Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:20 - ಪರಿಶುದ್ದ ಬೈಬಲ್‌

20 ಯೋಸೇಫನು ಹೀಗೆ ಆಲೋಚಿಸಿಕೊಂಡನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಆ ದೂತನು, “ದಾವೀದನ ಮಗನಾದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯಾಗಿ ಸ್ವೀಕರಿಸಲು ಭಯಪಡಬೇಡ. ಆಕೆ ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ಇದನ್ನು ಆಲೋಚಿಸುತ್ತಿರುವಾಗ ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು - ಎಲೈ ಯೋಸೇಫನೇ, ದಾವೀದನ ವಂಶದವನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳುವದಕ್ಕೆ ಅಂಜಬೇಡ. ಆಕೆಯ ಗರ್ಭವು ಪವಿತ್ರಾತ್ಮದಿಂದಲೇ ಆದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವನು ಹೀಗೆ ಯೋಚಿಸುತ್ತಿದ್ದಾಗ, ಕರ್ತನ ದೂತನು ಕನಸಿನಲ್ಲಿ ಅವನಿಗೆ ಪ್ರತ್ಯಕ್ಷನಾಗಿ, “ದಾವೀದನ ವಂಶದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭವತಿಯಾಗಿರುವುದು ಪವಿತ್ರಾತ್ಮರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅಶೆ ತೊ ಯವಜ್ತಾನಾ, ತೆಚ್ಯಾ ಸಪ್ನಾತ್ ದೆವಾಚೊ ಎಕ್ ದುತ್ ದಿಸ್ಲೊ ಅನಿ, “ದಾವಿದಾಚ್ಯಾ ಘರಾನ್ಯಾಚ್ಯಾ ಜುಜೆ ಮರಿಕ್ ತುಜಿ ಬಾಯ್ಕೊ ಕರುನ್ ಘೆವ್ಕ್ ಭಿಂವ್‍ನಕೊ, ಕಶ್ಯಾಕ್ ಮಟ್ಲ್ಯಾರ್ ತಿ ಪವಿತ್ರ್ ಆತ್ಮ್ಯಾನಿ ಗರ್‍ವಾರ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:20
38 ತಿಳಿವುಗಳ ಹೋಲಿಕೆ  

ದೇವದೂತನು, “ನನ್ನ ಹೆಸರು ಗಬ್ರಿಯೇಲ. ನಾನು ದೇವರ ಸನ್ನಿಧಿಯಲ್ಲಿ ನಿಂತುಕೊಂಡಿರುವವನು. ನಿನಗೆ ಈ ಶುಭಸಮಾಚಾರವನ್ನು ತಿಳಿಸಲು ದೇವರು ನನ್ನನ್ನು ಕಳುಹಿಸಿದ್ದಾನೆ.


ಯೇಸು ಕ್ರಿಸ್ತನ ತಾಯಿ ಮರಿಯಳು. ಯೇಸುವಿನ ಜನನ ಈ ರೀತಿ ಸಂಭವಿಸಿತು: ಮದುವೆಮಾಡಿಕೊಳ್ಳಲು ಯೋಸೇಫನಿಗೂ ಮರಿಯಳಿಗೂ ನಿಶ್ಚಿತಾರ್ಥವಾಗಿತ್ತು. ಆದರೆ ಮದುವೆಗೆ ಮೊದಲೇ ತಾನು ಗರ್ಭಿಣಿಯಾಗಿರುವುದು ಮರಿಯಳಿಗೆ ತಿಳಿದುಬಂತು. ಮರಿಯಳು ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಳು.


ಹೆರೋದನು ಸತ್ತನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಯೋಸೇಫನು ಈಜಿಪ್ಟಿನಲ್ಲಿ ಇರುವಾಗಲೇ ಇದು ಸಂಭವಿಸಿತು.


“ಆ ಬಳಿಕ ನಾನು ನನ್ನ ಆತ್ಮವನ್ನು ಎಲ್ಲಾ ತರದ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಹೆಣ್ಣು ಮಕ್ಕಳು ಪ್ರವಾದಿಸುವರು. ನಿಮ್ಮ ವೃದ್ಧರು ಕನಸು ಕಾಣುವರು. ನಿಮ್ಮ ಯುವಕರಿಗೆ ದರ್ಶನಗಳಾಗುವವು.


ಆದ್ದರಿಂದ ಯೋಸೇಫನು ಗಲಿಲಾಯದಲ್ಲಿನ ನಜರೇತ್ ಎಂಬ ಊರಿನಿಂದ ಹೊರಟು ಜುದೇಯದಲ್ಲಿನ ಬೆತ್ಲೆಹೇಮ್ ಎಂಬ ಊರಿಗೆ ಹೋದನು. ಯೋಸೇಫನು ದಾವೀದನ ಮನೆತನದವನಾಗಿದ್ದುದರಿಂದ ದಾವೀದನ ಊರಾದ ಬೆತ್ಲೆಹೇಮಿಗೆ ಹೋದನು.


ದೇವದೂತನು ಆ ಸ್ತ್ರೀಯರಿಗೆ, “ಹೆದರಬೇಡಿ, ಶಿಲುಬೆಗೇರಿಸಲ್ಪಟ್ಟ ಯೇಸುವನ್ನು ನೀವು ಹುಡುಕುತ್ತಿದ್ದೀರೆಂಬುದು ನನಗೆ ತಿಳಿದಿದೆ.


ಯೆಹೋವನೇ, ನಿನ್ನಲ್ಲಿ ಭರವಸವಿಟ್ಟವರಿಗೆ ನೀನು ನಿಜವಾದ ಸಮಾಧಾನವನ್ನು ಅನುಗ್ರಹಿಸುವೆ.


ಒಮ್ಮೆ ಯೆಹೋವನ ದೂತನು ಮಾನೋಹನ ಹೆಂಡತಿಗೆ ಪ್ರತ್ಯಕ್ಷನಾಗಿ, “ನೀನು ಮಕ್ಕಳನ್ನು ಪಡೆಯಲು ಸಾಧ್ಯವಾಗಿಲ್ಲ; ಆದರೆ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.


ದೇವದೂತನು ಕನಸಿನಲ್ಲಿ ನನ್ನ ಚೊತೆ ಮಾತಾಡಿ ‘ಯಾಕೋಬನೇ’ ಎಂದು ಕರೆದನು. “ನಾನು ‘ಇಗೋ ಇದ್ದೇನೆ’ ಎಂದು ಉತ್ತರಿಸಿದೆ.


ಆದರೆ ಹೆರೋದನು ಸತ್ತನಂತರ ಅವನ ಮಗನಾದ ಅರ್ಖೆಲಾಯನು ಜುದೇಯದ ರಾಜನಾಗಿದ್ದಾನೆ ಎಂಬುದನ್ನು ಕೇಳಿ ಅಲ್ಲಿಗೆ ಹೋಗಲು ಭಯಪಟ್ಟನು. ಕನಸಿನಲ್ಲಿ ತನಗೆ ಕೊಟ್ಟ ಎಚ್ಚರಿಕೆಯಂತೆ ಅವನು ಆ ಸ್ಥಳವನ್ನು ಬಿಟ್ಟು ಗಲಿಲಾಯ ಪ್ರದೇಶಕ್ಕೆ ಹೋಗಿ,


ಮುಂಜಾನೆಯಲ್ಲಿ ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನಾನು ಮಾಡಬೇಕಾದವುಗಳನ್ನು ನನಗೆ ತೋರಿಸು. ನಾನು ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿದ್ದೇನೆ!


ನಾನು ನಿನ್ನ ಸೇವಕ, ನಿನ್ನ ಒಡಂಬಡಿಕೆಯನ್ನು ಗ್ರಹಿಸಿಕೊಳ್ಳಲು ನನಗೆ ಬೇಕಾದ ವಿವೇಕವನ್ನು ದಯಪಾಲಿಸು.


ನಾನು ಚಿಂತೆಗಳಿಂದ ಗಲಿಬಿಲಿಗೊಂಡಿದ್ದಾಗ ನೀನು ನನ್ನನ್ನು ಸಂತೈಸಿ ಸಂತೋಷಪಡಿಸಿದೆ.


ಜ್ಞಾನಿಗಳು ಹೊರಟುಹೋದ ನಂತರ ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎದ್ದೇಳು! ಮಗುವನ್ನು ಮತ್ತು ಅದರ ತಾಯಿಯನ್ನು ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ಹೆರೋದನು ಮಗುವನ್ನು ಹುಡುಕಲು ಪ್ರಾರಂಭಿಸುವನು. ಅವನು ಮಗುವನ್ನು ಕೊಲ್ಲಬೇಕೆಂದಿದ್ದಾನೆ. ‘ಅಪಾಯವಿಲ್ಲ’ ಎಂದು ನಾನು ನಿನಗೆ ಹೇಳುವ ತನಕ ನೀನು ಈಜಿಪ್ಟಿನಲ್ಲೇ ಇರು” ಎಂದು ಹೇಳಿದನು.


ಅವರನ್ನು ತ್ಯಜಿಸಬಹುದೇನೋ! ಯಾಕೋಬನ ಸಂತಾನದವರನ್ನು ತ್ಯಜಿಸಿ ದಾವೀದನ ವಂಶದವರು ಅಬ್ರಹಾಮ, ಇಸಾಕ ಮತ್ತು ಯಾಕೋಬರ ಸಂತತಿಯವರನ್ನು ಆಳದಂತೆ ಮಾಡಬಹುದೇನೋ! ಆದರೆ ದಾವೀದನು ನನ್ನ ಸೇವಕ. ನಾನು ಅವರಿಗೆ ಕರುಣೆ ತೋರೇ ತೋರುವೆನು; ಅವರಿಗೆ ಒಳ್ಳೆಯದಾಗುವಂತೆ ಮಾಡೇ ಮಾಡುವೆನು.”


ಆದರೆ ನೀವು ತಪ್ಪು ಕಾರ್ಯಮಾಡಿದರೆ, ದುಷ್ಟತ್ವದಲ್ಲಿ ಜೀವಿಸಿದರೆ ನಿಮ್ಮ ಹಿಂದಿನಿಂದ ಒಂದು ಸ್ವರ, “ಇದು ಸರಿಯಾದ ಮಾರ್ಗ. ಈ ಮಾರ್ಗದಲ್ಲಿ ಮುಂದುವರಿಯಿರಿ” ಎಂದು ಹೇಳುವುದು ಕೇಳಿಸುವದು.


ಶಿಷ್ಟರ ಆಲೋಚನೆ ನ್ಯಾಯವಾಗಿವೆ. ದುಷ್ಟರ ಉಪದೇಶ ಮೋಸಕರ.


ಎಲೀಯನು ಆ ಸ್ತ್ರೀಗೆ, “ಚಿಂತಿಸದಿರು, ಮನೆಗೆ ಹೋಗಿ ನೀನು ಹೇಳಿದಂತೆ ಆಹಾರವನ್ನು ಸಿದ್ಧಪಡಿಸು. ಆದರೆ ನಿನ್ನಲ್ಲಿರುವ ಹಿಟ್ಟಿನಿಂದ ಮೊದಲು ಒಂದು ಚಿಕ್ಕ ರೊಟ್ಟಿಯನ್ನು ಮಾಡು. ಆ ರೊಟ್ಟಿಯನ್ನು ನನಗೆ ತಂದುಕೊಡು; ನಂತರ ನಿನಗೆ ಮತ್ತು ನಿನ್ನ ಮಗನಿಗೆ ಅಡಿಗೆ ಮಾಡಿಕೋ.


ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು, ಆ ಸೈನಿಕರು ಮತ್ತು ಅವರ ಜನರು ಈಗ ಅಲ್ಲಿ ಹೆಚ್ಚು ಸುರಕ್ಷಿತರೆಂದು ನಂಬಿಕೆಹುಟ್ಟುವ ಹಾಗೆ ಆಣೆಮಾಡಿ ಹೇಳಿದನು. ಗೆದಲ್ಯನು ಹೀಗೆ ಹೇಳಿದನು. “ಸೈನಿಕರೇ, ಬಾಬಿಲೋನಿನ ಜನರ ಸೇವೆಮಾಡಲು ಭಯಪಡಬೇಡಿ. ಈ ಪ್ರದೇಶದಲ್ಲಿ ನೆಲೆಸಿ ಬಾಬಿಲೋನಿನ ರಾಜನ ಸೇವೆಮಾಡಿರಿ. ನೀವು ಹೀಗೆ ಮಾಡಿದರೆ ನಿಮಗೆಲ್ಲ ಒಳ್ಳೆಯದಾಗುವುದು.


ನೀನು ಅಪನಂಬಿಗಸ್ತಳಾದ ಮಗಳಾಗಿದ್ದೆ. ಆದರೆ ನೀನು ಬದಲಾವಣೆ ಹೊಂದಿದೆ. ಈಗ ನೀನು ಮನೆಗೆ ಹಿಂದಿರುಗಿ ಬರಲು ಎಷ್ಟು ಹೊತ್ತು ಕಾದುಕೊಂಡಿರುವೆ. “ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಮಾಡಿದ್ದಾನೆ. ಹೆಂಗಸು ಗಂಡಸನ್ನು ಕಾಪಾಡುವಳು.”


ಒಳ್ಳೆಯತನವನ್ನು ಅರ್ಥಮಾಡಿಕೊಂಡ ನೀವು ನನ್ನ ಮಾತುಗಳನ್ನು ಕೇಳಿರಿ. ನನ್ನ ಬೋಧನೆಯನ್ನು ಅನುಸರಿಸುವ ನೀವು ನನ್ನ ಮಾತಿಗೆ ಕಿವಿಗೊಡಿರಿ. ದುಷ್ಟಜನರಿಗೆ ಭಯಪಡಬೇಡಿರಿ. ಅವರು ನಿಮಗೆ ಹೇಳುವ ಕೆಟ್ಟಮಾತುಗಳಿಗೆ ಭಯಪಡಬೇಡಿ.


ದೇವರು, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ, ನಾನು ಅವನಿಗೆ ನನ್ನನ್ನು ದರ್ಶನದಲ್ಲಿ ಗೊತ್ತುಪಡಿಸಿಕೊಳ್ಳುವೆನು ಅಥವಾ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.


ದೇವರು ಅವನಿಗೆ, “ನಾನೇ ದೇವರು, ನಾನೇ ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗಲು ಹೆದರಬೇಡ. ಈಜಿಪ್ಟಿನಲ್ಲಿ ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡುವೆ.


ದಾವೀದನ ವಂಶದವರಿಗೆ ಒಂದು ಸಂದೇಶವು ಕಳುಹಿಸಲ್ಪಟ್ಟಿತು, “ಅರಾಮ್ಯರ ಸೈನ್ಯ ಮತ್ತು ಎಫ್ರಾಯೀಮ್ಯರ ಸೈನ್ಯ (ಇಸ್ರೇಲ್) ಒಟ್ಟಾಗಿ ಶಿಬಿರ ಹೂಡಿದ್ದಾರೆ” ಎಂಬುದೇ ಆ ಸಂದೇಶ. ಅರಸನಾದ ಆಹಾಜನು ಈ ಸಂದೇಶವನ್ನು ಕೇಳಿದಾಗ, ಅವನೂ ಅವನ ಜನರೂ ಬಹಳವಾಗಿ ಭಯಹಿಡಿದವರಾದರು. ಅಡವಿಯ ಮರಗಳು ಬಿರುಗಾಳಿಗೆ ತತ್ತರಿಸುತ್ತವೋ ಎಂಬಂತೆ ಅವರು ತತ್ತರಿಸಿದರು.


ಆಗ ಯೆಶಾಯನು ಹೇಳಿದ್ದೇನೆಂದರೆ, “ದಾವೀದನ ಮನೆತನದವರೇ, ಕಿವಿಗೊಟ್ಟು ಕೇಳಿರಿ. ನೀವು ಜನರ ತಾಳ್ಮೆಯನ್ನು ಪರೀಕ್ಷಿಸುತ್ತೀರಿ. ಆದರೆ ಅದು ನಿಮಗೆ ದೊಡ್ಡ ವಿಷಯವಲ್ಲ. ಆದರೆ ಈಗ ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದೀರಿ.


ಸೊಲೊಮೋನನು ಗಿಬ್ಯೋನಿನಲ್ಲಿದ್ದಾಗ, ಯೆಹೋವನು ರಾತ್ರಿ ಕನಸಿನಲ್ಲಿ ಅವನಿಗೆ ದರ್ಶನವನ್ನು ನೀಡಿ, “ನೀನು ಏನುಬೇಕಾದರೂ ಕೇಳು. ನಾನು ಅದನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.


ಆದರೆ ದೇವರು ಜ್ಞಾನಿಗಳಿಗೆ ಕನಸಿನಲ್ಲಿ, “ನೀವು ಹೆರೋದನ ಬಳಿಗೆ ಹಿಂತಿರುಗಿ ಹೋಗಕೂಡದು” ಎಂದು ಎಚ್ಚರಿಸಿದನು. ಆದ್ದರಿಂದ ಅವರು ಬೇರೊಂದು ಮಾರ್ಗದ ಮೂಲಕ ತಮ್ಮ ದೇಶಕ್ಕೆ ಹೊರಟುಹೋದರು.


ಪಿಲಾತನು ನ್ಯಾಯಸ್ಥಾನದಲ್ಲಿ ಕುಳಿತುಕೊಂಡಿದ್ದಾಗ ಅವನ ಪತ್ನಿಯು ಒಂದು ಸಂದೇಶವನ್ನು ಕಳುಹಿಸಿದ್ದಳು. “ಆ ಮನುಷ್ಯನಿಗೆ ಏನನ್ನೂ ಮಾಡಬೇಡ. ಅವನು ತಪ್ಪಿತಸ್ಥನಲ್ಲ. ಆತನ ನಿಮಿತ್ತ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ” ಎಂಬುದೇ ಆ ಸಂದೇಶ.


ಆದರೆ ರಾತ್ರಿಯಲ್ಲಿ ಪ್ರಭುವಿನ ದೂತನೊಬ್ಬನು ಸೆರೆಮನೆಯ ಬಾಗಿಲುಗಳನ್ನು ತೆರೆದನು. ದೇವದೂತನು ಅಪೊಸ್ತಲರನ್ನು ಕರೆದುಕೊಂಡು ಹೊರಗೆ ಬಂದು ಅವರಿಗೆ,


ನಾವೆಲ್ಲರೂ ಆನಂದಿಸೋಣ ಮತ್ತು ಸಂತಸಪಡೋಣ! ದೇವರನ್ನು ಮಹಿಮೆಪಡಿಸೋಣ! ಕುರಿಮರಿಯಾದಾತನ (ಯೇಸು) ವಿವಾಹಕಾಲ ಬಂದಿರುವುದರಿಂದ ದೇವರನ್ನು ಘನಪಡಿಸೋಣ. ಕುರಿಮರಿಯಾದಾತನ ವಧು (ಸಭೆ) ತನ್ನನ್ನು ಸಿದ್ಧಪಡಿಸಿಕೊಂಡಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು