Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:1 - ಪರಿಶುದ್ದ ಬೈಬಲ್‌

1 ಯೇಸು ಕ್ರಿಸ್ತನ ವಂಶಾವಳಿಯಿದು. ಆತನು ದಾವೀದನ ವಂಶದವನು. ದಾವೀದನು ಅಬ್ರಹಾಮನ ವಂಶದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸು ಕ್ರಿಸ್ತನ ವಂಶಾವಳಿಯು. ಆತನು ದಾವೀದನ ವಂಶದವನು. ದಾವೀದನು ಅಬ್ರಹಾಮನ ವಂಶದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕ್ರಿಸ್ತ ಯೇಸುವಿನ ವಂಶಾವಳಿಯ ದಾಖಲೆ. ಯೇಸು ದಾವೀದನ ವಂಶದವರು, ದಾವೀದನು ಅಬ್ರಹಾಮನ ವಂಶದವನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜು ಕ್ರಿಸ್ತಾಚಿ ವಂಶಾವಳಿ ಹಿ. ಜೆಜು ಅಬ್ರಾಹಾಮಾಚ್ಯಾ ಪಿಳ್ಗಿತ್ಲ್ಯಾ ದಾವಿದಾಚ್ಯಾ ಪಿಳ್ಗಿಚೊ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:1
39 ತಿಳಿವುಗಳ ಹೋಲಿಕೆ  

ನೀನು ನನಗೆ ವಿಧೇಯನಾದದ್ದರಿಂದ ನಿನ್ನ ಸಂತತಿಗಳವರ ಮೂಲಕವಾಗಿ ಭೂಮಿಯ ಮೇಲಿರುವ ಪ್ರತಿಯೊಂದು ಜನಾಂಗವೂ ಆಶೀರ್ವಾದ ಹೊಂದುವುದು” ಎಂದು ಹೇಳಿದನು.


ದೇವರು ಅಬ್ರಹಾಮನಿಗೂ ಅವನ ಸಂತಾನದವರಿಗೂ ವಾಗ್ದಾನಗಳನ್ನು ಮಾಡಿದನು. “ನಿನ್ನ ಸಂತತಿಗಳಿಗೆ” ಎಂದು ದೇವರು ಹೇಳಲಿಲ್ಲ. ಏಕೆಂದರೆ ಅನೇಕ ಜನರು ಎಂಬರ್ಥವನ್ನು ಅದು ಕೊಡುತ್ತದೆ. ಆದರೆ ದೇವರು ಅವನಿಗೆ, “ನಿನ್ನ ಸಂತತಿಗೆ” ಎಂದು ಹೇಳಿದನು. ಅದರರ್ಥವೇನೆಂದರೆ, ಒಬ್ಬನೇ ಒಬ್ಬ ವ್ಯಕ್ತಿ. ಆತನೇ ಕ್ರಿಸ್ತನು.


ದೇವರ ಮಗನೂ ನಮ್ಮ ಪ್ರಭುವೂ ಆಗಿರುವ ಯೇಸು ಕ್ರಿಸ್ತನ ವಿಷಯವೇ ಆ ಸುವಾರ್ತೆ. ಮನುಷ್ಯತ್ವದ ಮಟ್ಟಿಗೆ ಆತನು ದಾವೀದನ ಕುಟುಂಬದಲ್ಲಿ ಹುಟ್ಟಿದನು. ಆದರೆ ಯೇಸು ಪರಿಶುದ್ಧ ಆತ್ಮನ ಮೂಲಕ ಮಹಾಶಕ್ತಿಯೊಡನೆ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದು ತಾನೇ ದೇವರ ಮಗನೆಂಬುದನ್ನು ತೋರಿಸಿಕೊಟ್ಟನು.


“ಯೇಸುವೆಂಬ ನಾನೇ, ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ಸಾಕ್ಷಿ ನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ದಾವೀದನ ವಂಶದಲ್ಲಿ ಹುಟ್ಟಿದವನೂ ಪ್ರಕಾಶಮಾನವಾದ ಉದಯನಕ್ಷತ್ರವೂ ಆಗಿದ್ದಾನೆ.”


ಯೆಹೋವನು ದಾವೀದನಿಗೆ ಸ್ಥಿರವಾದ ವಾಗ್ದಾನವನ್ನು ಮಾಡಿದನು. ಆತನು ಅದನ್ನು ಬದಲಾಯಿಸುವುದೇ ಇಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು.


ಇದು ಯೆಹೋವನ ಸಂದೇಶ: “ನಾನು ಒಳ್ಳೆಯ ‘ಸಸಿಯನ್ನು’ ಚಿಗುರಿಸುವ ಕಾಲ ಬಂದಿದೆ. ಅವನು ಬುದ್ಧಿವಂತಿಕೆಯಿಂದ ಆಳುವ ರಾಜನಾಗಿರುವನು. ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಬದ್ಧವಾದದ್ದನ್ನು ಮಾಡುವನು.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು. ಆ ಕೊಂಬೆಯು ಇಷಯನ ಬೇರಿನಿಂದ ಬೆಳೆಯುವುದು.


ಕ್ರಿಸ್ತನು ದಾವೀದನ ಕುಟುಂಬದವನೆಂತಲೂ ದಾವೀದನು ವಾಸಿಸಿದ ಬೆತ್ಲೆಹೇಮ್ ಊರಿನಿಂದ ಆತನು ಬರುತ್ತಾನೆಂತಲೂ ಪವಿತ್ರ ಗ್ರಂಥವು ತಿಳಿಸುತ್ತದೆ” ಎಂದರು.


ನಿನಗೆ ಒಳ್ಳೆಯದನ್ನು ಮಾಡುವವರನ್ನು ಆಶೀರ್ವದಿಸುವೆನು; ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ನಿನ್ನ ನಿಮಿತ್ತವಾಗಿ ಲೋಕದವರೆಲ್ಲರೂ ಆಶೀರ್ವಾದ ಹೊಂದುವರು” ಎಂದು ಹೇಳಿದನು.


ದಾವೀದನು ಒಬ್ಬ ಪ್ರವಾದಿಯಾಗಿದ್ದನು ಮತ್ತು ‘ನಿನ್ನ ಕುಟುಂಬದ ಒಬ್ಬನನ್ನು ನಿನ್ನಂತೆಯೇ ರಾಜನನ್ನಾಗಿ ಮಾಡುವೆನು’ ಎಂದು ದೇವರು ಅವನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದು ಅವನಿಗೆ ಗೊತ್ತಿತ್ತು.


ಯೇಸು ಕ್ರಿಸ್ತನ ತಾಯಿ ಮರಿಯಳು. ಯೇಸುವಿನ ಜನನ ಈ ರೀತಿ ಸಂಭವಿಸಿತು: ಮದುವೆಮಾಡಿಕೊಳ್ಳಲು ಯೋಸೇಫನಿಗೂ ಮರಿಯಳಿಗೂ ನಿಶ್ಚಿತಾರ್ಥವಾಗಿತ್ತು. ಆದರೆ ಮದುವೆಗೆ ಮೊದಲೇ ತಾನು ಗರ್ಭಿಣಿಯಾಗಿರುವುದು ಮರಿಯಳಿಗೆ ತಿಳಿದುಬಂತು. ಮರಿಯಳು ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಳು.


ಜನರು ಬಲವಂತದಿಂದ ಆತನನ್ನು ಕೊಂಡೊಯ್ದರು; ಆತನಿಗೆ ಅನ್ಯಾಯವಾದ ತೀರ್ಪನ್ನು ನೀಡಿದರು; ಆತನನ್ನು ಜೀವಲೋಕದಿಂದಲೇ ತೆಗೆದುಹಾಕಿ ಆತನಿಗೆ ಸಂತಾನವೇ ಇಲ್ಲದಂತೆ ಮಾಡಿದರು. ನನ್ನ ಜನರ ಪಾಪಗಳಿಗಾಗಿ ಆತನು ದಂಡಿಸಲ್ಪಟ್ಟನು.


ಅವರು ನಮ್ಮ ಪಿತೃಗಳ ಸಂತಾನಗಳಿಗೆ ಸೇರಿದವರಾಗಿದ್ದಾರೆ; ಕ್ರಿಸ್ತನು ಶಾರೀರಿಕವಾಗಿ ಇವರ ವಂಶದಲ್ಲಿಯೇ ಹುಟ್ಟಿದನು. ಕ್ರಿಸ್ತನು ಸಕಲಕ್ಕೂ ಒಡೆಯನಾಗಿದ್ದಾನೆ. ಆತನಿಗೆ ಎಂದೆಂದಿಗೂ ಸ್ತೋತ್ರವಾಗಲಿ! ಆಮೆನ್.


ಅಬ್ರಹಾಮನಿಗೂ ಅವನ ಸಂತತಿಯವರಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದನು. ಆದರೆ ಅಬ್ರಹಾಮನು ಆ ವಾಗ್ದಾನವನ್ನು ಹೊಂದಿಕೊಂಡದ್ದು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಅಬ್ರಹಾಮನು ನಂಬಿಕೆಯ ಮೂಲಕ ನೀತಿವಂತನಾದ ಕಾರಣ ಆ ವಾಗ್ದಾನವನ್ನು ಹೊಂದಿಕೊಂಡನು.


ಆ ಸ್ಥಳದಿಂದ ಕಾನಾನ್ಯಳಾದ ಒಬ್ಬ ಸ್ತ್ರೀ ಯೇಸುವಿನ ಬಳಿಗೆ ಬಂದು, “ಪ್ರಭುವೇ, ದಾವೀದನ ಮಗನೇ, ದಯವಿಟ್ಟು ನನಗೆ ಕರುಣೆ ತೋರು! ನನ್ನ ಮಗಳಲ್ಲಿ ದೆವ್ವ ಸೇರಿಕೊಂಡಿದೆ ಮತ್ತು ಆಕೆ ಬಹಳ ಸಂಕಟಪಡುತ್ತಿದ್ದಾಳೆ” ಎಂದು ಗಟ್ಟಿಯಾಗಿ ಕೂಗಿಕೊಂಡಳು.


ಯೇಸು ಅಲ್ಲಿಂದ ಹೊರಡುತ್ತಿರುವಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸಿದರು. ಅವರು, “ದಾವೀದನ ಕುಮಾರನೇ, ನಮಗೆ ದಯೆ ತೋರು” ಎಂದು ಗಟ್ಟಿಯಾಗಿ ಕೂಗಿದರು.


ಅವರನ್ನು ತ್ಯಜಿಸಬಹುದೇನೋ! ಯಾಕೋಬನ ಸಂತಾನದವರನ್ನು ತ್ಯಜಿಸಿ ದಾವೀದನ ವಂಶದವರು ಅಬ್ರಹಾಮ, ಇಸಾಕ ಮತ್ತು ಯಾಕೋಬರ ಸಂತತಿಯವರನ್ನು ಆಳದಂತೆ ಮಾಡಬಹುದೇನೋ! ಆದರೆ ದಾವೀದನು ನನ್ನ ಸೇವಕ. ನಾನು ಅವರಿಗೆ ಕರುಣೆ ತೋರೇ ತೋರುವೆನು; ಅವರಿಗೆ ಒಳ್ಳೆಯದಾಗುವಂತೆ ಮಾಡೇ ಮಾಡುವೆನು.”


ಇದು ಆಕಾಶದ ಮತ್ತು ಭೂಮಿಯ ಚರಿತ್ರೆ. ದೇವರು ಭೂಮಿಯನ್ನು ಮತ್ತು ಆಕಾಶವನ್ನು ಸೃಷ್ಟಿಸಿದಾಗ ನಡೆದ ಸಂಗತಿಗಳೇ ಈ ಚರಿತ್ರೆ.


ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದನು. ಕೂಡಲೇ ಆಕಾಶವು ತೆರೆಯಿತು. ದೇವರಾತ್ಮನು ಪಾರಿವಾಳದ ರೂಪದಲ್ಲಿ ಕೆಳಗಿಳಿದು ತನ್ನ ಮೇಲೆ ಬರುತ್ತಿರುವುದನ್ನು ಯೇಸು ಕಂಡನು.


ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ಯೆಹೋವನು ಕಾಪಾಡುತ್ತಾನೆ. ಬಲಹೀನ ಮನುಷ್ಯನೂ ದಾವೀದನಂತೆ ಶೂರನಾಗುವನು. ದಾವೀದನ ಸಂತತಿಯ ಜನರು ದೇವರುಗಳಂತಿದ್ದು ದೇವರ ಸ್ವಂತ ದೂತರಂತೆ ತಮ್ಮ ಜನರನ್ನು ನಡಿಸುವರು.


“ದಾವೀದನ ಗುಡಾರವು ಕುಸಿದುಬಿದ್ದಿದೆ. ಆದರೆ ಆ ದಿವಸಗಳಲ್ಲಿ ತಿರುಗಿ ಅದನ್ನು ಮೇಲಕ್ಕೆತ್ತುವೆನು. ಗೋಡೆಯಲ್ಲಿರುವ ರಂಧ್ರಗಳನ್ನು ನಾನು ಸರಿಪಡಿಸುವೆನು. ಬಿದ್ದುಹೋದ ಕಟ್ಟಡಗಳನ್ನು ತಿರುಗಿ ಕಟ್ಟುವೆನು. ಮುಂಚೆ ಹೇಗಿತ್ತೋ ಹಾಗೆಯೇ ಇರುವದು.


ಇದು ಆದಾಮನ ಕುಟುಂಬ ಚರಿತ್ರೆ. ದೇವರು ಮನುಷ್ಯನನ್ನು ತನ್ನ ಹೋಲಿಕೆಗೆ ಸರಿಯಾಗಿ ಸೃಷ್ಟಿ ಮಾಡಿದನು.


ದಾವೀದನ ಕುಟುಂಬವು ಶಾಶ್ವತವಾಗಿರುವುದು. ಅವನ ರಾಜ್ಯವು ಸೂರ್ಯನು ಇರುವವರೆಗೂ ಇರುವುದು.


ಆತನು ಹೇಳಿದ್ದೇನೆಂದರೆ: “ನಾನು ಆರಿಸಿಕೊಂಡ ರಾಜನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು. ನನ್ನ ಸೇವಕನಾದ ದಾವೀದನಿಗೆ ಒಂದು ವಾಗ್ದಾನವನ್ನು ಮಾಡಿದೆನು; ಅದೇನೆಂದರೆ,


ಅಬ್ರಹಾಮನು ಇಸಾಕನ ತಂದೆ. ಇಸಾಕನು ಯಾಕೋಬನ ತಂದೆ. ಯಾಕೋಬನು ಯೆಹೂದ ಮತ್ತು ಅವನ ಸಹೋದರರ ತಂದೆ.


ಯೇಸುವು ಯಾಕೋಬನ ಜನರನ್ನು ಸದಾಕಾಲ ಆಳುವನು. ಆತನ ರಾಜ್ಯ ಎಂದಿಗೂ ಅಂತ್ಯವಾಗುವುದಿಲ್ಲ” ಎಂದು ಹೇಳಿದನು.


ದೇವರು ಒಬ್ಬನೇ. ದೇವರಿಗೂ ಮನುಷ್ಯರಿಗೂ ಮಧ್ಯಸ್ತನು ಒಬ್ಬನೇ. ಮನುಷ್ಯನಾಗಿರುವ ಯೇಸುಕ್ರಿಸ್ತನೇ ಆತನು.


ಯೇಸು ಕ್ರಿಸ್ತನನ್ನು ನೆನಪು ಮಾಡಿಕೊ. ಆತನು ದಾವೀದನ ವಂಶದವನು. ಯೇಸು ಸತ್ತನಂತರ ಜೀವಂತವಾಗಿ ಮೇಲೆದ್ದು ಬಂದನು. ಈ ಸುವಾರ್ತೆಯನ್ನೇ ನಾನು ಜನರಿಗೆ ತಿಳಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು