Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:5 - ಪರಿಶುದ್ದ ಬೈಬಲ್‌

5 ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ; ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಕುಡ್ಡ್ಯಾಕ್ ದಿಸ್ತಾ ಸೊಟ್ಟೊ ಚಲ್ತಾ, ಜೆ ಕೊನಾಕ್ ಕುಸ್ಟ್ ರೊಗ್ ಹಾಯ್ ತೊ ಪವಿತ್ರ್ ಹೊವ್ಲಾ, ಕಿಂವ್ಡೊ ಆಯ್ಕುಲಾ, ಮರಲ್ಲಿ ಲೊಕಾ ಝಿತ್ತಿ ಹೊವ್ಕ್ ಲಾಗ್ಲ್ಯಾತ್, ಅನಿ ಗರಿಬಾಕ್ನಿ ಬರಿ ಖಬರ್ ಸಾಂಗುನ್ ಹೊವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:5
41 ತಿಳಿವುಗಳ ಹೋಲಿಕೆ  

“ಪ್ರಭುವಿನ (ದೇವರ) ಆತ್ಮವು ನನ್ನಲ್ಲಿ ಇದೆ. ಬಡಜನರಿಗೆ ಶುಭಸಂದೇಶವನ್ನು ತಿಳಿಸಲು ದೇವರು ನನ್ನನ್ನು ಅಭಿಷೇಕಿಸಿದ್ದಾನೆ. ಪಾಪಕ್ಕೆ ಸೆರೆಯಾಳುಗಳಾಗಿರುವ ಜನರಿಗೆ ‘ನೀವು ಬಿಡುಗಡೆಯಾಗಿದ್ದೀರಿ’ ಎಂತಲೂ ಕುರುಡರಿಗೆ, ‘ನಿಮಗೆ ಮತ್ತೆ ಕಣ್ಣು ಕಾಣಿಸುವುದು’ ಎಂತಲೂ ತಿಳಿಸುವುದಕ್ಕೆ ದೇವರು ನನ್ನನ್ನು ಕಳುಹಿಸಿದ್ದಾನೆ. ದಬ್ಬಾಳಿಕೆಗೆ ಗುರಿಯಾದವರನ್ನು ಬಿಡಿಸುವುದಕ್ಕೂ


ಪುಸ್ತಕದಲ್ಲಿರುವ ಮಾತುಗಳನ್ನು ಕಿವುಡನು ಕೇಳಿಸಿಕೊಳ್ಳುವನು. ಕುರುಡನು ಕತ್ತಲೆಯಲ್ಲಿಯೂ ಮಂಜು ತುಂಬಿದ್ದಾಗಲೂ ನೋಡುವನು.


ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.


ಕೆಲವು ಮಂದಿ ಕುರುಡರು ಮತ್ತು ಕುಂಟರು ದೇವಾಲಯದಲ್ಲಿ ಯೇಸುವಿನ ಬಳಿಗೆ ಬಂದರು. ಯೇಸು ಅವರನ್ನು ಗುಣಪಡಿಸಿದನು.


ಆದರೆ ನನ್ನ ತಂದೆಯು ಮಾಡುವ ಕಾರ್ಯಗಳನ್ನೇ ನಾನು ಮಾಡಿದರೆ, ಆ ಕಾರ್ಯಗಳಲ್ಲಿ ನೀವು ನಂಬಿಕೆ ಇಡಬೇಕು. ನೀವು ನನ್ನಲ್ಲಿ ನಂಬಿಕೆ ಇಡದಿದ್ದರೂ ನನ್ನ ಕಾರ್ಯಗಳಲ್ಲಾದರೂ ನಂಬಿಕೆ ಇಡಿರಿ. ತಂದೆಯು ನನ್ನಲ್ಲಿದ್ದಾನೆ ಮತ್ತು ನಾನು ತಂದೆಯಲ್ಲಿದ್ದೇನೆ ಎಂಬುದನ್ನು ಆಗ ನೀವು ತಿಳಿದುಕೊಳ್ಳುವಿರಿ ಮತ್ತು ಅರ್ಥಮಾಡಿಕೊಳ್ಳುವಿರಿ” ಎಂದು ಹೇಳಿದನು.


ಯೇಸು, “ನಾನು ಆಗಲೇ ನಿಮಗೆ ಹೇಳಿದೆನು. ಆದರೆ ನೀವು ನಂಬಲಿಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಅದ್ಭುತಕಾರ್ಯಗಳನ್ನು ಮಾಡುತ್ತೇನೆ. ನಾನು ಯಾರೆಂಬುದನ್ನು ಆ ಅದ್ಭುತಕಾರ್ಯಗಳು ತೋರಿಸುತ್ತವೆ.


“ಆದರೆ ನನ್ನ ಬಗ್ಗೆ ನನ್ನಲ್ಲಿ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿಗಳಿವೆ. ನಾನು ಮಾಡುವ ಕಾರ್ಯಗಳೇ ನನ್ನ ಸಾಕ್ಷಿಗಳಾಗಿವೆ. ತಂದೆಯು ನನಗೆ ಕೊಟ್ಟಿರುವ ಈ ಕಾರ್ಯಗಳೇ, ತಂದೆಯು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂಬುದನ್ನು ತೋರಿಸುತ್ತವೆ.


ಒಂದು ರಾತ್ರಿ ನಿಕೊದೇಮನು ಯೇಸುವಿನ ಬಳಿಗೆ ಬಂದನು. ನಿಕೊದೇಮನು, “ಗುರುವೇ, ನೀನು ದೇವರಿಂದ ಕಳುಹಿಸಲ್ಪಟ್ಟ ಉಪದೇಶಕನೆಂದು ನಮಗೆ ಗೊತ್ತಿದೆ. ನೀನು ಮಾಡುವ ಈ ಸೂಚಕಕಾರ್ಯಗಳನ್ನು ದೇವರ ಸಹಾಯದಿಂದಲ್ಲದೆ ಯಾರೂ ಮಾಡಲಾರರು” ಎಂದು ಹೇಳಿದನು.


ಯೇಸು ಪಸ್ಕಹಬ್ಬಕ್ಕಾಗಿ ಜೆರುಸಲೇಮಿನಲ್ಲಿದ್ದನು. ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿದಾಗ ಅನೇಕ ಜನರು ಆತನನ್ನು ನಂಬಿದರು.


ಅಲ್ಲಿ ನಡೆಯುತ್ತಿರುವುದನ್ನು ನೋಡಲು ಜನರೆಲ್ಲರೂ ಓಡಿಬರುತ್ತಿರುವುದನ್ನು ಕಂಡ ಯೇಸು, ಆ ದೆವ್ವಕ್ಕೆ, “ಎಲೈ ಕಿವುಡು ಮೂಕ ದೆವ್ವವೇ, ಈ ಹುಡುಗನಿಂದ ಹೊರಗೆ ಬರುವಂತೆಯೂ ಇವನೊಳಗೆ ಇನ್ನೆಂದಿಗೂ ಪ್ರವೇಶಿಸದಂತೆಯೂ ನಾನು ನಿನಗೆ ಆಜ್ಞಾಪಿಸುತ್ತೇನೆ!” ಎಂದನು.


ಜನರು ನಿಜವಾಗಿಯೂ ಅತ್ಯಾಶ್ಚರ್ಯಗೊಂಡು, “ಯೇಸು ಎಲ್ಲವನ್ನೂ ಒಳ್ಳೆಯ ರೀತಿಯಲ್ಲಿ ಮಾಡುತ್ತಾನೆ. ಆತನು ಕಿವುಡರಿಗೆ ಕಿವಿ ಕೇಳಿಸುವಂತೆ ಮಾಡುತ್ತಾನೆ. ಮೂಕರು ಮಾತಾಡುವಂತೆ ಮಾಡುತ್ತಾನೆ” ಎಂದು ಹೇಳಿದರು.


ರೋಗಿಗಳನ್ನು ವಾಸಿಮಾಡಿರಿ. ಸತ್ತವರನ್ನು ಬದುಕಿಸಿರಿ. ಕುಷ್ಠರೋಗಿಗಳನ್ನು ವಾಸಿಮಾಡಿರಿ. ಜನರನ್ನು ದೆವ್ವಗಳಿಂದ ಬಿಡಿಸಿರಿ. ನಾನು ನಿಮಗೆ ಈ ಅಧಿಕಾರಗಳನ್ನು ಉಚಿತವಾಗಿ ಕೊಡುತ್ತೇನೆ. ಆದ್ದರಿಂದ ಬೇರೆಯವರಿಗೆ ಉಚಿತವಾಗಿ ಸಹಾಯಮಾಡಿ.


ಕೂಡಲೇ ಅವರಿಗೆ ದೃಷ್ಟಿ ಬಂದಿತು. “ಈ ವಿಷಯವನ್ನು ಯಾರಿಗೂ ಹೇಳಬಾರದು” ಎಂದು ಯೇಸು ಅವರಿಗೆ ಎಚ್ಚರಿಕೆ ನೀಡಿದನು.


ನಾನೇ ಎಲ್ಲವನ್ನು ಉಂಟುಮಾಡಿದೆನು. ನಾನು ಸೃಷ್ಟಿಸಿದ್ದರಿಂದ ಅವು ಅಸ್ತಿತ್ವದಲ್ಲಿವೆ.” ಇವು ಯೆಹೋವನ ನುಡಿಗಳು. “ಎಂಥ ಜನರನ್ನು ನಾನು ಪರಿಪಾಲಿಸುತ್ತೇನೆಂದು ಕೇಳುವಿರಾ? ಬಡವರ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ದುಃಖಿಸುವ ಜನರಿಗಾಗಿ ನಾನು ಚಿಂತಿಸುತ್ತೇನೆ. ನನ್ನ ಮಾತುಗಳಿಗೆ ವಿಧೇಯರಾಗುವವರಿಗಾಗಿ ನಾನು ಚಿಂತಿಸುತ್ತೇನೆ.


“ಕಣ್ಣಿದ್ದೂ ಕುರುಡರಂತಿರುವ ಜನರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ಕಿವಿಯಿದ್ದೂ ಕಿವುಡರಂತಿರುವ ಜನರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ.


ಯೆಹೋವನು ಕುರುಡರಿಗೆ ದೃಷ್ಟಿಕೊಡುವನು. ಯೆಹೋವನು ಕುಗ್ಗಿಹೋದವರನ್ನು ಉದ್ಧರಿಸುವನು. ಯೆಹೋವನು ನೀತಿವಂತರನ್ನು ಪ್ರೀತಿಸುವನು.


ಬಡವರು ತಿಂದು ತೃಪ್ತರಾಗುವರು. ಯೆಹೋವನಿಗಾಗಿ ಹುಡುಕುತ್ತಾ ಬಂದವರೇ, ಆತನಿಗೆ ಸ್ತೋತ್ರಮಾಡಿರಿ! ನಿಮ್ಮ ಹೃದಯವು ಯಾವಾಗಲೂ ಸಂತೋಷವಾಗಿರಲಿ.


ದೇವಮನುಷ್ಯನು (ಎಲೀಷನು) ಹೇಳಿದಂತೆಯೇ ನಾಮಾನನು ಜೋರ್ಡನ್ ನದಿಯಲ್ಲಿ ಇಳಿದು ಏಳುಸಾರಿ ಮುಳುಗಿ ಮೇಲೆದ್ದನು. ಆಗ ನಾಮಾನನು ಸಂಪೂರ್ಣ ಶುದ್ಧನಾದನು; ಅವನ ಚರ್ಮವು ಮಗುವಿನ ಚರ್ಮದಂತೆ ಕೋಮಲವಾಯಿತು.


ಇಸ್ರೇಲಿನ ರಾಜನು ಪತ್ರವನ್ನು ಓದಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಾನು ದೇವರೇನು? ಇಲ್ಲ! ಹುಟ್ಟು ಮತ್ತು ಸಾವುಗಳ ಮೇಲೆ ನನಗೆ ಯಾವ ಶಕ್ತಿಯೂ ಇಲ್ಲ. ಹೀಗಿರುವಾಗ ಅರಾಮ್ಯರ ರಾಜನು ಕುಷ್ಠರೋಗಪೀಡಿತನಾದ ಮನುಷ್ಯನನ್ನು ನನ್ನ ಬಳಿಗೆ ಗುಣಪಡಿಸಲು ಏಕೆ ಕಳುಹಿಸಿದನು? ಇದರ ಬಗ್ಗೆ ನೀವೇ ಯೋಚಿಸಿರಿ. ಇದು ಒಂದು ಕುತಂತ್ರವೆಂಬುದು ನಿಮಗೇ ತಿಳಿಯುತ್ತದೆ. ಅರಾಮ್ಯರ ರಾಜನು ಯುದ್ಧವನ್ನು ಆರಂಭಿಸಲು ಪ್ರಯತ್ನಿಸುತ್ತಿದ್ದಾನೆ!” ಎಂದು ಹೇಳಿದನು.


“ಆತ್ಮಿಕತೆಯಲ್ಲಿ ಬಡವರಾಗಿರುವವರು ಧನ್ಯರು. ಪರಲೋಕರಾಜ್ಯ ಅವರದು.


“ಯೆಹೂದ್ಯರೇ, ಈ ಮಾತುಗಳನ್ನು ಕೇಳಿರಿ: ನಜರೇತಿನ ಯೇಸು ಬಹು ವಿಶೇಷವಾದ ವ್ಯಕ್ತಿ. ದೇವರು ತಾನು ಯೇಸುವಿನ ಮೂಲಕ ಮಾಡಿದ ಶಕ್ತಿಯುತವಾದ ಮತ್ತು ಅದ್ಭುತವಾದ ಕಾರ್ಯಗಳ ಮೂಲಕ ಇದನ್ನು ಸ್ಪಷ್ಟವಾಗಿ ನಿರೂಪಿಸಿದ್ದಾನೆ. ಈ ಸಂಗತಿಗಳನ್ನು ನೀವೆಲ್ಲರೂ ನೋಡಿದಿರಿ. ಆದ್ದರಿಂದ ಇದು ಸತ್ಯವೆಂದು ನಿಮಗೆ ಗೊತ್ತಿದೆ.


ಕೊಲ್ಲುವದಕ್ಕಾಗಿ ಬೆಳೆಸುವ ಕುರಿಗಳನ್ನು ನಾನು ಪರಾಮರಿಸಿದೆನು. ನನಗೆ ಎರಡು ಕೋಲುಗಳು ದೊರೆತವು. ಒಂದು ಕೋಲನ್ನು ದಯೆ ಎಂದೂ ಇನ್ನೊಂದನ್ನು ಒಗ್ಗಟ್ಟು ಎಂಬ ಹೆಸರಿನಿಂದಲೂ ಕರೆದೆನು. ಆ ಬಳಿಕ ಕುರಿಗಳನ್ನು ಪರಾಮರಿಸ ತೊಡಗಿದೆನು.


ಆಗ ಯೆಹೋವನು ಅವನಿಗೆ, “ಮನುಷ್ಯನ ಬಾಯನ್ನು ಯಾರು ಮಾಡಿದರು? ಮನುಷ್ಯನನ್ನು ಕಿವುಡನನ್ನಾಗಿ ಅಥವಾ ಮೂಕನನ್ನಾಗಿ ಮಾಡಬಲ್ಲವರು ಯಾರು? ಮನುಷ್ಯನನ್ನು ಕುರುಡನನ್ನಾಗಿ ಮಾಡಬಲ್ಲವರು ಯಾರು? ಮನುಷ್ಯನಿಗೆ ದೃಷ್ಟಿಕೊಟ್ಟವನು ಯಾರು? ಯೆಹೋವನಾದ ನಾನಲ್ಲವೇ.


ದೀನರನ್ನು ಯೆಹೋವನು ಸಂತೋಷಿಸುವಂತೆ ಮಾಡುವನು. ಬಡವರು ಇಸ್ರೇಲರ ಪರಿಶುದ್ಧನಲ್ಲಿ ಉಲ್ಲಾಸಿಸುವರು.


ಅದಕ್ಕೆ ಯೇಸು, “ನೀವು ಇಲ್ಲಿ ಕೇಳಿದ ಮತ್ತು ನೋಡಿದ ಸಂಗತಿಗಳನ್ನು ಯೋಹಾನನಿಗೆ ತಿಳಿಸಿರಿ.


ನಂತರ ಯೇಸು ಕೈ ಊನವಾಗಿದ್ದ ಮನುಷ್ಯನಿಗೆ, “ನಿನ್ನ ಕೈ ತೋರಿಸು” ಎಂದನು. ಅವನು ತನ್ನ ಕೈಯನ್ನು ಆತನ ಕಡೆಗೆ ಚಾಚಿದನು. ಕೂಡಲೇ, ಅವನ ಕೈ ಮತ್ತೊಂದು ಕೈಯಂತೆ ಸರಿಯಾಯಿತು.


ಯೇಸು ಆ ಮನುಷ್ಯನಿಗೆ, “ಹೋಗಿ ಸಿಲೋವ ಕೊಳದಲ್ಲಿ ತೊಳೆದುಕೊ” ಎಂದು ಹೇಳಿದನು. (ಸಿಲೋವ ಅಂದರೆ “ಕಳುಹಿಸಲ್ಪಟ್ಟವನು.”) ಅಂತೆಯೇ ಅವನು ಹೋಗಿ ತೊಳೆದುಕೊಂಡನು. ಆ ಕೂಡಲೇ ಅವನಿಗೆ ದೃಷ್ಟಿಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು