ಪ್ರಸಂಗಿ 9:1 - ಪರಿಶುದ್ದ ಬೈಬಲ್1 ನಾನು ಇವೆಲ್ಲವುಗಳ ಬಗ್ಗೆ ಬಹಳ ಎಚ್ಚರಿಕೆಯಿಂದ ಆಲೋಚಿಸಿದೆ. ಒಳ್ಳೆಯವರಿಗೂ ಜ್ಞಾನಿಗಳಿಗೂ ಅವರ ಕಾರ್ಯಗಳಿಗೂ ಸಂಭವಿಸುವುದೆಲ್ಲಾ ದೇವರ ಹತೋಟಿಯಲ್ಲಿದೆ. ತಾವು ಪ್ರೀತಿಗೆ ಗುರಿಯಾಗುವರೋ ದ್ವೇಷಕ್ಕೆ ಗುರಿಯಾಗುವರೋ ಅವರಿಗೆ ಗೊತ್ತಿಲ್ಲ. ಮುಂದೆ ಸಂಭವಿಸುವುದೂ ಅವರಿಗೆ ಗೊತ್ತಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇವೆಲ್ಲವುಗಳನ್ನು ನನ್ನ ಮನಸ್ಸಿನಲ್ಲಿ ವಿಚಾರಿಸಿಕೊಂಡು ಒಂದು ತೀರ್ಮಾನಕ್ಕೆ ಬಂದೆನು. ಅದೇನೆಂದರೆ ನೀತಿವಂತನ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಯಾವ ಮನುಷ್ಯನೂ ತನ್ನ ಮುಂದಿರುವ ಪ್ರೀತಿಯನ್ನು ಅಥವಾ ದ್ವೇಷವನ್ನು ತಿಳಿಯಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಾನು ಇವೆಲ್ಲವನ್ನು ಪರ್ಯಾಲೋಚಿಸಿ ಇದನ್ನು ಮನಗಂಡೆ: ಸತ್ಪುರುಷರ ಹಾಗೂ ಸುಜ್ಞಾನಿಗಳ ಕಾರ್ಯಗಳೆಲ್ಲವೂ ದೇವರ ಕೈಯಲ್ಲಿವೆ. ತಾವು ಪ್ರೀತಿಗೆ ಪಾತ್ರರೋ ದ್ವೇಷಕ್ಕೆ ಅರ್ಹರೋ ಮಾನವರಿಗೆ ತಿಳಿಯದು. ಮುಂದೆ ಏನು ಕಾದಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಏಕೆಂದರೆ ಧರ್ಮಿಗಳೂ ಜ್ಞಾನಿಗಳೂ ಅವರ ಕೃತ್ಯಗಳೂ ದೇವರ ಕೈಯಲ್ಲುಂಟು; ತಾವು ಪ್ರೀತಿಗೆ ಗುರಿಯೋ ದ್ವೇಷಕ್ಕೆ ಗುರಿಯೋ ಮನುಷ್ಯರಿಗೆ ಗೊತ್ತಿಲ್ಲ. ಅವರ ಮುಂದೆ ಸಮಸ್ತವೂ ಕಾದಿದೆ ಎಂಬೀ ವಿಷಯಗಳನ್ನೆಲ್ಲಾ ವಿಚಾರಿಸಬೇಕೆಂದು ಮನಸ್ಸಿಗೆ ತೆಗೆದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಾನು ಇವೆಲ್ಲವುಗಳ ಮೇಲೆ ಅಭ್ಯಾಸ ಮಾಡಿ ಈ ತೀರ್ಮಾನಕ್ಕೆ ಬಂದೆನು. ಅದೇನೆಂದರೆ, ನೀತಿವಂತರ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಆದರೆ ಅವರಿಗೆ ಪ್ರೀತಿ ಕಾದಿದೆಯೋ ಅಥವಾ ದ್ವೇಷ ಕಾದಿದೆಯೋ ಎಂದು ಯಾರಿಗೂ ಗೊತ್ತಿಲ್ಲ. ಅಧ್ಯಾಯವನ್ನು ನೋಡಿ |
ಈಗ ಯೋಹಾನಾನ ಮತ್ತು ಎಲ್ಲಾ ಸೈನ್ಯಾಧಿಕಾರಿಗಳು, ಎಲ್ಲಾ ಗಂಡಸರು, ಹೆಂಗಸರು ಮತ್ತು ಮಕ್ಕಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋದರು. ಆ ಜನಗಳಲ್ಲಿ ರಾಜನ ಹೆಣ್ಣುಮಕ್ಕಳಿದ್ದರು. (ನೆಬೂಜರದಾನನು ಗೆದಲ್ಯನನ್ನು ಆ ಜನರ ಮೇಲ್ವಿಚಾರಕನನ್ನಾಗಿ ನೇಮಿಸಿದ್ದನು. ನೆಬೂಜರದಾನನು ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು). ಯೋಹಾನಾನನು ಪ್ರವಾದಿಯಾದ ಯೆರೆಮೀಯನನ್ನು ಮತ್ತು ನೇರೀಯನ ಮಗನಾದ ಬಾರೂಕನನ್ನು ತೆಗೆದುಕೊಂಡು ಹೋದನು.