Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:6 - ಪರಿಶುದ್ದ ಬೈಬಲ್‌

6 ಯೆಹೂದ್ಯ ಧರ್ಮದಲ್ಲಿ ಬಹಳ ಆಸಕ್ತಿಯುಳ್ಳವನಾಗಿದ್ದು ಕ್ರೈಸ್ತಸಭೆಯನ್ನು (ವಿಶ್ವಾಸಿಗಳನ್ನು) ಹಿಂಸಿಸಿದೆನು. ಮೋಶೆಯ ಧರ್ಮಶಾಸ್ತ್ರಕ್ಕೆ ಯಾವಾಗಲೂ ವಿಧೇಯನಾಗಿದ್ದುದರಿಂದ ಯಾರೂ ನನ್ನ ವಿಷಯದಲ್ಲಿ ತಪ್ಪನ್ನು ಕಂಡುಹಿಡಿಯಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತ ಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಧರ್ಮಶಾಸ್ತ್ರದ ದೃಷ್ಟಿಯಲ್ಲಿ ನಿಷ್ಠಾವಂತ ಫರಿಸಾಯನು; ಮತಾಶಕ್ತಿಯ ಹಿತದೃಷ್ಟಿಯಿಂದ ಧರ್ಮಸಭೆಯ ಹಿಂಸಕನು; ಧರ್ಮಶಾಸ್ತ್ರ ವಿಧಿನಿಯಮಗಳ ಪಾಲನೆಯಲ್ಲಿ ನಿಂದಾರಹಿತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಸಕ್ತಿಯನ್ನು ನೋಡಿದರೆ, ನಾನು ಸಭೆಯ ಹಿಂಸಕನು; ಮೋಶೆಯ ನಿಯಮದಲ್ಲಿರುವ ನೀತಿಯ ಅನುಸಾರವಾಗಿ ನಾನು ನಿರ್ದೋಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಮತಾಸಕ್ತಿ ಬಗಟ್ಲ್ಯಾರ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ತರಾಸ್ ದಿತಲೊ, ಖಾಯ್ದ್ಯಾಂಚ್ಯಾ ಪುಸ್ತಾಕಾತ್ ಸಾಂಗಲ್ಲಿ ನಿತ್ ಬಗಟ್ಲ್ಯಾರ್, ಮಿಯಾ ಕಾಯ್ ಚುಕ್ ಕರುಕ್ ನತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:6
25 ತಿಳಿವುಗಳ ಹೋಲಿಕೆ  

ಧರ್ಮೋಪದೇಶಕರಿಗಿಂತಲೂ ಫರಿಸಾಯರಿಗಿಂತಲೂ ನೀವು ಉತ್ತಮವಾದದ್ದನ್ನು ಮಾಡಬೇಕು. ಇಲ್ಲವಾದರೆ ನೀವು ಪರಲೋಕರಾಜ್ಯವನ್ನು ಪ್ರವೇಶಿಸಲಾರಿರಿ.


ಮೊದಲು, ನಾನು ಕ್ರಿಸ್ತನ ವಿರುದ್ಧ ಮಾತನಾಡಿದ್ದೆನು. ಆತನನ್ನು ಹಿಂಸಿಸಿದ್ದೆನು. ಆತನಿಗೆ ನೋವಾಗುವಂಥ ಕಾರ್ಯಗಳನ್ನು ಮಾಡಿದ್ದೆನು. ಆದರೆ ನಾನೇನು ಮಾಡುತ್ತಿದ್ದೇನೆಂಬುದು ನನಗೆ ತಿಳಿದಿರಲಿಲ್ಲವಾದ್ದರಿಂದ ದೇವರು ನನಗೆ ಕರುಣೆ ತೋರಿದನು. ನಂಬದಿರುವಾಗ ನಾನು ಅವುಗಳನ್ನು ಮಾಡಿದೆನು.


ನಾನು ಕ್ರಿಸ್ತನನ್ನು ಹೊಂದಿಕೊಳ್ಳಲು ಮತ್ತು ಕ್ರಿಸ್ತನಲ್ಲಿರಲು ಇದು ನನಗೆ ಅವಕಾಶ ಮಾಡಿಕೊಡುತ್ತದೆ. ನಾನು ಕ್ರಿಸ್ತನ ಮೂಲಕ ನೀತಿವಂತನಾಗಿದ್ದೇನೆ. ಈ ನೀತಿಯು, ಧರ್ಮಶಾಸ್ತ್ರವನ್ನು ಅನುಸರಿಸಿದ ಮಾತ್ರಕ್ಕೆ ದೊರೆಯುವುದಿಲ್ಲ. ಇದು ನಂಬಿಕೆಯ ಮೂಲಕ ದೇವರಿಂದ ಬರುತ್ತದೆ. ಕ್ರಿಸ್ತನಲ್ಲಿ ನನಗಿರುವ ನಂಬಿಕೆಯ ಮೂಲಕ ದೇವರು ನನ್ನನ್ನು ನೀತಿವಂತನನ್ನಾಗಿ ಮಾಡಿದನು.


ಉಳಿದೆಲ್ಲಾ ಅಪೊಸ್ತಲರು ನನಗಿಂತಲೂ ಶ್ರೇಷ್ಠರಾಗಿದ್ದಾರೆ. ಇದಕ್ಕೆ ಕಾರಣವೇನೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು. ಆದ್ದರಿಂದ ಅಪೊಸ್ತಲನೆಂದು ಕರೆಸಿಕೊಳ್ಳುವುದಕ್ಕೂ ನಾನು ಯೋಗ್ಯನಲ್ಲ.


ನಾನು ಧರ್ಮಶಾಸ್ತ್ರವನ್ನು ತಿಳಿದುಕೊಳ್ಳುವುದಕ್ಕಿಂತ ಮೊದಲು ಧರ್ಮಶಾಸ್ತ್ರವಿಲ್ಲದವನಾಗಿ ಜೀವಂತವಾಗಿದ್ದೆನು. ಆದರೆ ಧರ್ಮಶಾಸ್ತ್ರದ ಆಜ್ಞೆಯು ನನ್ನ ಬಳಿಗೆ ಬಂದಾಗ, ಪಾಪವು ಜೀವಿಸತೊಡಗಿತು.


ಈ ಯೆಹೂದ್ಯರು ಬಹುಕಾಲದಿಂದಲೂ ನನ್ನನ್ನು ತಿಳಿದಿದ್ದಾರೆ. ನೀನು ಅವರನ್ನು ಕೇಳುವುದಾದರೆ, ನಾನು ಒಳ್ಳೆಯ ಫರಿಸಾಯನಾಗಿದ್ದೆನೆಂದು ಅವರು ನಿನಗೆ ಹೇಳಬಲ್ಲರು. ಯೆಹೂದ್ಯರ ಇತರ ಯಾವುದೇ ಪಂಗಡಗಿಳಿಗಿಂತಲೂ ಹೆಚ್ಚು ಎಚ್ಚರಿಕೆಯಿಂದ ಫರಿಸಾಯರು ಯೆಹೂದ್ಯ ಧರ್ಮದ ಕಟ್ಟೆಳೆಗಳಿಗೆ ವಿಧೇಯರಾಗುತ್ತಾರೆ.


ಈ ಸಂಗತಿಗಳನ್ನು ಕೇಳಿದ ಹಿರಿಯರು ದೇವರನ್ನು ಕೊಂಡಾಡಿದರು. ಬಳಿಕ ಅವರು ಪೌಲನಿಗೆ, “ಸಹೋದರನೇ, ವಿಶ್ವಾಸಿಗಳಿಗಾಗಿ ಪರಿವರ್ತನೆಗೊಂಡಿರುವ ಸಾವಿರಾರು ಮಂದಿ ಯೆಹೂದ್ಯರನ್ನು ನೀನು ಇಲ್ಲಿ ಕಾಣಬಹುದು. ಆದರೆ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗುವುದು ಬಹಳ ಮುಖ್ಯವೆಂಬುದು ಇವರ ಆಲೋಚನೆ.


ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ನಿಮ್ಮ ಪಾತ್ರೆ ಬಟ್ಟಲುಗಳ ಹೊರಭಾಗವನ್ನು ತೊಳೆದು ಸ್ವಚ್ಛಮಾಡುತ್ತೀರಿ. ಆದರೆ ಅವುಗಳ ಒಳಭಾಗವು ಮೋಸದಿಂದಲೂ ನಿಮಗೆ ತೃಪ್ತಿ ನೀಡುವ ಪದಾರ್ಥಗಳಿಂದಲೂ ತುಂಬಿವೆ.


ಯೇಹು, “ನನ್ನ ಸಂಗಡ ಬಾ. ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೀನು ನೋಡುವಿಯಂತೆ” ಎಂದು ಹೇಳಿದನು. ಯೇಹುವಿನ ರಥದಲ್ಲಿ ಯೆಹೋನಾದಾಬನೂ ಹೋದನು.


(ಗಿಬ್ಯೋನ್ಯರು ಇಸ್ರೇಲರಲ್ಲ, ಅವರು ಇನ್ನೂ ಜೀವಂತವಾಗಿ ಉಳಿದಿರುವ ಅಮೋರಿಯರ ಕುಟುಂಬದವರು. ಗಿಬ್ಯೋನ್ಯರನ್ನು ಹಿಂಸಿಸುವುದಿಲ್ಲವೆಂದು ಇಸ್ರೇಲರು ಪ್ರಮಾಣ ಮಾಡಿದ್ದರು. ಆದರೆ ಸೌಲನು ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ಹೆಚ್ಚಿನ ಅಭಿಮಾನವನ್ನಿಟ್ಟಿದ್ದನು. ಆದ್ದರಿಂದ ಅವನು ಗಿಬ್ಯೋನ್ಯರನ್ನು ಕೊಲ್ಲಲು ಪ್ರಯತ್ನಿಸಿದನು.) ರಾಜನಾದ ದಾವೀದನು ಗಿಬ್ಯೋನ್ಯರನ್ನು ಒಟ್ಟಾಗಿ ಕರೆದು ಅವರೊಂದಿಗೆ ಮಾತನಾಡಿದನು.


ಆದ್ದರಿಂದ ನೀನು ನಿನ್ನನ್ನೇ ಯಾಕೆ ನಾಶಮಾಡಿಕೊಳ್ಳುವೆ? ಬಹಳ ನೀತಿವಂತನಾಗಿಯೂ ಇರಬೇಡ; ಬಹಳ ಕೆಟ್ಟವನಾಗಿಯೂ ಇರಬೇಡ. ಬಹು ಜ್ಞಾನಿಯಾಗಿಯೂ ಇರಬೇಡ; ಬಹು ಮೂಢನಾಗಿಯೂ ಇರಬೇಡ. ನಿನ್ನ ಕಾಲಕ್ಕಿಂತ ಮೊದಲೇ ನೀನು ಯಾಕೆ ಸಾಯಬೇಕು?


“ಇದು ಸತ್ಯವೆಂಬುದಕ್ಕೆ ಪ್ರಧಾನಯಾಜಕರು ಮತ್ತು ಯೆಹೂದ್ಯರ ಹಿರೀನಾಯಕರ ಸಭೆಯವರೆಲ್ಲರು ಸಾಕ್ಷಿಗಳಾಗಿದ್ದಾರೆ. ಒಂದು ಸಲ, ಈ ನಾಯಕರು ನನಗೆ ಕೆಲವು ಪತ್ರಗಳನ್ನು ಕೊಟ್ಟರು. ದಮಸ್ಕ ಪಟ್ಟಣದಲ್ಲಿನ ಯೆಹೂದ್ಯ ಸಹೋದರರಿಗೆ ಆ ಪತ್ರಗಳನ್ನು ಬರೆಯಲಾಗಿತ್ತು. (ಯೇಸುವಿನ) ಶಿಷ್ಯರನ್ನು ಬಂಧಿಸಿ ದಂಡಿಸುವುದಕ್ಕಾಗಿ ಅವರನ್ನು ಜೆರುಸಲೇಮಿಗೆ ಎಳೆದುಕೊಂಡು ಬರಲು ನಾನು ಅಲ್ಲಿಗೆ ಹೋಗುತ್ತಿದ್ದೆ.


ಇತರ ಜನರು ಅಂದರೆ ಯೆಹೂದ್ಯರಾಗಲಿ ಗ್ರೀಕರಾಗಲಿ ಅಥವಾ ದೇವರ ಸಭೆಯವರಾಗಲಿ ತಪ್ಪುಮಾಡಲು ಕಾರಣವಾಗುವಂಥದ್ದನ್ನು ನೀವೆಂದಿಗೂ ಮಾಡಬೇಡಿರಿ.


ಆಗ ಮುಗ್ಧರೂ ಪರಿಶುದ್ಧರೂ ಆಗಿದ್ದು ಕಳಂಕರಹಿತವಾದ ದೇವಮಕ್ಕಳಾಗಿರುತ್ತೀರಿ. ದುಷ್ಟಜನರ ಮಧ್ಯದಲ್ಲಿ ವಾಸವಾಗಿರುವ ನೀವು ಕಾರ್ಗತ್ತಲೆಯಲ್ಲಿ ಪ್ರಕಾಶಿಸುವ ನಕ್ಷತ್ರಮಂಡಲದಂತಿದ್ದೀರಿ.


“ಹಸಿಯಾದ ಚರ್ಮವು ಬದಲಾಗಿ ಬಿಳಿಯಾದರೆ, ಆಗ ಆ ವ್ಯಕ್ತಿ ಯಾಜಕನ ಬಳಿಗೆ ಬರಬೇಕು.


ನಗರದ ಜನರು ಯೋವಾಷನಲ್ಲಿಗೆ ಬಂದು ಯೋವಾಷನಿಗೆ, “ನೀನು ನಿನ್ನ ಮಗನನ್ನು ಹೊರಗೆ ಕರೆದುಕೊಂಡು ಬಾ. ಅವನು ಬಾಳನ ಯಜ್ಞವೇದಿಕೆಯನ್ನು ಕೆಡವಿದ್ದಾನೆ. ಆ ಯಜ್ಞವೇದಿಕೆಯ ಪಕ್ಕದಲ್ಲಿದ್ದ ಅಶೇರಸ್ತಂಭವನ್ನು ಕಡಿದುಹಾಕಿದ್ದಾನೆ. ಅವನನ್ನು ನಾವು ಕೊಂದು ಬಿಡುತ್ತೇವೆ” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು