ಫಿಲಿಪ್ಪಿಯವರಿಗೆ 1:15 - ಪರಿಶುದ್ದ ಬೈಬಲ್15 ಕೆಲವರು ತಮ್ಮಲ್ಲಿರುವ ಅಸೂಯೆಯಿಂದಲೂ ವೈಮನಸ್ಸಿನಿಂದಲೂ ಇನ್ನು ಕೆಲವರು ಸಹಾಯ ಮಾಡಬೇಕೆಂಬ ಉದ್ದೇಶದಿಂದಲೂ ಕ್ರಿಸ್ತನ ವಿಷಯವಾಗಿ ಬೋಧಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಮನಸ್ಸಿನಿಂದ ಮತ್ತು ಬೇರೆ ಕೆಲವರು ಒಳ್ಳೆಯ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಕೆಲವರೇನೋ ಅಸೂಯೆಯಿಂದಲೂ ವೈಮನಸ್ಸಿನಿಂದಲೂ ಕ್ರಿಸ್ತಯೇಸುವನ್ನು ಸಾರುತ್ತಿರುವುದು ನಿಜ; ಆದರೆ ಮಿಕ್ಕವರು ಸದುದ್ದೇಶದಿಂದ ಸಾರುತ್ತಿದ್ದಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಕೆಲವರು ಅಸೂಯೆಯಿಂದಲೂ ಸ್ಪರ್ಧೆಯ ಮನೋಭಾವನೆಯಿಂದಲೂ ಕ್ರಿಸ್ತನನ್ನು ಸಾರುವುದು ನಿಜ. ಆದರೆ ಇತರರು ಒಳ್ಳೆಯ ಮನೋಭಾವದಿಂದ ಕ್ರಿಸ್ತ ಯೇಸುವನ್ನು ಸಾರುತ್ತಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಉಲ್ಲಿ ಲೊಕಾ ಕುಸ್ಡೆಪಾನ್ ಅನಿ ಭೆದ್-ಭಾವ್ ಹಾನುಚೆ ಮನುನ್ ಅನಿ ಉಲ್ಲಿ ಲೊಕಾ ಬರ್ಯಾ ಮನಾನ್ ಕ್ರಿಸ್ತಾಕ್ ಪರ್ಗಟ್ ಕರ್ತಾತ್. ಅಧ್ಯಾಯವನ್ನು ನೋಡಿ |
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.