Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:29 - ಪರಿಶುದ್ದ ಬೈಬಲ್‌

29 ನೀವು ಕ್ರಿಸ್ತನಲ್ಲಿ ನಂಬಿಕೆಯಿಟ್ಟದ್ದು ದೇವರ ಅನುಗ್ರಹದಿಂದಲೇ. ಅಷ್ಟು ಮಾತ್ರವೇ ಅಲ್ಲ, ಕ್ರಿಸ್ತನಿಗೋಸ್ಕರ ಕಷ್ಟಪಡುವುದೂ ಸಹ ನಿಮಗೆ ಅನುಗ್ರಹವಾಗಿ ದೊರೆಯಿತು. ಇವೆರಡೂ ಕ್ರಿಸ್ತನಿಗೆ ಮಹಿಮೆಯನ್ನು ಉಂಟುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಕ್ರಿಸ್ತಯೇಸುವನ್ನು ನೀವು ವಿಶ್ವಾಸಿಸುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವ ಸೌಭಾಗ್ಯವೂ ನಿಮ್ಮದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಹೇಗಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ನಿಮಗೆ ಅನುಗ್ರಹವಾಗಿ ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನೀವು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವುದೂ ನಿಮಗೆ ದಾನವಾಗಿ ಕೊಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತಾಚ್ಯಾ ವರ್‍ತಿ ವಿಶ್ವಾಸ್ ಥವ್ತಲೆ ಎಕುಚ್ ನ್ಹಯ್ ತೆಚ್ಯಾ ಸಾಟ್ನಿ ತರಾಸ್ ಸೊಸುನ್ ಘೆತಲೆಬಿ ತುಮ್ಕಾ ಎಕ್ ಬರೊ ಅವ್ಕಾಸ್ ಕರುನ್ ದಿಲ್ಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:29
14 ತಿಳಿವುಗಳ ಹೋಲಿಕೆ  

ನನ್ನ ಸಹೋದರ ಸಹೋದರಿಯರೇ, ನಿಮಗೆ ಅನೇಕ ತೊಂದರೆಗಳು ಬರುತ್ತವೆ. ಆದರೆ ಅವುಗಳು ಬಂದಾಗ ನೀವು ಬಹಳ ಸಂತೋಷಪಡಬೇಕು.


ಆದರೆ ನೀವು ಕ್ರಿಸ್ತನ ಸಂಕಟಗಳನ್ನು ಹಂಚಿಕೊಳ್ಳುತ್ತಿರುವುದರಿಂದ ಸಂತೋಷಿಸಿರಿ. ಕ್ರಿಸ್ತನು ತನ್ನ ಮಹಿಮೆಯನ್ನು ತೋರ್ಪಡಿಸುವಾಗ ನೀವು ಸಂತೋಷಪಡುವಿರಿ ಮತ್ತು ಆನಂದಿಸುವಿರಿ.


ಅಪೊಸ್ತಲರು ಸಭೆಯಿಂದ ಹೊರಟುಹೋದರು. ಯೇಸುವಿನ ಹೆಸರಿಗಾಗಿ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದುಕೊಂಡೆವೆಂದು ಅವರು ಸಂತೋಷಪಟ್ಟರು.


ಅಲ್ಲದೆ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷವಾಗಿದ್ದೇವೆ. ಏಕೆಂದರೆ, ಈ ಕಷ್ಟಸಂಕಟಗಳು ನಮ್ಮಲ್ಲಿ ಹೆಚ್ಚು ತಾಳ್ಮೆಯನ್ನು ಉಂಟುಮಾಡುತ್ತವೆ.


ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.


ಆದ್ದರಿಂದ ನೀವು ನಂಬಿಕೆಯ ಮೂಲಕ ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಅದು ದೇವರ ವರ.


ನೀವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಕ್ರಿಸ್ತನೊಂದಿಗೆ ಹೂಳಲ್ಪಟ್ಟಿರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸುವುದರ ಮೂಲಕ ತೋರಿದ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಆ ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಮೇಲಕ್ಕೆ ಎದ್ದುಬಂದಿರಿ.


ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.


ಯೇಸು, “ಯೋನನ ಮಗನಾದ ಸೀಮೋನನೇ ನೀನು ಧನ್ಯನು. ಅದನ್ನು ನಿನಗೆ ತಿಳಿಸಿಕೊಟ್ಟವನು ಯಾವ ಮನುಷ್ಯನೂ ಅಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ನಿನಗೆ ತಿಳಿಸಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು