Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:19 - ಪರಿಶುದ್ದ ಬೈಬಲ್‌

19 ಮರಿಯಳನ್ನು ಮದುವೆಯಾಗಲಿದ್ದ ಯೋಸೇಫನು ನೀತಿವಂತನಾಗಿದ್ದನು. ಮರಿಯಳನ್ನು ಜನರ ಮುಂದೆ ನಾಚಿಕೆಪಡಿಸಲು ಅವನು ಇಷ್ಟಪಡಲಿಲ್ಲ. ಆದ್ದರಿಂದ ಅವನು ಗುಟ್ಟಾಗಿ ನಿಶ್ಚಿತಾರ್ಥವನ್ನು ರದ್ದುಗೊಳಿಸಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೆ ಆಕೆಯ ಗಂಡನಾದ ಯೋಸೇಫನು ಸಜ್ಜನನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ, ಯಾರಿಗೂ ತಿಳಿಯದಂತೆ ಆಕೆಯನ್ನು ಬಿಟ್ಟುಬಿಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೋಸೇಫನು ನೀತಿವಂತನಾಗಿದ್ದರಿಂದ, ಆಕೆಯನ್ನು ಬಹಿರಂಗವಾಗಿ ಅವಮಾನ ಮಾಡುವುದಕ್ಕೆ ಮನಸ್ಸಿಲ್ಲದೆ, ಆಕೆಯನ್ನು ರಹಸ್ಯವಾಗಿ ಬಿಟ್ಟು ಬಿಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಜುಜೆ ಕನ್ನಾಬಿ ಖಲೆ ಸಮಾ ಹಾಯ್ ತೆಚ್ ಕರ್ನಾರೊ ಮಾನುಸ್, ಖರೆ ಮರಿಕ್ ಲೊಕಾಂಚ್ಯಾ ಫಿಡ್ಯಾತ್ ಅವ್ಮಾನ್ ಕರುಕ್ ತೆಕಾ ಮನ್ ನತ್ತೊ, ತಸೆ ಮನುನ್ ಕೊನಾಕ್ಬಿ ಕಳಿನಸ್ತಾನಾ ತಿಕಾ ಸೊಡುನ್ ದಿವ್ಚೆ ಮನುನ್ ತೊ ಯವ್ಜುಕ್ ಲಾಗಲ್ಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:19
15 ತಿಳಿವುಗಳ ಹೋಲಿಕೆ  

ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು.


ಆದರೆ ಆಕೆಗೆ ಸಾಧ್ಯವಾಗಲಿಲ್ಲ. ಹೆರೋದನು ಯೋಹಾನನನ್ನು ಕೊಲ್ಲಿಸಲು ಭಯಪಟ್ಟನು. ಯೋಹಾನನನ್ನು ಒಳ್ಳೆಯವನೆಂದೂ ಪವಿತ್ರನೆಂದೂ ಜನರೆಲ್ಲರು ನಂಬಿದ್ದಾರೆಂಬುದು ಹೆರೋದನಿಗೆ ತಿಳಿದಿತ್ತು. ಆದ್ದರಿಂದ ಹೆರೋದನು ಯೋಹಾನನನ್ನು ರಕ್ಷಿಸಿದನು. ಹೆರೋದನು ಯೋಹಾನನ ಉಪದೇಶವನ್ನು ಕೇಳಿದಾಗಲೆಲ್ಲಾ ಗಲಿಬಿಲಿಗೊಳ್ಳುತ್ತಿದ್ದನು. ಆದರೂ ಅವನ ಉಪದೇಶವನ್ನು ಸಂತೋಷದಿಂದ ಕೇಳುತ್ತಿದ್ದನು.


“ಒಬ್ಬನು ನೆರೆಯವನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಹೊಂದಿದರೆ, ಆಗ ಅವರಿಬ್ಬರೂ ವ್ಯಭಿಚಾರ ಮಾಡಿದ ದೋಷಿಗಳಾಗಿದ್ದಾರೆ. ಆದ್ದರಿಂದ ಅವರಿಬ್ಬರಿಗೂ ಅಂದರೆ ಗಂಡಸಿಗೂ ಹೆಂಗಸಿಗೂ ಮರಣಶಿಕ್ಷೆಯಾಗಬೇಕು!


ಮೂರು ತಿಂಗಳಾದ ಬಳಿಕ, ಯಾರೋ ಒಬ್ಬನು ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ” ಎಂದು ತಿಳಿಸಿದನು. ಆಗ ಯೆಹೂದನು, “ಆಕೆಯನ್ನು ಎಳೆದುಕೊಂಡು ಹೋಗಿ ಸುಟ್ಟುಬಿಡಿ” ಎಂದು ಹೇಳಿದನು.


ಫರಿಸಾಯರು, “ಒಬ್ಬನು ತನ್ನ ಹೆಂಡತಿಗೆ ವಿಚ್ಛೇದನ ಪತ್ರ ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಹೇಳಿದ್ದಾನೆ” ಎಂದರು.


“ಇನ್ನೊಬ್ಬನ ದಾಸಿಯಾಗಿರುವ ಸ್ತ್ರೀಯೊಡನೆ ಒಬ್ಬನು ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ, ಈ ದಾಸಿಯು ಹಣದಿಂದಾಗಲಿ ಉಚಿತವಾಗಿಯಾಗಲಿ ಬಿಡುಗಡೆಯಾಗಲು ಸಾಧ್ಯವಿಲ್ಲದಿದ್ದರೆ ಅವರಿಬ್ಬರಿಗೆ ಶಿಕ್ಷೆ ವಿಧಿಸಬೇಕು. ಆದರೆ ಅವರಿಗೆ ಮರಣ ಶಿಕ್ಷೆಯಾಗಬಾರದು. ಯಾಕೆಂದರೆ ಸ್ತ್ರೀಯು ಸ್ವತಂತ್ರಳಾಗಿಲ್ಲ.


ಇದು ನೋಹನ ಚರಿತ್ರೆ. ಅವನು ತನ್ನ ಜೀವಮಾನವೆಲ್ಲಾ ನೀತಿವಂತನಾಗಿದ್ದನು; ಯಾವಾಗಲೂ ದೇವರನ್ನೇ ಅನುಸರಿಸುತ್ತಿದ್ದನು.


ಆ ಜನರು, “ಕೊರ್ನೇಲಿಯ ಎಂಬ ಒಬ್ಬ ಸೇನಾಧಿಕಾರಿ ಇದ್ದಾನೆ. ಅವನು ಧಾರ್ಮಿಕ ವ್ಯಕ್ತಿ. ಅವನು ದೇವರನ್ನು ಆರಾಧಿಸುತ್ತಾನೆ. ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನೀನು ಹೇಳುವ ಸಂಗತಿಗಳನ್ನು ಕೇಳಬೇಕೆಂದು ದೇವದೂತನೊಬ್ಬನು ಕೊರ್ನೇಲಿಯನಿಗೆ ತಿಳಿಸಿದ್ದಾನೆ” ಎಂದು ಹೇಳಿದರು.


“ಆದರೆ ಹುಡುಗಿಯ ಗಂಡನು ಆಕೆಯ ಬಗ್ಗೆ ಹೇಳಿದ್ದು ಸತ್ಯವಾಗಿದ್ದರೆ, ಹುಡುಗಿಯ ತಂದೆತಾಯಂದಿರ ಬಳಿ ಆಕೆಯು ಪುರುಷ ಸಂಪರ್ಕವಿಲ್ಲದವಳಾಗಿದ್ದಳು ಎಂಬುದಕ್ಕೆ ಪುರಾವೆ ಇಲ್ಲದಿದ್ದಲ್ಲಿ


ಬೆಳಗಾದಾಗ ನಾವಿಕರು ಭೂಮಿಯನ್ನು ಕಂಡರು. ಆದರೆ ಅದು ಯಾವ ಭೂಮಿಯೆಂದು ಗೊತ್ತಿರಲಿಲ್ಲ. ಅವರು ಕಂಡದ್ದು ಉಸುಬಿನ ದಡವುಳ್ಳ ಒಂದು ಕೊಲ್ಲಿ. ಸಾಧ್ಯವಾದರೆ ಹಡಗನ್ನು ಆ ಕೊಲ್ಲಿಗೆ ನಡೆಸಬೇಕೆಂದು ನಾವಿಕರು ಬಯಸಿದರು.


ನಾನು ಈ ಎಲ್ಲಾ ವಿಷಯಗಳಲ್ಲಿ ಬಹು ಭರವಸೆ ಉಳ್ಳವನಾಗಿದ್ದೆನು. ಆದ್ದರಿಂದ ನಿಮ್ಮನ್ನು ಮೊದಲು ಸಂದರ್ಶಿಸಲು ನಾನು ಯೋಜನೆಗಳನ್ನು ಮಾಡಿದೆನು. ಆಗ ನಿಮಗೆ ಎರಡು ಸಲ ಆಶೀರ್ವಾದವಾಗಬಹುದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು