Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:15 - ಪರಿಶುದ್ದ ಬೈಬಲ್‌

15 ಹೌದು, ಇವರ ಮನಸ್ಸುಗಳು ಕಠಿಣವಾಗಿವೆ. ಕಿವಿ ಮಂದವಾಗಿವೆ, ಕಣ್ಣು ಮಬ್ಬಾಗಿವೆ. ಅವರು ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆಯೂ ನನ್ನ ಕಡೆಗೆ ತಿರುಗಿಕೊಳ್ಳದಂತೆಯೂ ನನ್ನಿಂದ ಗುಣಹೊಂದದಂತೆಯೂ ಹೀಗಾಯಿತು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು. ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ’” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈ ಜನರ ಹೃದಯ ಕಲ್ಲಾಗಿದೆ ಕಿವಿ ಮಂದವಾಗಿದೆ ಕಣ್ಣು ಮಬ್ಬಾಗಿದೆ. ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ ಕಿವಿ ಕೇಳುತ್ತಾ ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು; ದೇವರಾದ ನಾನಿವರನು ಸ್ವಸ್ಥಪಡಿಸುತ್ತಿದ್ದೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈ ಜನರ ಹೃದಯವು ಕೊಬ್ಬಿತು; ಇವರ ಕಿವಿ ಮಂದವಾಯಿತು; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗುಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಮಾಡಿಕೊಂಡಿದ್ದಾರೆ ಎಂಬದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈ ಜನರ ಹೃದಯವು ಕಠೋರವಾಗಿದೆ; ಇವರ ಕಿವಿಗಳು ಕೇಳದ ಹಾಗೆ ಮಂದವಾಗಿವೆ, ಇವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ. ಇಲ್ಲವಾದರೆ ತಾವು ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ. ತಮ್ಮ ಹೃದಯದಿಂದ ತಿಳಿದು, ನನ್ನ ಕಡೆಗೆ ತಿರುಗಿಕೊಂಡಿದ್ದರೆ, ನಾನು ಅವರನ್ನು ಸ್ವಸ್ಥಪಡಿಸುತ್ತಿದ್ದೆನು,’ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಕಶ್ಯಾಕ್ ಮಟ್ಲ್ಯಾರ್, ತೆಂಚಿ ಟಕ್ಲಿ ಮಡ್ಡ್ ಹೊವ್ನ್ ಗೆಲ್ಯಾತ್, ಅನಿ ತೆನಿ ಆಯಿಕ್ತಲೆ ಬಂದ್ ಕರುನ್ ಸೊಡ್ಲ್ಯಾನಾತ್, ಅನಿ ತೆನಿ ಅಪ್ನಾಚೆ ಡೊಳೆ ಧಾಪುನ್ ಘೆಟ್ಲ್ಯಾನಾತ್. ನಾಹೊಲ್ಯಾರ್, ತೆಂಚ್ಯಾ ಡೊಳ್ಳಾಕ್ನಿ ದಿಸಿ ಹೊತ್ತೆ, ತೆಂಚ್ಯಾ ಕಾನಾಕ್ನಿ ಆಯ್ಕಿ ಹೊತ್ತೆ. ತೆಂಕಾ ಅರ್ತ್‍ ಕರುನ್ ಘೆವ್ಕ್ ಹೊಯ್ ಹೊತ್ತೆ, ಅನಿ ತೆನಿ ಮಾಜೆಕ್ಡೆ ಪರ್‍ತಿ ಹೊತ್ತೆ. ಅನಿ ಮಿಯಾ ತೆಂಕಾ ಮಾಪ್ ಕರಿ ಹೊತ್ತೊ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:15
25 ತಿಳಿವುಗಳ ಹೋಲಿಕೆ  

ಜನರಲ್ಲಿ ಗಲಿಬಿಲಿಯನ್ನು ಉಂಟುಮಾಡು. ಜನರು ತಾವು ನೋಡಿದ್ದನ್ನು, ಕೇಳಿದ್ದನ್ನು ಅರ್ಥಮಾಡಿಕೊಳ್ಳದ ಹಾಗೆ ಮಾಡು. ನೀನು ಹೀಗೆ ಮಾಡದಿದ್ದಲ್ಲಿ ಜನರು ತಾವು ಕೇಳಿದ್ದನ್ನು ಅರ್ಥಮಾಡಿಕೊಳ್ಳುವರು; ಜನರು ತಮ್ಮ ಮನಸ್ಸಿನಲ್ಲಿ ಅರ್ಥಮಾಡಿಕೊಳ್ಳುವರು. ಅವರು ಹಾಗೆ ಮಾಡಿದ್ದಲ್ಲಿ, ಅವರು ನನ್ನ ಬಳಿಗೆ ಹಿಂದಿರುಗಿ ಬಂದು ಗುಣಹೊಂದುವರು” ಎಂದು ಹೇಳಿದನು.


ಏಕೆಂದರೆ: ‘ಅವರು ಕಣ್ಣಾರೆ ನೋಡಿಯೂ ಕಾಣರು. ಕಿವಿಯಾರೆ ಕೇಳಿಯೂ ಗ್ರಹಿಸರು. ಅವರು ನೋಡಿ ಗ್ರಹಿಸಿಕೊಂಡರೆ, ಪರಿವರ್ತನೆಗೊಂಡು ಪಾಪಕ್ಷಮೆ ಹೊಂದಿಯಾರು’” ಎಂದನು.


ಆದರೆ ಆ ಜನರು ಈ ಮಾತುಗಳನ್ನು ಕೇಳಲಿಲ್ಲ. ಆತನು ಹೇಳಿದ ಹಾಗೆ ನಡೆಯಲಿಲ್ಲ. ದೇವರು ಹೇಳುವುದು ತಮಗೆ ಕೇಳದಂತೆ ತಮ್ಮ ಕಿವಿಗಳನ್ನು ಮುಚ್ಚಿಕೊಂಡರು.


“ನನ್ನನ್ನು ಹಿಂಬಾಲಿಸುವವರ ಮೇಲೆ ಸೂರ್ಯನ ಪ್ರಕಾಶದಂತೆ ಶುಭವು ಪ್ರಕಾಶಿಸುವದು. ಸೂರ್ಯನ ಕಿರಣಗಳಂತೆ ಅದು ಗುಣಪಡಿಸುವ ಶಕ್ತಿಯನ್ನು ಹೊಂದುವದು. ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಸ್ವತಂತ್ರರಾಗಿಯೂ ಸಂತೋಷವಾಗಿಯೂ ಇರುವಿರಿ.


ಯೆಹೋವನೇ, ನೀನು ನನ್ನನ್ನು ವಾಸಿಮಾಡಿದರೆ ನಿಜವಾಗಿಯೂ ನಾನು ಗುಣಹೊಂದುತ್ತೇನೆ. ನನ್ನನ್ನು ರಕ್ಷಿಸು, ಆಗ ನಿಜವಾಗಿಯೂ ರಕ್ಷಣೆ ಹೊಂದಿದವನಾಗುವೆನು. ಯೆಹೋವನೇ, ನಾನು ನಿನ್ನನ್ನು ಸ್ತುತಿಸುತ್ತೇನೆ.


ಈ ವಿಷಯದಲ್ಲಿ ನಾವು ನಿಮಗೆ ಹೇಳಬೇಕಾದ ಅನೇಕ ಸಂಗತಿಗಳಿವೆ. ಆದರೆ ನೀವು ಇದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸದಿರುವುದರಿಂದ ವಿವರಿಸುವುದು ಕಷ್ಟಕರವಾಗಿದೆ.


ಜನರು ಸತ್ಯವನ್ನು ಕೇಳದೆ ಸುಳ್ಳುಕಥೆಗಳನ್ನು ಕೇಳಲಾರಂಭಿಸುತ್ತಾರೆ.


ಆಗ ಯೆಹೂದ್ಯನಾಯಕರೆಲ್ಲ ಗಟ್ಟಿಯಾಗಿ ಕೂಗಿ, ತಮ್ಮ ಕಿವಿಗಳನ್ನು ಕೈಗಳಿಂದ ಮುಚ್ಚಿಕೊಂಡರು. ಅವರೆಲ್ಲರು ಸ್ತೆಫನನ ಬಳಿಗೆ ಒಟ್ಟಾಗಿ ಓಡಿಬಂದು,


ಅವರು ಬಹು ಮೂಢರು. ನಾನಾದರೋ ನಿನ್ನ ಉಪದೇಶಗಳನ್ನು ಕಲಿಯುವುದರಲ್ಲಿ ಆನಂದಿಸುವೆ.


ನಗರದ ಬೀದಿಯ ಮಧ್ಯಭಾಗದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿಯೂ ಜೀವವೃಕ್ಷಗಳಿದ್ದ್ದವು. ಆ ಜೀವವೃಕ್ಷವು ಪ್ರತಿತಿಂಗಳು ಫಲವನ್ನು ಫಲಿಸುತ್ತಾ ವರ್ಷದಲ್ಲಿ ಹನ್ನೆರಡು ತರದ ಫಲಗಳನ್ನು ನೀಡುತ್ತದೆ. ಆ ವೃಕ್ಷದ ಎಲೆಗಳು ಜನಾಂಗದವರನ್ನು ಗುಣಪಡಿಸುತ್ತವೆ.


ಆದ್ದರಿಂದ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿ. ಆಗ ಆತನು ನಿಮ್ಮ ಪಾಪಗಳನ್ನು ಕ್ಷಮಿಸುವನು.


ಯೆಹೋವನು ಹೇಳುವುದೇನೆಂದರೆ, “ಅವರು ನನ್ನನ್ನು ತೊರೆದುಬಿಟ್ಟಿದ್ದನ್ನು ನಾನು ಕ್ಷಮಿಸುವೆನು. ಅವರನ್ನು ಅಧಿಕವಾಗಿಯೂ ಸ್ವಇಚ್ಛೆಯಿಂದಲೂ ಪ್ರೀತಿಸುವೆನು. ಈಗ ಅವರ ಮೇಲೆ ನಾನು ಕೋಪಿಸುವದಿಲ್ಲ.


“‘ಅನಂತರ ನಾನು ಆ ನಗರದ ಜನರನ್ನು ಕ್ಷಮಿಸುವೆನು. ಆ ಜನರು ಶಾಂತಿಯನ್ನೂ ಸುರಕ್ಷಣೆಯನ್ನೂ ಪಡೆಯುವಂತೆ ಮಾಡುವೆನು.


ಇಸ್ರೇಲ್ ಎಲ್ಲಿಗೆ ಹೋದನೆಂದು ನಾನು ನೋಡಿದೆನು. ನಾನು ಅವನನ್ನು ಸ್ವಸ್ಥ ಮಾಡುವೆನು. ಅವನನ್ನು ಆದರಿಸುವೆನು. ಒಳ್ಳೆಯ ಮಾತುಗಳಿಂದ ಅವನನ್ನು ರಮಿಸುವೆನು. ಆಗ ಅವನೂ ಅವನ ಜನರೂ ವ್ಯಸನಪಡುವದಿಲ್ಲ.


ಆ ಮನುಷ್ಯನಿಗೆ ತಾನು ಮಾಡುತ್ತಿರುವುದೇ ತಿಳಿಯದು. ಅವನು ಗಲಿಬಿಲಿಗೊಂಡಿದ್ದಾನೆ. ಅವನ ಹೃದಯವು ಅವನನ್ನು ತಪ್ಪುದಾರಿಯಲ್ಲಿ ನಡಿಸುತ್ತದೆ. ಅವನು ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ತಾನು ಮಾಡುತ್ತಿರುವುದು ತಪ್ಪೆಂದು ಅವನು ಕಾಣಲಾರನು. “ನನ್ನ ಕೈಯಲ್ಲಿರುವ ಈ ವಿಗ್ರಹವು ಸುಳ್ಳು ದೇವರಾಗಿದೆ” ಎಂದು ಅವನು ಹೇಳುವದಿಲ್ಲ.


ಇದಲ್ಲದೆ ಯೆಹೋವನು, “ಅಪನಂಬಿಗಸ್ತರಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ. ನನಗೆ ವಿಶ್ವಾಸದ್ರೋಹ ಮಾಡಿದುದಕ್ಕೆ ನಾನು ಕ್ಷಮಿಸುವೆನು, ಹಿಂತಿರುಗಿ ಬನ್ನಿ” ಎಂದು ಹೇಳುತ್ತಾನೆ. “ಅದಕ್ಕೆ ಜನರು, ‘ಆಗಲಿ ನಿನ್ನಲ್ಲಿಗೆ ಬರುತ್ತೇವೆ. ನೀನೇ ನಮ್ಮ ದೇವರಾದ ಯೆಹೋವನು.


“ಮನುಷ್ಯನ ಬುದ್ಧಿಯು ವಂಚನೆ ಮಾಡುತ್ತದೆ. ಆ ಬುದ್ಧಿಯು ಅತೀ ವ್ಯಾಧಿಗ್ರಸ್ತವಾಗಿರಬಹುದು, ಯಾರಿಂದಲೂ ಬುದ್ಧಿಯ ನಿಜವಾದ ಸ್ವರೂಪವನ್ನರಿಯಲಾಗುವದಿಲ್ಲ.


ಜೆರುಸಲೇಮಿಗೆ, “ನಿನಗೆ ಯಾವುದರಿಂದ ಸಮಾಧಾನವಾಗುತ್ತದೆ ಎಂಬುದನ್ನು ನೀನು ಇಂದೇ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದಾಗಿತ್ತು! ಆದರೆ ನೀನು ಅದನ್ನು ತಿಳಿಯಲಾರೆ, ಏಕೆಂದರೆ ಅದು ನಿನಗೆ ಮರೆಯಾಗಿದೆ.


ಹೌದು, ಈ ಜನರ ಹೃದಯಗಳು ಕಠಿಣವಾಗಿವೆ. ಈ ಜನರಿಗೆ ಕಿವಿಗಳಿದ್ದರೂ ಕೇಳುವುದಿಲ್ಲ. ಸತ್ಯವಿದ್ದರೂ ನೋಡಬಯಸರು. ಅಲ್ಲದಿದ್ದರೆ ಇವರು ಕಣ್ಣಾರೆ ಕಂಡು, ಕಿವಿಯಾರೆ ಕೇಳಿ, ಮನಸಾರೆ ಗ್ರಹಿಸಿಕೊಂಡು ನನ್ನತ್ತ ತಿರುಗಿಕೊಳ್ಳುತ್ತಿದ್ದರು; ನನ್ನಿಂದ ಗುಣಹೊಂದುತ್ತಿದ್ದರು.’


ಕಣ್ಣುಮಿಟುಕಿಸಿ ನಗುವವನು ತಪ್ಪಾದ ಹಾಗೂ ಕೆಟ್ಟಕಾರ್ಯವೆಸಗಲು ಯೋಜಿಸುತ್ತಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು