ್ನ ಮುಖಕ್ಕೆ ಮುಸುಕು ಹಾಕಿಕೊಂಡಿರುವನು.


ಜನರು ಜ್ಞಾನಿಗಳನ್ನು ಹೊಗಳುವರು; ಮೂಢನನ್ನು ಕಡೆಗಣಿಸುವರು.


ಆಳದಲ್ಲಿ ಅಡಗಿರುವ ರಹಸ್ಯಗಳನ್ನು ಬಲ್ಲವನು ಆತನೇ. ಬೆಳಕು ಆತನಲ್ಲಿಯೇ ಇದೆ. ಆದ್ದರಿಂದ ಕಗ್ಗತ್ತಲೆಯಲ್ಲಿ ಅಡಗಿರುವುದು ಆತನಿಗೆ ಗೋಚರವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು