Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:1 - ಪರಿಶುದ್ದ ಬೈಬಲ್‌

1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಈ ಸಂಗತಿಗಳನ್ನು ಹೇಳಿದ ನಂತರ ಅಲ್ಲಿಂದ ಹೊರಟು ಬೋಧಿಸುವುದಕ್ಕೆ ಮತ್ತು ಉಪದೇಶಿಸುವುದಕ್ಕೆ ಗಲಿಲಾಯ ಪಟ್ಟಣಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರಿಗೆ ಆದೇಶವನ್ನು ಕೊಟ್ಟಾದ ಮೇಲೆ ಅಲ್ಲಿಂದ ಹೊರಟು ಉಪದೇಶ ಮಾಡುವುದಕ್ಕೂ ಬೋಧಿಸುವುದಕ್ಕೂ ಹತ್ತಿರದ ಊರುಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಹೇಳಬೇಕಾದದ್ದನ್ನು ಹೇಳಿ ಮುಗಿಸಿದ ಬಳಿಕ ಅಲ್ಲಿಯವರ ಊರುಗಳಲ್ಲಿ ಉಪದೇಶಮಾಡುವದಕ್ಕೂ ಸುವಾರ್ತೆಯನ್ನು ಸಾರುವದಕ್ಕೂ ಅಲ್ಲಿಂದ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರಿಗೆ ಆದೇಶ ಕೊಟ್ಟಾದ ಮೇಲೆ, ಗಲಿಲಾಯ ಪ್ರದೇಶದ ಪಟ್ಟಣಗಳಲ್ಲಿ ಬೋಧಿಸುವುದಕ್ಕೂ ಶುಭವರ್ತಮಾನವನ್ನು ಸಾರುವುದಕ್ಕೂ ಅಲ್ಲಿಂದ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹೆ ಸಗ್ಳೆ ಅಪ್ನಾಚ್ಯಾ ಬಾರಾ ಜಾನಾ ಶಿಸಾಕ್ನಿ ಸಾಂಗುನ್ ಸರಲ್ಲ್ಯಾ ಮಾನಾ, ಜೆಜು ತೊ ಜಾಗೊ ಸೊಡುನ್ ಥೈ ಹೊತ್ತ್ಯಾ ಜಗೊಳ್‍ಲ್ಯಾ ಶಾರಾತ್ನಿ ಶಿಕ್ವುಕ್ ಅನಿ ದೆವಾಚಿ ಬರಿ ಖಬರ್ ಸಾಂಗುಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:1
19 ತಿಳಿವುಗಳ ಹೋಲಿಕೆ  

ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.


ಮರುದಿನ, ಯೇಸು ಕೆಲವು ನಗರಗಳ ಮತ್ತು ಊರುಗಳ ಮೂಲಕ ಪ್ರಯಾಣ ಮಾಡಿ ಜನರಿಗೆ ಬೋಧಿಸಿದನು ಮತ್ತು ದೇವರ ರಾಜ್ಯದ ಸುವಾರ್ತೆಯನ್ನು ತಿಳಿಸಿದನು. ಹನ್ನೆರಡು ಮಂದಿ ಅಪೊಸ್ತಲರು ಆತನೊಡನೆ ಇದ್ದರು.


ಯೇಸು ಊರುಗಳಲ್ಲೆಲ್ಲಾ ಮತ್ತು ಹಳ್ಳಿಗಳಲ್ಲೆಲ್ಲಾ ಸಂಚಾರ ಮಾಡಿದನು. ಯೇಸು ಅವರ ಸಭಾಮಂದಿರಗಳಲ್ಲಿ ಉಪದೇಶಿಸಿ ಪರಲೋಕರಾಜ್ಯದ ವಿಷಯವಾಗಿ ಶುಭವಾರ್ತೆಯನ್ನು ಹೇಳಿದನು. ಎಲ್ಲಾ ತರದ ರೋಗಗಳನ್ನು ಬೇನೆಗಳನ್ನು ವಾಸಿಮಾಡಿದನು.


ನಾವು ನಿಮ್ಮ ಸಂಗಡವಿದ್ದಾಗ, “ಕೆಲಸ ಮಾಡದವನು ಊಟವನ್ನೂ ಮಾಡಕೂಡದು” ಎಂಬ ನಿಯಮವನ್ನು ವಿಧಿಸಿದೆವು.


ಸಹೋದರ ಸಹೋದರಿಯರೇ, ಕೆಲಸ ಮಾಡದ ವಿಶ್ವಾಸಿಯಿಂದ ನೀವು ದೂರವಿರಬೇಕೆಂದು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಅಧಿಕಾರದಿಂದ ನಿಮಗೆ ಆಜ್ಞಾಪಿಸುತ್ತಿದ್ದೇವೆ. ನಾವು ನೀಡಿದ ಉಪದೇಶವನ್ನು ಅವರು ಅನುಸರಿಸುವುದಿಲ್ಲ.


ನೀವು ಯಾವ ಕಾರ್ಯಗಳನ್ನು ಮಾಡಬೇಕೆಂದು ನಾವು ನಿಮಗೆ ಹೇಳಿದೆವೋ ಅವುಗಳೆಲ್ಲಾ ನಿಮಗೆ ತಿಳಿದೇ ಇವೆ. ಪ್ರಭು ಯೇಸುವಿನ ಅಧಿಕಾರದಿಂದ ನಾವು ಆ ಸಂಗತಿಗಳನ್ನು ನಿಮಗೆ ಹೇಳಿದೆವು.


“ಜನರಿಗೆ ಬೋಧಿಸಬೇಕೆಂದು ಯೇಸು ನಮಗೆ ಹೇಳಿದನು. ಜೀವಂತವಾಗಿರುವ ಜನರಿಗೂ ಮತ್ತು ಸತ್ತುಹೋಗಿರುವ ಜನರಿಗೂ ದೇವರಿಂದ ನ್ಯಾಯಾಧಿಪತಿಯಾಗಿ ಆಯ್ಕೆಯಾಗಿರುವ ವ್ಯಕ್ತಿ ತಾನೇ ಎಂಬುದನ್ನು ಜನರಿಗೆ ತಿಳಿಸಬೇಕೆಂದು ಆತನು ನಮಗೆ ಹೇಳಿದನು.


ನಾನು ಯೇಸುವಿನ ಇಡೀ ಜೀವಮಾನದ ಬಗ್ಗೆ ಅಂದರೆ ಆತನು ಪರಲೋಕಕ್ಕೆ ಏರಿಹೋಗುವವರೆಗೆ ನಡೆದ ಸಂಗತಿಗಳನ್ನು ಬರೆದೆನು. ಯೇಸು ಪರಲೋಕಕ್ಕೆ ಎತ್ತಲ್ಪಡುವದಕ್ಕಿಂತ ಮೊದಲು, ತಾನು ಆರಿಸಿಕೊಂಡಿದ್ದ ಅಪೊಸ್ತಲರೊಂದಿಗೆ ಮಾತಾಡಿದನು; ಅವರು ಮಾಡಬೇಕಾದದ್ದನ್ನು ಪವಿತ್ರಾತ್ಮನ ಸಹಾಯದಿಂದ ಅವರಿಗೆ ತಿಳಿಸಿದನು.


ನಾನು ಹೇಳುವ ಕಾರ್ಯಗಳನ್ನು ನೀವು ಮಾಡಿದರೆ, ನೀವು ನನ್ನ ಸ್ನೇಹಿತರು.


ನಾನು ನನ್ನ ತಂದೆಯ ಆಜ್ಞೆಗಳಿಗೆ ವಿಧೇಯನಾಗಿದ್ದು ಆತನ ಪ್ರೀತಿಯಲ್ಲಿ ನೆಲೆಗೊಂಡಿದ್ದೇನೆ. ಅದೇ ರೀತಿಯಲ್ಲಿ, ನೀವು ನನ್ನ ಆಜ್ಞೆಗಳಿಗೆ ವಿಧೇಯರಾದರೆ, ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ಯೇಸು ಉಪದೇಶಿಸಿದ ಈ ಸಂಗತಿಗಳನ್ನು ಕೇಳಿ ಜನರು ಅತ್ಯಾಶ್ಚರ್ಯಪಟ್ಟರು.


ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಯೇಸು ಸಭಾಮಂದಿರಗಳಲ್ಲಿ ಬೋಧಿಸಿದನು ಮತ್ತು ಪರಲೋಕರಾಜ್ಯದ ವಿಷಯವಾದ ಶುಭವಾರ್ತೆಯನ್ನು ಉಪದೇಶಿಸಿದನು. ಯೇಸು ಎಲ್ಲಾ ಜನರ ಕಾಯಿಲೆಗಳನ್ನು ಮತ್ತು ರೋಗಗಳನ್ನು ವಾಸಿಮಾಡಿದನು.


ನಮ್ಮ ಪ್ರಭುವಾದ ಯೇಸುಕ್ರಿಸ್ತನು ಮತ್ತೆ ಪ್ರತ್ಯಕ್ಷನಾಗುವ ಕಾಲದವರೆಗೆ ನೀನು ಆ ಕಾರ್ಯಗಳನ್ನು ತಪ್ಪಿಲ್ಲದೆ, ನಿಂದಾರಹಿತನಾಗಿ ಮಾಡುತ್ತಿರು.


ಶಿಷ್ಯರು ಅಲ್ಲಿಂದ ಹೊರಟು, ಇತರ ಸ್ಥಳಗಳಿಗೆ ಹೋಗಿ ಜನರಿಗೆ, “ನಿಮ್ಮಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಉಪದೇಶಿಸಿದರು.


ಅದಕ್ಕೆ ಅವರು, “ಇವನು ಜುದೇಯ ಪ್ರಾಂತ್ಯದಲ್ಲೆಲ್ಲಾ ಉಪದೇಶಿಸಿ ಕ್ರಾಂತಿ ಎಬ್ಬಿಸಿದ್ದಾನೆ. ಗಲಿಲಾಯದಲ್ಲಿ ಪ್ರಾರಂಭಿಸಿದ ಇವನು ಈಗ ಇಲ್ಲಿಗೂ ಬಂದಿದ್ದಾನೆ” ಎಂದು ಪದೇಪದೇ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು