Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:20 - ಪರಿಶುದ್ದ ಬೈಬಲ್‌

20 ಮಾತಾಡುವವರು ನಿಜವಾಗಿಯೂ ನೀವಲ್ಲ. ನಿಮ್ಮ ತಂದೆಯ ಆತ್ಮನೇ ನಿಮ್ಮ ಮೂಲಕ ಮಾತನಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತನಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಗ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮ ಮುಖಾಂತರ ಮಾತನಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮಾತಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಏಕೆಂದರೆ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮೊಳಗಿಂದ ಮಾತನಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತನ್ನಾ ತುಮಿ ಬೊಲ್ತಲ್ಯಾ ಗೊಸ್ಟಿಯಾ ತುಮ್ಚ್ಯಾ ಗೊಸ್ಟಿಯಾ ನ್ಹಯ್ ತ್ಯಾ ಗೊಸ್ಟಿಯಾ ತುಮ್ಚ್ಯಾ ಸರ್‍ಗಾ ವೈಲ್ಯಾ ಬಾಬಾಚೊ ಪವಿತ್ರ್ ಅತ್ಮೊಚ್ ತುಮ್ಚ್ಯಾ ತೊಂಡಾನಿತ್ನಾ ಬೊಲ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:20
18 ತಿಳಿವುಗಳ ಹೋಲಿಕೆ  

ಆದರೆ ವಿವೇಕದಿಂದ ಮಾತಾಡಲು ಪವಿತ್ರಾತ್ಮನು ಅವನಿಗೆ ಸಹಾಯಮಾಡಿದನು. ಸ್ತೆಫನನ ಮಾತುಗಳು ಬಹು ಶಕ್ತಿಯುತವಾಗಿದ್ದ ಕಾರಣ ಅವನೊಂದಿಗೆ ವಾದಿಸಲು ಅವರಿಗೆ ಸಾಧ್ಯವಾಗದೆ,


ಏಕೆಂದರೆ ನಾನೇ ನಿಮಗೆ ಜ್ಞಾನವನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ವೈರಿಗಳಲ್ಲಿ ಯಾರೂ ನಿಮ್ಮ ಮಾತಿಗೆ ಪ್ರತ್ಯುತ್ತರವನ್ನು ಕೊಡಲು ಸಾಧ್ಯವಿಲ್ಲ.


ಆ ಸಮಯದಲ್ಲಿ ನೀವು ಹೇಳಬೇಕಾದುದನ್ನು ಪವಿತ್ರಾತ್ಮನೇ ನಿಮಗೆ ತಿಳಿಸುವನು.”


ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. ಆತನ ನುಡಿಗಳು ನನ್ನ ನಾಲಿಗೆಯ ಮೇಲಿವೆ.


ಯಾವ ಪ್ರವಾದನೆಯೇ ಆಗಲಿ ಮನುಷ್ಯನ ಚಿತ್ತದಿಂದ ಬಂದಿಲ್ಲ. ಆದರೆ ಜನರು ಪವಿತ್ರಾತ್ಮನಿಂದ ನಡೆಸಲ್ಪಟ್ಟು ದೇವರಿಂದ ಹೊಂದಿದ್ದನ್ನೇ ಮಾತನಾಡಿದರು.


ಆಗ ಪೇತ್ರನು ಪವಿತ್ರಾತ್ಮಭರಿತನಾದನು. ಅವನು ಅವರಿಗೆ, “ಜನನಾಯಕರೇ ಮತ್ತು ಹಿರಿಯನಾಯಕರೇ,


ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ವಿವಿಧ ಭಾಷೆಗಳಲ್ಲಿ ಮಾತಾಡತೊಡಗಿದರು. ಪವಿತ್ರಾತ್ಮನೇ ಅವರಿಗೆ ಆ ಶಕ್ತಿಯನ್ನು ಕೊಟ್ಟನು.


ಕ್ರಿಸ್ತನು ನನ್ನ ಮೂಲಕ ಮಾತಾಡುತ್ತಿದ್ದಾನೆ ಎಂಬುದಕ್ಕೆ ನಿಮಗೆ ಸಾಕ್ಷಿಬೇಕು. ನನಗಿರುವ ಸಾಕ್ಷಿ ಏನೆಂದರೆ, ಕ್ರಿಸ್ತನು ನಿಮ್ಮನ್ನು ದಂಡಿಸುವುದರಲ್ಲಿ ಬಲಹೀನನಲ್ಲ. ಕ್ರಿಸ್ತನು ನಿಮ್ಮ ಮಧ್ಯದಲ್ಲಿ ಬಲಿಷ್ಠನಾಗಿದ್ದಾನೆ.


ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.


ಅವರು ವಾದಮಾಡಿ ಅಲ್ಲಿಂದ ಹೊರಡಲು ಸಿದ್ಧರಾದಾಗ ಪೌಲನು ಅವರಿಗೆ ಹೀಗೆಂದನು: “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಮೂಲಕ ಪಿತೃಗಳಿಗೆ ಸತ್ಯವನ್ನು ತಿಳಿಸಿದನು. ಆತನು ಹೀಗೆ ಹೇಳಿದ್ದಾನೆ:


ಆದರೆ ಪೌಲನು (ಸೌಲನ ಮತ್ತೊಂದು ಹೆಸರು ಪೌಲ.) ಪವಿತ್ರಾತ್ಮಭರಿತನಾದನು. ಪೌಲನು ಎಲಿಮನನ್ನು ದಿಟ್ಟಿಸಿ ನೋಡಿ,


ನೀವು ಇತರ ಜನರಂತೆ ಕೆಟ್ಟವರಾಗಿದ್ದೀರಿ. ಆದರೆ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡುತ್ತೀರಿ. ಅದೇ ರೀತಿಯಲ್ಲಿ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ತನ್ನನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮನನ್ನು ಖಂಡಿತವಾಗಿ ಕೊಡುತ್ತಾನೆ” ಎಂದು ಹೇಳಿದನು.


‘ಪ್ರಭುವು ನನ್ನ ಪ್ರಭುವಿಗೆ, ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ನನ್ನೊಂದಿಗೆ ಕುಳಿತುಕೊಂಡಿರು’ ಎಂದು ಹೇಳಿದ್ದಾನೆ ಎಂಬುದಾಗಿ ದಾವೀದನೇ ಪವಿತ್ರಾತ್ಮ ಪ್ರೇರಣೆಯಿಂದ ಬರೆದಿದ್ದಾನಲ್ಲಾ!


ದೇವರನ್ನು ತಿಳಿಯದ ಜನರೆಲ್ಲರೂ ಇವುಗಳನ್ನು ಪಡೆಯಲು ಪ್ರಯತ್ನಿಸುತ್ತಾರೆ. ಚಿಂತಿಸಬೇಡಿರಿ, ಏಕೆಂದರೆ ಈ ವಸ್ತುಗಳು ನಿಮಗೆ ಅಗತ್ಯವೆಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ.


ಈಗ ಹೋಗು. ನೀನು ಮಾತಾಡುವಾಗ ನಾನೇ ನಿನ್ನೊಂದಿಗಿರುವೆನು. ನೀನು ಹೇಳಬೇಕಾದ ಮಾತುಗಳನ್ನು ನಾನು ನಿನಗೆ ಕೊಡುವೆನು” ಎಂದು ಹೇಳಿದನು.


ನೀವು ದೇವರ ಸಂದೇಶವನ್ನು ಸ್ವೀಕರಿಸಿಕೊಂಡದ್ದಕ್ಕಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನೀವು ಆ ಸಂದೇಶವನ್ನು ನಮ್ಮಿಂದ ಕೇಳಿ, ಅದನ್ನು ದೇವರ ವಾಕ್ಯದಂತೆ ಒಪ್ಪಿಕೊಂಡಿರೇ ಹೊರತು ಮಾನವನ ವಾಕ್ಯಗಳೆಂದಲ್ಲ. ಅದು ನಿಜವಾಗಿಯೂ ದೇವರ ಸಂದೇಶ. ಆ ಸಂದೇಶವು ನಂಬುವವರಾದ ನಿಮ್ಮಲ್ಲಿ ಕಾರ್ಯಮಾಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು