Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:13 - ಪರಿಶುದ್ದ ಬೈಬಲ್‌

13 ಇದಲ್ಲದೆ ಲೋಕದಲ್ಲಿ ಜ್ಞಾನದ ಕಾರ್ಯವನ್ನು ಮಾಡುವ ಒಬ್ಬನನ್ನು ನಾನು ಕಂಡೆನು. ಅದು ತುಂಬ ಮುಖ್ಯವಾದದ್ದೆಂದು ನನಗೆ ತೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಲೋಕದಲ್ಲಿ ಜ್ಞಾನವನ್ನು ಈ ವಿಧವಾಗಿಯೂ ಕಂಡುಕೊಂಡೆನು. ಅದು ದೊಡ್ಡದೆಂದು ತೋಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಲೋಕದಲ್ಲಿ ನಾನು ಜ್ಞಾನವನ್ನು ಈ ವಿಧವಾಗಿ ಮನಗಂಡೆ; ಅದು ನನ್ನ ದೃಷ್ಟಿಗೆ ದೊಡ್ಡದಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಲೋಕದಲ್ಲಿ ಜ್ಞಾನವನ್ನು ಈ ವಿಧವಾಗಿಯೂ ಕಂಡುಕೊಂಡೆನು; ಅದು ದೊಡ್ಡದೆಂದು ತೋಚಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸೂರ್ಯನ ಕೆಳಗೆ ನಾನು ಜ್ಞಾನವನ್ನು ಈ ವಿಧವಾಗಿ ನೋಡಿದ್ದೇನೆ. ಇದು ನನ್ನ ದೃಷ್ಟಿಗೆ ದೊಡ್ಡದಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:13
9 ತಿಳಿವುಗಳ ಹೋಲಿಕೆ  

ಈ ಲೋಕದಲ್ಲಿ ಜನರ ಕಾರ್ಯಗಳನ್ನು ಎಚ್ಚರಿಕೆಯಿಂದ ಅಧ್ಯಯನ ಮಾಡಿದೆ. ಅವರು ಹಗಲುರಾತ್ರಿ ಕೆಲಸ ಮಾಡುವರು; ಕೆಲವೊಮ್ಮೆ ನಿದ್ರೆಯನ್ನೂ ಮಾಡುವುದಿಲ್ಲ.


ನನ್ನ ಅಲ್ಪಕಾಲದ ಜೀವನದಲ್ಲಿ ನಾನು ಪ್ರತಿಯೊಂದನ್ನೂ ನೋಡಿದ್ದೇನೆ. ನೀತಿವಂತರು ಯೌವನ ಪ್ರಾಯದಲ್ಲಿ ಸಾಯುವುದನ್ನೂ ನೋಡಿದ್ದೇನೆ. ದುಷ್ಟರು ಬಹುಕಾಲ ಬದುಕುವುದನ್ನೂ ನೋಡಿದ್ದೇನೆ.


ಈ ಲೋಕದಲ್ಲಿ ಮತ್ತೊಂದು ಅನ್ಯಾಯವನ್ನು ಕಂಡಿದ್ದೇನೆ. ಅದನ್ನು ಗ್ರಹಿಸಿಕೊಳ್ಳುವುದಕ್ಕೂ ಕಷ್ಟ.


ಇದಲ್ಲದೆ ಲೋಕದಲ್ಲಿ ಇನ್ನೂ ಕೆಲವು ಅನ್ಯಾಯಗಳನ್ನು ಗಮನಿಸಿದ್ದೇನೆ. ಅತಿವೇಗದ ಓಟಗಾರನಿಗೆ ಓಟದಲ್ಲಿ ಯಾವಾಗಲೂ ಗೆಲುವಾಗದು; ಬಲಿಷ್ಠವಾದ ಸೈನ್ಯಕ್ಕೆ ಯುದ್ಧದಲ್ಲಿ ಯಾವಾಗಲೂ ಜಯವಾಗದು; ಜ್ಞಾನಿಗೆ ಯಾವಾಗಲೂ ಆಹಾರ ದೊರಕದು; ಜಾಣನಿಗೆ ಯಾವಾಗಲೂ ಐಶ್ವರ್ಯ ದೊರೆಯದು; ಪ್ರವೀಣರಿಗೆ ಯಾವಾಗಲೂ ಹೊಗಳಿಕೆಬಾರದು; ಸಮಯ ಬಂದಾಗ, ಪ್ರತಿಯೊಬ್ಬರಿಗೂ ಕೇಡುಗಳಾಗುತ್ತವೆ.


ನಂತರ ಅವಳು ನಗರದ ಎಲ್ಲ ಜನರೊಂದಿಗೆ ಬಹಳ ಜಾಣತನದಿಂದ ಮಾತನಾಡಿದಳು. ಆಗ ಜನರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿಹಾಕಿ ಅದನ್ನು ನಗರದ ಗೋಡೆಯಿಂದಾಚೆಗೆ ಯೋವಾಬನ ಕಡೆಗೆ ಎಸೆದರು. ಆ ಕೂಡಲೇ ಯೋವಾಬನು ತುತ್ತೂರಿಯನ್ನು ಊದಿಸಿದನು. ಸೈನ್ಯವು ನಗರವನ್ನು ಬಿಟ್ಟುಹೋಯಿತು. ಪ್ರತಿಯೊಬ್ಬರೂ ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು. ಯೋವಾಬನು ಜೆರುಸಲೇಮಿನಲ್ಲಿದ್ದ ರಾಜನ ಬಳಿಗೆ ಹಿಂದಿರುಗಿ ಹೋದನು.


ಒಳ್ಳೆಯದನ್ನೇ ಮಾಡುವ ಮತ್ತು ಪಾಪವನ್ನೇ ಮಾಡದ ನೀತಿವಂತನು ಭೂಮಿಯ ಮೇಲೆ ಇಲ್ಲವೇ ಇಲ್ಲ. ಜ್ಞಾನವು ಒಬ್ಬನಿಗೆ ಶಕ್ತಿಯನ್ನು ಕೊಡುತ್ತದೆ. ಒಬ್ಬ ಜ್ಞಾನಿಯು ನಗರದಲ್ಲಿರುವ ಹತ್ತುಮಂದಿ ಮೂಢ ನಾಯಕರುಗಳಿಗಿಂತಲೂ ಬಲಶಾಲಿ.


ಮನುಷ್ಯನಿಗೆ ಮುಂದೆ ಏನಾಗುವುದೋ ತಿಳಿಯದು. ಬಲೆಯಲ್ಲಿ ಸಿಕ್ಕಿಕೊಂಡಿರುವ ಮೀನಿನಂತೆಯೂ ಬೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯಂತೆಯೂ ಮನುಷ್ಯನು ತನಗೆ ಸಂಭವಿಸುವ ಕೇಡುಗಳಿಗೆ ಗುರಿಯಾಗುವನು.


ಕೆಲವು ಜನರಿದ್ದ ಒಂದು ಚಿಕ್ಕ ನಗರವಿತ್ತು. ಒಬ್ಬ ದೊಡ್ಡ ರಾಜನು ಆ ನಗರದ ಮೇಲೆ ದಂಡೆತ್ತಿ ಬಂದು ಮುತ್ತಿಗೆ ಹಾಕಿದನು.


ಅರ್ಯೋಕನು ಅರಸನ ಮೈಗಾವಲಿನವರ ದಳವಾಯಿಯಾಗಿದ್ದನು. ಅವನು ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲಲು ಹೊರಟಿದ್ದನು. ಆದರೆ ದಾನಿಯೇಲನು ಅವನೊಂದಿಗೆ ಮಾತನಾಡಿದನು. ದಾನಿಯೇಲನು ಅವನ ಸಂಗಡ ವಿವೇಕ ಮತ್ತು ನಮ್ರತೆಯಿಂದ ಮಾತನಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು