Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:7 - ಪರಿಶುದ್ದ ಬೈಬಲ್‌

7 ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀವು ನನಗೆ ಆತ್ಮೀಯರು. ಆದಕಾರಣ, ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಸೆರೆಯಲ್ಲಿರುವಾಗಲೂ ಶುಭಸಂದೇಶಕ್ಕಾಗಿ ಹೋರಾಡಿ ಆದನ್ನು ಸ್ಥಿರಗೊಳಿಸುವಾಗಲೂ ದೇವರ ಅನುಗ್ರಹದಲ್ಲಿ ನೀವು ನನ್ನೊಂದಿಗೆ ಸಹಭಾಗಿಗಳಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮೆಲ್ಲರ ವಿಷಯದಲ್ಲಿ ಈ ಅಭಿಪ್ರಾಯವುಳ್ಳವನಾಗಿರುವದು ನ್ಯಾಯವಾಗಿದೆ; ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸುವುದು ನನಗೆ ಸೂಕ್ತವಾಗಿದೆ. ಏಕೆಂದರೆ ನಾನು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ. ನಾನು ಬೇಡಿಗಳಿಂದ ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಸಮರ್ಥಿಸಿ ದೃಢಪಡಿಸುವಾಗಲೂ ನೀವೆಲ್ಲರು ನನ್ನೊಂದಿಗಿರುವ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತುಮ್ಚ್ಯಾ ಸಗ್ಳ್ಯಾಂಚ್ಯಾಸಾಟ್ನಿ ಮಾಕಾ ಅಶೆ ದಿಸ್ತಲೆ ಸಮಾಚ್ ಹಾಯ್, ಮಿಯಾ ಬಂಧಿಖಾನ್ಯಾತ್ ರ್‍ಹಾತಾನಾಬಿ, ಬರ್‍ಯಾ ಖಬ್ರೆಸಾಟ್ನಿ ಹೊಲ್ಲ್ಯಾ ವಾದಾತ್ನಿ ತುಮಿ ಸಗ್ಳ್ಯೆ ಮಾಜ್ಯಾ ವಾಂಗ್ಡಾ ದೆವಾಚ್ಯಾ ಕುರ್ಪೆತ್ ವಾಟೊ ಘೆಟ್ಲ್ಯಾಶಿ, ಮನುನ್ ತುಮ್ಕಾ ಮಾಜ್ಯಾ ಮನಾತ್ ಥವ್ನ್ ಘೆಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:7
34 ತಿಳಿವುಗಳ ಹೋಲಿಕೆ  

ನಾನು ಇದನ್ನು ಹೇಳುತ್ತಿರುವುದು ನಿಮ್ಮನ್ನು ನಿಂದಿಸುವುದಕ್ಕಾಗಿಯಲ್ಲ. ನಿಮ್ಮೊಂದಿಗೆ ಬದುಕುವಷ್ಟರಮಟ್ಟಿಗೆ ಮತ್ತು ಸಾಯುವಷ್ಟರಮಟ್ಟಿಗೆ ನಿಮ್ಮನ್ನು ಅಪಾರವಾಗಿ ಪ್ರೀತಿಸುತ್ತೇವೆಂದು ನಾನು ಮೊದಲೇ ನಿಮಗೆ ತಿಳಿಸಿದ್ದೇನೆ.


ನನ್ನ ಸುವಾರ್ತಾಸೇವೆಯಲ್ಲಿ ನೀವು ಪಾಲುಗಾರರಾದ ಕಾರಣ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ನೀವು ನಂಬಿಕೊಂಡಂದಿನಿಂದ ಇಲ್ಲಿಯವರೆಗೂ ನನಗೆ ಸಹಾಯ ಮಾಡಿದಿರಿ.


ಈ ಕಾರಣದಿಂದಲೇ ಸಂಕಟವನ್ನು ಅನುಭವಿಸುತ್ತಿದ್ದೇನೆ. ದುಷ್ಕರ್ಮಿಯಂತೆ ಸಂಕೋಲೆಗಳಿಂದ ಬಂಧಿಸಲ್ಪಟ್ಟಿದ್ದೇನೆ. ಆದರೆ ದೇವರ ಉಪದೇಶಕ್ಕೆ ಬಂಧನವಿಲ್ಲ.


ನಿಮಗೆ ನನ್ನ ವಂದನೆಗಳು. ಪೌಲನೆಂಬ ನಾನು ನನ್ನ ಸ್ವಂತ ಕೈಯಿಂದ ಇದನ್ನು ಬರೆದಿದ್ದೇನೆ. ಸೆರೆಮನೆಯಲ್ಲಿರುವ ನನ್ನನ್ನು ಜ್ಞಾಪಿಸಿಕೊಳ್ಳಿರಿ. ದೇವರ ಕೃಪೆಯು ನಿಮ್ಮೊಂದಿಗಿರಲಿ.


ಆದರೂ ನಾನು ಕೊರತೆಯಲ್ಲಿದ್ದಾಗ ನೀವು ನನಗೆ ಸಹಾಯ ಮಾಡಿದ್ದು ಒಳ್ಳೆಯದಾಯಿತು.


ಸುವಾರ್ತೆಯನ್ನು ತಿಳಿಸುವುದೇ ನನ್ನ ಕೆಲಸ. ಈಗ ಸೆರೆಮನೆಯಲ್ಲಿಯೂ ನಾನು ಆ ಕೆಲಸವನ್ನು ಮಾಡುತ್ತಿದ್ದೇನೆ. ನಾನು ಯಾವ ರೀತಿ ಮಾತಾಡಬೇಕೋ ಅದೇ ರೀತಿ ನಿರ್ಭಯದಿಂದ ಮಾತಾಡಲು ಸಾಧ್ಯವಾಗುವಂತೆ ಪ್ರಾರ್ಥಿಸಿರಿ.


ನಾನು ಕ್ರಿಸ್ತಯೇಸುವಿನ ಸೆರೆಯಾಳು. ಯೆಹೂದ್ಯರಲ್ಲದ ನಿಮಗೋಸ್ಕರ ನಾನು ಸೆರೆಯಾಳಾಗಿದ್ದೇನೆ.


ಜೆರುಸಲೇಮಿನಲ್ಲಿ ತೊಂದರೆಗಳು ಮತ್ತು ಸೆರೆವಾಸವು ನನಗಾಗಿ ಕಾದಿವೆಯೆಂದು ಪವಿತ್ರಾತ್ಮನು ಪ್ರತಿಯೊಂದು ಪಟ್ಟಣದಲ್ಲಿಯೂ ನನಗೆ ಹೇಳುತ್ತಿರುವುದು ಮಾತ್ರ ಸ್ಪಷ್ಟವಾಗಿದೆ.


ನಾವು ಮರಣವನ್ನು (ಪಾಪಗಳನ್ನು) ತೊರೆದು ಜೀವಕ್ಕೆ ಬಂದಿದ್ದೇವೆ ಎಂಬುದು ನಮಗೆ ಗೊತ್ತಿದೆ. ಕ್ರಿಸ್ತನಲ್ಲಿ ನಮ್ಮ ಸಹೋದರ ಸಹೋದರಿಯರನ್ನು ನಾವು ಪ್ರೀತಿಸುತ್ತಿರುವುದರಿಂದಲೇ ಇದನ್ನು ತಿಳಿದುಕೊಂಡಿದ್ದೇನೆ. ಪ್ರೀತಿಸದಿರುವ ವ್ಯಕ್ತಿಯು ಇನ್ನೂ ಮರಣದಲ್ಲಿದ್ದಾನೆ.


ನಾನು ಈ ಲೋಕದಲ್ಲಿ ಇನ್ನೂ ಜೀವದಿಂದಿರುವಾಗಲೇ ಇವುಗಳನ್ನು ನಿಮ್ಮ ನೆನಪಿಗೆ ತರುವುದು ಯೋಗ್ಯವಾದದ್ದೆಂಬುದು ನನ್ನ ಆಲೋಚನೆ.


ಆದರೆ ನೀವು ಕ್ರಿಸ್ತನ ಸಂಕಟಗಳನ್ನು ಹಂಚಿಕೊಳ್ಳುತ್ತಿರುವುದರಿಂದ ಸಂತೋಷಿಸಿರಿ. ಕ್ರಿಸ್ತನು ತನ್ನ ಮಹಿಮೆಯನ್ನು ತೋರ್ಪಡಿಸುವಾಗ ನೀವು ಸಂತೋಷಪಡುವಿರಿ ಮತ್ತು ಆನಂದಿಸುವಿರಿ.


ಆದ್ದರಿಂದ ನನ್ನ ಸಹೋದರ ಸಹೋದರಿಯರೇ, ಪರಿಶುದ್ಧ ಜನರಾಗುವುದಕ್ಕಾಗಿ ದೇವರಿಂದ ಕರೆಯಲ್ಪಟ್ಟವರಾದ ನೀವು ಯೇಸುವನ್ನೇ ಕುರಿತು ಆಲೋಚಿಸಿರಿ. ದೇವರು ಆತನನ್ನು ನಮ್ಮ ಬಳಿಗೆ ಕಳುಹಿಸಿದನು. ಆತನೇ ನಮ್ಮ ನಂಬಿಕೆಯ ಪ್ರಧಾನಯಾಜಕನು.


ನಮ್ಮ ಪ್ರಭುವಾದ ಯೇಸುವನ್ನು ಕುರಿತು ಜನರಿಗೆ ತಿಳಿಸುವುದಕ್ಕಾಗಲಿ ಪ್ರಭುವಿಗಾಗಿ ಸೆರೆಯಲ್ಲಿರುವ ನನ್ನ ವಿಷಯದಲ್ಲಾಗಲಿ ನಾಚಿಕೆಪಟ್ಟುಕೊಳ್ಳಬೇಡ. ಅದಕ್ಕೆ ಬದಲಾಗಿ ಸುವಾರ್ತೆಗೋಸ್ಕರ ನನ್ನೊಡನೆ ಸಂಕಟವನ್ನು ಅನುಭವಿಸು. ಅದಕ್ಕೆ ಬೇಕಾದ ಶಕ್ತಿಯನ್ನು ದೇವರೇ ನಮಗೆ ದಯಪಾಲಿಸುತ್ತಾನೆ.


ನೀವೆಲ್ಲರೂ ಬೆಳಕಿಗೆ ಸೇರಿದವರು ಮತ್ತು ಹಗಲಿಗೆ ಸೇರಿದವರು. ನಾವು ರಾತ್ರಿಗಾಗಲಿ ಅಥವಾ ಕತ್ತಲೆಗಾಗಲಿ ಸೇರಿದವರಲ್ಲ.


ನಮಗಾಗಿಯೂ ನೀವು ಪ್ರಾರ್ಥಿಸಿ. ಜನರಿಗೆ ದೇವರ ಸಂದೇಶವನ್ನು ತಿಳಿಸಲು ಅನುಕೂಲವಾದ ಸಂದರ್ಭವನ್ನು ಆತನು ನಿಮಗೆ ದಯಪಾಲಿಸುವಂತೆ ಪ್ರಾರ್ಥಿಸಿರಿ. ದೇವರು ಕ್ರಿಸ್ತನ ಬಗ್ಗೆ ತಿಳಿಸಿರುವ ರಹಸ್ಯಸತ್ಯವನ್ನು ನಾವು ಬೋಧಿಸಲಾಗುವಂತೆ ಪ್ರಾರ್ಥಿಸಿರಿ. ನಾನು ಈ ಸತ್ಯವನ್ನು ಬೋಧಿಸಿದರಿಂದಲೇ ಈಗ ಸೆರೆಮನೆಯಲ್ಲಿದ್ದೇನೆ.


ನಾನು ಪ್ರಭುವಿಗೆ ಸೇರಿದವನಾದ್ದರಿಂದ ಸೆರೆಯಲ್ಲಿದ್ದೇನೆ. ನೀವು ದೇವರಿಂದ ಕರಯಲ್ಪಟ್ಟಿದ್ದೀರಿ. ಆದ್ದರಿಂದ ನಿಮ್ಮ ಕರೆಯುವಿಕೆಗೆ ತಕ್ಕಂತೆ ಯೋಗ್ಯವಾಗಿ ಜೀವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಒಬ್ಬನು ಕ್ರಿಸ್ತ ಯೇಸುವಿನಲ್ಲಿರುವಾಗ ಸುನ್ನತಿ ಹೊಂದಿದ್ದಾನೋ ಇಲ್ಲವೋ ಎಂಬುದು ಮುಖ್ಯವಲ್ಲ. ಮುಖ್ಯವಾದದ್ದೇನೆಂದರೆ ಪ್ರೀತಿಯಿಂದ ಕಾರ್ಯನಡೆಸುವ ನಂಬಿಕೆ.


ಸ್ವತಃ ನೀವೇ ನಮಗೆ ಯೋಗ್ಯತಾಪತ್ರವಾಗಿದ್ದೀರಿ. ಆ ಪತ್ರಗಳು ನಮ್ಮ ಹೃದಯಗಳಲ್ಲಿ ಬರೆಯಲ್ಪಟ್ಟಿವೆ. ಆ ಪತ್ರವನ್ನು ಎಲ್ಲರೂ ಬಲ್ಲರು, ಎಲ್ಲರೂ ಓದುತ್ತಾರೆ.


ಪ್ರೀತಿಯು ಎಲ್ಲವನ್ನು ತಾಳ್ಮೆಯಿಂದ ಸ್ವೀಕರಿಸಿಕೊಳ್ಳುತ್ತದೆ; ಯಾವಾಗಲೂ ನಂಬುತ್ತದೆ; ಯಾವಾಗಲೂ ನಿರೀಕ್ಷಿಸುತ್ತದೆ; ಯಾವಾಗಲೂ ದೃಢವಾಗಿರುತ್ತದೆ.


ಇವುಗಳನ್ನೆಲ್ಲ ಮಾಡುವುದು ಸುವಾರ್ತೆಗಾಗಿಯೇ. ಸುವಾರ್ತೆಯ ಆಶೀರ್ವಾದಗಳಲ್ಲಿ ಪಾಲುಗಾರನಾಗಬೇಕೆಂದು ಇವುಗಳನ್ನೆಲ್ಲ ಮಾಡುತ್ತೇನೆ.


ಸೇನಾಧಿಪತಿಯು ಹೋಗಿ ಪೌಲನನ್ನು ಬಂಧಿಸಿ ಎರಡು ಸರಪಣಿಗಳಿಂದ ಅವನನ್ನು ಕಟ್ಟಲು ಸೈನಿಕರಿಗೆ ಹೇಳಿದನು. ಬಳಿಕ ಸೇನಾಧಿಪತಿಯು, “ಈ ಮನುಷ್ಯನು ಯಾರು? ಇವನು ಏನು ತಪ್ಪು ಮಾಡಿದನು?” ಎಂದು ವಿಚಾರಿಸಿದನು.


ನಿಮ್ಮ ಸಭಾಹಿರಿಯರಿಗೆ ನಾನು ಈಗ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾನೂ ಒಬ್ಬ ಹಿರಿಯನಾಗಿದ್ದೇನೆ. ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ನೋಡಿದ್ದೇನೆ. ನಮಗೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ನಾನೂ ಪಾಲುಗಾರನಾಗಿದ್ದೇನೆ.


ಸಹೋದರ ಸಹೋದರಿಯರೇ, ನನಗೆ ಸಂಭವಿಸಿದ ಕಷ್ಟಗಳು ಸುವಾರ್ತೆಯನ್ನು ಹಬ್ಬಿಸಲು ಸಹಾಯಕವಾದವೆಂದು ನಿಮಗೆ ತಿಳಿದಿರಬೇಕೆಂಬುದಾಗಿ ಅಪೇಕ್ಷಿಸುತ್ತೇನೆ.


ನಾನು ಏಕೆ ಸೆರೆಮನೆಯಲ್ಲಿದ್ದೇನೆಂಬುದು ಸ್ಪಷ್ಟವಾಗಿಯೇ ಇದೆ. ನಾನು ಕ್ರಿಸ್ತ ವಿಶ್ವಾಸಿಯಾಗಿರುವುದರಿಂದ ಸೆರೆಮನೆಯಲ್ಲಿದ್ದೇನೆ. ಇಲ್ಲಿಯ ಕಾವಲುಗಾರರಿಗೂ ಅರಮನೆಯ ಇತರ ಜನರೆಲ್ಲರಿಗೂ ಇದು ಗೊತ್ತಿದೆ.


ನಾನಿನ್ನೂ ಸೆರೆಮನೆಯಲ್ಲಿದ್ದೇನೆ. ಆದರೆ ನನ್ನ ಈ ಸ್ಥಿತಿಯಿಂದ ಅನೇಕ ವಿಶ್ವಾಸಿಗಳು ಪ್ರೋತ್ಸಾಹಿತರಾಗಿ ಕ್ರಿಸ್ತನ ವಿಷಯವಾದ ಸಂದೇಶವನ್ನು ಮತ್ತಷ್ಟು ಧೈರ್ಯದಿಂದ ಜನರಿಗೆ ಹೇಳುತ್ತಿದ್ದಾರೆ.


ತಿಮೊಥೆಯನು ಎಂಥವನೆಂಬುದು ನಿಮಗೆ ಗೊತ್ತಿದೆ. ಮಗನು ತನ್ನ ತಂದೆಯೊಡನೆ ಸೇವೆ ಮಾಡುವಂತೆ ಅವನು ಸುವಾರ್ತೆಯನ್ನು ತಿಳಿಸುವುದರಲ್ಲಿ ನನ್ನೊಂದಿಗೆ ಸೇವೆ ಮಾಡಿದನು.


ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ ಬರೆಯಲ್ಪಟ್ಟಿವೆ.


ಇದಲ್ಲದೆ ಫಿಲಿಪ್ಪಿ ಪಟ್ಟಣದವರೇ, ನಾನು ಮೊದಲು ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ ಮಕೆದೋನಿಯಕ್ಕೆ ಹೊರಟಾಗ, ನಿಮ್ಮ ಸಭೆಯೊಂದೇ ನನಗೆ ಸಹಾಯ ಮಾಡಿದ್ದು ನಿಮಗೆ ಗೊತ್ತಿದೆ.


ನಾನೀಗ ಸುವಾರ್ತೆಗೋಸ್ಕರ ಸೆರೆಯಲ್ಲಿರುವಾಗ ನನ್ನ ಸಹಾಯಕ್ಕೆ ಅವನನ್ನು ಇರಿಸಿಕೊಳ್ಳಬೇಕೆಂದಿದ್ದೆನು. ಇಲ್ಲಿ ಅವನು ನನಗೆ ಸಹಾಯ ಮಾಡುತ್ತಾ ನಿನ್ನ ಸೇವೆಯನ್ನೂ ಮಾಡಬಹುದಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು