Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:7 - ಪರಿಶುದ್ದ ಬೈಬಲ್‌

7 ಯೋಹಾನನ ಶಿಷ್ಯರು ಹೊರಟುಹೋಗುತ್ತಿರಲು ಯೇಸುವು ಜನರೊಡನೆ ಯೋಹಾನನನ್ನು ಕುರಿತು ಮಾತನಾಡಲು ಪ್ರಾರಂಭಿಸಿದನು. ಯೇಸು, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೊವಾನ್ನನಿಂದ ಬಂದಿದ್ದ ಶಿಷ್ಯರು ಹೊರಟುಹೋದಾಗ, ಯೇಸುಸ್ವಾಮಿ ಜನಸಮೂಹಕ್ಕೆ ಯೊವಾನ್ನನನ್ನು ಕುರಿತು ಮಾತನಾಡಿದರು: “ಬೆಂಗಾಡಿನಲ್ಲಿ ನೀವು ಏನನ್ನು ನೋಡಲೆಂದು ಹೋದಿರಿ? ಗಾಳಿಗೆ ಓಲಾಡುವ ಜೊಂಡನ್ನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಹೊರಟುಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ - ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಹೊರಟು ಹೋಗುತ್ತಿದ್ದಾಗ, ಯೇಸು ಯೋಹಾನನ ಕುರಿತಾಗಿ ಜನಸಮೂಹಕ್ಕೆ, “ನೀವು ಯಾವುದನ್ನು ಕಾಣುವುದಕ್ಕಾಗಿ ಅರಣ್ಯಕ್ಕೆ ಹೋದಿರಿ? ಗಾಳಿಗೆ ಓಲಾಡುವ ದಂಟನ್ನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಜುಂವಾವಾಚಿ ಶಿಸಾ ಥೈತ್ನಾ ಗೆಲ್ಲ್ಯಾ ತನ್ನಾ ಜೆಜು ಜುವಾಂವಾಚ್ಯಾ ವಿಶಯಾತ್ ಲೊಕಾನಿಕ್ಡೆ ಬೊಲುಕ್‍ಲಾಗ್ಲೊ. “ಡಂಗ್ಳಿತ್ ಜುವಾಂವಾಕ್ಡೆ ಗೆಲ್ಲ್ಯಾ ತನ್ನಾ ಕಾಯ್ ಬಗುಕ್ ಮನುನ್ ಗೆಲ್ಲ್ಯಾಶಿ? ವಾರ್‍ಯಾನ್ ಹಾಲ್ತಲಿ ಎಕ್ ಕರಾಡಾಚಿ ಕಾಡಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:7
15 ತಿಳಿವುಗಳ ಹೋಲಿಕೆ  

ಆದರೆ ನೀವು ದೇವರನ್ನು ಕೇಳಿಕೊಳ್ಳುವಾಗ ಆತನಲ್ಲಿ ನಿಮಗೆ ನಂಬಿಕೆಯಿರಬೇಕು. ದೇವರ ಬಗ್ಗೆ ಸಂದೇಹಪಡದಿರಿ. ಸಂದೇಹಪಡುವವನು ಸಾಗರದಲ್ಲಿನ ಅಲೆಯಂತಿದ್ದಾನೆ. ಗಾಳಿಯು ಬೀಸಿದಾಗ ಅಲೆಯು ಮೇಲೆದ್ದು ಬೀಳುತ್ತದೆ. ಸಂದೇಹಪಡುವವನು ಆ ಅಲೆಯಂತಿರುವನು.


ಯೋಹಾನನು ಉರಿಯುವ ದೀಪದಂತೆ ಬೆಳಕನ್ನು ಕೊಟ್ಟನು ಮತ್ತು ನೀವು ಅವನ ಬೆಳಕನ್ನು ಸ್ವಲ್ಪಕಾಲ ಸಂತೋಷದಿಂದ ಅನುಭವಿಸಿದಿರಿ.


ನಾವು ಇನ್ನು ಮೇಲೆ ಕೂಸುಗಳಾಗಿರಬಾರದು. ಸಮುದ್ರದ ಅಲೆಗಳಿಂದ ಅತ್ತಿಂದಿತ್ತ ಚಲಿಸುವ ಹಡಗಿನಂತೆ ಚಂಚಲರಾಗಿರಬಾರದು. ನಮ್ಮನ್ನು ವಂಚಿಸುವುದಕ್ಕಾಗಿ ಜನರು ಹೇಳುವ ಯಾವುದೇ ಹೊಸ ಉಪದೇಶದಿಂದಾಗಲಿ ನಾವು ಚಂಚಲರಾಗಬಾರದು. ಜನರನ್ನು ಮೋಸಗೊಳಿಸಿ ಕೆಟ್ಟದಾರಿಗೆ ನಡೆಸಬೇಕೆಂಬ ಉದ್ದೇಶದಿಂದ ಆ ದುರ್ಬೋಧಕರು ನಾನಾ ಬಗೆಯ ಕುತಂತ್ರವನ್ನು ಮಾಡುತ್ತಾರೆ.


ಆದರೆ ನೀನು ಪ್ರಳಯದ ಭಯಂಕರವಾದ ಅಲೆಗಳಂತಿರುವೆ. ನೀನು ನನ್ನ ಮಕ್ಕಳಿಗಿಂತ ಅತ್ಯಂತ ಪ್ರಮುಖನಾಗಿರುವುದಿಲ್ಲ. ನಿನ್ನ ತಂದೆಗೆ ಸೇರಿದ ಸ್ತ್ರೀಯೊಂದಿಗೆ ನೀನು ಮಲಗಿಕೊಂಡೆ. ನೀನು ನಿನ್ನ ತಂದೆಯ ಹಾಸಿಗೆಗೆ ಗೌರವವನ್ನು ತೋರಿಸಲಿಲ್ಲ.”


ಆದ್ದರಿಂದ ನೀವು ಕಿವಿಗೊಡುವಾಗ ಜಾಗರೂಕರಾಗಿರಿ; ಸ್ವಲ್ಪ ತಿಳುವಳಿಕೆ ಇರುವ ವ್ಯಕ್ತಿಯು ಹೆಚ್ಚು ತಿಳುವಳಿಕೆಯನ್ನು ಹೊಂದುವನು. ಆದರೆ ತಿಳುವಳಿಕೆ ಇಲ್ಲದ ವ್ಯಕ್ತಿಯು ತನಗಿದೆ ಎಂದುಕೊಂಡಿದ್ದ ತಿಳುವಳಿಕೆಯನ್ನೂ ಕಳೆದುಕೊಳ್ಳುವನು” ಎಂದು ಹೇಳಿದನು.


ದೀಕ್ಷಾಸ್ನಾನ ಕೊಡುವ ಅಧಿಕಾರ ಯೋಹಾನನಿಗೆ ದೇವರಿಂದ ಬಂದಿತೋ ಇಲ್ಲವೆ ಮನುಷ್ಯನಿಂದ ಬಂದಿತೋ? ನನಗೆ ಹೇಳಿ!” ಎಂದು ಉತ್ತರ ಕೊಟ್ಟನು. ಯಾಜಕರು ಮತ್ತು ಯೆಹೂದ್ಯ ನಾಯಕರು ಯೇಸುವಿನ ಪ್ರಶ್ನೆಯನ್ನು ಕುರಿತು ತಮ್ಮೊಳಗೆ, “‘ಯೋಹಾನನು ಕೊಟ್ಟ ದೀಕ್ಷಾಸ್ನಾನವು ದೇವರಿಂದ ಬಂದಿತು’ ಎಂದರೆ, ‘ಹಾಗಾದರೆ ಯೋಹಾನನನ್ನು ನೀವು ಏಕೆ ನಂಬಲಿಲ್ಲ?’ ಎಂದು ಕೇಳುವನು.


ಜನರು ಯೋಹಾನನ ಉಪದೇಶವನ್ನು ಕೇಳಲು ಜೆರುಸಲೇಮಿನಿಂದಲೂ, ಜುದೇಯ ಮತ್ತು ಜೋರ್ಡನ್ ನದಿಯ ಸುತ್ತಲಿದ್ದ ಎಲ್ಲಾ ಸ್ಥಳಗಳಿಂದಲೂ ಬರುತ್ತಿದ್ದರು.


ಯೇಸು ಹಿಂತಿರುಗಿ ನೋಡಿ, “ನಿಮಗೇನು ಬೇಕು?” ಎಂದು ಕೇಳಿದನು. ಆ ಇಬ್ಬರು, “ರಬ್ಬಿ, ನೀನು ಎಲ್ಲಿ ಇಳಿದುಕೊಂಡಿರುವೆ?” ಎಂದು ಕೇಳಿದರು. (“ರಬ್ಬಿ” ಅಂದರೆ “ಗುರು” ಎಂದರ್ಥ.)


ನಿಜವಾಗಿಯೂ ನೀವು ಏನನ್ನು ನೋಡುವುದಕ್ಕೆ ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡಿರುವ ಮನುಷ್ಯನನ್ನೋ? ಇಲ್ಲ! ನಯವಾದ ಉಡುಪನ್ನು ಹಾಕಿಕೊಂಡಿರುವ ಜನರು ರಾಜರ ಅರಮನೆಗಳಲ್ಲಿ ವಾಸಿಸುತ್ತಾರೆ.


ಬಾಗಿಹೋದ ದಂಟನ್ನು ಆತನು ಮುರಿಯುವುದಿಲ್ಲ; ಆರಿಹೋಗುತ್ತಿರುವ ದೀಪವನ್ನು ಆತನು ನಂದಿಸುವುದಿಲ್ಲ. ನ್ಯಾಯವಾದ ತೀರ್ಪು ಜಯಗಳಿಸುವಂತೆ ಆತನು ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು