Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:22 - ಪರಿಶುದ್ದ ಬೈಬಲ್‌

22 ನಾನು ಜೀವದಿಂದಿದ್ದರೆ ಫಲಫಲಿಸುವ ಕೆಲಸ ನನಗಿರುತ್ತದೆ. ಆದರೆ ನಾನು ಸಾಯಬೇಕೇ? ಅಥವಾ ಬದುಕಬೇಕೇ? ಏನನ್ನು ಆರಿಸಿಕೊಳ್ಳಬೇಕೋ ನನಗೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಶರೀರದಲ್ಲಿಯೇ ಬದುಕಬೇಕಾದ್ದಲ್ಲಿ ನನ್ನ ಕೆಲಸಮಾಡಿ ಫಲಹೊಂದಲು ನನಗೆ ಸಾಧ್ಯವಾಗುವುದು. ಹೀಗಿರಲಾಗಿ ನಾನು ಯಾವುದನ್ನಾರಿಸಿಕೊಳ್ಳಬೇಕೆನ್ನುವುದು ನನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದೈಹಿಕವಾಗಿ ಬದುಕುವುದು ಫಲಪ್ರದವಾಗಿದ್ದರೆ, ನಾನು ಬದುಕುವುದು ಉತ್ತಮವೋ ಅಥವಾ ಸಾಯುವುದು ಸೂಕ್ತವೋ ನನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಶರೀರದಲ್ಲಿಯೇ ಬದುಕಬೇಕಾದಲ್ಲಿ ಕೆಲಸಮಾಡಿ ಫಲ ಹೊಂದಲು ನನಗೆ ಅನುಕೂಲವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಶರೀರದಲ್ಲಿಯೇ ಬದುಕುವುದು ನನಗೆ ಫಲದಾಯಕವಾದ ಪ್ರಯಾಸವಾಗಿದ್ದರೆ, ನಾನು ಯಾವುದನ್ನು ಆರಿಸಿಕೊಳ್ಳಬೇಕೋ ನನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಕಾಮಾ ಕರುನ್ ಫಳ್ ಘೆತಲೆ ಮಾಜ್ಯಾ ಆಂಗಾಕ್ ಅನುಕುಲ್ ಹೊತಾ, ಅಶೆ ಹೊವ್ನ್ ಮಿಯಾ ಖಲೆ ಎಚುನ್ ಘೆವ್ಚೆ ಮನುನ್ ಮಾಕಾ ಕಳಿನಾ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:22
14 ತಿಳಿವುಗಳ ಹೋಲಿಕೆ  

ಆದ್ದರಿಂದ ಈ ಲೋಕದಲ್ಲಿ ನೀವು ಜನರ ಅಪೇಕ್ಷೆಗೆ ತಕ್ಕಂತೆ ಕೆಟ್ಟಕಾರ್ಯಗಳನ್ನು ಮಾಡದೆ, ದೇವರು ಅಪೇಕ್ಷಿಸುವಂಥ ಕಾರ್ಯಗಳನ್ನೇ ಮಾಡುತ್ತಾ ಜೀವಿಸಲು ನಿಮ್ಮನ್ನು ಬಲಪಡಿಸಿಕೊಳ್ಳಿರಿ.


ಆದ್ದರಿಂದ ಈಗ ನನ್ನೊಳಗೆ ಜೀವಿಸುತ್ತಿರುವವನು ನಿಜವಾಗಿಯೂ ನಾನಲ್ಲ, ಕ್ರಿಸ್ತನೇ ನನ್ನೊಳಗೆ ಜೀವಿಸುತ್ತಿದ್ದಾನೆ. ನಾನಿನ್ನೂ ದೇಹಾರೂಢನಾಗಿದ್ದೇನೆ. ಆದರೆ ನಾನು ಜೀವಿಸುತ್ತಿರುವುದು ದೇವರ ಮಗನ ಮೇಲೆ ನನಗಿರುವ ನಂಬಿಕೆಯಿಂದಲೇ. ನನ್ನನ್ನು ಪ್ರೀತಿಸಿದಾತನು ಯೇಸುವೇ ಮತ್ತು ನನ್ನನ್ನು ರಕ್ಷಿಸುವುದಕ್ಕಾಗಿ ಆತನು ತನ್ನನ್ನೇ ಕೊಟ್ಟುಬಿಟ್ಟನು.


ಆದರೆ ನಾನಿಲ್ಲಿ ಇಹಲೋಕದ ಶರೀರದಲ್ಲಿರುವುದು ನಿಮಗೆ ಅಗತ್ಯವಾಗಿದೆ.


“ಸಹೋದರರೇ, ನೀವು ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನನಗೆ ಗೊತ್ತಿದೆ. ನಿಮ್ಮ ನಾಯಕರು ಸಹ ಅರ್ಥಮಾಡಿಕೊಳ್ಳಲಿಲ್ಲ.


ನಾವು ಪ್ರಪಂಚದಲ್ಲಿ ಜೀವಿಸುತ್ತಿದ್ದೇವೆ. ಆದರೆ ಪ್ರಪಂಚದವರು ಹೊಡೆದಾಡುವ ರೀತಿಯಲ್ಲಿ ನಾವು ಹೊಡೆದಾಡುವುದಿಲ್ಲ.


ನಾನು ವೃದ್ಧನಾಗಿರುವೆ; ನನ್ನ ಕೂದಲೂ ನರೆತುಹೋಗಿದೆ. ನನ್ನ ದೇವರೇ, ನನ್ನನ್ನು ಕೈಬಿಡಬೇಡ. ನಿನ್ನ ಬಲವನ್ನೂ ಪ್ರತಾಪವನ್ನೂ ಮುಂದಿನ ತಲೆಮಾರುಗಳವರಿಗೆಲ್ಲಾ ಪ್ರಕಟಿಸುವೆನು.


ನಿಮಗೆ ಸಹಾಯ ಮಾಡಲು ನಾನು ಬಹಳವಾಗಿ ಮಾಡುತ್ತಿರುವ ಪ್ರಯತ್ನ ನಿಮಗೆ ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ ಇದಲ್ಲದೆ ಲವೊದಿಕೀಯದಲ್ಲಿರುವವರಿಗೆ ಮತ್ತು ನನ್ನನ್ನು ಎಂದೂ ನೋಡಿಲ್ಲದವರಿಗೆ ಸಹ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದೇನೆ.


ಇಸ್ರೇಲರು ಹುಟ್ಟುವುದಕ್ಕಿಂತ ಮೊದಲೇ ದೇವರು ಅವರನ್ನು ತನ್ನ ಜನರನ್ನಾಗಿ ಆರಿಸಿಕೊಂಡನು. ಆತನು ಅವರನ್ನು ಹೊರಕ್ಕೆ ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ಇಸ್ರೇಲಿನ ಜನರ ವಿರೋಧವಾಗಿ ಎಲೀಯನು ದೇವರಿಗೆ ಮಾಡಿದ ಪ್ರಾರ್ಥನೆಯ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿದೆ.


ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೋ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.


ಆದರೆ ಯೋಸೇಫನು ತಿರಸ್ಕರಿಸಿದನು. ಅವನು, “ನನ್ನ ಧಣಿಯು ಈ ಮನೆಯ ಜವಾಬ್ದಾರಿಕೆಗಳನ್ನೆಲ್ಲಾ ನನಗೆ ವಹಿಸಿ ನಿಶ್ಚಿಂತೆಯಿಂದಿದ್ದಾನೆ.


ಅದಕ್ಕೆ ಅಬೀಮೆಲೆಕನು, “ಅದನ್ನು ಯಾರು ಮಾಡಿದರೋ ನನಗೆ ಗೊತ್ತಿಲ್ಲ. ಇಂದಿನವರೆಗೂ ನೀನು ಇದನ್ನು ನನಗೆ ಹೇಳಲೇ ಇಲ್ಲ” ಎಂದು ಹೇಳಿದನು.


ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬರಲು ಅನೇಕ ಸಲ ಯೋಜನೆ ಮಾಡಿದೆನೆಂಬುದು ನಿಮಗೆ ತಿಳಿದಿರಲಿ. ಆದರೆ ನಿಮ್ಮ ಬಳಿಗೆ ಬರಲು ನನಗೆ ಸಾಧ್ಯವಾಗಲಿಲ್ಲ. ನಾನು ನಿಮ್ಮ ಬಳಿಗೆ ಬಂದು ನೀವು ಆತ್ಮಿಕವಾಗಿ ಬೆಳೆಯಲು ನಿಮಗೆ ಸಹಾಯ ಮಾಡಬೇಕೆಂದಿದ್ದೆನು. ನಾನು ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡಿದಂತೆಯೇ ನಿಮಗೂ ಸಹಾಯ ಮಾಡಬೇಕೆಂದಿರುವೆ.


ಇವೆರಡರಲ್ಲಿ ಯಾವುದನ್ನು ಆರಿಸಿಕೊಳ್ಳಬೇಕೆಂಬುದೇ ಕಷ್ಟ. ನಾನು ಈ ಜೀವಿತವನ್ನು ಬಿಟ್ಟು ಆತನೊಂದಿಗಿರಲು ಅಪೇಕ್ಷಿಸುತ್ತೇನೆ. ಅದೇ ಉತ್ತಮವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು