Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:22 - ಪರಿಶುದ್ದ ಬೈಬಲ್‌

22 “ಮುಳ್ಳುಗಿಡಗಳ ನಡುವೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದರೂ ಜೀವನದ ಚಿಂತೆಗಳಿಂದ ಮತ್ತು ಹಣದ ಮೇಲಿನ ಪ್ರೀತಿಯಿಂದ ಬೋಧನೆಯನ್ನು ತನ್ನಲ್ಲಿ ಬೆಳೆಯದಂತೆ ಮಾಡುವವನೇ ಬೀಜ ಬಿದ್ದ ಮುಳ್ಳುಗಿಡಗಳ ನೆಲವಾಗಿರವನು. ಆದ್ದರಿಂದ ಬೋಧನೆಯು ಆ ಮನುಷ್ಯನ ಜೀವಿತದಲ್ಲಿ ಫಲ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಒಬ್ಬನು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ ಐಶ್ವರ್ಯದಿಂದುಂಟಾಗುವ ಮೋಸವೂ ಆ ವಾಕ್ಯವನ್ನು ಅಡಗಿಸಿಬಿಡುವದರಿಂದ, ಫಲವನ್ನು ಕೊಡದೆ ಇರುತ್ತಾನೆ; ಇವನೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮುಳ್ಳುಗಿಡಗಳಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಕಾಟ್ಯಾಂಚ್ಯಾ ಝಿಳಿತ್ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ಜಿ ಲೊಕಾ ದೆವಾಚೆ ಉತರ್ ಆಯಿಕ್ತ್ಯಾತ್; ಖರೆ ಹ್ಯಾ ಬಾಳ್ವಿಚ್ಯಾ ಯವ್ಜನ್ಯಾ ಅನಿ ಸಾವ್ಕಾರ್ಕಿ ಜೊಡ್ತಲಿ ಆಶಾ ದೆವಾಚ್ಯಾ ಬರ್‍ಯಾ ಖಬ್ರೆಕ್ ದಡ್ಪುನ್ ಧರ್‍ತಾ, ಅನಿ ತೆಂಕಾ ಫಳ್ ದಿವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:22
42 ತಿಳಿವುಗಳ ಹೋಲಿಕೆ  

ಇಹಲೋಕದ ವಿಷಯಗಳಲ್ಲಿ ಶ್ರೀಮಂತರಾಗಿರುವ ಜನರಿಗೆ ಈ ಆಜ್ಞೆಗಳನ್ನು ತಿಳಿಸು. ಗರ್ವಪಡದಂತೆಯೂ ಹಣವನ್ನು ಅವಲಂಬಿಸಿಕೊಳ್ಳದೆ ದೇವರಲ್ಲೇ ನಿರೀಕ್ಷೆಯಿಡುವಂತೆಯೂ ಅವರಿಗೆ ತಿಳಿಸು. ಹಣವು ಭರವಸೆಗೆ ಯೋಗ್ಯವಲ್ಲ. ದೇವರಾದರೋ ನಮ್ಮ ಸಂತೋಷಕ್ಕಾಗಿ ಸಮಸ್ತವನ್ನು ನಮಗೆ ಧಾರಾಳವಾಗಿ ದಯಪಾಲಿಸುತ್ತಾನೆ.


“ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಲೋಕದ ಚಿಂತೆಗಳಿಗೂ ಐಶ್ವರ್ಯಗಳಿಗೂ ಭೋಗಗಳಿಗೂ ಅವರು ಅವಕಾಶಕೊಡುವುದರಿಂದ ಅವರು ಬೆಳೆಯಲಾರರು; ಎಂದಿಗೂ ಒಳ್ಳೆಯ ಫಲವನ್ನು ಕೊಡಲಾರರು.


ಬಳಿಕ ಯೇಸು ನೆರೆದಿದ್ದ ಜನರಿಗೆ, “ಎಚ್ಚರಿಕೆ, ಯಾವ ವಿಧವಾದ ಸ್ವಾರ್ಥಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಒಬ್ಬನಿಗೆ ಎಷ್ಟೇ ಆಸ್ತಿಯಿದ್ದರೂ ಅದರಿಂದ ಅವನು ಜೀವವನ್ನು ಪಡೆದುಕೊಳ್ಳಲಾರನು” ಎಂದನು.


ದೇಮನು ಈ ಲೋಕವನ್ನು ಬಹಳ ಪ್ರೀತಿಸಿದನು. ಆದಕಾರಣವೇ ಅವನು ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೆ ಹೋದನು. ತೀತನು ದಲ್ಮಾತ್ಯಕ್ಕೆ ಹೋದನು.


ಬೇರೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು. ಮುಳ್ಳುಗಿಡಗಳು ಬೆಳೆದು ಒಳ್ಳೆಯ ಗಿಡಗಳು ಬೆಳೆಯುವುದನ್ನು ತಡೆದುಬಿಟ್ಟವು.


“ತನಗೋಸ್ಕರ ಮಾತ್ರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳುವವನ ಗತಿ ಇದೇ. ದೇವರ ದೃಷ್ಟಿಯಲ್ಲಿ ಅವನು ಐಶ್ವರ್ಯವಂತನಲ್ಲ.”


“ದೇವರ ಮೇಲೆ ಅವಲಂಬಿಸಿಕೊಳ್ಳದ ಇವನಿಗೆ ಏನಾಯಿತು? ತನ್ನ ಐಶ್ವರ್ಯವೂ ಸುಳ್ಳುಗಳೂ ತನ್ನನ್ನು ಕಾಪಾಡುತ್ತವೆ ಎಂದು ಭಾವಿಸಿಕೊಂಡವನು ಇವನೇ.”


“ಎಚ್ಚರಿಕೆ! ತಿನ್ನುವುದರಲ್ಲಿಯೂ ಕುಡಿದು ಮತ್ತರಾಗುವುದರಲ್ಲಿಯೂ ಪ್ರಾಪಂಚಿಕ ಚಿಂತೆಗಳಲ್ಲಿಯೂ ಮಗ್ನರಾಗಿರಬೇಡಿರಿ. ಇಲ್ಲವಾದರೆ, ನಿಮ್ಮ ಹೃದಯಗಳು ಭಾರವಾಗಿರುವಾಗಲೇ ಅಂತ್ಯವು ಫಕ್ಕನೆ ಬಂದೀತು.


ಯೆಹೂದ ಜನಾಂಗದ ಜನರಿಗೂ ಜೆರುಸಲೇಮ್ ನಗರದ ಜನರಿಗೂ ಯೆಹೋವನು ಹೀಗೆ ಹೇಳುತ್ತಾನೆ: “ನಿಮ್ಮ ಹೊಲಗಳಲ್ಲಿ ನೇಗಿಲು ಹೊಡೆದಿಲ್ಲ, ಆ ಹೊಲಗಳನ್ನು ನೇಗಿಲು ಹೊಡೆದು ಸ್ವಚ್ಛಮಾಡಿರಿ. ಮುಳ್ಳುಗಳಲ್ಲಿ ಬೀಜಗಳನ್ನು ಬಿತ್ತಬೇಡಿರಿ.


ಐಶ್ವರ್ಯದ ಮೇಲೆ ಭರವಸೆಯಿಟ್ಟಿರುವವನು ಎಲೆಯಂತೆ ಉದುರಿಹೋಗುವನು. ಆದರೆ ಸಧರ್ಮಿಯು ಚಿಗುರಿದ ಎಲೆಯಂತೆ ಬೆಳೆಯುವನು.


ಅನ್ಯಾಯದಿಂದ ಸಂಪಾದಿಸಿದ್ದರಲ್ಲಿ ನಂಬಿಕೆ ಇಡಬೇಡಿ. ಕದ್ದವಸ್ತುಗಳಲ್ಲಿ ಜಂಬಪಡಬೇಡಿ. ಐಶ್ವರ್ಯವು ಅಧಿಕವಾಗುತ್ತಿದ್ದರೂ ಅದರಲ್ಲಿ ಮನಸ್ಸಿಡಬೇಡಿ.


ಅಪೊಸ್ತಲರು ಜನರ ಮೇಲೆ ತಮ್ಮ ಕೈಗಳನ್ನಿಟ್ಟಾಗ ಜನರಿಗೆ ಪವಿತ್ರಾತ್ಮನು ದೊರೆತ್ತಿದ್ದನ್ನು ಸಿಮೋನನು ಕಂಡನು. ಆದ್ದರಿಂದ ಸಿಮೋನನು ಅಪೊಸ್ತಲರಿಗೆ ಹಣವನ್ನು ನೀಡುತ್ತಾ,


ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.


ಪಕ್ಷಿಯಂತೆ ಹಾರಿಹೋಗುತ್ತದೋ ಎಂಬಂತೆ ಹಣವು ಬಹುಬೇಗನೆ ಇಲ್ಲವಾಗುವುದು.


ಮನುಷ್ಯಕುಮಾರನಿಗೆ ವಿರೋಧವಾಗಿ ಮಾತನಾಡಿದರೂ ಅದಕ್ಕೆ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ ಅದಕ್ಕೆ ಕ್ಷಮಾಪಣೆಯು ಇಹದಲ್ಲಾಗಲಿ ಪರದಲ್ಲಾಗಲಿ ಇಲ್ಲವೇ ಇಲ್ಲ.


ಹಣಜಿಯನ್ನು ಬಿತ್ತಿದ ವೈರಿಯೇ ಸೈತಾನ. ಸುಗ್ಗಿಕಾಲ ಅಂದರೆ ಲೋಕದ ಅಂತ್ಯಕಾಲ. ಕೂಡಿಸುವ ಕೆಲಸಗಾರರೇ ದೇವದೂತರು.


“ಹಣಜಿಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. ಈ ಲೋಕದ ಅಂತ್ಯದಲ್ಲಿ ಆಗುವಂಥದ್ದು ಇದೇ.


ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ಜ್ಞಾನಿಯು ಎಲ್ಲಿದ್ದಾನೆ? ವಿದ್ಯಾವಂತನು ಎಲ್ಲಿದ್ದಾನೆ? ಈ ಕಾಲದ ತತ್ವಜ್ಞಾನಿಯು ಎಲ್ಲಿದ್ದಾನೆ? ದೇವರು ಲೋಕದ ಜ್ಞಾನವನ್ನು ಮೂರ್ಖತನವನ್ನಾಗಿ ಮಾಡಿದ್ದಾನೆ.


ಪರಿಣತರಾದ ಜನರಿಗೆ ನಾವು ಜ್ಞಾನವನ್ನೇ ಉಪದೇಶಿಸುತ್ತೇವೆ. ಇದು ಇಹಲೋಕದ ಜ್ಞಾನವೂ ಅಲ್ಲ. ಅಧಿಪತಿಗಳ ಜ್ಞಾನವೂ ಅಲ್ಲ. ಈ ಲೋಕದ ಅಧಿಪತಿಗಳು ತಮ್ಮ ಅಧಿಕಾರವನ್ನು ಕಳೆದುಕೊಳ್ಳುವವರಾಗಿದ್ದಾರೆ.


ಈ ಲೋಕದ ಯಾವ ಅಧಿಪತಿಗಳೂ ಈ ಜ್ಞಾನವನ್ನು ಅರ್ಥಮಾಡಿಕೊಳ್ಳಲಿಲ್ಲ. ಅವರು ಅರ್ಥಮಾಡಿಕೊಂಡಿದ್ದರೆ, ಮಹಿಮೆಯುಳ್ಳ ಪ್ರಭುವನ್ನು ಶಿಲುಬೆಗೇರಿಸುತ್ತಿರಲಿಲ್ಲ.


ನಿಮಗೆ ನೀವೇ ಮೋಸಮಾಡಿಕೊಳ್ಳಬೇಡಿ. ನಿಮ್ಮಲ್ಲಿರುವ ಯಾವನಾದರೂ ತಾನು ಈ ಲೋಕದಲ್ಲಿ ಜ್ಞಾನಿಯೆಂದು ಆಲೋಚಿಸಿಕೊಂಡರೆ ಅವನು ಮೂಢನಾಗಲೇಬೇಕು. ಆಗ ಆ ವ್ಯಕ್ತಿಯು ನಿಜವಾಗಿಯೂ ಜ್ಞಾನಿಯಾಗಬಲ್ಲನು.


ಈ ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.


ನಾವು ವಾಸಿಸುತ್ತಿರುವ ಈ ಕೆಟ್ಟ ಲೋಕದೊಳಗಿಂದ ನಮ್ಮನ್ನು ಬಿಡುಗಡೆ ಮಾಡಬೇಕೆಂದು ಯೇಸು ನಮ್ಮ ಪಾಪಗಳಿಗಾಗಿ ತನ್ನನ್ನೇ ಕೊಟ್ಟುಬಿಟ್ಟನು. ಇದು ತಂದೆಯಾದ ದೇವರ ಚಿತ್ತವಾಗಿತ್ತು.


ಹೌದು, ಮೊದಲು ನೀವು ಆ ಪಾಪಗಳನ್ನೇ ಮಾಡುತ್ತಿದ್ದಿರಿ. ಈ ಲೋಕದ ಮಾರ್ಗಗಳಿಗನುಸಾರವಾಗಿ ನೀವು ಜೀವಿಸಿದಿರಿ. ವಾಯುಮಂಡಲದಲ್ಲಿರುವ ದುಷ್ಟಶಕ್ತಿಗಳ ಅಧಿಪತಿಯನ್ನು ನೀವು ಅನುಸರಿಸಿದಿರಿ. ದೇವರಿಗೆ ಅವಿಧೇಯರಾದ ಜನರಲ್ಲಿ ಈಗ ಕಾರ್ಯಮಾಡುತ್ತಿರುವುದು ಅದೇ ಆತ್ಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು