Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:29 - ಪರಿಶುದ್ದ ಬೈಬಲ್‌

29 ನನ್ನ ನೊಗಕ್ಕೆ ಹೆಗಲು ಕೊಟ್ಟು ನನ್ನಿಂದ ಕಲಿತುಕೊಳ್ಳಿರಿ. ನಾನು ಸಾತ್ವಿಕನೂ ದೀನನೂ ಆಗಿರುವುದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಾನು ಸಾತ್ವಿಕನೂ ದೀನಮನಸ್ಸುಳ್ಳವನೂ ಆಗಿರುವದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಲ್ಲಿ ಕಲಿತುಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನಾನು ಸಾತ್ವಿಕನೂ ದೀನ ಹೃದಯದವನೂ ಆಗಿರುವುದರಿಂದ ನೀವು ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ. ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಮಾಜೊ ಜುವ್ ಘೆವಾ, ಅನಿ ಖಾಂಜ್ಯಾರ್ ಥವ್ನ್ ಘೆವಾ ಅನಿ ಮಾಜೆಕ್ನಾ ಶಿಕಾ, ಕಶ್ಯಾಕ್ ಮಟ್ಲ್ಯಾರ್ ಮಿಯಾ ಖಾಲ್ತಿ ಹೊವ್ನ್ ಚಲ್ತಲ್ಯಾ ಮನಾಚೊ ಅನಿ ಭೊಳೊ; ಅನಿ ತುಮ್ಕಾ ಆರಾಮ್ ಘೆವ್ಕ್ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:29
38 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ‘ಒಳ್ಳೆಯ ರಸ್ತೆ ಎಲ್ಲಿದೆ?’ ಎಂದು ಕೇಳಿರಿ. ಆ ರಸ್ತೆಯನ್ನು ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ.


ದೇವರಲ್ಲಿ ನೆಲೆಗೊಂಡಿದ್ದೇನೆ ಎಂದು ಹೇಳುವವನು, ಯೇಸು ಜೀವಿಸಿದಂತೆಯೇ ಜೀವಿಸಬೇಕು.


ಈ ಕಾರ್ಯಕ್ಕೆ ನಾನೇ ನಿಮಗೆ ಮಾದರಿಯಾಗಿದ್ದೇನೆ. ನಾನು ನಿಮಗೆ ಮಾಡಿದಂತೆ ನೀವೂ ಒಬ್ಬರಿಗೊಬ್ಬರು ಮಾಡಬೇಕು.


“ನನ್ನ ಈ ಮಾತುಗಳನ್ನು ಕೇಳಿ ಅವುಗಳಿಗೆ ವಿಧೇಯನಾಗಿರುವ ಪ್ರತಿಯೊಬ್ಬನೂ ತನ್ನ ಮನೆಯನ್ನು ಬಂಡೆಯ ಮೇಲೆ ಕಟ್ಟಿದ ಬುದ್ಧಿವಂತನಿಗೆ ಹೋಲಿಕೆಯಾಗಿದ್ದಾನೆ.


ಹೀಗಿರಲಾಗಿ ಆತನು ಪರಿಶುದ್ಧನಾಗಿದ್ದನು. ದೇವರಿಗೆ ವಿಧೇಯರಾಗುವ ಜನರೆಲ್ಲರೂ ಶಾಶ್ವತವಾದ ರಕ್ಷಣೆಯನ್ನು ಹೊಂದಿಕೊಳ್ಳಲು ಆತನೇ ಕಾರಣ.


ಪೌಲನಾದ ನಾನು ಕ್ರಿಸ್ತನ ಮೃದುಸ್ವಭಾವದಿಂದಲೂ ಕನಿಕರದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ನಾನು ನಿಮ್ಮೊಂದಿಗಿರುವಾಗ ದೀನನಾಗಿರುತ್ತೇನೆಂದೂ, ನಿಮ್ಮಿಂದ ದೂರದಲ್ಲಿರುವಾಗ ಧೀರನಾಗಿರುತ್ತೇನೆಂದೂ ಕೆಲವರು ಹೇಳುತ್ತಾರೆ.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.


(ಮೋಶೆಯು ಬಹಳ ದೀನನಾದ ವ್ಯಕ್ತಿ. ಅವನು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ದೀನನಾಗಿದ್ದನು.)


“ಸೀಯೋನ್ ನಗರಿಗೆ ಹೇಳಿರಿ, ‘ನಿನ್ನ ರಾಜನು ಈಗ ನಿನ್ನ ಬಳಿಗೆ ಬರುತ್ತಿದ್ದಾನೆ. ದೀನತೆಯಿಂದ ಕತ್ತೆಯ ಮೇಲೆ ಬರುತ್ತಿದ್ದಾನೆ. ಹೌದು, ಪ್ರಾಯದ ಕತ್ತೆಮರಿಯ ಮೇಲೆ ಬರುತ್ತಿದ್ದಾನೆ.’”


ದೇವರ ಜ್ಞಾನಕ್ಕೆ ವಿರೋಧವಾಗಿ ಎದ್ದೇಳುವ ಪ್ರತಿಯೊಂದು ಗರ್ವದ ಸಂಗತಿಯನ್ನು ನಾಶಮಾಡುತ್ತೇವೆ; ಪ್ರತಿಯೊಂದು ಯೋಚನೆಯನ್ನು ಸ್ವಾಧೀನಪಡಿಸಿಕೊಂಡು ಅವುಗಳನ್ನು ಪರಿವರ್ತಿಸಿ ಕ್ರಿಸ್ತನಿಗೆ ವಿಧೇಯರಾಗುವಂತೆ ಮಾಡುತ್ತೇವೆ.


ನೀವು ಯಾವ ಕಾರ್ಯಗಳನ್ನು ಮಾಡಬೇಕೆಂದು ನಾವು ನಿಮಗೆ ಹೇಳಿದೆವೋ ಅವುಗಳೆಲ್ಲಾ ನಿಮಗೆ ತಿಳಿದೇ ಇವೆ. ಪ್ರಭು ಯೇಸುವಿನ ಅಧಿಕಾರದಿಂದ ನಾವು ಆ ಸಂಗತಿಗಳನ್ನು ನಿಮಗೆ ಹೇಳಿದೆವು.


ನೀವು ಈ ಸಂಗತಿಗಳನ್ನು ತಿಳಿದುಕೊಂಡು ಇವುಗಳನ್ನು ಕೈಕೊಂಡು ನಡೆದರೆ ಸಂತೋಷದಿಂದಿರುವಿರಿ.


ಪೇತ್ರನು ಮಾತಾಡುತ್ತಿರುವಾಗಲೇ ಪ್ರಕಾಶಮಾನವಾದ ಒಂದು ಮೋಡವು ಅವರ ಮೇಲೆ ಕವಿಯಿತು ಮತ್ತು ಆ ಮೋಡದೊಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ನಾನು ಈತನನ್ನು ಬಹಳ ಮೆಚ್ಚಿಕೊಂಡಿದ್ದೇನೆ. ಈತನಿಗೆ ವಿಧೇಯರಾಗಿರಿ!” ಎಂದು ಹೇಳಿತು.


ಪ್ರಭು ಯೇಸು ಪರಲೋಕದಿಂದ ಬೆಂಕಿಯ ಜ್ವಾಲೆಗಳೊಡನೆ ಪ್ರತ್ಯಕ್ಷನಾದಾಗ ದೇವರನ್ನು ತಿಳಿದಿಲ್ಲದವರಿಗೂ ಸುವಾರ್ತೆಗೆ ವಿಧೇಯರಾಗಿಲ್ಲದವರಿಗೂ ದಂಡನೆಯನ್ನು ಬರಮಾಡುತ್ತಾನೆ.


ಧರ್ಮಶಾಸ್ತ್ರವಿಲ್ಲದ ಜನರನ್ನು ರಕ್ಷಣಾಮಾರ್ಗಕ್ಕೆ ನಡೆಸಬೇಕೆಂದು ಅವರಿಗೆ ಧರ್ಮಶಾಸ್ತ್ರವಿಲ್ಲದ ವ್ಯಕ್ತಿಯಂತಾದೆನು. (ಆದರೆ ನಿಜವಾಗಿಯೂ, ನಾನು ಧರ್ಮಶಾಸ್ತ್ರವಿಲ್ಲದವನಲ್ಲ. ನಾನು ಕ್ರಿಸ್ತನ ಧರ್ಮಶಾಸ್ತ್ರಕ್ಕೆ ಅಧೀನನಾಗಿದ್ದೇನೆ.)


“ಈ ಮೋಶೆಯೇ ಯೆಹೂದ್ಯ ಜನರಿಗೆ, ‘ದೇವರು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ಆ ಪ್ರವಾದಿಯು ನಿಮ್ಮ ಸ್ವಜನರ ಮಧ್ಯದಿಂದಲೇ ಬರುವನು. ಅವನು ನನ್ನಂತೆಯೇ ಇರುವನು’ ಎಂದು ಹೇಳಿದನು.


ಅದನ್ನು ನೋಡಲು ಜನರೆಲ್ಲರೂ ಯೇಸುವಿದ್ದಲ್ಲಿಗೆ ಬಂದರು. ಆ ಮನುಷ್ಯನು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿದ್ದುದನ್ನು ಅವರು ನೋಡಿದರು. ಅವನು ಬಟ್ಟೆಗಳನ್ನು ಹಾಕಿಕೊಂಡಿದ್ದನು; ಸ್ವಸ್ಥಬುದ್ಧಿಯುಳ್ಳವನಾಗಿದ್ದನು. ದೆವ್ವಗಳು ಅವನನ್ನು ಬಿಟ್ಟುಹೋಗಿದ್ದವು. ಜನರಿಗೆ ಭಯವಾಯಿತು.


ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ. ನನ್ನ ಕಣ್ಣುಗಳಲ್ಲಿ ಸೊಕ್ಕಿಲ್ಲ. ಮಹಾಕಾರ್ಯಗಳನ್ನಾಗಲಿ ಅಸಾಧ್ಯ ಕಾರ್ಯಗಳನ್ನಾಗಲಿ ಮಾಡಲು ನಾನು ಪ್ರಯತ್ನಿಸುವುದಿಲ್ಲ.


ನನ್ನ ಆತ್ಮವೇ, ವಿಶ್ರಮಿಸಿಕೊ! ಯೆಹೋವನು ನಿನ್ನನ್ನು ಕಾಪಾಡುವನು.


ಜ್ಞಾನವು ನಿನ್ನ ಜೀವನವನ್ನು ಸುಖಕರವನ್ನಾಗಿ ಮಾಡುತ್ತದೆ; ಸಮಾಧಾನವನ್ನು ಬರಮಾಡುತ್ತದೆ.


ಹಿಂದಿನ ಕಾಲದಲ್ಲಿ ದೇವರು ಅವರ ಸಂಗಡ ಮಾತನಾಡಿ, “ಇಲ್ಲಿ ವಿಶ್ರಾಂತಿಯ ಸ್ಥಳವಿದೆ, ಇದು ವಿಶ್ರಮಿಸುವ ಸ್ಥಳ. ಆಯಾಸಗೊಂಡವರೇ, ಬಂದು ವಿಶ್ರಮಿಸಿರಿ. ಇದು ಸಮಾಧಾನಕರವಾದ ಸ್ಥಳ” ಎಂದು ಹೇಳುತ್ತಿದ್ದನು. ಆದರೆ ಜನರಿಗೆ ಆತನ ಮಾತುಗಳನ್ನು ಕೇಳಲು ಇಷ್ಟವಾಗಲಿಲ್ಲ.


ದೀನರನ್ನು ಯೆಹೋವನು ಸಂತೋಷಿಸುವಂತೆ ಮಾಡುವನು. ಬಡವರು ಇಸ್ರೇಲರ ಪರಿಶುದ್ಧನಲ್ಲಿ ಉಲ್ಲಾಸಿಸುವರು.


ನನ್ನ ತಂದೆಯು ಭಾರವಾದ ನೊಗವನ್ನು ನಿಮ್ಮ ಮೇಲೆ ಹೊರಿಸಿದನು. ನಾನಾದರೋ ಅದನ್ನು ಅಧಿಕಗೊಳಿಸುವೆನು. ನನ್ನ ತಂದೆಯು ಚಾಟಿಯಿಂದ ನಿಮ್ಮನ್ನು ಶಿಕ್ಷಿಸಿದನು. ನಾನಾದರೋ ಮುಳ್ಳುಕೊರಡೆಗಳಿಂದ ನಿಮ್ಮನ್ನು ಶಿಕ್ಷಿಸುವೆನು’ ಎಂದು ಹೇಳು” ಎಂಬುದಾಗಿ ಸಲಹೆ ನೀಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು