Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:27 - ಪರಿಶುದ್ದ ಬೈಬಲ್‌

27 ನಾನು ಕತ್ತಲೆಯಲ್ಲಿ (ರಹಸ್ಯವಾಗಿ) ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದೇನೆ. ಆದರೆ ನೀವು ಈ ಸಂಗತಿಗಳನ್ನು ಬೆಳಕಿನಲ್ಲಿ ಹೇಳಬೇಕೆಂಬುದು ನನ್ನ ಇಷ್ಟ. ನಾನು ಈ ವಿಷಯಗಳನ್ನು ನಿಮಗೆ ಮೆಲ್ಲಗೆ ಹೇಳುತ್ತಿದ್ದೇನೆ. ಆದರೆ ನೀವು ಈ ವಿಷಯಗಳನ್ನು ಜನರಿಗೆಲ್ಲ ಗಟ್ಟಿಯಾಗಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರಪಡಿಸಿರಿ, ಕಿವಿಮಾತಾಗಿ ಕೇಳಿದ್ದನ್ನು ಮನೆಮಾಳಿಗೆಯ ಮೇಲೆ ನಿಂತು ಸಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಾನು ಕತ್ತಲಲ್ಲಿ ನಿಮಗೆ ಹೇಳುವದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾನು ನಿಮಗೆ ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ. ನೀವು ಕಿವಿಯಲ್ಲಿ ಕೇಳುವುದನ್ನು ಮಾಳಿಗೆಯ ಮೇಲೆ ಸಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಿಯಾ ಕಾಯ್ ಕಾಳ್ಕಾತ್ ಸಾಂಗುಕ್ ಲಾಗ್ಲಾ, ತೆ ತುಮಿ ದಿಸಾಚ್ಯಾ ಮೊಟ್ಯಾ ಉಜ್ವೊಡಾತ್ ಸಾಂಗುಕ್ ಪಾಜೆ, ಅನಿ ಜೆ ಕಾಯ್ ತುಮಿ ಕಡೆಕ್ ಎಗ್ಳೆಚ್ ಹೊತ್ತ್ಯಾ ತನ್ನಾ ಆಯ್ಕುಲ್ಯಾಶಿ ತೆ ತುಮಿ ಹುಜರಾತಿ ಸಗ್ಳ್ಯಾ ಲೊಕಾಕ್ನಿ ಇದ್ರಾಕ್ ಸಾಂಗುಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:27
16 ತಿಳಿವುಗಳ ಹೋಲಿಕೆ  

“ಹೋಗಿ ದೇವಾಲಯದಲ್ಲಿ ನಿಂತುಕೊಳ್ಳಿರಿ. ಯೇಸುವಿನಲ್ಲಿರುವ ಈ ಹೊಸ ಜೀವಿತದ ಬಗ್ಗೆ ಪ್ರತಿಯೊಂದನ್ನೂ ಜನರಿಗೆ ಹೇಳಿರಿ” ಎಂದನು.


ಆದರೆ ಸತ್ಯದ ಆತ್ಮನು ಬಂದಾಗ, ಆತನು ನಿಮ್ಮನ್ನು ಸಕಲ ವಿಷಯದಲ್ಲಿಯೂ ಸತ್ಯಕ್ಕೆ ನಡೆಸುವನು. ಸತ್ಯದ ಆತ್ಮನು ಹೇಳುವುದು ಆತನ ಸ್ವಂತ ಮಾತುಗಳಲ್ಲ. ತಾನು ಕೇಳಿದ್ದನ್ನು ಮಾತ್ರ ಆತನು ಹೇಳುತ್ತಾನೆ. ಸಂಭವಿಸಲಿರುವ ಸಂಗತಿಗಳನ್ನು ಆತನು ನಿಮಗೆ ತಿಳಿಸುತ್ತಾನೆ.


“ಜನರು ನಿಮ್ಮ ನಂಬಿಕೆಯನ್ನು ನಾಶಮಾಡಲಾಗದಂತೆ ನಾನು ಈ ಸಂಗತಿಗಳನ್ನೆಲ್ಲಾ ನಿಮಗೆ ಹೇಳಿದ್ದೇನೆ.


“ಈ ಮನುಷ್ಯನ (ಯೇಸುವಿನ) ಬಗ್ಗೆ ನೀವು ಬೋಧಿಸಕೂಡದೆಂದು ನಾವು ನಿಮಗೆ ಆಜ್ಞಾಪಿಸಿದೆವು. ಆದರೆ ನೀವು ಮಾಡಿರುವುದೇನು? ನೀವು ಜೆರುಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿಬಿಟ್ಟಿದ್ದೀರಿ. ಈ ಮನುಷ್ಯನ (ಯೇಸುವಿನ) ಸಾವಿಗೆ ನಮ್ಮನ್ನೇ ಜವಾಬ್ದಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದರು.


ಆಗ ಶಿಷ್ಯರು ಯೇಸುವಿಗೆ, “ಈಗ ನೀನು ನಮ್ಮೊಂದಿಗೆ ಸ್ಪಷ್ಟವಾಗಿ ಮಾತಾಡುತ್ತಿರುವೆ. ಅರ್ಥವಾಗದಂಥ ಕಠಿಣ ಮಾತುಗಳನ್ನು ನೀನು ಬಳಸುತ್ತಿಲ್ಲ.


“ನಾನು ನಿಮಗೆ ಈ ಸಂಗತಿಗಳನ್ನು ಸಾಮ್ಯಗಳ ರೂಪದಲ್ಲಿ ತಿಳಿಸಿದೆನು. ಆದರೆ ಸಮಯವು ಬರಲಿದೆ. ಆಗ ನಾನು ಸಾಮ್ಯಗಳನ್ನು ಬಳಸದೆ ನನ್ನ ತಂದೆಯ ಬಗ್ಗೆ ಸರಳವಾದ ಮಾತುಗಳಲ್ಲಿ ತಿಳಿಸುವೆನು.


ಯೇಸು, “ನೀವು ದೇವರ ರಾಜ್ಯದ ಗುಟ್ಟುಗಳನ್ನು ತಿಳಿದುಕೊಳ್ಳಬೇಕೆಂದು ನಿಮ್ಮನ್ನು ಆರಿಸಿಕೊಳ್ಳಲಾಗಿದೆ. ಆದರೆ ಬೇರೆ ಜನರೊಂದಿಗೆ ನಾನು ಸಾಮ್ಯಗಳ ಮೂಲಕ ಮಾತಾಡುತ್ತೇನೆ, ಏಕೆಂದರೆ, ‘ಅವರು ನೋಡಿದರೂ ಕಾಣುವುದಿಲ್ಲ, ಕೇಳಿದರೂ ಗ್ರಹಿಸಿಕೊಳ್ಳುವುದಿಲ್ಲ.’


ನಮಗೆ ಈ ನಿರೀಕ್ಷೆ ಇರುವುದರಿಂದ ನಾವು ಬಹಳ ಧೈರ್ಯವಾಗಿದ್ದೇವೆ.


ಸಭಾಮಂದಿರದಲ್ಲಿ ಪೌಲನು ಯೆಹೂದ್ಯರೊಂದಿಗೆ ಮತ್ತು ಯೆಹೂದ್ಯರಾಗಿದ್ದ ಗ್ರೀಕರೊಂದಿಗೆ ಚರ್ಚಿಸಿದನು. ಪಟ್ಟಣದ ವ್ಯಾಪಾರಸ್ಥಳದಲ್ಲಿಯೂ ಪೌಲನು ಕೆಲವು ಜನರೊಂದಿಗೆ ಪ್ರತಿದಿನ ಚರ್ಚಿಸಿದನು.


ದಿವ್ಯದರ್ಶನದ ಕಣಿವೆಯ ವಿಷಯವಾಗಿ ದುಃಖದ ಸಂದೇಶ: ಜನಗಳೇ, ನಿಮಗೆ ಏನಾಯಿತು? ನಿಮ್ಮ ಮನೆ ಮಾಳಿಗೆಯ ಮೇಲೆ ಯಾಕೆ ಅಡಗಿರುತ್ತೀರಿ?


ಮಾಳಿಗೆಯ ಮೇಲಿರುವವನು ಇಳಿದು ತನ್ನ ವಸ್ತುಗಳನ್ನು ಮನೆಯಿಂದ ತೆಗೆದುಕೊಳ್ಳದೆ ಓಡಿಹೋಗಲಿ.


ಕತ್ತಲಿನಲ್ಲಿ (ಗುಪ್ತವಾಗಿ) ನೀವು ಹೇಳುವ ವಿಷಯಗಳು ಬೆಳಕಿನಲ್ಲಿ (ಬಹಿರಂಗವಾಗಿ) ತಿಳಿಸಲ್ಪಡುವವು. ಗುಪ್ತವಾಗಿ ಕೋಣೆಯಲ್ಲಿ ನೀವು ಪಿಸುಗುಟ್ಟುವ ವಿಷಯಗಳು, ಮನೆಯ ಮೇಲಿನಿಂದ ಗಟ್ಟಿಯಾಗಿ ಪ್ರಕಟಿಸಲ್ಪಡುವವು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು