Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:15 - ಪರಿಶುದ್ದ ಬೈಬಲ್‌

15 ಫರಿಸಾಯರು ಏನು ಮಾಡುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಆ ಸ್ಥಳವನ್ನು ಬಿಟ್ಟುಹೋದನು. ಅನೇಕ ಜನರು ಆತನನ್ನು ಹಿಂಬಾಲಿಸಿದರು. ಆತನು ಎಲ್ಲಾ ರೋಗಿಗಳನ್ನು ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತಮಗೆ ವಿರುದ್ಧ ಒಳಸಂಚು ನಡೆಯುತ್ತಿದೆ ಎಂದು ಯೇಸುಸ್ವಾಮಿ ಅರಿತುಕೊಂಡು ಅಲ್ಲಿಂದ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದರು. ದೊಡ್ಡ ಜನರ ಗುಂಪು ಅವರನ್ನು ಹಿಂಬಾಲಿಸಿತು. ಯೇಸು ಅವರಲ್ಲಿ ಅಸ್ವಸ್ಥರಾದವರನ್ನು ಗುಣಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜೆಜುಕ್ ತ್ಯಾ ಲೊಕಾಂಚೊ ಘಾತ್ ಕಳ್ಳೊ, ತಸೆಮನುನ್ ಜೆಜು ತೊ ಜಾಗೊ ಸೊಡುನ್ ಥೈತ್ನಾ ಧುರ್ ಗೆಲೊ, ಅನಿ ಲೊಕಾಂಚೊ ಮೊಟೊ ತಾಂಡೊ ತೆಚ್ಯಾ ಫಾಟ್ನಾ ಹೊತ್ತೊ. ತೆನಿ ಸಿಕ್ ಹೊತ್ತ್ಯಾ ಲೊಕಾಕ್ನಿ ಗುನ್ ಕರ್‍ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:15
15 ತಿಳಿವುಗಳ ಹೋಲಿಕೆ  

ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಆದ್ದರಿಂದ ಯೇಸುವು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ಸಂಚರಿಸುವುದನ್ನು ಬಿಟ್ಟುಬಿಟ್ಟನು. ಆತನು ಜೆರುಸಲೇಮನ್ನು ಬಿಟ್ಟು ಮರುಭೂಮಿಯ ಸಮೀಪದಲ್ಲಿದ್ದ ಸ್ಥಳಕ್ಕೆ ಹೋಗಿ ಎಫ್ರಾಯಿಮ್ ಎಂಬ ಊರಿನಲ್ಲಿ ತನ್ನ ಶಿಷ್ಯರ ಸಂಗಡ ಇಳಿದುಕೊಂಡನು.


ಇದಾದ ಮೇಲೆ, ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಜುದೇಯದಲ್ಲಿ ಸಂಚರಿಸಲು ಯೇಸುವಿಗೆ ಇಷ್ಟವಿರಲಿಲ್ಲ. ಏಕೆಂದರೆ ಅಲ್ಲಿನ ಯೆಹೂದ್ಯರು ಆತನನ್ನು ಕೊಲ್ಲಲು ಅವಕಾಶಕ್ಕಾಗಿ ಕಾಯುತ್ತಿದ್ದರು.


ಯೇಸುವನ್ನು ಅನೇಕ ಜನರು ಹಿಂಬಾಲಿಸಿದರು. ಯೇಸು ಅಲ್ಲಿ ರೋಗಿಗಳನ್ನು ಗುಣಪಡಿಸಿದನು.


ಯೇಸು ಆ ಪ್ರದೇಶದಲ್ಲಿದ್ದ ಪಟ್ಟಣಗಳಿಗೆ, ನಗರಗಳಿಗೆ ಮತ್ತು ತೋಟಗಳಿಗೆ ಹೋದನು. ಆತನು ಹೋದ ಕಡೆಗಳಲ್ಲೆಲ್ಲಾ ಜನರು ಮಾರುಕಟ್ಟೆಯ ಸ್ಥಳಗಳಿಗೆ ಕಾಯಿಲೆಯ ಜನರನ್ನು ಕರೆತಂದರು. ಅವರು ಯೇಸುವಿಗೆ, ನಿನ್ನ ಮೇಲಂಗಿಯ ಅಂಚನ್ನಾದರೂ ಮುಟ್ಟಲು ತಮಗೆ ಅವಕಾಶ ಕೊಡಬೇಕೆಂದು ಬೇಡಿಕೊಂಡರು. ಆತನನ್ನು ಸ್ಪರ್ಶಿಸಿದ ಜನರೆಲ್ಲರಿಗೂ ಗುಣವಾಯಿತು.


ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು. ನೀವು ಅನುಸರಿಸತಕ್ಕ ಮಾದರಿಯು ಕ್ರಿಸ್ತನೇ ಆಗಿದ್ದಾನೆ. ಆತನು ಮಾಡಿದಂತೆ ನೀವೂ ಮಾಡಿರಿ. ನೀವು ಸಂಕಟವನ್ನು ಅನುಭವಿಸುವಾಗ ತಾಳ್ಮೆಯಿಂದಿರಬೇಕು, ಏಕೆಂದರೆ ಕ್ರಿಸ್ತನು ನಿಮಗಾಗಿ ಸಂಕಟಪಟ್ಟನು.


ನಾವು ಒಳ್ಳೆಯ ಕಾರ್ಯ ಮಾಡುವುದರಲ್ಲಿ ಬೇಸರಗೊಳ್ಳಬಾರದು. ತಕ್ಕ ಸಮಯದಲ್ಲಿ ನಾವು ನಿತ್ಯಜೀವವೆಂಬ ಸುಗ್ಗಿಯನ್ನು ಪಡೆಯುವೆವು. ಆದ್ದರಿಂದ ಒಳ್ಳೆಯ ಕಾರ್ಯ ಮಾಡುವುದನ್ನು ನಾವು ಬಿಟ್ಟುಬಿಡಬಾರದು.


ನನ್ನನ್ನು ಕಳುಹಿಸಿದಾತನ ಕಾರ್ಯವನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬರುತ್ತದೆ. ಆಗ ಯಾವನೂ ಕೆಲಸ ಮಾಡಲಾರನು.


ಆ ಸಮಯದಲ್ಲಿ ಯೇಸು ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು. ದೇವರಲ್ಲಿ ಪ್ರಾರ್ಥಿಸುತ್ತಾ ರಾತ್ರಿಯೆಲ್ಲಾ ಅಲ್ಲೇ ಇದ್ದನು.


ಆದರೆ ಅವರ ಆಲೋಚನೆಯನ್ನು ತಿಳಿದಿದ್ದ ಯೇಸು ಅವರಿಗೆ, “ನೀವು ಆ ರೀತಿ ಯೋಚಿಸುವುದೇಕೆ?


ಆದರೆ ಯೇಸು ಅಲ್ಲಿಗೆ ಹೋದದ್ದು ಜನರಿಗೆ ತಿಳಿಯಿತು. ಅವರು ಆತನನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವಾಗತಿಸಿ ದೇವರ ರಾಜ್ಯದ ಬಗ್ಗೆ ಅವರಿಗೆ ತಿಳಿಸಿದನು; ಕಾಯಿಲೆಯ ಜನರನ್ನು ವಾಸಿಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು