Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:29 - ಪರಿಶುದ್ದ ಬೈಬಲ್‌

29 ಒಬ್ಬ ವ್ಯಕ್ತಿಯು ಬಲಿಷ್ಠನೊಬ್ಬನ ಮನೆಗೆ ನುಗ್ಗಿ ಅವನ ಸ್ವತ್ತನ್ನು ಕದಿಯಬೇಕಿದ್ದರೆ, ಮೊದಲು ಅವನು ಆ ಬಲಿಷ್ಠನನ್ನು ಕಟ್ಟಿಹಾಕಬೇಕು. ಆಗ ಆ ಬಲಿಷ್ಠನ ಮನೆಯ ಸ್ವತ್ತನ್ನು ಕದಿಯಲು ಅವನಿಗೆ ಸಾಧ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಗೆ ನುಗ್ಗಿ ಅವನ ಸೊತ್ತನ್ನು ಸುಲುಕೊಳ್ಳುವುದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಒಬ್ಬ ಬಲಿಷ್ಠನ ಮನೆಯನ್ನು ನುಗ್ಗಿ ಅವನನ್ನು ಕಟ್ಟಿಹಾಕದೆ ಅವನ ಸೊತ್ತನ್ನು ಸೂರೆಮಾಡಲಾದೀತೇ? ಮೊದಲು ಅವನನ್ನು ಕಟ್ಟಬೇಕು. ಬಳಿಕ ಅವನ ಮನೆಯನ್ನು ಕೊಳ್ಳೆಹೊಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಅ ಬಲಿಷ್ಠನ ಮನೆಯನ್ನು ಹೊಕ್ಕು ಅವನ ಸೊತ್ತನ್ನು ಸುಲುಕೊಳ್ಳುವದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಇದಲ್ಲದೆ, ಯಾವನಾದರೂ ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ, ಅವನ ಮನೆಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸೂರೆ ಮಾಡಲಾದೀತೇ? ಕಟ್ಟಿದ ನಂತರ ಅವನ ಮನೆಯನ್ನು ಕೊಳ್ಳೆ ಹೊಡೆಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಎಕ್ ಘರಾತ್ಲ್ಯಾ ಘಟ್ಮುಟ್ ಮಾನ್ಸಾಕ್ ಭಾಂದುನ್ ಘಾಲುಚ್ಯಾ ಅದ್ದಿ ತೆಚ್ಯಾ ಘರಾತ್ಲೆ ಸಾಮಾನ್ ಚೊರುನ್ ಘೆವ್ನ್ ಜಾವ್ಕ್ ಹೊತಾ ಕಾಯ್? ಹೊಯ್ನಾ, ತೆಕಾ ಘಟ್ ಭಾಂದುನ್ ಘಾಲುನ್ ಮಾನಾ ತೆಚಿ ಸಾಮಾನಾ ಘೆವ್ನ್ ಜಾವ್ಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:29
11 ತಿಳಿವುಗಳ ಹೋಲಿಕೆ  

ಯುದ್ಧವೀರನು ಯುದ್ಧದಲ್ಲಿ ಕೊಳ್ಳೆಹೊಡೆದದ್ದನ್ನು ನೀನು ಅವನಿಂದ ಕಿತ್ತುಕೊಳ್ಳಲಾರೆ. ಬಲಿಷ್ಠ ಸೈನಿಕನು ಯುದ್ಧ ಕೈದಿಯನ್ನು ಕಾವಲು ಕಾಯುವಾಗ ಆ ಕೈದಿಯು ತಪ್ಪಿಸಿಕೊಳ್ಳಲಾರನು.


“ಒಬ್ಬ ವ್ಯಕ್ತಿಯು ಬಲಾಢ್ಯನ ಮನೆಗೆ ಪ್ರವೇಶಿಸಿ ಅವನ ವಸ್ತುಗಳನ್ನು ಕದಿಯಲು ಇಚ್ಛಿಸಿದರೆ, ಮೊದಲು ಅವನು ಬಲಾಢ್ಯನನ್ನು ಕಟ್ಟಿಹಾಕಬೇಕು. ಆಗ ಅವನು ಬಲಾಢ್ಯನ ಮನೆಯಿಂದ ವಸ್ತುಗಳನ್ನು ಕದಿಯಲು ಸಾಧ್ಯವಾಗುವುದು.


ನನ್ನ ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರು. ಆದ್ದರಿಂದ ನೀವು ಅವರನ್ನು (ಸುಳ್ಳುಬೋಧಕರು) ಸೋಲಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವಾತನು (ದೇವರು) ಈ ಲೋಕದ ಜನರಲ್ಲಿರುವವನಿಗಿಂತ (ಸೈತಾನ) ದೊಡ್ಡವನಾಗಿದ್ದಾನೆ.


ಸೈತಾನನು ಆರಂಭದಿಂದಲೂ ಪಾಪಗಳನ್ನು ಮಾಡುತ್ತಿದ್ದಾನೆ. ಪಾಪಗಳನ್ನು ಮಾಡುತ್ತಲೇ ಇರುವವನು ಸೈತಾನನಿಗೆ ಸೇರಿದವನಾಗಿದ್ದಾನೆ. ದೇವರ ಮಗನಾದ ಕ್ರಿಸ್ತನು ಸೈತಾನನ ಕಾರ್ಯವನ್ನು ನಾಶಪಡಿಸುವುದಕ್ಕಾಗಿಯೇ ಬಂದನು.


ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.


ಆದರೆ ನಾನು ದೇವರಾತ್ಮನ ಶಕ್ತಿಯ ಮೂಲಕ ದೆವ್ವಗಳನ್ನು ಬಿಡಿಸುತ್ತೇನೆ. ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆ ಎಂಬುದನ್ನು ಇದು ತೋರ್ಪಡಿಸುತ್ತದೆ.


ನನ್ನೊಂದಿಗೆ ಇಲ್ಲದವನು ನನಗೆ ವಿರೋಧಿಯಾಗಿದ್ದಾನೆ. ನನ್ನೊಂದಿಗೆ ಶೇಖರಿಸದವನು ಚದರಿಸುವವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು