Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:20 - ಪರಿಶುದ್ದ ಬೈಬಲ್‌

20 ನಾವಾದರೋ ಪರಲೋಕ ಸಂಸ್ಥಾನದವರು. ನಮ್ಮ ರಕ್ಷಕನು ಅಲ್ಲಿಂದಲೇ ಬರುವುದನ್ನು ನಾವು ಎದುರುನೋಡುತ್ತಿದ್ದೇವೆ. ಪ್ರಭುವಾದ ಯೇಸು ಕ್ರಿಸ್ತನೇ ನಮ್ಮ ರಕ್ಷಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾವಾದರೋ ಸ್ವರ್ಗಸಾಮ್ರಾಜ್ಯದ ಪ್ರಜೆಗಳು, ಉದ್ಧಾರಕರಾದ ಪ್ರಭು ಯೇಸುಕ್ರಿಸ್ತರು ಪುನರಾಗಮಿಸುವುದು ಅಲ್ಲಿಂದಲೇ ಎಂದು ಎದುರುನೋಡುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವದನ್ನು ಎದುರುನೋಡುತ್ತಾ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ನಮ್ಮ ಪೌರತ್ವವು ಪರಲೋಕದಲ್ಲಿದೆ. ನಾವು ಪರಲೋಕದಿಂದಲೇ ರಕ್ಷಕರಾಗಿರುವ ಒಬ್ಬರ ಬರುವಿಕೆಗಾಗಿ ಆತುರದಿಂದ ಎದುರುನೋಡುತ್ತಿದ್ದೇವೆ. ಅವರೇ ಕರ್ತದೇವರು ಆಗಿರುವ ಕ್ರಿಸ್ತ ಯೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅಮಿ ತರಿಬಿ ಸರ್‍ಗಾತ್ ರ್‍ಹಾತಲೆ ಥೈತ್ನಾ ರಾಕ್ವನ್‍ಕಾರಿ ಯೆತಲಿ ವಾಟ್ ಬಗುಲ್ಲಾಂವ್, ತೊಚ್ ಧನಿಯಾ ಜೆಜು ಕ್ರಿಸ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:20
36 ತಿಳಿವುಗಳ ಹೋಲಿಕೆ  

ಆದ್ದರಿಂದ ಯೆಹೂದ್ಯರಲ್ಲದವರಾದ ನೀವು ಈಗ ವಿದೇಶಿಯರಲ್ಲ ಮತ್ತು ಅನ್ಯಜನರಲ್ಲ. ಈಗ ನೀವು ದೇವರ ಪರಿಶುದ್ಧ ಜನರೊಂದಿಗೆ ಪ್ರಜೆಗಳಾಗಿದ್ದೀರಿ. ನೀವು ದೇವರ ಕುಟುಂಬಕ್ಕೆ ಸೇರಿದವರಾಗಿದ್ದೀರಿ.


ಆದ್ದರಿಂದ ನಮಗೆ ಕಾಣುವಂಥವುಗಳ ಬಗ್ಗೆ ಯೋಚಿಸದೆ ನಮಗೆ ಕಾಣದಿರುವಂಥವುಗಳ ಬಗ್ಗೆ ಯೋಚಿಸುತ್ತೇವೆ. ನಮಗೆ ಕಾಣುವಂಥವುಗಳು ಕೇವಲ ಸ್ವಲ್ಪಕಾಲ ಮಾತ್ರ ಇರುತ್ತವೆ. ಆದರೆ ನಮಗೆ ಕಾಣದಂಥವುಗಳು ಎಂದೆಂದಿಗೂ ಇರುತ್ತವೆ.


ಆದರೆ ನೀವು ಅಂಥ ಸ್ಥಳಕ್ಕೆ ಬಂದಿಲ್ಲ. ನೀವು ಬಂದಿರುವ ಹೊಸ ಸ್ಥಳ ಚೀಯೋನ್ ಬೆಟ್ಟ, ಜೀವಸ್ವರೂಪನಾದ ದೇವರು ವಾಸವಾಗಿರುವ ಪರಲೋಕದ ಜೆರುಸಲೇಮಿಗೂ ಸಹಸ್ರಾರು ದೇವದೂತರು ಸಂತೋಷದಿಂದ ಒಟ್ಟುಗೂಡಿರುವ ಸ್ಥಳಕ್ಕೂ ಬಂದಿರುವಿರಿ.


ನಿಮಗೆ ನಿರೀಕ್ಷೆ ಇರುವುದರಿಂದಲೇ ಕ್ರಿಸ್ತನಲ್ಲಿ ನಂಬಿಕೆ ಇಟ್ಟಿದ್ದೀರಿ ಮತ್ತು ದೇವಜನರನ್ನು ಪ್ರೀತಿಸುತ್ತೀರಿ. ನೀವು ನಿರೀಕ್ಷಿಸುವಂಥವುಗಳು ನಿಮಗೋಸ್ಕರ ಪರಲೋಕದಲ್ಲಿ ಸಿದ್ಧ ಮಾಡಲ್ಪಟ್ಟಿವೆ ಎಂಬುದು ನಿಮಗೆ ತಿಳಿದಿದೆ. ನಿಮಗೆ ತಿಳಿಸಲಾದ ಸತ್ಯವಾಕ್ಯವನ್ನು ಅಂದರೆ ಸುವಾರ್ತೆಯನ್ನು ನೀವು ಕೇಳಿದಾಗ ಈ ನಿರೀಕ್ಷೆಯ ಬಗ್ಗೆ ತಿಳಿದುಕೊಂಡಿರಿ. ನೀವು ಸುವಾರ್ತೆಯನ್ನು ಕೇಳಿ ದೇವರ ಕೃಪೆಯ ಸತ್ಯಾರ್ಥವನ್ನು ತಿಳಿದುಕೊಂಡಂದಿನಿಂದ ಸುವಾರ್ತೆಯು ನಿಮ್ಮಲ್ಲಿ ವೃದ್ಧಿಯಾಗುತ್ತಿದೆ ಮತ್ತು ಜನರಿಗೆ ಆಶೀರ್ವಾದಕರವಾಗಿದೆ. ಅದೇ ರೀತಿ ಪ್ರಪಂಚದ ಎಲ್ಲಾ ಕಡೆಗಳಲ್ಲೂ ಸುವಾರ್ತೆಯು ವೃದ್ಧಿಯಾಗುತ್ತಿದೆ ಮತ್ತು ಆಶೀರ್ವಾದಕರವಾಗಿದೆ.


ದೇವರು ನಮ್ಮನ್ನು ಕ್ರಿಸ್ತನೊಂದಿಗೆ ಎಬ್ಬಿಸಿ ಆತನೊಂದಿಗೆ ಪರಲೋಕದಲ್ಲಿ ಸಿಂಹಾಸನದ ಮೇಲೆ ಕುಳ್ಳಿರಿಸಿದ್ದಾನೆ. ಕ್ರಿಸ್ತ ಯೇಸುವಿನಲ್ಲಿರುವ ನಮಗಾಗಿ ದೇವರು ಇದನ್ನು ಮಾಡಿದನು.


ಆದ್ದರಿಂದ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಪ್ರಭುವಿನೊಂದಿಗೆ ವಾಸಿಸುವುದನ್ನೇ ನಿಜವಾಗಿಯೂ ಅಪೇಕ್ಷಿಸುತ್ತೇವೆ.


ನೀತಿವಂತರಿಗೆ ದೊರೆಯುವ ಜಯಮಾಲೆಯು ಈಗ ನನಗೆ ಸಿದ್ಧವಾಗಿದೆ. ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಪ್ರಭುವೇ ನನಗೆ ಅದನ್ನು ಆ ದಿನದಂದು ಕೊಡುವನು. ನನಗೆ ಮಾತ್ರವಲ್ಲದೆ ಆತನ ಬರುವಿಕೆಯನ್ನು ಅಪೇಕ್ಷಿಸಿ ಅದಕ್ಕಾಗಿ ಕಾಯುತ್ತಿದ್ದವರಿಗೆಲ್ಲ ಆತನು ಆ ಜಯಮಾಲೆಯನ್ನು ದಯಪಾಲಿಸುವನು.


ದೇವಕುಮಾರನು ಪರಲೋಕದಿಂದ ಬರುವುದನ್ನು ಎದುರುನೋಡುವುದಕ್ಕಾಗಿ ನೀವು ಹಾಗೆ ಮಾಡಿದಿರಿ. ದೇವರೇ ಆ ಕುಮಾರನನ್ನು ಸತ್ತವರೊಳಗಿಂದ ಜೀವಂತವಾಗಿ ಮೇಲಕ್ಕೆಬ್ಬಿಸಿದನು. ಆತನೇ ಯೇಸು. ಮುಂದೆ ಬರುವ ದೇವರ ಕೋಪದ ತೀರ್ಪಿನಿಂದ ನಮ್ಮನ್ನು ರಕ್ಷಿಸುವವನು ಆತನೇ.


ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ.


ಆದರೆ ಪರಲೋಕದಲ್ಲಿರುವ ಜೆರುಸಲೇಮ್ ಸ್ವತಂತ್ರಳಾದ ಸ್ತ್ರೀಯಂತಿದೆ. ಇದೇ ನಮ್ಮ ತಾಯಿ.


ನಮ್ಮ ಮಹಾದೇವರು ಮತ್ತು ರಕ್ಷಕನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಿರುವ ನಾವು ಆ ರೀತಿಯಲ್ಲಿಯೇ ಬಾಳಬೇಕು. ಆತನೇ ನಮ್ಮ ಮಹಾ ನಿರೀಕ್ಷೆಯಾಗಿದ್ದಾನೆ. ಆತನು ತನ್ನ ಮಹಿಮೆಯೊಂದಿಗೆ ಬರುತ್ತಾನೆ.


ಹೀಗಿರಲು, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಪುನರಾಗಮನವನ್ನು ಎದುರುನೋಡುತ್ತಿರುವ ನೀವು ದೇವರಿಂದ ಬರುವ ಪ್ರತಿಯೊಂದು ವರವನ್ನು ಹೊಂದಿದವರಾಗಿದ್ದೀರಿ.


“ಗಲಿಲಾಯದವರೇ, ಏಕೆ ಆಕಾಶವನ್ನೇ ನೋಡುತ್ತಾ ನಿಂತುಕೊಂಡಿದ್ದೀರಿ? ಯೇಸು ನಿಮ್ಮ ಕಣ್ಣೆದುರಿನಲ್ಲಿ ಪರಲೋಕಕ್ಕೆ ಹೇಗೆ ಏರಿ ಹೋದನೋ ಅದೇ ರೀತಿಯಲ್ಲಿ ಹಿಂತಿರುಗಿ ಬರುತ್ತಾನೆ” ಎಂದು ಹೇಳಿದರು.


ಯೇಸು, “ನೀನು ಸಂಪೂರ್ಣನಾಗಬೇಕೆಂದಿದ್ದರೆ ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ಆಗ ನಿನಗೆ ಪರಲೋಕದಲ್ಲಿ ದೊಡ್ಡ ಭಂಡಾರ ಇರುವುದು. ನಂತರ ಬಂದು ನನ್ನನ್ನು ಹಿಂಬಾಲಿಸು!” ಎಂದು ಉತ್ತರಕೊಟ್ಟನು.


ಪ್ರಭುವು ತಾನೇ ಪರಲೋಕದಿಂದ ಇಳಿದುಬರುವನು. ಆಗ ಪ್ರಧಾನ ದೇವದೂತನು ದೇವರ ತುತೂರಿ ಧ್ವನಿಯೊಡನೆ ಆಜ್ಞಾಘೋಷ ಮಾಡುವನು. ಕೂಡಲೇ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದುಬರುವರು.


ಆಗ ನಿನಗೆ ಆಶೀರ್ವಾದ ದೊರೆಯುವುದು. ಏಕೆಂದರೆ, ಈ ಜನರು ನಿನ್ನನ್ನು ಔತಣಕ್ಕೆ ಆಮಂತ್ರಿಸಲಾರರು. ಅವರಲ್ಲಿ ಏನೂ ಇಲ್ಲ. ಆದರೆ ನೀತಿವಂತರು ಜೀವಂತವಾಗಿ ಎದ್ದುಬರುವಾಗ, ನಿನಗೆ ಪ್ರತಿಫಲ ದೊರೆಯುವುದು” ಎಂದು ಹೇಳಿದನು.


ಇಗೋ, ಯೇಸು ಮೋಡಗಳ ಸಂಗಡ ಬರುತ್ತಿದ್ದಾನೆ. ಪ್ರತಿಯೊಬ್ಬರು ಆತನನ್ನು ನೋಡುವರು, ಆತನನ್ನು ಇರಿದವರು ಸಹ ನೋಡುವರು. ಆತನನ್ನು ಕಂಡು ಲೋಕದ ಜನರೆಲ್ಲರೂ ಎದೆಬಡಿದುಕೊಂಡು ಗೋಳಾಡುವರು. ಹೌದು, ಇದು ಸಂಭವಿಸುತ್ತದೆ! ಆಮೆನ್.


ಜ್ಞಾನಿಯ ಕಾರ್ಯಗಳು ಅವನನ್ನು ಯಶಸ್ಸಿಗೆ ನಡೆಸುತ್ತವೆ; ಅವು ಅವನನ್ನು ಮರಣದ ಹಾದಿಯಿಂದ ತಪ್ಪಿಸುತ್ತವೆ.


ಒಳಿತುಕೆಡಕುಗಳಿಗಿರುವ ವ್ಯತ್ಯಾಸವನ್ನು ಅರಿತುಕೊಂಡು ಒಳ್ಳೆಯದನ್ನೇ ಆರಿಸಿಕೊಳ್ಳುವಂಥವರಾಗಬೇಕು; ಕ್ರಿಸ್ತನ ಬರುವಿಕೆಯಲ್ಲಿ ನೀವು ಪರಿಶುದ್ಧರಾಗಿಯೂ ನಿರ್ದೋಷಿಗಳಾಗಿಯೂ ಇರಬೇಕು.


ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು. ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.


ನೀನು ನನಗೆ ಜೀವಮಾರ್ಗವನ್ನು ಉಪದೇಶಿಸುವೆ. ನಿನ್ನ ಸನ್ನಿಧಿಯಲ್ಲಿದ್ದರೆ ಪರಿಪೂರ್ಣ ಸಂತೋಷವಿರುವುದು; ನಿನ್ನ ಬಲಗಡೆಯಲ್ಲಿದ್ದರೆ ಶಾಶ್ವತವಾದ ಆನಂದವಿರುವುದು.


“ತನಗೋಸ್ಕರ ಮಾತ್ರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳುವವನ ಗತಿ ಇದೇ. ದೇವರ ದೃಷ್ಟಿಯಲ್ಲಿ ಅವನು ಐಶ್ವರ್ಯವಂತನಲ್ಲ.”


ಜನರು ಭೂಮಿಗೆ ಸಂಬಂಧಪಟ್ಟವರು. ಅವರು ಭೂಮಿಯ ಮೊದಲನೆ ಮನುಷ್ಯನಂತಿದ್ದಾರೆ. ಆದರೆ ಪರಲೋಕಕ್ಕೆ ಸಂಬಂಧಪಟ್ಟವರು ಪರಲೋಕದ ಮನುಷ್ಯನಂತಿದ್ದಾರೆ.


ಅದೇನೇ ಇರಲಿ, ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ಬಾಳಿರಿ. ಆಗ ನಾನು ನಿಮ್ಮ ಬಳಿಗೆ ಬಂದರೂ ಸರಿ, ನಿಮ್ಮಿಂದ ದೂರದಲ್ಲಿದ್ದರೂ ಸರಿ, ನಿಮ್ಮ ವಿಷಯದಲ್ಲಿ ಒಳ್ಳೆಯ ಸಂಗತಿಗಳನ್ನು ಕೇಳುತ್ತೇನೆ. ನೀವು ಒಂದೇ ಉದ್ದೇಶದಿಂದ ದೃಢವಾಗಿದ್ದೀರೆಂದೂ ಸುವಾರ್ತೆಯಿಂದ ಉಂಟಾದ ನಂಬಿಕೆಗೋಸ್ಕರ ಏಕಮನಸ್ಸಿನಿಂದ ಕೆಲಸ ಮಾಡುತ್ತಿದ್ದೀರೆಂದೂ ಕೇಳುತ್ತಲೇ ಇರುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು