Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:18 - ಪರಿಶುದ್ದ ಬೈಬಲ್‌

18 ಎಪಫ್ರೊದೀತನು ನಿಮ್ಮ ಕೊಡುಗೆಯನ್ನು ತಂದು ಕೊಟ್ಟಿದ್ದರಿಂದ ಬೇಕಾದದ್ದೆಲ್ಲ ನನ್ನಲ್ಲಿ ಹೇರಳವಾಗಿದೆ. ನಿಮ್ಮ ಕೊಡುಗೆಯು ದೇವರಿಗೆ ಅರ್ಪಿಸಲ್ಪಟ್ಟ ಪರಿಮಳಭರಿತವಾದ ಯಜ್ಞವಾಗಿದೆ. ಇದು ದೇವರಿಗೆ ಮೆಚ್ಚಿಕೆಯಾದದ್ದೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನೀವು ಕಳುಹಿಸಿಕೊಟ್ಟಿದ್ದೆಲ್ಲವೂ ನನಗೆ ಸಂದಾಯವಾಗಿದೆ. ಈಗ ಅಗತ್ಯಕ್ಕಿಂತಲೂ ಅಧಿಕವಾಗಿದೆ, ಯಥೇಚ್ಛವಾಗಿದೆ. ಎಪಫ್ರೋದಿತನ ಮೂಲಕ ನೀವು ಕಳುಹಿಸಿದ್ದೆಲ್ಲವೂ ನನಗೆ ತಲುಪಿದೆ. ನಿಮ್ಮ ಕೊಡುಗೆ ಸುಗಂಧ ಕಾಣಿಕೆಯಾಗಿದೆ, ದೇವರಿಗೆ ಮೆಚ್ಚಿಗೆಯಾದ ಇಷ್ಟಾರ್ಥ ಬಲಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತುಮಿ ದಿಲ್ಲೆ ಸಗ್ಳ್ಯೆ ಮಾಕಾ ಎಪೆಪ್ರೊದಿಸಾನ್ ಹಾನುನ್ ದಿಲ್ಲ್ಯಾಸಾಟ್ನಿ ಮಾಕಾ ಪಾಜೆ ಹೊಲ್ಲೆ ಸಗ್ಳೆ ಮಾಜ್ಯಾಕ್ಡೆ ಲೈ ಹಾಯ್, ತುಮ್ಚೊ ದಾನ್ ದೆವಾಕ್ ಭೆಟ್ವಲ್ಲೊ ಲೈ ಬರ್ಯ್ಯಾ ವಾಸೆಚಿ ಬಲಿ ಹೊವ್ನ್ ಹಾಯ್, ಹೆ ದೆವಾಕ್ ಮನಾಕ್ ಯೆತಲೆಬಿ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:18
15 ತಿಳಿವುಗಳ ಹೋಲಿಕೆ  

ಇದಲ್ಲದೆ ಪರೋಪಕಾರವನ್ನೂ ದಾನಧರ್ಮವನ್ನೂ ಮರೆಯದಿರಿ. ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.


ಹಸಿವೆಯಿಂದಿರುವಾಗಲೂ ಸಮೃದ್ಧಿಯುಳ್ಳವನಾಗಿರುವಾಗಲೂ ಹೇಗೆ ಜೀವಿಸಬೇಕೆಂಬುದು ನನಗೆ ತಿಳಿದಿದೆ. ಯಾವ ಸಮಯದಲ್ಲಾಗಲಿ ಯಾವ ಪರಿಸ್ಥಿತಿಯಲ್ಲಾಗಲಿ ಸಂತೋಷದಿಂದಿರುವ ಗುಟ್ಟು ನನಗೆ ತಿಳಿದಿದೆ. ಊಟಕ್ಕೆ ಬೇಕಾದಷ್ಟು ಇರುವಾಗಲೂ ಇಲ್ಲದಿರುವಾಗಲೂ ನನಗೆ ಅಗತ್ಯವಾದವುಗಳನ್ನು ಹೊಂದಿರುವಾಗಲೂ ಹೊಂದಿಲ್ಲದಿರುವಾಗಲೂ ಸಂತೋಷವಾಗಿರಲು ಕಲಿತುಕೊಂಡಿದ್ದೇನೆ.


ನೀವು ಮಾಡುವ ಈ ಸೇವಾಕಾರ್ಯದಿಂದ ಕೊರತೆಯಲ್ಲಿರುವ ದೇವಜನರಿಗೆ ಸಹಾಯವಾಗುವುದು. ಅಷ್ಟು ಮಾತ್ರವೇ ಅಲ್ಲ, ಇದರಿಂದಾಗಿ ದೇವರಿಗೆ ಹೆಚ್ಚುಹೆಚ್ಚಾಗಿ ಕೃತಜ್ಞತಾಸ್ತುತಿ ಉಂಟಾಗುವುದು.


ಪ್ರೀತಿಯಿಂದ ಬಾಳಿರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿದಂತೆ ನೀವೂ ಇತರರನ್ನು ಪ್ರೀತಿಸಿರಿ. ಕ್ರಿಸ್ತನು ನಮಗೋಸ್ಕರವಾಗಿ ತನ್ನನ್ನೇ ಪರಿಮಳದ ಕಾಣಿಕೆಯಾಗಿಯೂ ಯಜ್ಞವಾಗಿಯೂ ದೇವರಿಗೆ ಸಮರ್ಪಿಸಿಕೊಂಡನು.


ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ.


ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಸ್ತೋತ್ರ ಸಲ್ಲಿಸುತ್ತೇವೆ. ನಿಮ್ಮ ನಂಬಿಕೆಯು ಮತ್ತು ಇತರರ ಮೇಲೆ ನಿಮಗಿರುವ ಪ್ರೀತಿಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ನಿಮ್ಮ ವಿಷಯದಲ್ಲಿ ಸ್ತೋತ್ರ ಸಲ್ಲಿಸುವುದು ಯೋಗ್ಯವಾದ ಕಾರ್ಯವಾಗಿದೆ.


ಆದ್ದರಿಂದ ಸಹೋದರ ಸಹೋದರಿಯರೇ, ದೇವರ ಮಹಾಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವ ಯಜ್ಞಗಳಾಗಿ ಅರ್ಪಿಸಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ತರುವಾಯ ಯಜ್ಞವೇದಿಕೆಯ ಮೇಲೆ ಇಡೀ ಟಗರನ್ನು ಹೋಮಮಾಡು. ಇದು ವಿಶೇಷವಾದ ಸರ್ವಾಂಗಹೋಮವಾಗಿದೆ. ಇದು ಯೆಹೋವನಿಗೆ ಪರಿಮಳ ವಾಸನೆಯಾಗಿದ್ದು ಆತನಿಗೆ ಮೆಚ್ಚಿಕೆಕರವಾಗಿದೆ.


ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ನಿಮ್ಮ ಮಂದೆಯಿಂದಾಗಲಿ ಹಿಂಡಿನಿಂದಾಗಲಿ ಅಗ್ನಿಯ ಮೂಲಕ ಯಜ್ಞವನ್ನರ್ಪಿಸುವವನು ಸರ್ವಾಂಗಹೋಮ ಮಾಡಿದರೂ ಅಥವಾ ಸಮಾಧಾನಯಜ್ಞಮಾಡಿದರೂ ಹರಕೆಯ ಯಜ್ಞಮಾಡಿದರೂ ಅಥವಾ ಸ್ವಇಚ್ಛೆಯಿಂದ ಯಜ್ಞಮಾಡಿದರೂ ನಿಯಮಿತ ಹಬ್ಬಗಳಲ್ಲಿ ಯಜ್ಞಮಾಡಿದರೂ


ಕೊರ್ನೇಲಿಯನು ದೇವದೂತನನ್ನು ಕಂಡು ಭಯದಿಂದ “ಸ್ವಾಮೀ, ನಿಮಗೇನು ಬೇಕು?” ಎಂದು ಕೇಳಿದನು. ಆ ದೇವದೂತನು ಅವನಿಗೆ, “ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿದ್ದಾನೆ. ನೀನು ಬಡವರಿಗೆ ಕೊಟ್ಟವುಗಳನ್ನು ಆತನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.


ನಾನು ಇತರ ಸಭೆಗಳಿಂದ ನಿಮ್ಮ ಮಧ್ಯದಲ್ಲಿ ಸೇವೆ ಮಾಡುವುದಕ್ಕಾಗಿ ಹಣವನ್ನು ತೆಗೆದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು