Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:1 - ಪರಿಶುದ್ದ ಬೈಬಲ್‌

1 ನಿಮ್ಮಲ್ಲಿ ಕ್ರಿಸ್ತನಿಂದಾದ ಉತ್ತೇಜನ, ಪ್ರೀತಿಯ ಪ್ರೇರಣೆ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯ ದಯಾರಸಗಳು ಇವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕ್ರಿಸ್ತನಿಂದ ಪ್ರೋತ್ಸಾಹ, ಪ್ರೀತಿಯ ಸಾಂತ್ವನ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕ್ರಿಸ್ತಯೇಸುವಿನಲ್ಲಿ ನಿಮಗೆ ಉತ್ಸಾಹ, ಉತ್ತೇಜನ, ಪ್ರೀತಿ, ಪ್ರೇರಣೆ, ಪವಿತ್ರಾತ್ಮ ಅವರ ಅನ್ಯೋನ್ಯತೆ, ದೀನದಯಾಳತೆ ಇರುವುದಾದರೆ ಐಕಮತ್ಯದಿಂದ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕ್ರಿಸ್ತನಿಂದ ಉತ್ತೇಜನ, ಪ್ರೀತಿಯ ಪ್ರೇರಣೆ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವವಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೀವು ಕ್ರಿಸ್ತನೊಂದಿಗೆ ಐಕ್ಯವಾಗಿರುವುದರಿಂದ ಉತ್ತೇಜನ, ಅವರ ಪ್ರೀತಿಯಿಂದ ಸಂತೈಸುವಿಕೆ, ಆತ್ಮನಲ್ಲಿ ಅನ್ಯೋನ್ಯತೆ, ಕನಿಕರದ ವಾತ್ಸಲ್ಯಗಳು ಇರುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತುಮ್ಚೊ ಕ್ರಿಸ್ತಾಚೊ ಜಿವನ್ ಘಟ್ ಕರುನ್ ಘೆವಾ, ಅನಿ ತೆಜೆ ಪ್ರೆಮ್ ತುಮ್ಕಾ ಆರಾಮ್ ಥವ್ತಾ ತುಮಿ ಪವಿತ್ರ್ ಆತ್ಮ್ಯಾ ವಾಂಗ್ಡಾ ಎಕ್ ಹೊವ್ನ್, ಎಕಾಮೆಕಾಕ್ ಕಾಳ್ಜಿ ಅನಿ ದಯಾ ದಾಕ್ವುಲೆ ಹೊವ್ನ್ ಹಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:1
42 ತಿಳಿವುಗಳ ಹೋಲಿಕೆ  

ದೇವರು ನಿಮ್ಮನ್ನು ಆರಿಸಿಕೊಂಡಿದ್ದಾನೆ ಮತ್ತು ನಿಮ್ಮನ್ನು ತನ್ನ ಪವಿತ್ರ ಜನರನ್ನಾಗಿಸಿದ್ದಾನೆ. ಆತನು ನಿಮ್ಮನ್ನು ಪ್ರೀತಿಸುತ್ತಾನೆ. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೆ ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರು ನಮ್ಮಲ್ಲಿ ನೆಲೆಸಿರುತ್ತಾನೆ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರ ಪ್ರೀತಿಯು ನಮ್ಮಲ್ಲಿ ಪರಿಪೂರ್ಣವಾದ ಮಟ್ಟವನ್ನು ತಲುಪುತ್ತದೆ.


ಅವರೆಲ್ಲರೂ ಆಂತರ್ಯದಲ್ಲಿ ಉತ್ತೇಜಿತರಾಗಿ ಪ್ರೀತಿಯಿಂದ ಒಂದಾಗಿರಬೇಕೆಂದು ಮತ್ತು ತಿಳುವಳಿಕೆಯಿಂದ ಬರುವ ದೃಢನಂಬಿಕೆಯಲ್ಲಿ ಶ್ರೀಮಂತರಾಗಿರಬೇಕೆಂದು ಆಶಿಸುತ್ತೇನೆ. ಅಂದರೆ ದೇವರ ನಿಗೂಢ ಸತ್ಯವನ್ನು ಅವರು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಸ್ವತಃ ಕ್ರಿಸ್ತನೇ ಆ ಸತ್ಯ.


ನಮ್ಮಲ್ಲಿ ಕೆಲವರು ಯೆಹೂದ್ಯರಿದ್ದಾರೆ, ಕೆಲವರು ಗ್ರೀಕರಿದ್ದಾರೆ, ಕೆಲವರು ಗುಲಾಮರಿದ್ದಾರೆ, ಕೆಲವರು ಸ್ವತಂತ್ರರಿದ್ದಾರೆ, ಆದರೆ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಬ್ಬನೇ ಪವಿತ್ರಾತ್ಮನ ಮೂಲಕ ದೀಕ್ಷಾಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬನೇ ಪವಿತ್ರಾತ್ಮನನ್ನು ಕೊಡಲಾಯಿತು.


ಆಹಾ, ಸಹೋದರರು ಅನ್ಯೋನ್ಯತೆಯಿಂದಿರುವುದು ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು.


ಆದರೆ ದೇವರಾತ್ಮನು ಹುಟ್ಟಿಸುವುದು ಪ್ರೀತಿ, ಆನಂದ, ಶಾಂತಿ, ತಾಳ್ಮೆ, ಕರುಣೆ, ಉಪಕಾರ, ನಂಬಿಗಸ್ತಿಕೆ,


ನೀವು ದೇವರ ಮಕ್ಕಳು. ಆದಕಾರಣವೇ ದೇವರು ತನ್ನ ಆತ್ಮವನ್ನು ನಿಮ್ಮ ಹೃದಯಗಳಿಗೆ ಕಳುಹಿಸಿದನು. “ತಂದೆಯೇ, ಅಪ್ಪಾ ತಂದೆಯೇ” ಎಂದು ಆತ್ಮನು ಕೂಗುತ್ತಾನೆ.


ವಿಶ್ವಾಸಿಗಳ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಸಮುದಾಯದಲ್ಲಿದ್ದ ಯಾವನಾಗಲಿ ತನ್ನಲ್ಲಿರುವವುಗಳನ್ನು ತನ್ನದೆಂದು ಹೇಳುತ್ತಿರಲಿಲ್ಲ. ಬದಲಾಗಿ, ಅವರು ಪ್ರತಿಯೊಂದನ್ನು ಹಂಚಿಕೊಳ್ಳುತ್ತಿದ್ದರು.


ದೇವರ ಆಜ್ಞೆಗಳಿಗೆ ವಿಧೇಯನಾಗಿರುವವನು ದೇವರಲ್ಲಿ ನೆಲೆಸಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಸಿರುತ್ತಾನೆ. ದೇವರು ನಮ್ಮಲ್ಲಿ ನೆಲೆಸಿದ್ದಾನೆ ಎಂಬುದು ನಮಗೆ ಹೇಗೆ ತಿಳಿದದೆ? ದೇವರು ನಮಗೆ ದಯಪಾಲಿಸಿರುವ ಪವಿತ್ರಾತ್ಮನಿಂದಲೇ ನಮಗೆ ತಿಳಿದದೆ.


“ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಆದರೆ ನಾನು ಈ ಲೋಕದಲ್ಲಿ ಇನ್ನೂ ಇರುವಾಗಲೇ ಈ ಸಂಗತಿಗಳಿಗಾಗಿ ಪ್ರಾರ್ಥಿಸುತ್ತಿದ್ದೇನೆ. ಈ ಜನರು ನನ್ನ ಆನಂದವನ್ನು ಹೊಂದಿದವರಾಗಿರಬೇಕೆಂದು ಮತ್ತು ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರಬೇಕೆಂದು ಈ ಸಂಗತಿಗಳನ್ನು ಹೇಳುತ್ತಿದ್ದೇನೆ.


ಹೀಗಿರಲಾಗಿ ನಮ್ಮ ಮೇಲೆ ದೇವರಿಗಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ನಾವು ಆ ಪ್ರೀತಿಯಲ್ಲಿ ಭರವಸವಿಟ್ಟಿದ್ದೇವೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿದ್ದಾನೆ.


ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.


ನೀವೇ ದೇವರ ಆಲಯವಾಗಿದ್ದೀರಿ. ಇದು ನಿಮಗೆ ಚೆನ್ನಾಗಿ ತಿಳಿದಿದೆ. ದೇವರಾತ್ಮನು ನಿಮ್ಮೊಳಗೆ ವಾಸವಾಗಿದ್ದಾನೆ.


ನಾವು ಬಲಹೀನರಾಗಿರುವುದರಿಂದ ನಮ್ಮ ಬಲಹೀನತೆಯಲ್ಲಿ ಪವಿತ್ರಾತ್ಮನು ನಮಗೆ ಸಹಾಯ ಮಾಡುತ್ತಾನೆ. ನಾವು ಹೇಗೆ ಪ್ರಾರ್ಥಿಸಬೇಕು ಮತ್ತು ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದು ನಮಗೆ ತಿಳಿಯದು. ಆದರೆ ಪವಿತ್ರಾತ್ಮನು ತಾನೇ ನಮಗೋಸ್ಕರ ದೇವರಲ್ಲಿ ವಿವರಿಸಲಾಗದ ಅಂತರ್ಭಾವದಿಂದ ಬೇಡಿಕೊಳ್ಳುತ್ತಾನೆ.


ನಮ್ಮ ಈ ನಿರೀಕ್ಷೆಯು ನಮ್ಮನ್ನು ಎಂದಿಗೂ ನಿರಾಶರನ್ನಾಗಿ ಮಾಡುವುದಿಲ್ಲ. ಅದು ಎಂದಿಗೂ ವ್ಯರ್ಥವಾಗುವುದಿಲ್ಲ. ಏಕೆಂದರೆ ದೇವರು ನಮಗೆ ಉಡುಗೊರೆಯಾಗಿ ಕೊಟ್ಟಿರುವ ಪವಿತ್ರಾತ್ಮನ ಮೂಲಕ ತನ್ನ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾನೆ.


ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು.


ದೇವರು ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದರ ಮೂಲಕ ಆರಿಸಿಕೊಳ್ಳಲು ಬಹುಕಾಲದ ಹಿಂದೆಯೇ ಯೋಜನೆ ಮಾಡಿದ್ದನು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದು ಪರಿಶುದ್ಧಾತ್ಮನ ಕಾರ್ಯ. ನೀವು ಯೇಸು ಕ್ರಿಸ್ತನ ರಕ್ತದ ಮೂಲಕ ಪರಿಶುದ್ಧರಾಗಿ ತನಗೆ ವಿಧೇಯರಾಗಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಕೃಪೆಯೂ ಶಾಂತಿಯೂ ನಿಮಗೆ ಅಧಿಕವಾಗಿ ಲಭಿಸಲಿ.


ದೇವರ ವಾಗ್ದಾನ ಮತ್ತು ಆಣೆ ಅಚಲವಾದ ಎರಡು ಆಧಾರಗಳಾಗಿವೆ. ಇವುಗಳ ವಿಷಯದಲ್ಲಿ ನಮಗೆಂದಿಗೂ ಮೋಸವಾಗುವುದಿಲ್ಲ. ಇದರಿಂದಾಗಿ, ದೇವರ ರಕ್ಷಣೆಗಾಗಿ ಓಡಿ ಬಂದಿರುವ ನಾವು ನಮ್ಮ ನಿರೀಕ್ಷೆಯಲ್ಲಿ ಸ್ಥಿರವಾಗಿರಲು ಬಲವಾದ ಪ್ರೋತ್ಸಾಹ ಉಂಟಾಯಿತು.


ನಾನು ನಿಮ್ಮನ್ನು ನೋಡಲು ಬಹು ತವಕಪಡುತ್ತಿದ್ದೇನೆಂಬುದು ದೇವರಿಗೆ ಗೊತ್ತಿದೆ. ಯೇಸು ಕ್ರಿಸ್ತನಿಂದ ತೋರಿಬಂದ ಪ್ರೀತಿಯಿಂದ ನಾನು ನಿಮ್ಮೆಲ್ಲರನ್ನು ಪ್ರೀತಿಸುತ್ತೇನೆ.


ದೇಹವು ಒಂದೇ ಮತ್ತು ಆತ್ಮನು ಒಬ್ಬನೇ. ನೀವೆಲ್ಲರೂ ಒಂದೇ ನಿರೀಕ್ಷೆಯನ್ನು ಹೊಂದಿರಬೇಕೆಂದು ದೇವರು ನಿಮ್ಮನ್ನು ಕರೆದನು.


ದೇವರಿಗೆ ಸ್ತೋತ್ರವಾಗಲಿ. ದೇವರು ನಮ್ಮನ್ನು ಕ್ರಿಸ್ತನ ಮೂಲಕ ಯಾವಾಗಲೂ ವಿಜಯೋತ್ಸವದತ್ತ ನಡೆಸುತ್ತಿದ್ದಾನೆ. ದೇವರು ತನ್ನ ಜ್ಞಾನವೆಂಬ ಪರಿಮಳವನ್ನು ಎಲ್ಲಾ ಕಡೆಗಳಲ್ಲಿಯೂ ಹರಡಲು ನಮ್ಮನ್ನು ಉಪಯೋಗಿಸುತ್ತಿದ್ದಾನೆ.


ನಾನು ಪ್ರತಿದಿನವೂ ಸಾಯುತ್ತೇನೆ. ಸಹೋದರರೇ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿ ನಾನು ನಿಮ್ಮ ಬಗ್ಗೆ ಹೆಮ್ಮೆಪಡುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ ಅದಾಗಿದೆ.


“ನಾನು ನಿಮಗೆ ಶಾಂತಿಯನ್ನು ನೀಡುತ್ತೇನೆ. ಈ ಲೋಕವು ಕೊಡುವುದಕ್ಕಿಂತ ಭಿನ್ನವಾದ ರೀತಿಯಲ್ಲಿ ನಾನು ನಿಮಗೆ ಶಾಂತಿಯನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ಭಯಪಡಬೇಡಿರಿ.


“ನಾನು ನಿಮ್ಮನ್ನು ತಂದೆತಾಯಿಗಳಿಲ್ಲದ ಮಕ್ಕಳಂತೆ ಒಬ್ಬಂಟಿಗರನ್ನಾಗಿ ಬಿಟ್ಟುಹೋಗುವುದಿಲ್ಲ. ನಾನು ನಿಮ್ಮ ಬಳಿಗೆ ಬರುತ್ತೇನೆ.


ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು.


ನಾನು ಮೋವಾಬಿಗಾಗಿ ತುಂಬಾ ದುಃಖದಲ್ಲಿದ್ದೇನೆ. ನಾನು ಕೀರ್‌ಹೆರೆಸಿಗಾಗಿಯೂ ತುಂಬಾ ದುಃಖದಲ್ಲಿದ್ದೇನೆ. ಈ ನಗರಗಳಿಗಾಗಿ ನಾನು ಬಹಳವಾಗಿ ದುಃಖದಲ್ಲಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು