Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:28 - ಪರಿಶುದ್ದ ಬೈಬಲ್‌

28 “ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ದೇಹ ಎರಡನ್ನೂ ಕೂಡ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತುಮ್ಚ್ಯಾ ಹ್ಯಾ ಆಂಗಾಚೊ ಜಿವ್ ಕಾಡ್ತಲ್ಯಾಕ್ ಭಿಂವ್‍ನಕಾಶಿ, ತೆನಿ ತುಮ್ಚ್ಯಾ ಅತ್ಮ್ಯಾಕ್ ಕಾಯ್-ಬಿ ಕರುಕ್ ಹೊಯ್ನಾ. ಖರೆ ಆಂಗ್ ಅನಿ ಆತ್ಮೊ ದೊನಿಬಿ ನರ್‍ಕಾತ್ ಘಾಲ್ತಲೊ ಅದಿಕಾರ್ ಹೊತ್ತ್ಯಾ ದೆವಾಕ್ ಭಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:28
30 ತಿಳಿವುಗಳ ಹೋಲಿಕೆ  

ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು.


ದೇವರೊಬ್ಬನೇ ನಿಯಮಗಳನ್ನು ಮಾಡುವಾತನು. ಆತನೊಬ್ಬನೇ ನಿಜವಾದ ನ್ಯಾಯಾಧಿಪತಿ. ದೇವರೊಬ್ಬನೇ ರಕ್ಷಿಸಬಲ್ಲನು ಮತ್ತು ನಾಶಮಾಡಬಲ್ಲನು. ಆದ್ದರಿಂದ ಬೇರೊಬ್ಬ ವ್ಯಕ್ತಿಯ ಬಗ್ಗೆ ತೀರ್ಪು ನೀಡುವುದು ನಿಮಗೆ ಯೋಗ್ಯವಾದುದಲ್ಲ.


ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.


ಯೆಹೋವನು ಹೇಳುವುದೇನೆಂದರೆ, “ನಿನ್ನನ್ನು ಸಂತೈಸುವಾತನು ನಾನೇ. ಆದ್ದರಿಂದ ನೀನು ಜನರಿಗೆ ಯಾಕೆ ಹೆದರಬೇಕು. ಅವರು ಹುಟ್ಟಿ ಸಾಯುವ ನರರಾಗಿದ್ದಾರೆ. ಅವರು ಹುಲ್ಲಿನಂತೆ ಸಾಯುವ ಕೇವಲ ಮಾನವರಾಗಿದ್ದಾರೆ.”


ಉಪಯೋಗವಿಲ್ಲದ ನಿಮ್ಮ ಕನಸುಗಳಾಗಲಿ ಜಂಬದ ಮಾತುಗಳಾಗಲಿ ನಿಮ್ಮನ್ನು ಕೇಡಿಗೆ ನಡೆಸದಂತೆ ನೋಡಿಕೊಳ್ಳಿರಿ; ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ.


ಆದರೆ ಯೋಗ್ಯವಾದುದನ್ನು ಮಾಡುವಾಗ ನೀವು ಸಂಕಟಪಡಬೇಕಾಗಬಹುದು. ಆದರೆ “ನಿಮ್ಮನ್ನು ಸಂಕಟಕ್ಕೆ ಒಳಪಡಿಸುವ ಜನರಿಗೆ ಹೆದರಬೇಡಿರಿ ಮತ್ತು ಚಿಂತಿಸಬೇಡಿರಿ.”


ನಾನೇ ಎಲ್ಲವನ್ನು ಉಂಟುಮಾಡಿದೆನು. ನಾನು ಸೃಷ್ಟಿಸಿದ್ದರಿಂದ ಅವು ಅಸ್ತಿತ್ವದಲ್ಲಿವೆ.” ಇವು ಯೆಹೋವನ ನುಡಿಗಳು. “ಎಂಥ ಜನರನ್ನು ನಾನು ಪರಿಪಾಲಿಸುತ್ತೇನೆಂದು ಕೇಳುವಿರಾ? ಬಡವರ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ದುಃಖಿಸುವ ಜನರಿಗಾಗಿ ನಾನು ಚಿಂತಿಸುತ್ತೇನೆ. ನನ್ನ ಮಾತುಗಳಿಗೆ ವಿಧೇಯರಾಗುವವರಿಗಾಗಿ ನಾನು ಚಿಂತಿಸುತ್ತೇನೆ.


ನಾನು ನಿನ್ನಲ್ಲಿ ಭಯವುಳ್ಳವನಾಗಿದ್ದೇನೆ. ನಾನು ನಿನ್ನ ತೀರ್ಪುಗಳಿಗೆ ಅಂಜಿಕೊಂಡಿದ್ದೇನೆ.


“ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”


ಒಳ್ಳೆಯತನವನ್ನು ಅರ್ಥಮಾಡಿಕೊಂಡ ನೀವು ನನ್ನ ಮಾತುಗಳನ್ನು ಕೇಳಿರಿ. ನನ್ನ ಬೋಧನೆಯನ್ನು ಅನುಸರಿಸುವ ನೀವು ನನ್ನ ಮಾತಿಗೆ ಕಿವಿಗೊಡಿರಿ. ದುಷ್ಟಜನರಿಗೆ ಭಯಪಡಬೇಡಿರಿ. ಅವರು ನಿಮಗೆ ಹೇಳುವ ಕೆಟ್ಟಮಾತುಗಳಿಗೆ ಭಯಪಡಬೇಡಿ.


“ಪ್ರಭುವು ತನ್ನ ಜನರಿಗೆ ನ್ಯಾಯತೀರ್ಪು ನೀಡುತ್ತಾನೆ” ಎಂದು ಸಹ ದೇವರು ಹೇಳಿದ್ದಾನೆ. ಜೀವಸ್ವರೂಪನಾದ ದೇವರ ಹಿಡಿತಕ್ಕೆ ಸಿಕ್ಕಿ ಬೀಳುವುದು ಪಾಪಿಗೆ ಭಯಂಕರವಾಗಿದೆ.


“ಆದಕಾರಣ ಆ ಜನರಿಗೆ ಹೆದರಬೇಡಿ. ಮರೆಯಾಗಿರುವ ಪ್ರತಿಯೊಂದೂ ಬಹಿರಂಗವಾಗುವುದು. ಗುಪ್ತವಾಗಿರುವ ಪ್ರತಿ ಸಂಗತಿಯು ಬಯಲಾಗುವುದು.


ಸತ್ತುಹೋಗಿದ್ದವರು ಸಾವಿನಿಂದ ಮೇಲೆದ್ದರು ಮತ್ತು ಅವರನ್ನು ಅವರವರ ಕುಟುಂಬಗಳ ಸ್ತ್ರೀಯರಿಗೆ ಒಪ್ಪಿಸಲಾಯಿತು. ಇತರ ಕೆಲವರು ಯಾತನೆಯನ್ನು ಅನುಭವಿಸುತ್ತಿದ್ದಾಗಲೂ ಪುನರುತ್ಥಾನದ ನಂತರವಿರುವ ಶ್ರೇಷ್ಠ ಜೀವಿತಕ್ಕಾಗಿ ಬಿಡುಗಡೆ ಹೊಂದಲು ಒಪ್ಪಲಿಲ್ಲ.


ಆದರೆ ಪೌಲನು, “ನೀವು ಯಾಕೆ ಅಳುತ್ತಿರುವಿರಿ? ನೀವು ನನಗೆ ಬಹು ದುಃಖವನ್ನು ಯಾಕೆ ಉಂಟು ಮಾಡುತ್ತಿದ್ದೀರಿ? ನಾನು ಜೆರುಸಲೇಮಿನಲ್ಲಿ ಬಂಧಿಸಲ್ಪಡುವುದಕ್ಕಲ್ಲದೆ ಪ್ರಭು ಯೇಸುವಿನ ಹೆಸರಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ!” ಎಂದು ಹೇಳಿದನು.


ಆದರೆ ನಾನು ನಿಮಗೆ ಹೇಳುವುದೇನೆಂದರೆ ಯಾರ ಮೇಲೂ ಕೋಪಗೊಳ್ಳಬೇಡಿ. ಪ್ರತಿಯೊಬ್ಬನೂ ನಿಮ್ಮ ಸಹೋದರ. ನೀವು ಬೇರೆಯವರ ಮೇಲೆ ಕೋಪಗೊಂಡರೆ ನ್ಯಾಯತೀರ್ಪಿಗೆ ಗುರಿಯಾಗುವಿರಿ. ನೀವು ಯಾರಿಗಾದರೂ ಕೆಟ್ಟ ಮಾತುಗಳನ್ನಾಡಿದರೆ, ಯೆಹೂದ್ಯರ ನ್ಯಾಯಸಭೆಯ ವಿಚಾರಣೆಗೆ ಗುರಿಯಾಗುವಿರಿ. ನೀವು ಯಾರನ್ನಾದರೂ ‘ಮೂರ್ಖ’ ಎಂದು ಕರೆದರೆ, ಅಗ್ನಿನರಕಕ್ಕೆ ಸೇರುವ ಅಪಾಯದಲ್ಲಿದ್ದೀರಿ.


ಆಗ ಅವರು ತಮ್ಮ ಸಮಾಧಿಗಳಿಂದ ಎದ್ದುಬರುವರು. ಜೀವನದಲ್ಲಿ ಒಳ್ಳೆಯದನ್ನು ಮಾಡಿದ ಜನರು ಪುನರುತ್ಥಾನಗೊಂಡು ನಿತ್ಯಜೀವವನ್ನು ಹೊಂದಿಕೊಳ್ಳುವರು. ಆದರೆ ಕೆಟ್ಟದ್ದನ್ನು ಮಾಡಿದವರಿಗೆ ತೀರ್ಪಿಗಾಗಿ ಪುನರುತ್ಥಾನವಾಗುವುದು.


ಆದಕಾರಣವೇ ಜನರು ದೇವರಲ್ಲಿ ಭಯಭಕ್ತಿಯಿಂದಿರುವರು. ದೇವರಾದರೋ ತಮ್ಮನ್ನು ಜ್ಞಾನಿಗಳೆಂದು ಭಾವಿಸಿಕೊಂಡಿರುವ ಗರ್ವಿಷ್ಠರನ್ನು ಗೌರವಿಸುವುದಿಲ್ಲ.”


ನೀವು ನಿಮ್ಮ ದೇವರಾದ ಯೆಹೋವನನ್ನು ಮಾತ್ರ ಆರಾಧಿಸಬೇಕು. ಆಗ ಆತನು ನಿಮ್ಮನ್ನು ನಿಮ್ಮ ಶತ್ರುಗಳಿಂದ ರಕ್ಷಿಸುತ್ತಾನೆ” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು