Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:30 - ಪರಿಶುದ್ದ ಬೈಬಲ್‌

30 ನನ್ನೊಂದಿಗೆ ಇಲ್ಲದವನು ನನಗೆ ವಿರೋಧಿಯಾಗಿದ್ದಾನೆ. ನನ್ನೊಂದಿಗೆ ಶೇಖರಿಸದವನು ಚದರಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನನ್ನ ಸಂಗಡ ಇರದವನು ನನಗೆ ವಿರೋಧಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದುರಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನನ್ನ ಪರವಾಗಿ ಇಲ್ಲದವನು ನನಗೆ ವಿರೋಧಿಯೇ ಸರಿ. ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನನ್ನ ಪಕ್ಷ ಹಿಡಿಯದವನು ನನಗೆ ವಿರೋಧಿ; ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ನನ್ನ ಪರವಾಗಿ ಇರದವನು ನನಗೆ ವಿರೋಧಿಯಾಗಿದ್ದಾನೆ, ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಜೊ ಕೊನ್ ಮಾಜೆ ವಾಂಗ್ಡಾ ನಾ, ತೊ ಮಾಜ್ಯಾ ವಿರೊದುಚ್; ಜೊ ಕೊನ್ ಮಾಕಾ ಗೊಳಾ ಕರುಕ್ ಮಜತ್ ಕರಿನಾ ತೊ ಮಾಳ್ಬರ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:30
16 ತಿಳಿವುಗಳ ಹೋಲಿಕೆ  

ನಮ್ಮ ವೈರಿಯಲ್ಲದವನು ನಮ್ಮ ಮಿತ್ರನೇ ಸರಿ.


“ನನ್ನೊಂದಿಗಿಲ್ಲದವನು ನನಗೆ ವಿರೋಧವಾಗಿದ್ದಾನೆ. ನನ್ನೊಂದಿಗೆ ಶೇಖರಿಸದವನು ಚದರಿಸುವವನಾಗಿದ್ದಾನೆ.


ಅದಕ್ಕೆ ಯೇಸು, “ಅವನಿಗೆ ಅಡ್ಡಿಮಾಡಬೇಡಿ. ಏಕೆಂದರೆ, ನಿಮಗೆ ವಿರೋಧವಾಗಿಲ್ಲದವನು ನಿಮ್ಮವನೇ” ಎಂದನು.


“ಯಾವನೂ ಇಬ್ಬರು ಯಜಮಾನರಿಗೆ ಒಂದೇ ಸಮಯದಲ್ಲಿ ಸೇವೆ ಮಾಡಲಾರನು. ಅವನು ಒಬ್ಬ ಯಜಮಾನನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುತ್ತಾನೆ ಅಥವಾ ಒಬ್ಬ ಯಜಮಾನನನ್ನು ಹಿಂಬಾಲಿಸಿ ಮತ್ತೊಬ್ಬನನ್ನು ತಾತ್ಸಾರ ಮಾಡುತ್ತಾನೆ. ಆದ್ದರಿಂದ ನೀನು ದೇವರಿಗೆ ಮತ್ತು ಹಣಕ್ಕೆ ಒಂದೇ ಸಮಯದಲ್ಲಿ ಸೇವೆ ಮಾಡಲಾರೆ.


“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.


ಕ್ರಿಸ್ತನ ಶತ್ರುಗಳು ನಮ್ಮ ಗುಂಪಿನಲ್ಲೇ ಇದ್ದರು. ಅವರು ನಮ್ಮನ್ನು ಬಿಟ್ಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ. ಅವರು ನಿಜವಾಗಿಯೂ ನಮ್ಮ ಸಭೆಗೆ ಸೇರಿದವರಾಗಿದ್ದರೆ ನಮ್ಮೊಂದಿಗೆ ಇರುತ್ತಿದ್ದರು. ಆದರೆ ಅವರು ಹೊರಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ ಎಂಬುದನ್ನು ಇದೇ ತೋರ್ಪಡಿಸುತ್ತದೆ.


ಯೆಹೋಶುವನು ಜೆರಿಕೊವಿನ ಸಮೀಪದಲ್ಲಿದ್ದಾಗ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಅವನ ಎದುರಿಗೆ ನಿಂತಿರುವುದನ್ನು ಕಂಡನು. ಆ ಮನುಷ್ಯನ ಕೈಯಲ್ಲಿ ಒಂದು ಖಡ್ಗವಿತ್ತು. ಯೆಹೋಶುವನು ಆ ಮನುಷ್ಯನ ಹತ್ತಿರಹೋಗಿ, “ನೀನು ನಮ್ಮ ಜನರ ಸ್ನೇಹಿತನೋ ಅಥವಾ ನೀನು ನಮ್ಮ ಶತ್ರುಗಳಲ್ಲಿ ಒಬ್ಬನೋ?” ಎಂದು ಕೇಳಿದನು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ಹೌದು, ಯೆಹೂದ್ಯರಿಗಾಗಿಯೂ ಲೋಕದಲ್ಲೆಲ್ಲಾ ಚದರಿಹೋಗಿರುವ ದೇವರ ಮಕ್ಕಳನ್ನೆಲ್ಲ ಒಂದುಗೂಡಿಸುವುದಕ್ಕಾಗಿಯೂ ಆತನು ಸಾಯಲಿದ್ದನು.


“ಆಗ ಇಸ್ರೇಲಿನ ಪ್ರಜೆಗಳು ಮತ್ತು ಯೆಹೂದ ಪ್ರಾಂತ್ಯದ ಪ್ರಜೆಗಳು ಒಂದಾಗಿ ಸೇರಲ್ಪಡುವರು. ತಮಗೆ ಒಬ್ಬ ಅರಸನನ್ನು ಅವರು ಆರಿಸಿಕೊಳ್ಳುವರು. ಅವರ ಜನಾಂಗಕ್ಕೆ ಆ ದೇಶವು ಸಾಲದೆ ಹೋಗುವದು. ಇಜ್ರೇಲನ ದಿನವು ನಿಜವಾಗಿಯೂ ಮಹತ್ವವುಳ್ಳದ್ದಾಗಿರುವದು.”


ಉಚಿತವಾಗಿ ಕೊಡುವವನು ಅದಕ್ಕಿಂತಲೂ ಹೆಚ್ಚುಗಳಿಸುವನು. ಆದರೆ ಕೊಡಲೊಲ್ಲದವನು ಬಡವನಾಗುವನು.


ಒಬ್ಬ ವ್ಯಕ್ತಿಯು ಬಲಿಷ್ಠನೊಬ್ಬನ ಮನೆಗೆ ನುಗ್ಗಿ ಅವನ ಸ್ವತ್ತನ್ನು ಕದಿಯಬೇಕಿದ್ದರೆ, ಮೊದಲು ಅವನು ಆ ಬಲಿಷ್ಠನನ್ನು ಕಟ್ಟಿಹಾಕಬೇಕು. ಆಗ ಆ ಬಲಿಷ್ಠನ ಮನೆಯ ಸ್ವತ್ತನ್ನು ಕದಿಯಲು ಅವನಿಗೆ ಸಾಧ್ಯವಾಗುವುದು.


ದುಷ್ಟರಿಗೆ ವಿರೋಧವಾಗಿ ಯಾರೂ ನನಗೆ ಸಹಾಯಮಾಡಲಿಲ್ಲ. ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯಾರೂ ನನ್ನೊಂದಿಗೆ ನಿಂತುಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು