Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:8 - ಪರಿಶುದ್ದ ಬೈಬಲ್‌

8 ರೋಗಿಗಳನ್ನು ವಾಸಿಮಾಡಿರಿ. ಸತ್ತವರನ್ನು ಬದುಕಿಸಿರಿ. ಕುಷ್ಠರೋಗಿಗಳನ್ನು ವಾಸಿಮಾಡಿರಿ. ಜನರನ್ನು ದೆವ್ವಗಳಿಂದ ಬಿಡಿಸಿರಿ. ನಾನು ನಿಮಗೆ ಈ ಅಧಿಕಾರಗಳನ್ನು ಉಚಿತವಾಗಿ ಕೊಡುತ್ತೇನೆ. ಆದ್ದರಿಂದ ಬೇರೆಯವರಿಗೆ ಉಚಿತವಾಗಿ ಸಹಾಯಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ. ದೆವ್ವಗಳನ್ನು ಬಿಡಿಸಿರಿ, ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠಹತ್ತಿದವರನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ರೋಗಿಗಳನ್ನು ಸ್ವಸ್ಥಮಾಡಿರಿ, ಮರಣಹೊಂದಿದವರನ್ನು ಎಬ್ಬಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ. ನೀವು ಉಚಿತವಾಗಿ ಪಡೆದಿದ್ದೀರಿ; ಉಚಿತವಾಗಿ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಶಿಕ್ ಹೊತ್ತ್ಯಾಕ್ನಿ ಬರೆ ಕರಾ, ಮರಲ್ಲ್ಯಾಕ್ನಿ ಝಿತ್ತೆ ಕರಾ, ಕುಸ್ಟ್‌ ರೊಗ್ ಹೊತ್ತ್ಯಾಕ್ನಿ ಗುನ್ ಕರಾ, ಅನಿ ಗಿರೆ ಭಾಯ್ರ್ ಕಾಡಾ, ತುಮ್ಕಾ ಫುಕೊಟ್ ಗಾವ್ಲಾ, ತಸೆಮನುನ್ ತುಮಿಬಿ ಫುಕೊಟ್ ದಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:8
15 ತಿಳಿವುಗಳ ಹೋಲಿಕೆ  

ಆದರೆ ಪೇತ್ರನು, “ನನ್ನಲ್ಲಿ ಬೆಳ್ಳಿಬಂಗಾರಗಳಿಲ್ಲ, ಆದರೆ ನನ್ನಲ್ಲಿರುವುದನ್ನು ನಿನಗೆ ಕೊಡಬಲ್ಲೆನು. ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದುನಡೆ!” ಎಂದು ಹೇಳಿ,


ನಿನ್ನ ಕೈಚಾಚಿ ಯೇಸುವಿನ ಹೆಸರಿನ ಮೂಲಕ ರೋಗಿಗಳನ್ನು ಗುಣಪಡಿಸು; ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡು” ಎಂದು ಅವರು ಪ್ರಾರ್ಥಿಸಿದರು.


ಅಲ್ಲಿಯ ರೋಗಿಗಳನ್ನು ವಾಸಿಮಾಡಿರಿ. ಅಲ್ಲಿಯ ಜನರಿಗೆ, ‘ದೇವರ ರಾಜ್ಯವು ಸಮೀಪಿಸುತ್ತಿದೆ!’ ಎಂದು ತಿಳಿಸಿರಿ.


ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ದುರಾತ್ಮಗಳನ್ನು ಬಿಡಿಸುವುದಕ್ಕೂ ಎಲ್ಲಾ ತರದ ವ್ಯಾಧಿ ಮತ್ತು ಕಾಯಿಲೆಗಳನ್ನು ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.


ಅವರು ಹಾವುಗಳನ್ನು ಹಿಡಿದುಕೊಂಡರೂ ಅವು ಅವರನ್ನು ಕಚ್ಚುವುದಿಲ್ಲ. ವಿಷಕುಡಿದರೂ ಅವರಿಗೆ ಯಾವ ತೊಂದರೆಯೂ ಆಗುವುದಿಲ್ಲ. ಅವರು ಮುಟ್ಟಿದರೆ ರೋಗಿಗಳು ಗುಣಹೊಂದುವರು” ಎಂದು ಹೇಳಿದನು.


ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”


“ಎಲೈ ಬಾಯಾರಿದ ಜನರೆಲ್ಲರೇ, ಬಂದು ನೀರನ್ನು ಕುಡಿಯಿರಿ. ನಿಮ್ಮಲ್ಲಿ ಹಣವಿಲ್ಲವೆಂದು ಚಿಂತೆಮಾಡಬೇಡಿರಿ. ಬಂದು ಹೊಟ್ಟೆತುಂಬಾ ತಿಂದು ಕುಡಿಯಿರಿ. ನೀವು ಹಣ ಕೊಡಬೇಕಿಲ್ಲ. ಹೊಟ್ಟೆತುಂಬಾ ತಿಂದು ಕುಡಿಯಿರಿ ಹಾಲಿಗೂ ದ್ರಾಕ್ಷಾರಸಕ್ಕೂ ಕ್ರಯವಿಲ್ಲ.


ಪರಲೋಕರಾಜ್ಯವು ಬೇಗನೆ ಬರುತ್ತದೆ ಎಂದು ಬೋಧಿಸಿ.


ನಿಮ್ಮೊಂದಿಗೆ ಹಣವನ್ನಾಗಲಿ ತಾಮ್ರ, ಬೆಳ್ಳಿಬಂಗಾರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು