Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:5 - ಪರಿಶುದ್ದ ಬೈಬಲ್‌

5 ನಿಮ್ಮ ಮೃದುಸ್ವಭಾವವನ್ನೂ ಕರುಣೆಯನ್ನೂ ಜನರೆಲ್ಲರೂ ನೋಡುವಂತಾಗಲಿ. ಪ್ರಭುವು ಬೇಗನೆ ಬರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, ಕರ್ತನು ಹತ್ತಿರವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮ ಸಹನೆ, ಸಹಾನುಭೂತಿ ಸರ್ವರಿಗೂ ತಿಳಿದಿರಲಿ. ಪ್ರಭುವಿನ ಪುನರಾಗಮನ ಸಮೀಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ಸಹನೆಯು ಎಲ್ಲರಿಗೂ ತಿಳಿದಿರಲಿ. ಕರ್ತದೇವರ ಬರುವಿಕೆಯು ಹತ್ತಿರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತುಮ್ಚೆ ಸಂಬಾಳ್ನೆ ಸಗ್ಳ್ಯಾ ಮಾನ್ಸಾಕ್ನಿ ಗೊತ್ತ್ ಹೊಂವ್ದಿ, ಧನಿಯಾಚೆ ಯೆನೆ ಜಗ್ಗೊಳುಚ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:5
25 ತಿಳಿವುಗಳ ಹೋಲಿಕೆ  

“ಆದ್ದರಿಂದ ನಿಮ್ಮ ಪ್ರಾಣಧಾರಣೆಗೆ ಬೇಕಾದ ಆಹಾರಕ್ಕಾಗಲಿ ದೇಹಕ್ಕೆ ಬೇಕಾದ ಬಟ್ಟೆಗಾಗಲಿ ನೀವು ಚಿಂತಿಸಬಾರದು. ಪ್ರಾಣವು ಆಹಾರಕ್ಕಿಂತಲೂ ದೇಹವು ಬಟ್ಟೆಗಿಂತಲೂ ಬಹಳ ಮುಖ್ಯವಾದದ್ದೆಂದು ನಾನು ನಿಮಗೆ ಹೇಳುತ್ತೇನೆ.


ಯಾರನ್ನೂ ದೂಷಿಸದೆ, ಯಾರೊಂದಿಗೂ ಜಗಳವಾಡದೆ ಮೃದುವಾಗಿ ಎಲ್ಲರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಿರಿ.


ಆತನು ಹೀಗೆ ಹೇಳುತ್ತಾನೆ: “ಸ್ವಲ್ಪಕಾಲದಲ್ಲಿಯೇ, ಬರುವಾತನು ಬರುತ್ತಾನೆ. ಆತನು ತಡಮಾಡುವುದಿಲ್ಲ.


ಎಲ್ಲಾ ಸಂಗತಿಗಳೂ ಅಂತ್ಯಗೊಳ್ಳುವ ಕಾಲ ಸಮೀಪಿಸಿದೆ. ನೀವು ವಿವೇಕಿಗಳಾಗಿದ್ದು ನಿಮ್ಮನ್ನು ಹತೋಟಿಯಲ್ಲಿಟ್ಟು ಕೊಳ್ಳಿರಿ. ನೀವು ಪ್ರಾರ್ಥಿಸಲು ಇದು ಸಹಾಯ ಮಾಡುತ್ತದೆ.


ನೀವು ಆಗಲೇ ಸೋತು ಹೋಗಿದ್ದೀರೆಂಬುದನ್ನು ನಿಮ್ಮ ಮಧ್ಯದಲ್ಲಿರುವ ವ್ಯಾಜ್ಯಗಳೇ ಸೂಚಿಸುತ್ತವೆ. ಅದಕ್ಕಿಂತ, ನೀವು ಕೆಟ್ಟದ್ದನ್ನು ಸಹಿಸಿಕೊಳ್ಳಬೇಕಿತ್ತು; ಮೋಸವನ್ನು ತಾಳಿಕೊಳ್ಳಬೇಕಿತ್ತು.


ನಾವು ಸಭೆಯಾಗಿ ಸೇರಿಬರುವುದನ್ನು ಬಿಡಬಾರದು. ಕೆಲವರು ಸಭೆಗೆ ಬರುತ್ತಿಲ್ಲ. ನಾವು ಒಟ್ಟಾಗಿ ಸೇರಿಬಂದು ಒಬ್ಬರನ್ನೊಬ್ಬರು ಬಲಪಡಿಸಬೇಕು. ಯೇಸುವು ಪ್ರತ್ಯಕ್ಷನಾಗುವ ದಿನ ಸಮೀಪವಾಗುತ್ತಿರುವುದರಿಂದ ನೀವು ಇದನ್ನು ಮತ್ತಷ್ಟು ಹೆಚ್ಚಾಗಿ ಮಾಡಬೇಕು.


‘ಕೇಳಿರಿ, ನಾನು ಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳಿಗೆ ವಿಧೇಯತೆಯಿಂದಿರುವವನು ಧನ್ಯನಾಗುತ್ತಾನೆ’” ಎಂದು ಹೇಳಿದನು.


ಹೀಗಿರಲಾಗಿ, ನಾನು ತಿನ್ನುವ ಆಹಾರವು ನನ್ನ ಸಹೋದರನನ್ನು ಪಾಪಕ್ಕೆ ಬೀಳಿಸುವುದಾಗಿದ್ದರೆ, ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ. ನನ್ನ ಸಹೋದರನ ಪಾಪಕ್ಕೆ ನಾನು ಕಾರಣನಾಗಬಾರದೆಂದು ನಾನು ಮಾಂಸ ತಿನ್ನುವುದನ್ನು ನಿಲ್ಲಿಸುತ್ತೇನೆ.


ಆದ್ದರಿಂದ ನಾಳೆಗಾಗಿ ಚಿಂತಿಸಬೇಡಿ. ಪ್ರತಿದಿನವು ತನ್ನದೇ ಆದ ಎಷ್ಟೋ ಕಷ್ಟಗಳನ್ನು ಹೊಂದಿರುತ್ತದೆ. ನಾಳೆಯು ಸಹ ತನ್ನದೇ ಆದ ಚಿಂತೆಗಳನ್ನು ಹೊಂದಿದೆ.


ಇವುಗಳೆಲ್ಲಾ ನಿಜವೆಂದು ಹೇಳುವಾತನು ಯೇಸುವೇ. ಈಗ ಆತನು, “ಹೌದು, ನಾನು ಬೇಗನೆ ಬರುತ್ತೇನೆ” ಎಂದು ಹೇಳುತ್ತಾನೆ. ಆಮೆನ್! ಪ್ರಭು ಯೇಸುವೇ, ಬಾ!


ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.


ಪಂದ್ಯಗಳಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳು ಪದಕಗಳಿಸಲು ಕಟ್ಟುನಿಟ್ಟಾದ ತರಬೇತಿಯಲ್ಲಿರುತ್ತಾರೆ. ಆದರೆ ಈ ಲೋಕದ ಆ ಪದಕವು ಸ್ವಲ್ಪಕಾಲ ಮಾತ್ರ ಇರುತ್ತದೆ. ಆದರೆ ನಮ್ಮ ಪದಕವು ಶಾಶ್ವತವಾದದ್ದು.


ಪ್ರಭುವಿನ ದಿನವು ಈಗಾಗಲೇ ಬಂದುಬಿಟ್ಟಿತು ಎಂದು ಯಾರಾದರು ನಿಮಗೆ ಹೇಳಿದರೆ ಆ ಕೂಡಲೇ ಕಳವಳಗೊಳ್ಳಬೇಡಿ ಅಥವಾ ಭಯಪಡಬೇಡಿ. ಯಾವನಾದರೂ ತನ್ನ ಪ್ರವಾದನೆಯಲ್ಲಾಗಲಿ ಉಪದೇಶದಲ್ಲಾಗಲಿ ಹಾಗೆ ಹೇಳುವ ಸಾಧ್ಯತೆ ಇದೆ. ಯಾವನಾದರೂ ಸುಳ್ಳುಪತ್ರವನ್ನೇ ನಮ್ಮ ಹೆಸರಿನಲ್ಲಿ ತಾನೇ ಬರೆದು ನಿಮ್ಮ ಮುಂದೆ ಓದಿ ತಿಳಿಸುವ ಸಾಧ್ಯತೆಯೂ ಇದೆ.


“ಎಚ್ಚರಿಕೆ! ತಿನ್ನುವುದರಲ್ಲಿಯೂ ಕುಡಿದು ಮತ್ತರಾಗುವುದರಲ್ಲಿಯೂ ಪ್ರಾಪಂಚಿಕ ಚಿಂತೆಗಳಲ್ಲಿಯೂ ಮಗ್ನರಾಗಿರಬೇಡಿರಿ. ಇಲ್ಲವಾದರೆ, ನಿಮ್ಮ ಹೃದಯಗಳು ಭಾರವಾಗಿರುವಾಗಲೇ ಅಂತ್ಯವು ಫಕ್ಕನೆ ಬಂದೀತು.


ಯಾವನಾದರೂ ಪ್ರಭುವನ್ನು ಪ್ರೀತಿಸದಿದ್ದರೆ, ಅವನು ಜೀವದಿಂದ ಬೇರ್ಪಟ್ಟು ನಿತ್ಯನಾಶನ ಹೊಂದಲಿ! ಪ್ರಭುವೇ ಬಾ!


ಪೌಲನಾದ ನಾನು ಕ್ರಿಸ್ತನ ಮೃದುಸ್ವಭಾವದಿಂದಲೂ ಕನಿಕರದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ನಾನು ನಿಮ್ಮೊಂದಿಗಿರುವಾಗ ದೀನನಾಗಿರುತ್ತೇನೆಂದೂ, ನಿಮ್ಮಿಂದ ದೂರದಲ್ಲಿರುವಾಗ ಧೀರನಾಗಿರುತ್ತೇನೆಂದೂ ಕೆಲವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು