Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:12 - ಪರಿಶುದ್ದ ಬೈಬಲ್‌

12 ಹಸಿವೆಯಿಂದಿರುವಾಗಲೂ ಸಮೃದ್ಧಿಯುಳ್ಳವನಾಗಿರುವಾಗಲೂ ಹೇಗೆ ಜೀವಿಸಬೇಕೆಂಬುದು ನನಗೆ ತಿಳಿದಿದೆ. ಯಾವ ಸಮಯದಲ್ಲಾಗಲಿ ಯಾವ ಪರಿಸ್ಥಿತಿಯಲ್ಲಾಗಲಿ ಸಂತೋಷದಿಂದಿರುವ ಗುಟ್ಟು ನನಗೆ ತಿಳಿದಿದೆ. ಊಟಕ್ಕೆ ಬೇಕಾದಷ್ಟು ಇರುವಾಗಲೂ ಇಲ್ಲದಿರುವಾಗಲೂ ನನಗೆ ಅಗತ್ಯವಾದವುಗಳನ್ನು ಹೊಂದಿರುವಾಗಲೂ ಹೊಂದಿಲ್ಲದಿರುವಾಗಲೂ ಸಂತೋಷವಾಗಿರಲು ಕಲಿತುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬಡತನ ಇರಲಿ, ಸಿರಿತನವಿರಲಿ, ಕೊರತೆಯಿರಲಿ, ಸಮೃದ್ಧಿ ಇರಲಿ, ಹಸಿದಿರಲಿ, ಹೊಟ್ಟೆ ತುಂಬಿರಲಿ - ಯಾವ ಸ್ಥಿತಿಯಲ್ಲಿದ್ದರೂ, ಎಲ್ಲಾ ವೇಳೆಯಲ್ಲಿಯೂ ತೃಪ್ತನಾಗಿರುವ ರಹಸ್ಯವನ್ನು ತಿಳಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ, ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕೊರತೆಯಲ್ಲಾಗಲಿ, ಸಮೃದ್ಧಿಯಲ್ಲಾಗಲಿ ಹೇಗೆ ಜೀವಿಸಬೇಕೆಂಬ ಅನುಭವವನ್ನು ತಿಳಿದುಕೊಂಡಿದ್ದೇನೆ. ಚೆನ್ನಾಗಿ ಊಟಮಾಡಿರಲಿ, ಹಸಿವೆಯಿಂದಿರಲಿ, ಸಮೃದ್ಧಿಯುಳ್ಳವನಾಗಿರಲಿ, ಕೊರತೆಯುಳ್ಳವನಾಗಿರಲಿ, ಯಾವುದೇ ಪರಿಸ್ಥಿತಿಯಲ್ಲಿದ್ದರೂ ಎಲ್ಲಾ ಪರಿಸ್ಥಿತಿಗಳಲ್ಲಿ ತೃಪ್ತನಾಗಿರುವ ರಹಸ್ಯವನ್ನು ಕಲಿತುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಗರಿಬ್ ಹೊವ್ನ್ ರಾತಲೆಬಿ ಮಾಕಾ ಗೊತ್ತ್ ಹಾಯ್, ಸಾವ್ಕಾರ್ ಹೊವ್ನ್ ರಾತಲೆಬಿ ಮಾಕಾ ಗೊತ್ತ್ ಹಾಯ್, ಮಿಯಾ ಸಗ್ಳೆ ಹೊತ್ತೊ ಹೊವ್ನ್ ನಾ ತರ್ ಗರಿಬ್ ಹೊವ್ನ್ ಭುಕೆನ್ ರಾತಲೆಬಿ ಅನಿ ಸಾವ್ಕಾರ್ ಹೊವ್ನ್ ರ್‍ಹಾಲ್ಯಾರ್‍ಬಿ ಕಾಯ್ ನತ್ತೊ ಹೊವ್ನ್ ರ್‍ಹಾಲ್ಯಾರ್‍ಬಿ ಮಿಯಾ ತೆ ಸಗ್ಳೆ ಶಿಕುನ್ ಘೆಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:12
15 ತಿಳಿವುಗಳ ಹೋಲಿಕೆ  

ನನ್ನ ನೊಗಕ್ಕೆ ಹೆಗಲು ಕೊಟ್ಟು ನನ್ನಿಂದ ಕಲಿತುಕೊಳ್ಳಿರಿ. ನಾನು ಸಾತ್ವಿಕನೂ ದೀನನೂ ಆಗಿರುವುದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.


ಕಷ್ಟಕರವಾದ ಮತ್ತು ಅಪಾಯಕರವಾದ ಕೆಲಸಗಳನ್ನು ಮಾಡಿದ್ದೇನೆ. ಕೆಲವು ಸಲ ನಿದ್ರಿಸಲೂ ಇಲ್ಲ. ಹಸಿವೆ ಬಾಯಾರಿಕೆಗಳಿಂದ ಕಷ್ಟಪಟ್ಟಿದ್ದೇನೆ. ಅನೇಕಸಲ ನನಗೆ ಊಟ ಇರಲಿಲ್ಲ. ಚಳಿಯಿಂದ ನಡುಗುತ್ತಿದ್ದರೂ ಬಟ್ಟೆಯಿರಲಿಲ್ಲ.


ನಾನು ನಿಮ್ಮಲ್ಲಿದ್ದಾಗ ನನ್ನ ಯಾವ ಕೊರತೆಯಲ್ಲಿಯೂ ನಿಮಗೆ ತೊಂದರೆ ಕೊಡಲಿಲ್ಲ. ಮಕೆದೋನಿಯದಿಂದ ಬಂದಿದ್ದ ಸಹೋದರರು ನನಗೆ ಬೇಕಾಗಿದ್ದದ್ದನ್ನೆಲ್ಲ ಕೊಟ್ಟರು. ನಾನು ನಿಮಗೆ ಯಾವ ರೀತಿಯಲ್ಲಿಯೂ ಭಾರವಾಗದಂತೆ ನೋಡಿಕೊಂಡೆನು. ಇನ್ನು ಮುಂದೆಯೂ ನಾನು ನಿಮಗೆ ಭಾರವಾಗಿರುವುದಿಲ್ಲ.


“ಮರುಭೂಮಿಯಲ್ಲಿ ಯೆಹೋವನು ಇಸ್ರೇಲನನ್ನು ಕಂಡನು. ಅದು ಬರಿದಾದ ಗಾಳಿ ಬೀಸುತ್ತಿದ್ದ ಸ್ಥಳವಾಗಿತ್ತು. ಯೆಹೋವನು ಅದನ್ನು ಸುತ್ತುವರಿದು ಇಸ್ರೇಲನ್ನು ಸಂರಕ್ಷಿಸಿದನು; ತನ್ನ ಕಣ್ಣುಗುಡ್ಡೆಯಂತೆ ಅವರನ್ನು ಕಾಪಾಡಿದನು.


ಯೆಹೋವನು ತನ್ನ ಮಹಾಶಕ್ತಿಯಿಂದ ನನ್ನೊಡನೆ ಮಾತನಾಡಿದನು. ನಾನು ಇತರರಂತೆ ಇರಬಾರದೆಂದು ಯೆಹೋವನು ನನ್ನನ್ನು ಎಚ್ಚರಿಸಿದನು. ಆತನು ನನಗೆ,


ನಾನು ನಿಮಗೆ ದೇವರ ಸುವಾರ್ತೆಯನ್ನು ಉಚಿತವಾಗಿ ಬೋಧಿಸಿದೆನು. ನಿಮ್ಮನ್ನು ಪ್ರಮುಖರನ್ನಾಗಿ ಮಾಡಲು ನನ್ನನ್ನು ತಗ್ಗಿಸಿಕೊಂಡೆನು. ಅದು ತಪ್ಪೆಂದು ಭಾವಿಸುತ್ತೀರೋ?


“ಪೌಲನ ಪತ್ರಗಳು ಬಲಯುತವಾಗಿವೆ ಮತ್ತು ಪ್ರಾಮುಖ್ಯವಾಗಿವೆ, ಆದರೆ ಅವನು ನಮ್ಮೊಂದಿಗಿರುವಾಗ ಬಲಹೀನನಾಗಿರುತ್ತಾನೆ, ಅವನ ಮಾತುಗಳು ನಿಸ್ಸಾರವಾಗಿರುತ್ತವೆ” ಎಂದು ಕೆಲವರು ಹೇಳುತ್ತಾರೆ.


ಪೌಲನಾದ ನಾನು ಕ್ರಿಸ್ತನ ಮೃದುಸ್ವಭಾವದಿಂದಲೂ ಕನಿಕರದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ನಾನು ನಿಮ್ಮೊಂದಿಗಿರುವಾಗ ದೀನನಾಗಿರುತ್ತೇನೆಂದೂ, ನಿಮ್ಮಿಂದ ದೂರದಲ್ಲಿರುವಾಗ ಧೀರನಾಗಿರುತ್ತೇನೆಂದೂ ಕೆಲವರು ಹೇಳುತ್ತಾರೆ.


ಯೆಹೋವನೇ, ನಾನು ನಿನಗೆ ದೂರವಾಗಿ ಅಲೆದಾಡಿದೆನು. ಆದರೆ ನಾನು ಮಾಡಿದ ದುಷ್ಕೃತ್ಯಗಳ ಬಗ್ಗೆ ತಿಳಿದುಕೊಂಡೆನು. ಆದ್ದರಿಂದ ನಾನು ನನ್ನ ಮನಸ್ಸನ್ನೂ ಜೀವನವನ್ನೂ ಪರಿವರ್ತಿಸಿಕೊಂಡೆ. ತಾರುಣ್ಯಾವಸ್ಥೆಯಲ್ಲಿ ನಾನು ಮಾಡಿದ ಮೂರ್ಖತನಕ್ಕಾಗಿ ಲಜ್ಜೆಗೊಂಡೆನು; ನಾಚಿಕೆಪಟ್ಟೆನು.’”


ಅವರು ಬುದ್ಧಿವಂತರಾಗುವಂತೆ ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಮನ್ನವನ್ನು ಅವರಿಗೆ ಆಹಾರವಾಗಿ ಕೊಟ್ಟೆ. ಅವರು ಬಾಯಾರಿದಾಗ ನೀರು ಕೊಟ್ಟೆ.


ಆಗ ಯೇಸು ತನ್ನ ಶಿಷ್ಯರಿಗೆ, “ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಬೋಧಿಸಿದಂಥ ಪ್ರತಿಯೊಬ್ಬ ಧರ್ಮೋಪದೇಶಕನು ಒಂದು ಮನೆಯ ಯಜಮಾನನಂತಿದ್ದಾನೆ. ಆ ಮನುಷ್ಯನು ಹೊಸ ವಸ್ತುಗಳನ್ನೂ ಹಳೆಯ ವಸ್ತುಗಳನ್ನೂ ಆ ಮನೆಯಲ್ಲಿ ಶೇಖರಿಸಿಕೊಂಡು ಅವುಗಳನ್ನು ಹೊರಗೆ ತರುವನು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು