19 ನಿಮ್ಮ ಬಳಿಗೆ ತಿಮೊಥೆಯನನ್ನು ಆದಷ್ಟು ಬೇಗನೆ ಕಳುಹಿಸಿಕೊಡಲು ಪ್ರಭುವಾದ ಯೇಸುವಿನಲ್ಲಿ ನಿರೀಕ್ಷಿಸುತ್ತಿದ್ದೇನೆ. ಅವನ ಮೂಲಕ ನಿಮ್ಮ ಯೋಗಕ್ಷೇವುವನ್ನು ತಿಳಿದುಕೊಳ್ಳುವುದರಿಂದ ನನಗೆ ಪ್ರೋತ್ಸಾಹವಾಗಬಹುದು.
19 ಆದರೆ ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸಬೇಕೆಂದು ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ಸಂಗತಿಗಳನ್ನು ತಿಳಿದು ನಾನೂ ಆದರಣೆ ಹೊಂದಿದೆನು.
19 ಆದರೆ ಕರ್ತನಾದ ಯೇಸುವಿನ ಚಿತ್ತವಾದರೆ ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸಬೇಕೆಂದು ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ಸಂಗತಿಗಳನ್ನು ತಿಳಿದು ನಾನೂ ಧೈರ್ಯತಂದುಕೊಂಡೇನು.
19 ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವುದಕ್ಕೆ ಕರ್ತ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಹೀಗೆ ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಉತ್ತೇಜನಗೊಳ್ಳುವೆನು.
ಆದಕಾರಣವೇ, ನಾನು ನಿಮ್ಮ ಬಳಿಗೆ ತಿಮೊಥೆಯನನ್ನು ಕಳುಹಿಸುತ್ತಿದ್ದೇನೆ, ಅವನು ಪ್ರಭುವಿನಲ್ಲಿ ನನ್ನ ಮಗನಾಗಿದ್ದಾನೆ. ನಾನು ಅವನನ್ನು ಪ್ರೀತಿಸುತ್ತೇನೆ. ಅವನು ನಂಬಿಗಸ್ತನಾಗಿದ್ದಾನೆ. ನಾನು ಕ್ರಿಸ್ತ ಯೇಸುವಿನಲ್ಲಿ ಜೀವಿಸುವ ರೀತಿಯನ್ನು ಅವನು ನಿಮ್ಮ ಜ್ಞಾಪಕಕ್ಕೆ ತರುವನು. ಪ್ರತಿಯೊಂದು ಕಡೆಯಲ್ಲಿಯೂ ಎಲ್ಲಾ ಸಭೆಗಳಲ್ಲಿಯೂ ನಾನು ಅದೇ ರೀತಿಯ ಜೀವನವನ್ನು ಉಪದೇಶಿಸುತ್ತೇನೆ.
ಆದುದರಿಂದ ಅಥೆನ್ಸಿನಲ್ಲಿ ಉಳಿದುಕೊಂಡು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಲು ತೀರ್ಮಾನಿಸಿದೆವು. ತಿಮೊಥೆಯನು ನಮ್ಮ ಸಹೋದರ. ಅವನು ದೇವರಿಗೋಸ್ಕರ ನಮ್ಮೊಡನೆ ಕೆಲಸ ಮಾಡುತ್ತಿದ್ದಾನೆ. ಕ್ರಿಸ್ತನ ವಿಷಯವಾದ ಸುವಾರ್ತೆಯನ್ನು ಜನರಿಗೆ ತಿಳಿಸಲು ಅವನು ನಮಗೆ ಸಹಾಯ ಮಾಡುತ್ತಿದ್ದಾನೆ. ನಿಮ್ಮ ನಂಬಿಕೆಯನ್ನು ಬಲಗೊಳಿಸಲು ಮತ್ತು ನಿಮ್ಮನ್ನು ಸಂತೈಸಲು ತಿಮೊಥೆಯನನ್ನು ಕಳುಹಿಸಿದ್ದೇವೆ.
ಯೇಸು ಕ್ರಿಸ್ತನ ದಾಸರಾದ ಪೌಲನು ತಿಮೊಥೆಯನು ಫಿಲಿಪ್ಪಿಯವರಿಗೆ ಬರೆಯುವ ಪತ್ರ. ಯೇಸು ಕ್ರಿಸ್ತನ ಮೂಲಕ ದೇವರ ಪರಿಶುದ್ಧ ಜನರಾಗಿರುವವರಿಗೂ ಎಲ್ಲಾ ಹಿರಿಯರಿಗೂ ಸಭಾಸೇವಕರಿಗೂ ನಾವು ಈ ಪತ್ರವನ್ನು ಬರೆಯತ್ತಿದ್ದೇವೆ.
ಆದ್ದರಿಂದ ಅವನನ್ನು ನಿಮ್ಮ ಬಳಿಗೆ ಕಳುಹಿಸಿಕೊಡಲು ನಾನು ಬಹಳ ತವಕಪಡುತ್ತಿದ್ದೇನೆ. ನೀವು ಅವನನ್ನು ನೋಡಿದಾಗ ಸಂತೋಷಪಡುತ್ತೀರಿ ಮತ್ತು ನಿಮ್ಮ ವಿಷಯದಲ್ಲಿ ನನಗಿರುವ ಚಿಂತೆಯು ಕೊನೆಗೊಳ್ಳುತ್ತದೆ.
ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.
ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಸ್ತೋತ್ರ ಸಲ್ಲಿಸುತ್ತೇವೆ. ನಿಮ್ಮ ನಂಬಿಕೆಯು ಮತ್ತು ಇತರರ ಮೇಲೆ ನಿಮಗಿರುವ ಪ್ರೀತಿಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ನಿಮ್ಮ ವಿಷಯದಲ್ಲಿ ಸ್ತೋತ್ರ ಸಲ್ಲಿಸುವುದು ಯೋಗ್ಯವಾದ ಕಾರ್ಯವಾಗಿದೆ.
ಇದು ನಿಮಗೂ ಅನ್ವಯಿಸುತ್ತದೆ. ನೀವು ಸತ್ಯ ಬೋಧನೆಯ ಬಗ್ಗೆ ಅಂದರೆ ನಿಮ್ಮ ರಕ್ಷಣೆಯ ಕುರಿತಾದ ಸುವಾರ್ತೆಯ ಬಗ್ಗೆ ಕೇಳಿದಾಗ ಕ್ರಿಸ್ತನಲ್ಲಿ ನಂಬಿಕೆಯಿಟ್ಟಿರಿ. ದೇವರು ತನ್ನ ವಾಗ್ದಾನಕ್ಕನುಸಾರವಾಗಿ ನಿಮಗೆ ಪವಿತ್ರಾತ್ಮನನ್ನು ದಯಪಾಲಿಸುವುದರ ಮೂಲಕ ನಿಮ್ಮ ಮೇಲೆ ತನ್ನ ವಿಶೇಷವಾದ ಮುದ್ರೆಯನ್ನು ಹಾಕಿದನು.
ಯೆಶಾಯನು ಹೀಗೆ ಹೇಳಿದ್ದಾನೆ: “ಇಷಯನ ಕುಟುಂಬದಿಂದ ಒಬ್ಬ ವ್ಯಕ್ತಿಯು ಬರುವನು. ಆತನು ಯೆಹೂದ್ಯರಲ್ಲದವರನ್ನು ಆಳುವುದಕ್ಕಾಗಿ ಬರುವನು. ಯೆಹೂದ್ಯರಲ್ಲದ ಜನರು ಆತನಲ್ಲಿ ನಿರೀಕ್ಷೆಯನ್ನು ಹೊಂದಿಕೊಳ್ಳುವರು.”
ಯೆಹೋವನು ಹೀಗೆ ಹೇಳಿದನು: “ಕೇವಲ ಜನರನ್ನು ನಂಬಿದವರಿಗೆ ಕೇಡಾಗುವುದು. ಮನುಷ್ಯರ ಬಲವನ್ನು ಆತುಕೊಂಡವರಿಗೆ ಕೇಡಾಗುವುದು. ಯಾಕೆಂದರೆ ಅಂಥವರು ಯೆಹೋವನಲ್ಲಿ ನಂಬಿಕೆ ಇಡುವದನ್ನು ಬಿಟ್ಟುಬಿಟ್ಟಿರುತ್ತಾರೆ.
ನೀವು ಕ್ರಿಸ್ತನ ಮೂಲಕ ದೇವರನ್ನು ನಂಬಿದ್ದೀರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ನಂತರ ದೇವರು ಆತನಿಗೆ ಪ್ರಭಾವವನ್ನು ದಯಪಾಲಿಸಿದನು. ಆದ್ದರಿಂದ ನಿಮ್ಮ ನಂಬಿಕೆ ಮತ್ತು ನಿರೀಕ್ಷೆಗಳು ದೇವರಲ್ಲಿರಲಿ.
ಪೌಲನು ದರ್ಬೆ ಮತ್ತು ಲುಸ್ತ್ರ ಪಟ್ಟಣಗಳಿಗೆ ಹೋದನು. ತಿಮೊಥೆ ಎಂಬ ಕ್ರಿಸ್ತನ ಶಿಷ್ಯನೊಬ್ಬನು ಅಲ್ಲಿದ್ದನು. ತಿಮೊಥೆಯನ ತಾಯಿ ಯೆಹೂದ್ಯ ವಿಶ್ವಾಸಿಯಾಗಿದ್ದಳು. ಅವನ ತಂದೆಯು ಗ್ರೀಕನಾಗಿದ್ದನು.
ನಿಮ್ಮ ನಂಬಿಕೆಯ ಬಗ್ಗೆ ತಿಳಿದುಕೊಳ್ಳಬೇಕೆಂಬ ಕಾರಣದಿಂದಲೇ ನಾನು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆನು. ಇನ್ನೂ ಹೆಚ್ಚುಕಾಲ ಕಾಯಲು ಸಾಧ್ಯವಿಲ್ಲವೆನಿಸಿದ್ದರಿಂದಲೇ ನಾನು ಅವನನ್ನು ಕಳುಹಿಸಿದೆನು. ಜನರನ್ನು ಶೋಧನೆಗೆ ಒಳಪಡಿಸುವ ಸೈತಾನನು ನಿಮ್ಮನ್ನು ಈಗಾಗಲೇ ಶೋಧನೆಗಳಿಂದ ಸೋಲಿಸಿರಬಹುದೆಂಬ ಭಯ ನನಗಿತ್ತು. ಒಂದುವೇಳೆ, ಹಾಗೇನಾದರೂ ಆಗಿದ್ದರೆ ನಮ್ಮ ಪ್ರಯಾಸವೆಲ್ಲಾ ನಿರರ್ಥಕವಾಗುತ್ತಿತ್ತು.