Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:3 - ಪರಿಶುದ್ದ ಬೈಬಲ್‌

3 ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿಜವಾದ ಸುನ್ನತಿಯವರು ಯಾರಂದರೆ - ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆ ಸುನ್ನತ್ಕಾರಿ ಕೊನ್ ಮಟ್ಲ್ಯಾರ್, ದೆವಾಚ್ಯಾ ಆತ್ಮ್ಯಾಕ್ನಾ ಪ್ರೆರಿತ್ ಹೊವ್ನ್ ಆರಾದನ್ ಕರ್‍ತಲೆ, ಕ್ರಿಸ್ತ್ ಜೆಜುಚ್ಯಾ ವಿಶಯಾತ್ ಉಮ್ಮೆದಿನ್ ರ್‍ಹಾತಲೆ, ಅನಿ ಆಂಗಾಕ್ ಸಮಂದ್ ಪಡಲ್ಲ್ಯಾ ವಿಶಯಾತ್ನಿ ಬರೊಸೊ ಕರಿನಸಲ್ಲೆ ಹೊವ್ನ್ ಹೊತ್ತೆ ಅಮಿಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:3
32 ತಿಳಿವುಗಳ ಹೋಲಿಕೆ  

ಕ್ರಿಸ್ತನಲ್ಲಿ ನೀವು ಬೇರೊಂದು ಸುನ್ನತಿಯನ್ನು ಪಡೆದಿರುವಿರಿ. ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ. ಅಂದರೆ ನಿಮ್ಮ ಪಾಪಾಧೀನಸ್ವಭಾವದಿಂದ ನಿಮಗೆ ಬಿಡುಗಡೆಯಾಯಿತು. ಇದುವೇ ಕ್ರಿಸ್ತನು ಮಾಡುವ ಸುನ್ನತಿ.


ಹಿಂದಿನ ಕಾಲದಲ್ಲಿ, ಧರ್ಮಶಾಸ್ತ್ರವು ನಮ್ಮನ್ನು ಸೆರೆಯಾಳುಗಳಂತೆ ಬಂಧಿಸಿತ್ತು. ಆದರೆ ನಮ್ಮ ಹಳೆಯ ಸ್ವಭಾವವು ಸತ್ತುಹೋದ ಕಾರಣ ನಾವು ಧರ್ಮಶಾಸ್ತ್ರದಿಂದ ಬಿಡುಗಡೆಯಾದೆವು. ಆದ್ದರಿಂದ ಈಗ ನಾವು ಲಿಖಿತ ನಿಯಮಗಳೊಡನೆ ಹಳೇ ರೀತಿಯಲ್ಲಿ ದೇವರ ಸೇವೆಮಾಡದೆ ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ದೇವರ ಸೇವೆ ಮಾಡುತ್ತೇವೆ.


ನೀವು ಮತ್ತು ನಿಮ್ಮ ಸಂತತಿಯವರು ತನಗೆ ವಿಧೇಯರಾಗುವಂತೆ ನಮ್ಮ ದೇವರಾದ ಯೆಹೋವನು ಮಾಡುತ್ತಾನೆ. ಆಗ ನೀವು ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದ ಪ್ರೀತಿಸುವಿರಿ ಮತ್ತು ಜೀವಿಸುವಿರಿ.


ನಮ್ಮ ಹೊಸ ಜೀವಿತವನ್ನು ಪವಿತ್ರಾತ್ಮನಿಂದ ಪಡೆದುಕೊಂಡಿರುವುದರಿಂದ ನಾವು ಆತನನ್ನೇ ಅನುಸರಿಸಬೇಕು.


ನಾವು ಹೊಂದಿಕೊಂಡಿರುವ ಆತ್ಮನು ನಮ್ಮನ್ನು ಮತ್ತೆ ಗುಲಾಮರನ್ನಾಗಿ ಮಾಡುವವನಲ್ಲ ಮತ್ತು ನಮ್ಮಲ್ಲಿ ಭಯವನ್ನು ಹುಟ್ಟಿಸುವವನಲ್ಲ. ನಾವು ಹೊಂದಿರುವ ಪವಿತ್ರಾತ್ಮನು ನಮ್ಮನ್ನು ದೇವರ ಮಕ್ಕಳನ್ನಾಗಿ ಮಾಡುತ್ತಾನೆ. ಈ ಆತ್ಮನ ಮೂಲಕವಾಗಿ ನಾವು, “ಅಪ್ಪಾ ತಂದೆಯೇ” ಎಂದು ಹೇಳುತ್ತೇವೆ.


ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”


ಆತನ ಪವಿತ್ರ ನಾಮದಲ್ಲಿ ಹೆಮ್ಮೆಪಡಿರಿ. ಯೆಹೋವನ ಆರಾಧಕರೇ, ಸಂತೋಷಪಡಿರಿ.


“ಆದ್ದರಿಂದ ಹಠಮಾರಿಗಳಾಗಬೇಡಿರಿ. ನಿಮ್ಮ ಹೃದಯಗಳನ್ನು ಯೆಹೋವನಿಗೆ ಕೊಡಿರಿ.


ನೀವು ಪವಿತ್ರಾತ್ಮನ ಸಹಾಯದಿಂದ ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಾ ಸಕಲವಿಧವಾದ ವಿಜ್ಞಾಪನೆಗಳನ್ನು ಮಾಡಿರಿ ಮತ್ತು ನಿಮಗೆ ಅಗತ್ಯವಾದವುಗಳಿಗಾಗಿ ಬೇಡಿಕೊಳ್ಳಿರಿ. ಇದಕ್ಕಾಗಿ ಯಾವಾಗಲೂ ಸಿದ್ಧರಾಗಿರಿ. ಪ್ರಾರ್ಥನೆಯನ್ನು ಬಿಟ್ಟುಕೊಡಬೇಡಿರಿ. ದೇವಜನರೆಲ್ಲರಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ.


ನಾನು ಈಜಿಪ್ಟ್, ಯೆಹೂದ, ಎದೋಮ್, ಅಮ್ಮೋನ್, ಮೋವಾಬ್ ಜನಾಂಗಗಳ ಜನರ ಬಗ್ಗೆ ಮತ್ತು ಮರಳು ಪ್ರದೇಶದಲ್ಲಿ ವಾಸಮಾಡುತ್ತಿರುವ ಎಲ್ಲಾ ಜನಗಳ ಬಗ್ಗೆ ಮಾತನಾಡುತ್ತಿದ್ದೇನೆ. ಈ ಎಲ್ಲಾ ದೇಶಗಳ ಜನರಿಗೆ ದೈಹಿಕವಾಗಿ ಸುನ್ನತಿ ಆಗಿದ್ದಿಲ್ಲ. ಆದರೆ ಇಸ್ರೇಲ್ ವಂಶದವರು ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ಅನ್ನುತ್ತಾನೆ.


ನಾನು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಖಂಡಿತವಾಗಿ ಜ್ಞಾಪಿಸಿಕೊಳ್ಳುತ್ತೇನೆ. ಇದು ಸತ್ಯವೆಂದು ದೇವರಿಗೆ ಗೊತ್ತಿದೆ. ದೇವರ ಮಗನ ವಿಷಯವಾದ ಸುವಾರ್ತೆಯನ್ನು ಜನರಿಗೆ ಸಾರುವುದರ ಮೂಲಕ ನಾನು ದೇವರನ್ನು ನನ್ನ ಆತ್ಮದಲ್ಲಿ ಆರಾಧಿಸುವವನಾಗಿದ್ದೇನೆ. ದೇವರ ಚಿತ್ತದಿಂದ, ನಿಮ್ಮ ಬಳಿಗೆ ಬರಲು ಅವಕಾಶವಾಗಬೇಕೆಂದು ಪ್ರಾರ್ಥಿಸುತ್ತೇನೆ.


“ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಇಸ್ರೇಲರು ಧರ್ಮದಲ್ಲಿ ನಡೆಯುವಂತೆ ಯೆಹೋವನು ಮಾಡುವನು. ಜನರು ಯೆಹೋವನ ಬಗ್ಗೆ ಬಹಳವಾಗಿ ಹೆಚ್ಚಳಪಡುವರು.


ಆದರೆ ಪ್ರಿಯ ಸ್ನೇಹಿತರೇ, ನೀವು ನಿಮ್ಮ ಅತಿಪರಿಶುದ್ಧ ನಂಬಿಕೆಯ ಮೂಲಕ ದೃಢವಾಗಿರಿ. ಪವಿತ್ರಾತ್ಮಭರಿತರಾಗಿ ಪ್ರಾರ್ಥಿಸಿರಿ.


ಆದ್ದರಿಂದ ಕ್ರಿಸ್ತ ಯೇಸುವಿನಲ್ಲಿ ನಾನು ದೇವರಿಗೋಸ್ಕರ ಮಾಡುವ ಕಾರ್ಯಗಳ ಬಗ್ಗೆ ಹೆಮ್ಮೆಪಡುತ್ತೇನೆ.


ಹೌದು, ನಾನು ಯೆಹೂದ್ಯರ ವಿಷಯದಲ್ಲಿ ದುಃಖಿಸುತ್ತೇನೆ. ದೇವರು ತನ್ನ ವಾಗ್ದಾನವನ್ನು ನೆರವೇರಿಸುವುದರಲ್ಲಿ ವಿಫಲನಾದನೆಂದು ನಾನು ಹೇಳುತ್ತಿಲ್ಲ. ಏಕೆಂದರೆ ಇಸ್ರೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ.


ಅನೇಕ ಜನರು ತಮ್ಮ ಪ್ರಾಪಂಚಿಕ ಜೀವನದ ಬಗ್ಗೆ ಹೊಗಳಿಕೊಳ್ಳುತ್ತಿದ್ದಾರೆ. ಆದ್ದರಿಂದ ನಾನು ಸಹ ಹೊಗಳಿಕೊಳ್ಳುತ್ತೇನೆ.


ಈ ನಿಯಮವನ್ನು ಅನುಸರಿಸುವವರಿಗೆಲ್ಲ, ಅಂದರೆ ನಿಜ ಇಸ್ರೇಲರಾದ ದೇವ ಜನರಿಗೆಲ್ಲ ಶಾಂತಿಯೂ ಕರುಣೆಯೂ ಆಗಲಿ.


ಯೇಸು ಕ್ರಿಸ್ತನ ದಾಸರಾದ ಪೌಲನು ತಿಮೊಥೆಯನು ಫಿಲಿಪ್ಪಿಯವರಿಗೆ ಬರೆಯುವ ಪತ್ರ. ಯೇಸು ಕ್ರಿಸ್ತನ ಮೂಲಕ ದೇವರ ಪರಿಶುದ್ಧ ಜನರಾಗಿರುವವರಿಗೂ ಎಲ್ಲಾ ಹಿರಿಯರಿಗೂ ಸಭಾಸೇವಕರಿಗೂ ನಾವು ಈ ಪತ್ರವನ್ನು ಬರೆಯತ್ತಿದ್ದೇವೆ.


ಈಗಾಗಲೇ ನಾನು ಇದೆಲ್ಲವನ್ನು ಸಾಧಿಸಿ ಪರಿಪೂರ್ಣತೆಯನ್ನು ಗಳಿಸಿದ್ದೇನೆ ಎಂದು ಹೇಳುತ್ತಿಲ್ಲ. ನಾನು ಆ ಗುರಿಯನ್ನು ಇನ್ನೂ ಮುಟ್ಟಿಲ್ಲ. ಆದರೆ ಆ ಗುರಿಯನ್ನು ಮುಟ್ಟಿ ಅದನ್ನು ನನ್ನದಾಗಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಇದು ಕ್ರಿಸ್ತನ ಅಪೇಕ್ಷೆ. ಆದಕಾರಣವೇ, ಕ್ರಿಸ್ತನು ನನ್ನನ್ನು ತನ್ನವನನ್ನಾಗಿ ಮಾಡಿಕೊಂಡನು.


ದೇವರು ನಮ್ಮನ್ನು ಕ್ರಿಸ್ತನ ಮೂಲಕ ಮೇಲೋಕದ ಜೀವಿತಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು