Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:16 - ಪರಿಶುದ್ದ ಬೈಬಲ್‌

16 ಯಾಕೋಬನು ಯೋಸೇಫನ ತಂದೆ. ಯೋಸೇಫನು ಮರಿಯಳ ಗಂಡ. ಮರಿಯಳು ಯೇಸುವಿನ ತಾಯಿ. ಯೇಸುವನ್ನು ಕ್ರಿಸ್ತ ನೆಂದು ಕರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾಕೋಬನ ಮಗನು ಯೋಸೇಫನು. ಯೋಸೇಫನು ಮರಿಯಳ ಗಂಡನು. ಈ ಮರಿಯಳಿಂದಲೇ ಕ್ರಿಸ್ತನೆಂಬ ಯೇಸು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈ ಮರಿಯಳಿಂದಲೇ “ಕ್ರಿಸ್ತ” ಎಂದು ಕರೆಯಲಾಗುವ ಯೇಸುಸ್ವಾಮಿ ಹುಟ್ಟಿದ್ದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯಾಕೋಬನು ಮರಿಯಳ ಗಂಡನಾದ ಯೋಸೇಫನನ್ನು ಪಡೆದನು. ಈ ಮರಿಯಳಲ್ಲಿ ಕ್ರಿಸ್ತನೆಂಬ ಯೇಸು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯಾಕೋಬನು ಯೋಸೇಫನ ತಂದೆ, ಯೋಸೇಫನು ಮರಿಯಳ ಪತಿ, ಮರಿಯಳು ಕ್ರಿಸ್ತ ಎಂದು ಕರೆಯಲಾದ, ಯೇಸುಸ್ವಾಮಿಯ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಜಾಕೊಬ್ ಜುಜೆಚೊ ಬಾಬಾ, ಜುಜೆಚಿ ಬಾಯ್ಕೊ ಮರಿ ಅನಿ ಮಾನಾ ಮರಿಚ್ಯಾ ಪೊಟಾನ್ ಜಲಮಲ್ಲೊ “ಜೆಜು” ತೆಕಾ ಸುಟ್ಕಾದಿನಾರೊ ಕ್ರಿಸ್ತ್: ಮನ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:16
17 ತಿಳಿವುಗಳ ಹೋಲಿಕೆ  

ಜನರೆಲ್ಲರೂ ಪಿಲಾತನ ಭವನದ ಬಳಿ ನೆರೆದಿದ್ದರು. ಪಿಲಾತನು ಅವರಿಗೆ, “ನಾನು ನಿಮಗಾಗಿ ಯಾವ ಕೈದಿಯನ್ನು ಬಿಡುಗಡೆ ಮಾಡಲಿ, ಬರಬ್ಬನನ್ನೋ ಅಥವಾ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನೋ?” ಎಂದು ಕೇಳಿದನು.


ಆ ಸ್ತ್ರೀಯು, “ಮೆಸ್ಸೀಯನು ಬರುತ್ತಾನೆಂದು ನನಗೆ ಗೊತ್ತು. ಆತನು ಬಂದಾಗ ನಮಗೆ ಪ್ರತಿಯೊಂದನ್ನೂ ವಿವರಿಸುವನು” ಎಂದು ಹೇಳಿದಳು. (“ಮೆಸ್ಸೀಯನು” ಅಂದರೆ “ಕ್ರಿಸ್ತನು”)


ಯೇಸು ಬೋಧಿಸುವುದಕ್ಕೆ ಪ್ರಾರಂಭಿಸಿದಾಗ ಸುಮಾರು ಮೂವತ್ತು ವರ್ಷದವನಾಗಿದ್ದನು. ಯೇಸು ಯೋಸೇಫನ ಮಗನೆಂದು ಜನರು ಭಾವಿಸಿದ್ದರು. ಯೋಸೇಫನು ಹೇಲಿಯ ಮಗನು.


ಪಿಲಾತನು, “ಹಾಗಾದರೆ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಿದನು. ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಉತ್ತರಕೊಟ್ಟರು.


ಜನರೆಲ್ಲರೂ ಯೇಸುವನ್ನು ಹೊಗಳತೊಡಗಿದರು. ಅವರು ಆತನ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಈ ರೀತಿ ಮಾತಾಡಲು ಹೇಗೆ ಸಾಧ್ಯ? ಇವನು ಯೋಸೇಫನ ಮಗನಲ್ಲವೇ?” ಎಂದು ಮಾತಾಡಿಕೊಂಡರು.


ಯೇಸುವಿನ ತಂದೆತಾಯಿಗಳು ಆತನನ್ನು ಅಲ್ಲಿ ಕಂಡು ಆಶ್ಚರ್ಯಪಟ್ಟರು. ಮರಿಯಳು ಆತನಿಗೆ, “ಮಗನೇ, ನೀನು ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆ ಮತ್ತು ನಾನು ನಿನಗಾಗಿ ಬಹಳ ಚಿಂತಿಸುತ್ತಿದ್ದೆವು. ನಿನಗೋಸ್ಕರ ನಾವು ಹುಡುಕುತ್ತಿದ್ದೆವು” ಎಂದು ಹೇಳಿದಳು.


ಆಕೆ ತನ್ನ ಚೊಚ್ಚಲಮಗುವನ್ನು (ಯೇಸು) ಹೆತ್ತಳು. ಅವರಿಗೆ ಇಳಿದುಕೊಳ್ಳಲು ಛತ್ರದಲ್ಲಿ ಸ್ಥಳ ದೊರೆಯಲಿಲ್ಲ. ಆದ್ದರಿಂದ ಮರಿಯಳು ಮಗುವನ್ನು ಬಟ್ಟೆಯಿಂದ ಸುತ್ತಿ ದನದ ಕೊಟ್ಟಿಗೆಯಲ್ಲಿ ಮೇವು ಹಾಕುತ್ತಿದ್ದ ತೊಟ್ಟಿಯಲ್ಲಿ ಮಲಗಿಸಿದಳು.


ಇವನು ಕೇವಲ ಬಡಗಿಯಲ್ಲವೋ? ಇವನ ತಾಯಿ ಮರಿಯಳು. ಇವನು ಯಾಕೋಬ, ಯೋಸೆ, ಯೂದ ಮತ್ತು ಸಿಮೋನರ ಅಣ್ಣ. ಇವನ ತಂಗಿಯರು ಇಲ್ಲಿ ನಮ್ಮೊಂದಿಗಿದ್ದಾರೆ” ಎಂದು ಹೇಳಿ ಆತನನ್ನು ತಾತ್ಸಾರ ಮಾಡಿದರು.


ಜ್ಞಾನಿಗಳು ಹೊರಟುಹೋದ ನಂತರ ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎದ್ದೇಳು! ಮಗುವನ್ನು ಮತ್ತು ಅದರ ತಾಯಿಯನ್ನು ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ಹೆರೋದನು ಮಗುವನ್ನು ಹುಡುಕಲು ಪ್ರಾರಂಭಿಸುವನು. ಅವನು ಮಗುವನ್ನು ಕೊಲ್ಲಬೇಕೆಂದಿದ್ದಾನೆ. ‘ಅಪಾಯವಿಲ್ಲ’ ಎಂದು ನಾನು ನಿನಗೆ ಹೇಳುವ ತನಕ ನೀನು ಈಜಿಪ್ಟಿನಲ್ಲೇ ಇರು” ಎಂದು ಹೇಳಿದನು.


ಎಲಿಹೂದನು ಎಲಿಯಾಜರನ ತಂದೆ. ಎಲಿಯಾಜರನು ಮತ್ತಾನನ ತಂದೆ. ಮತ್ತಾನನು ಯಾಕೋಬನ ತಂದೆ.


ಸೀಮೋನ್ ಪೇತ್ರನು, “ನೀನೇ ಬರಬೇಕಾಗಿರುವ ಕ್ರಿಸ್ತನು. ನೀನೇ ಜೀವಸ್ವರೂಪನಾದ ದೇವರ ಮಗನು” ಎಂದು ಉತ್ತರಕೊಟ್ಟನು.


ಬಳಿಕ ಯೇಸು ತನ್ನ ಶಿಷ್ಯರಿಗೆ, ತಾನು ಕ್ರಿಸ್ತನೆಂಬುದನ್ನು ಯಾರಿಗೂ ಹೇಳಕೂಡದೆಂದು ಎಚ್ಚರಿಕೆ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು