Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 8:13 - ಪರಿಶುದ್ದ ಬೈಬಲ್‌

13 ದುಷ್ಟರಿಗೆ ದೇವರಲ್ಲಿ ಭಯಭಕ್ತಿಯಿಲ್ಲದಿರುವುದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ; ಅವರ ಜೀವಿತವು ಸಾಯಂಕಾಲದ ನೆರಳಿನಂತೆ ಇಲ್ಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ದುಷ್ಟನಿಗೆ ಒಳ್ಳೆಯದಾಗುವುದಿಲ್ಲ. ನೆರಳಿನಂತಿರುವ ಅವನ ದಿನಗಳು ಹೆಚ್ಚುವುದಿಲ್ಲ. ಏಕೆಂದರೆ ಅವನು ದೇವರಿಗೆ ಭಯಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದೇವರಿಗೆ ಹೆದರದ ದುರ್ಜನನಿಗೆ ಒಳ್ಳೆಯದಾಗದೆಂಬುದು ನಿಶ್ಚಯ. ನೆರಳಿನಂತಿರುವ ಅವನ ಬಾಳಿನ ದಿನಗಳು ಹೆಚ್ಚುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ದುಷ್ಟನಿಗೆ ಮೇಲಾಗದು, ನೆರಳಿನಂತಿರುವ ಅವನ ದಿನಗಳು ಹೆಚ್ಚುವದಿಲ್ಲ; ಅವನು ದೇವರಿಗೆ ಹೆದರುವವನಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದುಷ್ಟರು ದೇವರಿಗೆ ಭಯಪಡುವುದಿಲ್ಲ. ಆದ್ದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ. ನೆರಳಿನ ಹಾಗಿರುವ ದುಷ್ಟರ ದಿನಗಳು ಹೆಚ್ಚುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 8:13
26 ತಿಳಿವುಗಳ ಹೋಲಿಕೆ  

ಮನುಷ್ಯನ ಅಲ್ಪಕಾಲದ ಜೀವನದಲ್ಲಿ ಅವನಿಗೆ ಯಾವುದು ಉತ್ತಮವೆಂದು ಯಾರಿಗೆ ಗೊತ್ತು? ಅವನ ಜೀವನವು ನೆರಳಿನಂತೆ ಕಳೆದುಹೋಗುವುದು. ಮುಂದೆ ಏನಾಗುವುದೆಂದು ಯಾರೂ ಅವನಿಗೆ ಹೇಳಲಾರರು.


ಆದರೆ ದುಷ್ಟರ ಗತಿಯನ್ನು ಏನು ಹೇಳಲಿ. ದುಷ್ಟರಿಗೆ ಕೆಡುಕು ಸಂಭವಿಸುವದು. ಅವರಿಗೆ ಬಹಳ ಸಂಕಟಗಳು ಬಂದೊದಗುವವು. ಅವರು ಮಾಡಿರುವ ಎಲ್ಲಾ ದುಷ್ಟಕ್ರಿಯೆಗಳಿಗೆ ಶಿಕ್ಷೆ ಕೊಡಲ್ಪಡುವದು.


ಮನುಷ್ಯನ ಜೀವಿತವು ಹೂವಿನಂತೆ ಬೇಗನೆ ಬೆಳೆದು ಒಣಗಿಹೋಗುವುದು. ಮನುಷ್ಯನ ಜೀವಿತವು ನೆರಳಿನಂತೆ ಕ್ಷಣಿಕವಾದದ್ದು.


ನೀವು ನನ್ನ ಬಳಿಗೆ ಹಿಂತಿರುಗಿ ಬರುವಿರಿ. ಆಗ ನೀವು ಒಳ್ಳೆಯವರಿಗೂ ಕೆಟ್ಟವರಿಗೂ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವಿರಿ. ಆಗ ನೀವು ದೇವರನ್ನು ಹಿಂಬಾಲಿಸುವವರಿಗೂ ಹಿಂಬಾಲಿಸದೆ ಇರುವವರಿಗೂ ಇರುವ ವ್ಯತ್ಯಾಸವನ್ನು ನೋಡುವಿರಿ.


ನನ್ನ ದೇವರು ಹೇಳುವುದೇನೆಂದರೆ: “ದುಷ್ಟ ಜನರಿಗೆ ಸಮಾಧಾನವಿಲ್ಲ.”


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


ನಾಳೆ ಏನಾಗುವುದೋ ನಿಮಗೆ ತಿಳಿಯದು! ನಿಮ್ಮ ಜೀವನವು ಹಬೆಯಂತಿದೆ. ನೀವು ಅದನ್ನು ಸ್ವಲ್ಪಕಾಲ ನೋಡುವಿರಿ. ನಂತರ ಅದು ಅದೃಶ್ಯವಾಗುವುದು.


ಆಗ ಅವರು ತಮ್ಮ ಸಮಾಧಿಗಳಿಂದ ಎದ್ದುಬರುವರು. ಜೀವನದಲ್ಲಿ ಒಳ್ಳೆಯದನ್ನು ಮಾಡಿದ ಜನರು ಪುನರುತ್ಥಾನಗೊಂಡು ನಿತ್ಯಜೀವವನ್ನು ಹೊಂದಿಕೊಳ್ಳುವರು. ಆದರೆ ಕೆಟ್ಟದ್ದನ್ನು ಮಾಡಿದವರಿಗೆ ತೀರ್ಪಿಗಾಗಿ ಪುನರುತ್ಥಾನವಾಗುವುದು.


ನೀವು ತಪ್ಪಿತಸ್ಥರಾಗಿದ್ದೀರಿ. ನೀವು ಬಿರುಕು ಬಿಟ್ಟಿರುವ ಎತ್ತರದ ಗೋಡೆಯಂತಿದ್ದೀರಿ. ಆ ಗೋಡೆಯು ಇದ್ದಕ್ಕಿದ್ದಂತೆ ನೆಲಕ್ಕುರುಳಿ ಚೂರುಚೂರಾಗುವದು. ಒಳ್ಳೆಯ ಸಮಯವು ಬರುತ್ತಿದೆ.


ಮನುಷ್ಯರು ಕೇವಲ ಉಸಿರೇ. ಅವರ ಜೀವಮಾನವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.


ದೇವರೇ, ನೀನು ದುಷ್ಟರನ್ನು ಪಾತಾಳಕ್ಕೆ ದಬ್ಬಿಬಿಡುವೆ. ಕೊಲೆಪಾತಕರೂ ವಂಚಕರೂ ತಮ್ಮ ಅರ್ಧಾಯುಷ್ಯವಾದರೂ ಬದುಕರು. ನಾನಾದರೊ ನಿನ್ನನ್ನೇ ನಂಬಿಕೊಂಡಿರುವೆನು.


ನೀನು ನನಗೆ ಕೇವಲ ಅಲ್ಪಾಯುಷ್ಯವನ್ನು ಕೊಟ್ಟಿರುವೆ. ನನ್ನ ಅಲ್ಪ ಜೀವಿತವು ನಿನ್ನ ದೃಷ್ಟಿಯಲ್ಲಿ ಗಣನೆಗೂ ಬಾರದು. ಮನುಷ್ಯನ ಜೀವಿತವು ಕೇವಲ ಮೋಡದಂತೆ ಕ್ಷಣಿಕವಾಗಿದೆ. ಯಾವನೂ ಸದಾಕಾಲ ಬದುಕುವುದಿಲ್ಲ!


ಯೆಹೋವನು ನೀತಿವಂತರಿಗಾಗಿ ಹುಡುಕುವನು. ಆದರೆ ಆತನು ದುಷ್ಟರನ್ನೂ ಹಿಂಸಕರನ್ನೂ ತಿರಸ್ಕರಿಸುವನು.


ಅಪಾಯ ಬಂದಾಗ ದುಷ್ಟನು ಪಾರಾಗುವನು; ದೇವರ ಕೋಪವು ತೋರಿಬರುವ ದಿನದಲ್ಲಿ ಅವನು ತಪ್ಪಿಸಿಕೊಳ್ಳುವನು.


“ಹೌದು, ದುಷ್ಟನ ದೀಪವು ಆರಿಹೋಗುವುದು; ಅವನ ಬೆಂಕಿಯು ಉರಿಯುವುದಿಲ್ಲ.


ದೇವರ ಕಾರ್ಯಗಳೆಲ್ಲಾ ಶಾಶ್ವತವಾದದ್ದು. ಆತನ ಕಾರ್ಯಗಳಿಗೆ ಮನುಷ್ಯರು ಏನನ್ನೂ ಸೇರಿಸಲಾರರು; ಅವುಗಳಿಂದ ಏನನ್ನೂ ತೆಗೆಯಲಾರರು. ಮನುಷ್ಯರು ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕೆಂಬುದೇ ಇದಕ್ಕೆ ಕಾರಣ.


ಉಪಯೋಗವಿಲ್ಲದ ನಿಮ್ಮ ಕನಸುಗಳಾಗಲಿ ಜಂಬದ ಮಾತುಗಳಾಗಲಿ ನಿಮ್ಮನ್ನು ಕೇಡಿಗೆ ನಡೆಸದಂತೆ ನೋಡಿಕೊಳ್ಳಿರಿ; ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ.


ನನ್ನ ಅಲ್ಪಕಾಲದ ಜೀವನದಲ್ಲಿ ನಾನು ಪ್ರತಿಯೊಂದನ್ನೂ ನೋಡಿದ್ದೇನೆ. ನೀತಿವಂತರು ಯೌವನ ಪ್ರಾಯದಲ್ಲಿ ಸಾಯುವುದನ್ನೂ ನೋಡಿದ್ದೇನೆ. ದುಷ್ಟರು ಬಹುಕಾಲ ಬದುಕುವುದನ್ನೂ ನೋಡಿದ್ದೇನೆ.


ಇವೆರಡರಲ್ಲಿಯೂ ಮಿತವಾಗಿರಬೇಕು. ದೇವಭಕ್ತರಲ್ಲಿ ಇವೆರಡೂ ಅತಿಯಾಗಿರುವುದಿಲ್ಲ.


ಯಾರಿಗೂ ತಮ್ಮ ಆತ್ಮವನ್ನು ತಡೆದು ನಿಲ್ಲಿಸಿಕೊಳ್ಳುವ ಶಕ್ತಿ ಇಲ್ಲ. ಯಾರಿಗೂ ತಮ್ಮ ಮರಣವನ್ನು ತಡೆದು ನಿಲ್ಲಿಸುವ ಶಕ್ತಿಯಿಲ್ಲ. ಯುದ್ಧಕಾಲದಲ್ಲಿ ಸೈನಿಕರಿಗೆ ರಜೆ ದೊರೆಯುವುದಿಲ್ಲ. ಅದೇ ರೀತಿಯಲ್ಲಿ, ಪಾಪವು ಪಾಪಿಯನ್ನು ಬಿಟ್ಟುಹೋಗುವುದಿಲ್ಲ.


ಆ ಪಟ್ಟಣದಲ್ಲಿ ಹುಟ್ಟಿದ ಶಿಶುಗಳೆಲ್ಲಾ ಜೀವಿಸುವವು. ಯಾವ ಮಗುವೇ ಆಗಲಿ ಹುಟ್ಟಿದ ಕೂಡಲೇ ಸಾಯುವದಿಲ್ಲ. ಆ ಪಟ್ಟಣದ ನಿವಾಸಿಗಳಲ್ಲಿ ಯಾರೂ ಕಡಿಮೆ ಆಯುಷ್ಯದಿಂದ ಸಾಯುವದಿಲ್ಲ. ಪ್ರತಿಯೊಂದು ಮಗುವೂ ದೀರ್ಘಾಯುಷ್ಯವನ್ನು ಹೊಂದುವದು. ಪ್ರತಿಯೊಬ್ಬ ಯುವಕನೂ ಬಹಳ ಕಾಲ ಜೀವಿಸುವನು. ಆಗ ನೂರು ವರ್ಷ ಪ್ರಾಯದವನು ಸಹ ಯೌವನಸ್ಥನೆಂದು ಕರೆಯಲ್ಪಡುವನು. ಒಬ್ಬನು ನೂರು ವರ್ಷವಾದರೂ ಬಾಳದಿದ್ದರೆ, ಜನರು ಅವನನ್ನು ಶಾಪ ಹೊಂದಿದವನೆಂದು ಹೇಳುವರು.


ದುಷ್ಟರನ್ನು ನೋಡಿ ಉರಿಗೊಳ್ಳಬೇಡ. ಕೆಡುಕರನ್ನು ಕಂಡು ಹೊಟ್ಟೆಕಿಚ್ಚುಪಡಬೇಡ.


ಇಂದಿನವರೆಗೂ ಯೆಹೂದದ ಜನ ತಮ್ಮನ್ನು ವಿನೀತರನ್ನಾಗಿ ಮಾಡಿಕೊಂಡಿಲ್ಲ. ಅವರು ನನ್ನ ಬಗ್ಗೆ ಎಳ್ಳಷ್ಟು ಗೌರವವನ್ನು ತೋರಿಸಿಲ್ಲ. ಆ ಜನರು ನನ್ನ ಉಪದೇಶಗಳಂತೆ ನಡೆದುಕೊಂಡಿಲ್ಲ. ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಧರ್ಮೋಪದೇಶಗಳನ್ನು ಅವರು ಪಾಲಿಸಲಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು