Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:14 - ಪರಿಶುದ್ದ ಬೈಬಲ್‌

14 ದೇವರು ನಮ್ಮನ್ನು ಕ್ರಿಸ್ತನ ಮೂಲಕ ಮೇಲೋಕದ ಜೀವಿತಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಹೊಂದುವ ಗುರಿಯನ್ನು ತಲುಪಲೆಂದು ಓಡುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮೇಲಣ ಬಹುಮಾನವನ್ನು ಪಡೆಯಲೆಂದು ದೇವರು ನನಗೆ ಕ್ರಿಸ್ತಯೇಸುವಿನ ಮುಖಾಂತರ ಕರೆ ನೀಡಿದ್ದಾರೆ. ಆ ಗುರಿಯನ್ನು ತಲುಪಲೆಂದೇ ನಾನು ಮುಂದೋಡುತ್ತಲಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೀಗೆ ನಾನು ಕ್ರಿಸ್ತ ಯೇಸುವಿನಲ್ಲಿ ದೇವರ ಸ್ವರ್ಗೀಯ ಕರೆಯ ಬಹುಮಾನದ ಗುರಿಯೆಡೆಗೆ ಮುಂದೆ ಸಾಗುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಕ್ರಿಸ್ತ್ ಜೆಜುಕ್ಡೆ ದೆವಾಚ್ಯಾ ಮೊಟ್ಯಾ ಬಲವ್ನಿಚಿ ಭೊಮಾನ್ ಫಿಡೆ ಗಾವ್ತಾ ಮನುನ್ ಗುರಿ ಥವ್ನ್ ಘೆವ್ನ್ ಪಳುನ್ಗೆತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:14
20 ತಿಳಿವುಗಳ ಹೋಲಿಕೆ  

ಓಟದ ಸ್ಪರ್ಧೆಯಲ್ಲಿ ಎಲ್ಲಾ ಓಟಗಾರರು ಓಡುತ್ತಾರೆಂಬುದು ನಿಮಗೆ ಗೊತ್ತಿದೆ. ಆದರೆ ಅವರಲ್ಲಿ ಒಬ್ಬನು ಮಾತ್ರ ಬಹುಮಾನವನ್ನು ಪಡೆದುಕೊಳ್ಳುತ್ತಾನೆ. ಆದ್ದರಿಂದ ಆ ರೀತಿಯಲ್ಲಿ ಓಡಿರಿ; ಗೆಲ್ಲುವುದಕ್ಕಾಗಿ ಓಡಿರಿ.


ಹೌದು, ನೀವು ಸ್ವಲ್ಪಕಾಲ ಮಾತ್ರ ಸಂಕಟವನ್ನು ಅನುಭವಿಸುವಿರಿ. ಆದರೆ ಅನಂತರ ದೇವರು ಎಲ್ಲವನ್ನು ಸರಿಪಡಿಸುತ್ತಾನೆ. ಆತನು ನಿಮ್ಮನ್ನು ಬಲಪಡಿಸುತ್ತಾನೆ. ನೀವು ಕೆಳಕ್ಕೆ ಬೀಳದಂತೆ ಆತನು ನಿಮಗೆ ಆಧಾರವಾಗುವನು. ಎಲ್ಲರಿಗೂ ಕೃಪೆಯನ್ನು ತೋರುವ ದೇವರು ಆತನೇ. ತನ್ನ ಪ್ರಭಾವದಲ್ಲಿ ಪಾಲುಗಾರರಾಗಲು ಕ್ರಿಸ್ತನೇ ನಿಮ್ಮನ್ನು ಕರೆದನು. ಆ ಪ್ರಭಾವವು ಶಾಶ್ವತವಾದದ್ದು.


“ನಾನು ಜಯಗಳಿಸಿ ನನ್ನ ತಂದೆಯೊಡನೆ ಆತನ ಸಿಂಹಾಸನದ ಮೇಲೆ ಕುಳಿತುಕೊಂಡೆನು. ಅಂತೆಯೇ ಜಯಗಳಿಸುವ ಪ್ರತಿಯೊಬ್ಬನೂ ನನ್ನ ಸಂಗಡ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು.


ನಿಮ್ಮನ್ನು ಬಲಗೊಳಿಸಿದೆವು ಮತ್ತು ಸಂತೈಸಿದೆವು. ನಿಮ್ಮನ್ನು ತನ್ನ ರಾಜ್ಯಕ್ಕೂ ಮಹಿಮೆಗೂ ಕರೆದ ದೇವರಿಗಾಗಿ ಯೋಗ್ಯವಾದ ರೀತಿಯಲ್ಲಿ ಜೀವಿಸಿರಿ ಎಂದು ನಾವು ನಿಮಗೆ ತಿಳಿಸಿದೆವು.


ಯೇಸುವಿಗೆ ದೇವರ ಶಕ್ತಿಯಿದೆ. ಜೀವಿಸಲು ಮತ್ತು ದೇವರ ಸೇವೆ ಮಾಡಲು ಬೇಕಾದ ಪ್ರತಿಯೊಂದನ್ನು ಆತನ ಶಕ್ತಿಯು ನಮಗೆ ಒದಗಿಸಿದೆ. ನಾವು ಆತನನ್ನು ಬಲ್ಲವರಾದ್ದರಿಂದಲೇ ಅವುಗಳನ್ನು ಪಡೆದುಕೊಂಡಿದ್ದೇವೆ. ಯೇಸು ತನ್ನ ಪ್ರಭಾವದಿಂದಲೂ ಗುಣಾತಿಶಯದಿಂದಲೂ ನಮ್ಮನ್ನು ಕರೆದನು.


ಆದ್ದರಿಂದ ನನ್ನ ಸಹೋದರ ಸಹೋದರಿಯರೇ, ಪರಿಶುದ್ಧ ಜನರಾಗುವುದಕ್ಕಾಗಿ ದೇವರಿಂದ ಕರೆಯಲ್ಪಟ್ಟವರಾದ ನೀವು ಯೇಸುವನ್ನೇ ಕುರಿತು ಆಲೋಚಿಸಿರಿ. ದೇವರು ಆತನನ್ನು ನಮ್ಮ ಬಳಿಗೆ ಕಳುಹಿಸಿದನು. ಆತನೇ ನಮ್ಮ ನಂಬಿಕೆಯ ಪ್ರಧಾನಯಾಜಕನು.


ಆದ್ದರಿಂದ ನೀವು ನಿಮ್ಮ ಮನಸ್ಸುಗಳನ್ನು ಸೇವೆಗಾಗಿ ಸಿದ್ಧಪಡಿಸಿರಿ. ಅಲ್ಲದೆ ನಿಮ್ಮನ್ನು ಹತೋಟಿಯಲ್ಲಿಟ್ಟುಕೊಂಡಿರಿ. ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರೆಯುವ ಕೃಪಾವರದ ಮೇಲೆಯೇ ನಿಮ್ಮ ನಿರೀಕ್ಷೆಯೆಲ್ಲಾ ಇರಬೇಕು.


ಆದ್ದರಿಂದ ಕ್ರಿಸ್ತನನ್ನು ಕುರಿತ ಆರಂಭದ ಪಾಠಗಳನ್ನು ನಾವು ಮುಗಿಸಿದವರಾಗಿರಬೇಕು. ನಾವು ಆರಂಭಿಸಿದ ಪಾಠಗಳಿಗೆ ಮತ್ತೆ ಹೋಗಬಾರದು. ನಮ್ಮ ಮೊದಲಿನ ದುಷ್ಕೃತ್ಯಗಳನ್ನು ತೊರೆದುಬಿಟ್ಟು ದೇವರಲ್ಲಿ ನಂಬಿಕೆಯನ್ನಿಟ್ಟು ಕ್ರಿಸ್ತನಲ್ಲಿ ನಮ್ಮ ಜೀವನವನ್ನು ಪ್ರಾರಂಭಿಸಿದೆವು.


ಸ್ವಲ್ಪಕಾಲದವರೆಗೆ ನಮಗೆ ಚಿಕ್ಕಪುಟ್ಟ ಇಕ್ಕಟ್ಟುಗಳಿರುತ್ತವೆ. ಆದರೆ ನಿತ್ಯವಾದ ಮಹಿಮೆಯನ್ನು ಹೊಂದಿಕೊಳ್ಳಲು ಅವು ನಮಗೆ ಸಹಾಯಕವಾಗಿವೆ. ಆ ಮಹಿಮೆಯು ಇಂದಿನ ಇಕ್ಕಟ್ಟುಗಳಿಗಿಂತಲೂ ಮಹತ್ವವುಳ್ಳದ್ದಾಗಿದೆ.


“ಜನರು ಮೋಶೆಯ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಗ್ರಂಥಗಳಿಗೂ ಅನುಸಾರವಾಗಿ ಜೀವಿಸಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಸ್ನಾನಿಕನಾದ ಯೋಹಾನನು ಬಂದ ಕಾಲದಿಂದ ದೇವರ ರಾಜ್ಯದ ಸುವಾರ್ತೆಯು ತಿಳಿಸಲ್ಪಡುತ್ತಿದೆ. ಅನೇಕ ಜನರು ದೇವರ ರಾಜ್ಯದೊಳಗೆ ಹೋಗಲು ಬಹಳ ಪ್ರಯಾಸಪಡುತ್ತಿದ್ದಾರೆ.


ಆತನು, ತಾನು ಕರೆಯುವ ಜನರ ವಿಷಯವಾಗಿಯೂ ತಾನು ಅವರಿಗೆ ಕೊಡುವ ವರಗಳ ವಿಷಯವಾಗಿಯೂ ತನ್ನ ಮನಸ್ಸನ್ನು ಬದಲಾಯಿಸುವುದೇ ಇಲ್ಲ; ತಾನು ಜನರಿಗೆ ನೀಡಿದ ಕರೆಯನ್ನು ಹಿಂತೆಗೆದುಕೊಳ್ಳುವುದೇ ಇಲ್ಲ.


ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.


ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಆ ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಆ ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ.


ಆತನು ನಮ್ಮನ್ನು ರಕ್ಷಿಸಿ, ತನ್ನ ಪವಿತ್ರ ಜನರಾಗಿರುವುದಕ್ಕಾಗಿ ನಮ್ಮನ್ನು ಕರೆದನು. ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದ ಹೀಗಾಯಿತು ಎಂದಲ್ಲ. ಆತನು ತನ್ನ ಸಂಕಲ್ಪಕ್ಕನುಸಾರವಾಗಿ ಮತ್ತು ಕೃಪೆಗನುಸಾರವಾಗಿ ನಮ್ಮನ್ನು ರಕ್ಷಿಸಿ ತನ್ನವರನ್ನಾಗಿ ಮಾಡಿದನು. ಅನಾದಿಕಾಲದಲ್ಲಿಯೇ ಈ ಕೃಪೆಯು ಕ್ರಿಸ್ತ ಯೇಸುವಿನ ಮೂಲಕ ನಮಗೆ ದೊರೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು