Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:7 - ಪರಿಶುದ್ದ ಬೈಬಲ್‌

7 ಒಂದು ಕಾಲದಲ್ಲಿ ಇವುಗಳೆಲ್ಲ ನನಗೆ ಮುಖ್ಯವಾಗಿದ್ದವು. ಆದರೆ ಈಗ ಅವುಗಳೆಲ್ಲ ಕ್ರಿಸ್ತನ ದೆಸೆಯಿಂದ ನಿಷ್ಪ್ರಯೋಜಕವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ, ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇವನ್ನೆಲ್ಲಾ ಲಾಭವೆಂದು ಪರಿಗಣಿಸಿದ್ದ ನಾನು ಈಗ ಕ್ರಿಸ್ತಯೇಸುವಿನ ಸಲುವಾಗಿ ನಷ್ಟವೆಂದೇ ಎಣಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿವಿುತ್ತ ನಷ್ಟವೆಂದೆಣಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನನಗೆ ಲಾಭವಾಗಿದ್ದ ಎಲ್ಲವನ್ನೂ ಈಗ ನಾನು ಕ್ರಿಸ್ತನ ನಿಮಿತ್ತ ನಷ್ಟವೆಂದು ಎಣಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ಮಾಕಾ ಫಾಯ್ದೊ ಹೊಲ್ಲೆ ಸಗ್ಳೆಬಿ ಕ್ರಿಸ್ತಾಚ್ಯಾ ಸಾಟ್ನಿ ಲುಕ್ಷಾನ್ ಮನುನ್ ಚಿಂತುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:7
20 ತಿಳಿವುಗಳ ಹೋಲಿಕೆ  

“ಅದೇರೀತಿಯಲ್ಲಿ ನೀವೆಲ್ಲರೂ ಮೊದಲು ಯೋಜನೆ ಮಾಡಬೇಕು. ನೀವು ನನ್ನನ್ನು ಹಿಂಬಾಲಿಸಬೇಕೆಂದಿದ್ದರೆ ನಿಮ್ಮಲ್ಲಿರುವ ಪ್ರತಿಯೊಂದನ್ನೂ ತ್ಯಜಿಸಿಬಿಡಬೇಕು. ಇಲ್ಲವಾದರೆ, ನನ್ನ ಶಿಷ್ಯರಾಗಲು ಸಾಧ್ಯವಿಲ್ಲ!


ಒಬ್ಬನು ಪ್ರಪಂಚವನ್ನೆಲ್ಲಾ ಗಳಿಸಿಕೊಂಡು ತನ್ನ ಆತ್ಮವನ್ನೇ ಕಳೆದುಕೊಂಡರೆ ಅದರಿಂದ ಅವನಿಗೇನು ಪ್ರಯೋಜನ? ಮನುಷ್ಯನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಏನನ್ನು ತಾನೇ ಕೊಡಬಲ್ಲನು?


“ನನ್ನ ಬಳಿಗೆ ಬರುವವನು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ತನ್ನ ತಂದೆತಾಯಿಗಳನ್ನು, ಹೆಂಡತಿಯನ್ನು, ಮಕ್ಕಳನ್ನು, ಸಹೋದರ ಸಹೋದರಿಯರನ್ನು ಮತ್ತು ತನ್ನನ್ನು ಪ್ರೀತಿಸುವುದಾದರೆ, ಅವನು ನನ್ನ ಶಿಷ್ಯನಾಗಿರಲು ಸಾಧ್ಯವಿಲ್ಲ.


ಐಶ್ವರ್ಯವಂತರು ತಮ್ಮ ಜೀವವನ್ನು ಕಾಪಾಡಿಕೊಳ್ಳಲು ಈಡುಕೊಡಬೇಕಾಗುವುದು. ಆದರೆ ಬಡವನಿಗೆ ಅಂಥಾ ಯಾವ ಬೆದರಿಕೆಗಳೂ ಇರುವುದಿಲ್ಲ.


ಅವರು ನಗರದ ಹೊರಕ್ಕೆ ಬಂದ ಮೇಲೆ ಆ ಪುರುಷರಲ್ಲಿ ಒಬ್ಬನು, “ಈಗ ಓಡಿಹೋಗಿ ನಿಮ್ಮ ಪ್ರಾಣವನ್ನು ಕಾಪಾಡಿಕೊಳ್ಳಿ; ನಗರದ ಕಡೆಗೆ ತಿರುಗಿ ನೋಡಬೇಡಿ; ಕಣಿವೆಯ ಯಾವ ಸ್ಥಳದಲ್ಲೂ ನಿಂತುಕೊಳ್ಳಬೇಡಿ; ತಪ್ಪಿಸಿಕೊಂಡು ಬೆಟ್ಟಗಳಿಗೆ ಓಡಿಹೋಗಿರಿ; ಇಲ್ಲವಾದರೆ, ಈ ನಗರದೊಡನೆ ನೀವೂ ನಾಶವಾಗುವಿರಿ” ಎಂದು ಹೇಳಿದನು.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ! ಎಂಬಂತೆ ಮನುಷ್ಯನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ತನ್ನ ಸರ್ವಸ್ವವನ್ನೂ ಕೊಡುವನು.


“ಬಳಿಕ ಯಜಮಾನನು ಮೋಸಗಾರನಾದ ಮೇಲ್ವಿಚಾರಕನಿಗೆ, ‘ನೀನು ಜಾಣತನ ಮಾಡಿದೆ’ ಎಂದು ಹೇಳಿದನು. ಹೌದು, ಲೌಕಿಕ ಜನರು ತಮ್ಮ ಜನರೊಡನೆ ವ್ಯಾಪಾರದಲ್ಲಿ ದೈವಿಕ ಜನರಿಗಿಂತಲೂ ಜಾಣರಾಗಿದ್ದಾರೆ.


ಸತ್ಯವನ್ನು ಕೊಂಡುಕೊ; ಅದನ್ನು ಮಾರಬೇಡ. ಜ್ಞಾನ, ಸುಶಿಕ್ಷೆ ಮತ್ತು ವಿವೇಕವನ್ನು ಕೊಂಡುಕೊ. ಇವು ಖರೀದಿಗೆ ಯೋಗ್ಯವಾದವುಗಳೂ ಮಾರಲಾಗದಷ್ಟು ಅಮೂಲ್ಯವಾದವುಗಳೂ ಆಗಿವೆ.


ಅವರು ಓಡಿಹೋಗುತ್ತಿರುವಾಗ ಲೋಟನ ಹೆಂಡತಿ ನಗರದ ಕಡೆಗೆ ಹಿಂತಿರುಗಿ ನೋಡಿದಳು. ಆ ಕೂಡಲೇ ಆಕೆಯು ಉಪ್ಪಿನ ಕಂಬವಾದಳು.


ನಾವು ತೃಪ್ತಿಯಾಗುವಷ್ಟು ತಿಂದೆವು. ಬಳಿಕ ದವಸವನ್ನು ಸಮುದ್ರಕ್ಕೆ ಎಸೆದು ಹಡಗನ್ನು ಹಗುರಗೊಳಿಸಿದೆವು.


ಈಜಿಪ್ಟಿನ ಭಂಡಾರವನ್ನೆಲ್ಲ ಪಡೆಯುವುದಕ್ಕಿಂತ ಕ್ರಿಸ್ತನಿಗಾಗಿ ಸಂಕಟವನ್ನು ಅನುಭವಿಸುವುದು ಶ್ರೇಯಸ್ಕರವೆಂದು ಅವನು ಭಾವಿಸಿದನು. ದೇವರು ತನಗೆ ನೀಡುವ ಪ್ರತಿಫಲಕ್ಕಾಗಿ ಅವನು ಕಾಯುತ್ತಿದ್ದನು.


ಹುಡುಕುವ ಸಮಯ, ಹುಡುಕದಿರುವ ಸಮಯ. ವಸ್ತುಗಳನ್ನು ಇಟ್ಟುಕೊಳ್ಳುವ ಸಮಯ, ವಸ್ತುಗಳನ್ನು ಬಿಸಾಡುವ ಸಮಯ.


ಆ ಕುರುಡನು ಕೂಡಲೇ ಎದ್ದುನಿಂತು ತನ್ನ ಹೊದಿಕೆಯನ್ನು ಅಲ್ಲಿಯೇ ಬಿಟ್ಟು ಯೇಸುವಿನ ಬಳಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು