Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:14 - ಪರಿಶುದ್ದ ಬೈಬಲ್‌

14 ಒಂದು ಮನೆಯವರು ಅಥವಾ ಒಂದು ಊರಿನವರು ನಿಮ್ಮನ್ನು ಸ್ವಾಗತಿಸದಿದ್ದರೆ ಇಲ್ಲವೇ ನಿಮ್ಮ ಮಾತನ್ನು ಕೇಳದಿದ್ದರೆ ನೀವು ಆ ಸ್ಥಳವನ್ನು ಬಿಟ್ಟುಹೋಗುವಾಗ, ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಒಂದು ಮನೆಯೇ ಆಗಲಿ, ಊರೇ ಆಗಲಿ, ನಿಮ್ಮನ್ನು ಸ್ವಾಗತಿಸದೆ ಅಥವಾ ನಿಮಗೆ ಕಿವಿಗೊಡದೆಹೋದರೆ, ಆ ಮನೆಯನ್ನು ಅಥವಾ ಊರನ್ನು ಬಿಟ್ಟು ಮುಂದಕ್ಕೆ ಹೋಗಿರಿ. ಹೋಗುವಾಗ ನಿಮ್ಮ ಪಾದಗಳಿಗೆ ಅಂಟಿರುವ ದೂಳನ್ನೂ ಝಾಡಿಸಿಬಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನು ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ದೂಳನ್ನು ಝಾಡಿಸಿಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ, ನೀವು ಆ ಮನೆಯನ್ನು ಇಲ್ಲವೆ ಆ ಪಟ್ಟಣವನ್ನು ಬಿಟ್ಟು ಹೊರಡುವಾಗ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅನಿ ಜರ್ ಎಕ್ ಗಾವಾತ್ಲ್ಯಾ ಲೊಕಾನಿ ನಾಹೊಲ್ಯಾರ್ ಘರಾತ್ಲ್ಯಾ ಲೊಕಾನಿ ತುಮ್ಕಾ ಮರ್‍ಯಾದ್ ದಿನಸ್ಲ್ಯಾರ್, ಅನಿ ತುಮಿ ಸಾಂಗಲ್ಲೆ ಆಯ್ಕಿನಸ್ಲ್ಯಾರ್ ತೊ ಜಾಗೊ ಸೊಡುನ್ ಫಿಡೆ ಚಲಾ, ಅನಿ ಜಾತಾನಾ ತುಮ್ಚ್ಯಾ ಪಾಯಾಂಚಿ ಧುಳ್ ಫಾಪ್ಡಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:14
14 ತಿಳಿವುಗಳ ಹೋಲಿಕೆ  

ಆದರೆ ಯೆಹೂದ್ಯರು ಪೌಲನ ಉಪದೇಶವನ್ನು ತಿರಸ್ಕರಿಸಿ ದೂಷಣೆ ಮಾಡಿದರು. ಆದ್ದರಿಂದ ಪೌಲನು ತನ್ನ ಬಟ್ಟೆಗಳ ಧೂಳನ್ನು ಝಾಡಿಸಿ ಯೆಹೂದ್ಯರಿಗೆ, “ನೀವು ರಕ್ಷಣೆ ಹೊಂದದಿದ್ದರೆ, ಅದು ನಿಮ್ಮ ಸ್ವಂತ ತಪ್ಪು. ನನ್ನಿಂದ ಸಾಧ್ಯವಾದದ್ದನ್ನೆಲ್ಲ ನಾನು ಮಾಡಿದ್ದೇನೆ. ಇನ್ನು ಮೇಲೆ ನಾನು ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇನೆ!” ಎಂದು ಹೇಳಿದನು.


ನಂತರ ನಾನು ನನ್ನ ಉಡುಪಿನ ನೆರಿಗೆಯನ್ನು ಝಾಡಿಸಿ, “ತಾನು ಮಾಡಿದ ಪ್ರತಿಜ್ಞೆಯಂತೆ ನಡೆಯದವನನ್ನು ದೇವರು ಅವನ ಮನೆಯಿಂದ ಝಾಡಿಸಿಬಿಡಲಿ; ಅವನು ತಾನು ಗಳಿಸಿದ್ದೆಲ್ಲವನ್ನು ಕಳೆದುಕೊಳ್ಳಲಿ” ಎಂದು ಹೇಳಿದಾಗ ಜನರೆಲ್ಲರೂ “ಆಮೆನ್” ಅಂದರು; ಯೆಹೋವನನ್ನು ಸ್ತುತಿಸಿದರು. ತಾವು ಮಾಡಿದ ಪ್ರತಿಜ್ಞೆಯಂತೆ ನಡೆದುಕೊಂಡರು.


ಆದ್ದರಿಂದ ಪೌಲ ಬಾರ್ನಬರು ಅವರ ವಿರೋಧವಾಗಿ ತಮ್ಮ ಕಾಲಿನ ಧೂಳನ್ನು ಝಾಡಿಸಿ, ಇಕೋನಿಯಾ ಪಟ್ಟಣಕ್ಕೆ ಹೋದರು.


ಆ ಊರಿನ ಜನರು ನಿಮ್ಮನ್ನು ಸ್ವಾಗತಿಸದಿದ್ದರೆ, ಆ ಊರಿನ ಹೊರಗೆ ಹೋಗಿ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ಅದು ಅವರಿಗೆ ಎಚ್ಚರಿಕೆಯಾಗಿರುವುದು.”


ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದಿದ್ದರೆ ಮತ್ತು ನಿಮ್ಮ ಬೋಧನೆಯನ್ನು ಕೇಳದಿದ್ದರೆ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿ ಆ ಊರನ್ನು ಬಿಟ್ಟುಹೋಗಿರಿ. ಇದು ಅವರಿಗೆ ಎಚ್ಚರಿಕೆಯಾಗಿರುತ್ತದೆ.”


ಆದುದರಿಂದ ಈ ಉಪದೇಶವನ್ನು ಅನುಸರಿಸದವನು ಅವಿಧೇಯನಾಗಿರುವುದು ದೇವರಿಗೇ ಹೊರತು ಮಾನವನಿಗಲ್ಲ. ನಮಗೆ ತನ್ನ ಪವಿತ್ರಾತ್ಮನನ್ನು ನೀಡಿದಾತನು ದೇವರೇ.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನು ಕಳುಹಿಸುವ ಯಾರನ್ನಾದರೂ ಸ್ವೀಕರಿಸಿಕೊಳ್ಳುವವನು ನನ್ನನ್ನೇ ಸ್ವೀಕರಿಸಿಕೊಳ್ಳುವವನಾಗಿದ್ದಾನೆ. ನನ್ನನ್ನು ಸ್ವೀಕರಿಸಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುವವನಾಗಿದ್ದಾನೆ.”


“ನನ್ನ ಹೆಸರಿನಲ್ಲಿ ಇಂಥ ಮಕ್ಕಳನ್ನು ಸ್ವೀಕರಿಸಿಕೊಳ್ಳುವವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ನನ್ನನ್ನು ಸ್ವೀಕರಿಸಿಕೊಳ್ಳುವವನು, ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಂಡಂತಾಯಿತು” ಎಂದು ಹೇಳಿದನು.


“ಯಾವನಾದರೂ ನನ್ನ ಹೆಸರಿನಲ್ಲಿ ಒಂದು ಚಿಕ್ಕ ಮಗುವನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು.


ಬಳಿಕ ಯೇಸು ತನ್ನ ಶಿಷ್ಯರಿಗೆ, “ಒಬ್ಬನು ನನ್ನ ಹೆಸರಿನಲ್ಲಿ ಒಂದು ಚಿಕ್ಕ ಮಗುವನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ಒಬ್ಬನು ನನ್ನನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನು ಕಳುಹಿಸಿದಾತನನ್ನೇ (ದೇವರನ್ನು) ಸ್ವೀಕರಿಸಿಕೊಂಡಂತಾಯಿತು. ನಿಮ್ಮಲ್ಲಿ ಯಾವನು ದೀನನಾಗಿದ್ದಾನೋ ಅವನೇ ನಿಮ್ಮಲ್ಲಿ ಪ್ರಮುಖನಾಗಿದ್ದಾನೆ” ಎಂದು ಹೇಳಿದನು.


ಆ ಮನೆಯಲ್ಲಿರುವ ಜನರು ನಿಮ್ಮನ್ನು ಸ್ವಾಗತಿಸಿದರೆ ನಿಮ್ಮ ಆಶೀರ್ವಾದಕ್ಕೆ ಅವರು ಯೋಗ್ಯರಾಗಿರುವುದರಿಂದ ಆ ಆಶೀರ್ವಾದವು ಅವರಿಗೆ ದೊರೆಯಲಿ. ಅವರು ನಿಮ್ಮನ್ನು ಸ್ವಾಗತಿಸದಿದ್ದರೆ, ನಿಮ್ಮ ಆಶೀರ್ವಾದವು ನಿಮಗೇ ಹಿಂತಿರುಗಿಬರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು